ಇರಾಕ್ನ ಮದುವೆ ಮಂಟಪದಲ್ಲಿ ನೋಡನೋಡುತ್ತಿದಂತೆಯೇ ಭಸ್ಮವಾದರು ನೂರು ಜನ- ಕಾರಣ ತಿಳಿಯಿರಿ
ಬಾಗ್ದಾದ್, ಸೆಪ್ಟೆಂಬರ್ 27: ಉತ್ತರ ಇರಾಕ್ನ ಹಮ್ದನಿಯಾಹ್ ಪಟ್ಟಣದಲ್ಲಿರುವ ಮದುವೆ ಮಂಟಪವೊಂದರಲ್ಲಿ ಅಗ್ನಿ ದುರಂತ ಸಂಭವಿಸಿದೆ. ಮದುವೆ ಸಂದರ್ಭದಲ್ಲಿ ದಿಢೀರ್ ಬೆಂಕಿ ಕಾಣಿಸಿಕೊಂಡಿದ್ದು, ಘಟನೆಯಲ್ಲಿ ಕನಿಷ್ಠ 100 ಜನರು ಸಾವನ್ನಪ್ಪಿದ್ದಾರೆ. 150 ಕ್ಕೂ ಹೆಚ್ಚು ಜನರಿಗೆ ಗಾಯವಾಗಿದೆ ಎಂದು ಆರೋಗ್ಯ ಇಲಾಖೆ ಅಧಿಕಾರಿಗಳು ಬುಧವಾರ ಮುಂಜಾನೆ ಮಾಹಿತಿ ನೀಡಿದ್ದಾರೆ.
ನಿನೆವೆ ಪ್ರಾಂತ್ಯದ ಆರೋಗ್ಯ ಅಧಿಕಾರಿಗಳು ಪ್ರಕಾರ, 'ಹಮ್ದನಿಯಾದ ಮದುವೆ ಹಾಲ್ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಈ ಘಟನೆಯಲ್ಲಿ ಕನಿಷ್ಠ 100 ಜನರು ಪ್ರಾಣ ಕಳೆದುಕೊಂಡಿದ್ದಾರೆ. 150 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.

ಮೊಸುಲ್ನ ಪೂರ್ವದಲ್ಲಿರುವ ಕ್ರಿಶ್ಚಿಯನ್ನರು ಹೆಚ್ಚು ವಾಸಿಸುವ ಪಟ್ಟಣವಾದ ಹಮ್ದನಿಯಾದದಲ್ಲಿ ಈ ಘಟನೆ ಸಂಭವಿಸಿದೆ. ಗಾಯಾಳುಗಳನ್ನು ಆಸ್ಪತ್ರೆಗಳಲ್ಲಿ ದಾಖಲಿಸಲಾಗಿದೆ. ಹಲವಾರು ಆಂಬ್ಯುಲೆನ್ಸ್ಗಳು ಸೈರನ್ಗಳೊಂದಿಗೆ ಆಸ್ಪತ್ರೆಗೆ ಆಗಮಿಸುತ್ತಿದ್ದು, ರಕ್ತದಾನ ಮಾಡಲು ಆಸ್ಪತ್ರೆಯ ಅಂಗಳದಲ್ಲಿ ನೂರಾರು ಜನರು ಸೇರಿದ್ದಾರೆ ಎಂದು ಪ್ರತ್ಯಕ್ಷದರ್ಶಿಗಳು ಮಾಧ್ಯಮಗಳಿಗೆ ಹೇಳಿದ್ದಾರೆ.
ಬೆಂಕಿ ಕಾಣಿಸಿಕೊಳ್ಳಲು ನಿಖರ ಕಾರಣವೇನು ಎಂಬುದರ ಬಗ್ಗೆ ತನಿಖೆ ನಡೆಸಲಾಗುತ್ತಿದೆ. ನಾಗರಿಕ ರಕ್ಷಣಾ ಅಧಿಕಾರಿಗಳು ಬೆಂಕಿಯು ಸಂಭವಿಸಿದ ಈವೆಂಟ್ ಹಾಲ್ನೊಳಗೆ ಪರಿಶೀಲನೆ ನಡೆಸುತ್ತಿದ್ದಾರೆ. ಈವೆಂಟ್ ಹಾಲ್ ಸಿಬ್ಬಂದಿ ಸುರಕ್ಷತಾ ಮಾನದಂಡಗಳನ್ನು ಉಲ್ಲಂಘಿಸಿದ್ದಾರೆ ಎಂದು ಪ್ರಾಥಮಿಕ ತನಿಖೆಯಿಂದ ಗೊತ್ತಾಗಿದೆ. ಆದರೆ, ಘಟನೆ ಉದ್ದೇಶಪೂರ್ವಕವಾಗಿ ನಡೆದಿದೆಯೇ ಎಂಬುದನ್ನು ತನಿಖೆ ಮೂಲಕ ತಿಳಿದುಕೊಳ್ಳಲು ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.
ಕಡಿಮೆ ವೆಚ್ಚದ, ಕಳಪೆ ಗುಣಮಟ್ಟದ ನಿರ್ಮಾಣ ಸಾಮಗ್ರಿಗಳ ಬಳಕೆಯಿಂದಾಗಿ ಬೆಂಕಿಯು ಚಾವಣಿಯ ಮೂಲಕ ಹೊತ್ತಿಕೊಂಡಿದೆ ಎಂದು ಮಾಧ್ಯಮಗಳು ವರದಿ ಮಾಡಿದೆ.

ಪ್ರಾಥಮಿಕ ಮಾಹಿತಿಯೊಂದರ ಪ್ರಕಾರ, ಮದುವೆಯ ಸಂದರ್ಭದಲ್ಲಿ ಪಟಾಕಿಗಳನ್ನು ಸಿಡಿಸಲಾಗಿದೆ. ಈ ಹಿನ್ನೆಲೆಯಲ್ಲಿ ಕಿಡಿಗಳು ಚಾವಣಿಯ ಮೂಲಕ ಸಭಾಂಗಣದಲ್ಲಿ ಸಿಡಿದ ಕಾರಣ ಬೆಂಕಿ ಹೊತ್ತಿಕೊಂಡಿದೆ.
ಇರಾಕ್ನ ನಿರ್ಮಾಣ ಮತ್ತು ಸಾರಿಗೆ ವಲಯಗಳಲ್ಲಿನ ಸುರಕ್ಷತಾ ಮಾನದಂಡಗಳನ್ನು ಈ ಮದುವೆ ಹಾಲ್ನಲ್ಲಿ ಕಡೆಗಣಿಸಲಾಗಿದೆ ಎಂದು ಹೇಳಲಾಗುತ್ತಿದೆ.
ಈ ಕುರಿತು ಮಾತನಾಡಿರುವ ಆರೋಗ್ಯ ಸಚಿವಾಲಯದ ವಕ್ತಾರ ಸೈಫ್ ಅಲ್-ಬದ್ರ್, 'ಸರ್ಕಾರಿ ನ್ಯೂಸ್ ಏಜೆನ್ಸಿಯ ನಮಗೆ ನೀಡಿರುವ ಮಾಹಿತಿಯ ಪ್ರಕಾರ, ಘಟನೆಯಲ್ಲಿ ನೂರು ಜನರು ಸಾವನ್ನಪ್ಪಿದ್ದು, ಗಾಯಗೊಂಡವರ ಸಂಖ್ಯೆಯನ್ನು 150ಕ್ಕೆ ಏರಿದೆ' ಎಂದು ತಿಳಿಸಿದ್ದಾರೆ.

'ದುರದೃಷ್ಟಕರ ಅವಘಡದಲ್ಲಿ ಹಾನಿಗೊಳಗಾದವರಿಗೆ ಪರಿಹಾರವನ್ನು ಒದಗಿಸಲು ಎಲ್ಲಾ ಪ್ರಯತ್ನಗಳನ್ನು ಮಾಡಲಾಗುತ್ತಿದೆ' ಎಂದು ಅಲ್-ಬದ್ರ್ ಹೇಳಿದ್ದಾರೆ.
ಇರಾಕ್ನ ಪ್ರಧಾನಿ ಮೊಹಮ್ಮದ್ ಶಿಯಾ ಅಲ್-ಸುಡಾನಿ ಅವರು ಬೆಂಕಿಯ ಅಪಘಾತದ ಬಗ್ಗೆ ತನಿಖೆ ನಡೆಸಲು ಆದೇಶಿಸಿದ್ದಾರೆ. ದೇಶದ ಆಂತರಿಕ ಮತ್ತು ಆರೋಗ್ಯ ಅಧಿಕಾರಿಗಳಿಗೆ ಪರಿಹಾರ ಒದಗಿಸುವಂತೆ ಸೂಚಿಸಿದ್ದಾರೆ.
'ಕಡಿಮೆ ವೆಚ್ಚದ ಕಟ್ಟಡ ಸಾಮಗ್ರಿಗಳ ಬಳಕೆಯ ಪರಿಣಾಮವಾಗಿ ಈ ದುರಂತ ಸಂಭವಿಸಿದೆ. ಬೆಂಕಿಯು ಹಾಲ್ನ ಗೋಡೆಗಳ ಕುಸಿತಕ್ಕೆ ಕಾರಣವಾಯಿತು. ಬೆಂಕಿ ಹೊತ್ತಿಕೊಂಡ ಕೆಲ ನಿಮಿಷಗಳಲ್ಲಿ ಗೋಡೆಗಳು ಕುಸಿದಿವೆ' ಎಂದು ನಾಗರಿಕ ರಕ್ಷಣಾ ಇಲಾಖೆ ಹೇಳಿದೆ.
-
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್












Click it and Unblock the Notifications