ಗುಂಡಿನ ದಾಳಿಯಲ್ಲಿ ಇರಾನ್ನ ಪ್ರಮುಖ ಅಣು ವಿಜ್ಞಾನಿ ಹತ್ಯೆ: ಇಸ್ರೇಲ್ ಕೈವಾಡ ಆರೋಪ
ಟೆಹರಾನ್, ನವೆಂಬರ್ 28: ತನ್ನ ಪ್ರಮುಖ ಅಣುವಿಜ್ಞಾನಿಗಳಲ್ಲಿ ಒಬ್ಬರಾದ ಮೋಹ್ಸೆನ್ ಫಖ್ರಿಜಾದೆಹ್ ಅವರನ್ನು ಶುಕ್ರವಾರ ನಡೆದ ದಾಳಿಯಲ್ಲಿ ಹತ್ಯೆ ಮಾಡಲಾಗಿದೆ ಎಂದು ಇರಾನ್ ತಿಳಿಸಿದೆ. ಈ ಕೃತ್ಯದ ಹಿಂದೆ ಇಸ್ರೇಲ್ ಕೈವಾಡವಿದೆ ಎಂದು ಅದು ಆರೋಪಿಸಿದೆ.
ಮೋಹ್ಸೆನ್ ಫಖ್ರಿಜಾದೆಹ್ ಅವರ ಕಾರನ್ನು ಗುರಿಯಾಗಿರಿಸಿಕೊಂಡು ದುಷ್ಕರ್ಮಿಗಳು ದಾಳಿ ನಡೆಸಿದ್ದರು. ಆ ವೇಳೆ ಮೋಹ್ಸೆನ್ ಅವರ ಭದ್ರತಾ ಸಿಬ್ಬಂದಿ ಮತ್ತು ದಾಳಿಕೋರರ ನಡುವೆ ತೀವ್ರ ಗುಂಡಿನ ಚಕಮಕಿ ನಡೆದಿದೆ. ಗುಂಡೇಟಿನಿಂದ ಮೋಹ್ಸೆನ್ ತೀವ್ರವಾಗಿ ಗಾಯಗೊಂಡಿದ್ದರು.ಕೂಡಲೇ ಅವರನ್ನು ಸೇನಾ ಸಂಶೋಧನಾ ಮತ್ತು ಆವಿಷ್ಕಾರ ಸಂಸ್ಥೆಯ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಹುತಾತ್ಮರಾದರು ಎಂದು ಇರಾನ್ನ ರಕ್ಷಣಾ ಸಚಿವಾಲಯ ತಿಳಿಸಿದೆ.

ಮೋಹ್ಸೆನ್ ಅವರು ಇರಾನ್ನ ಪ್ರಮುಖ ಅಣುವಿಜ್ಞಾನಿಗಳಲ್ಲಿ ಒಬ್ಬರಾಗಿದ್ದು, 2000ದ ಇಸವಿಯಲ್ಲಿ 'ಅಮದ್' ಎಂಬ ಪರಮಾಣು ಕಾರ್ಯಕ್ರಮವನ್ನು ನಡೆಸಿದ್ದರು. ಇರಾನ್ ಅಣ್ವಸ್ತ್ರ ಬೆಳವಣಿಗೆ ಸಾಧಿಸುವಲ್ಲಿ ಮೋಹ್ಸೆನ್ ಪ್ರಮುಖ ಪಾತ್ರ ವಹಿಸಿದ್ದರು. ಇರಾನ್ನ ಅಣ್ವಸ್ತ್ರ ಕಾರ್ಯಕ್ರಮದ ಪಿತಾಮಹ ಎಂದು ಮೋಹ್ಸೆನ್ ಅವರನ್ನು ಇರಾನ್ನ ಬದ್ಧವೈರಿ ಇಸ್ರೇಲ್ನ ಪ್ರಧಾನಿ ಬೆಂಜಮಿನ್ ನೆತನ್ಯಾಹು ಬಣ್ಣಿಸಿದ್ದರು.
ಮೋಹ್ಸೆನ್ ಅವರು ಅಬ್ಸರ್ಡ್ ನಗರದ ಸಮೀಪ ಕಾರಿನಲ್ಲಿ ಪ್ರಯಾಣಿಸುವಾಗ ಈ ದಾಳಿ ನಡೆದಿದೆ. ಮೋಹ್ಸೆನ್ ಅವರ ಮೇಲೆ ಇಸ್ರೇಲ್ ಬಹಳ ಹಳೆಯ ಮತ್ತು ತೀವ್ರ ವೈರತ್ವ ಹೊಂದಿತ್ತು ಎಂದು ಅಲ್ಲಿನ ಮಾಧ್ಯಮಗಳು ವರದಿ ಮಾಡಿವೆ.
-
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ












Click it and Unblock the Notifications