ಇರಾಕ್ ಮಾರುಕಟ್ಟೆಯಲ್ಲಿ ಬಾಂಬ್ಸ್ಫೋಟ: ಮೃತರ ಸಂಖ್ಯೆ 35ಕ್ಕೆ ಏರಿಕೆ
ಬಾಗ್ದಾದ್, ಜುಲೈ 20: ಬಾಗ್ದಾದ್ನ ಉಪನಗರ ಸದರ್ ಸಿಟಿಯಲ್ಲಿನ ಮಾರುಕಟ್ಟೆಯಲ್ಲಿ ಸೋಮವಾರ ನಡೆದ ಬಾಂಬ್ ಸ್ಫೋಟದಲ್ಲಿ ಮೃತಪಟ್ಟವರ ಸಂಖ್ಯೆ 35ಕ್ಕೆ ಏರಿಕೆಯಾಗಿದೆ.
ಗಾಯಗೊಂಡವರಲ್ಲಿ ಕೆಲವರ ಸ್ಥಿತಿ ಗಂಭೀರವಾಗಿದ್ದು, ಸಾವಿನ ಸಂಖ್ಯೆ ಹೆಚ್ಚಾಗಬಹುದು ಎಂದು ಅಂದಾಜಿಸಲಾಗಿದೆ. ಈದ್ ಹಬ್ಬದಲ್ಲಿ ನಿರತರಾಗಿದ್ದ ವೇಳೆ ರಸ್ತೆ ಬದಿಯಲ್ಲಿ ಬಾಂಬ್ ಸ್ಫೋಟಗೊಂಡಿತ್ತು, ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದರು.
ಘಟನೆಯನ್ನು ಖಂಡಿಸಿರುವ ಪ್ರಧಾನಿ ಮುಸ್ತಾಫಾ ಅಲ್-ಖದಿಮಿ ಅವರು ಭದ್ರತಾ ಪಡೆಗಳ ಅಧಿಕಾರಿಗೊಂದಿಗೆ ತುರ್ತು ಸಭೆ ನಡೆಸಿದ್ದು, ಮಾಹಿತಿ ಪಡೆದಿದ್ದಾರೆ ಎಂದು ಪ್ರಧಾನಿ ಕಚೇರಿ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಇಸ್ಲಾಮಿಕ್ ಸ್ಟೇಟ್ ದಾಳಿಯ ಹೊಣೆ ಹುತ್ತುಕೊಂಡಿದೆ. ಐಎಸ್ ಟೆಲಿಗ್ರಾಂ ಚಾನೆಲ್ನಲ್ಲಿ ಪೋಸ್ಟ್ ಮಾಡಿಕೊಂಡಿದ್ದು, ಅಬು ಹಮ್ಜಾ ಅಲ್-ಇರಾಕಿ ಹೆಸರಿನ ಆತ್ಮಾಹುತಿ ಬಾಂಬರ್ ತನ್ನನ್ನು ಸ್ಫೋಟಿಸಿಕೊಂಡಿದ್ದಾನೆ ಎಂದು ಹೇಳಲಾಗಿದೆ.
ಗಾಯಗೊಂಡಿದ್ದ ಕೆಲವರ ಸ್ಥಿತಿ ಗಂಭೀರವಾಗಿದೆ, ಘಟನೆಯಲ್ಲಿ 60ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಇರಾಕಿ ಅಧ್ಯಕ್ಷ ಬರ್ಹಮ್ ಸಾಲಿಹ್ ಬಾಂಬ್ ಸ್ಫೋಟವನ್ನು "ಘೋರ ಅಪರಾಧ" ಎಂದು ಹೇಳಿದ್ದು ಮೃತರಿಗೆ ಸಂತಾಪ ಸೂಚಿಸಿದರು. ಅವರು ಈದ್ ಮುನ್ನಾದಿನದಂದು ಸದರ್ ಸಿಟಿಯಲ್ಲಿರುವ ನಮ್ಮ ನಾಗರಿಕರನ್ನು ಗುರಿಯಾಗಿಸಿಕೊಂಡಿದ್ದಾರೆ ಎಂದು ಸಾಲಿಹ್ ಟ್ವೀಟ್ ಮಾಡಿದ್ದು ಅವರು (ದುಷ್ಕರ್ಮಿಗಳು) ಒಂದು ಕ್ಷಣವೂ ಜನರನ್ನು ಸಂತೋಷದಿಂದಿರಲು ಬಿಡುವುದಿಲ್ಲ ಎಂದಿದ್ದಾರೆ.

"ಇದು ಇರಾಕ್ ನಲ್ಲಿ ದುಃಖದ ಈದ್ ರಾತ್ರಿ" ಎಂದು ಇಂಟರ್ನ್ಯಾಷನಲ್ ರೆಡ್ ಕ್ರಾಸ್ ಹೇಳಿದೆ. "ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ನಮ್ಮ ಆಳವಾದ ಸಹಾನುಭೂತಿ ಮತ್ತು ಸಂತಾಪ."
ಈ ವರ್ಷ ಮೂರನೇ ಬಾರಿಗೆ ಜನದಟ್ಟಣೆ ಇರುವ ಮಾರುಕಟ್ಟೆಯಲ್ಲಿ ಬಾಂಬ್ ಸ್ಫೋಟವಾಗಿದೆ. ಏಪ್ರಿಲ್ ನಲ್ಲಿ ಸಾದರ್ ನಗರದಲ್ಲಿ ಕಾರ್ ಬಾಂಬ್ ದಾಳಿಯಲ್ಲಿ ಕನಿಷ್ಠ ನಾಲ್ಕು ಜನರು ಸಾವನ್ನಪ್ಪಿದ್ದರು. ಮಾರುಕಟ್ಟೆಯಲ್ಲಿ ನಿಲ್ಲಿಸಿದ್ದ ಕಾರಿಗೆ ಜೋಡಿಸಲಾದ ಸ್ಫೋಟಕ ಸಾಧನದಿಂದ ಆ ಸ್ಫೋಟ ಸಂಭವಿಸಿದೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications