ಕೊರೊನಾ ವೈರಸ್: ಜಗತ್ತಿಗೆ ಚೀನಾ ಮುಚ್ಚಿಟ್ಟ ನಾಲ್ಕು ಭಯಾನಕ ಸುಳ್ಳುಗಳು
ಚೀನಾದ ವುಹಾನ್ ನಲ್ಲಿ ಹುಟ್ಟಿಕೊಂಡ ಚೀನಾ ವೈರಸ್ ಅಥವಾ ಕೊರೊನಾ ವೈರಸ್, ಇಂದು ವಿಶ್ವವನ್ನೇ ಬೆಚ್ಚಿಬೀಳಿಸಿದೆ. ಸುಮಾರು ಎಪ್ಪತ್ತು ದಿನಗಳ ಲಾಕೌಟ್ ನಂತರ, ವುಹಾನ್ ನಗರದಲ್ಲಿ ಲಾಕ್ ಔಟ್ ತೆರವುಗೊಂಡಿದೆ.
ಆದರೆ, ಈ ವೈರಾಣು ವಿಶ್ವದ ಹಲವು ದೇಶಗಳ ಬಾಗಿಲನ್ನು ಬಂದ್ ಮಾಡಿದೆ. ಅಮೆರಿಕಾ, ಸ್ಪೇನ್, ಇಟೆಲಿ, ಬ್ರಿಟನ್, ಇರಾನ್, ಬೆಲ್ಜಿಯಂ ಮುಂತಾದ ದೇಶಗಳಲ್ಲಿ ಕೊರೊನಾ ಅಕ್ಷರಸಃ ಮರಣಮೃದಂಗ ಬಾರಿಸುತ್ತಿದೆ.
ಈ ವೈರಸ್ ಕುರಿತ ಮಾಹಿತಿಯನ್ನು ಚೀನಾ, ಪ್ರಾಥಮಿಕ ಹಂತದಲ್ಲಿ ಮುಚ್ಚಿಟ್ಟಿದ್ದರಿಂದ, ಇಡೀ ವಿಶ್ವವೇ ಇದಕ್ಕೆ ಬೆಲೆ ತೆರಬೇಕಾಗಿದೆ. ಭಾರತ ಎರಡನೇ ಹಂತದ ಲಾಕ್ ಡೌನ್ ಗೆ ಸಜ್ಜಾಗಲೇ ಬೇಕಿದೆ.
ಕೊರೊನಾ ವೈರಸ್ ಪ್ರಕರಣದಲ್ಲಿ ಚೀನಾ ಹಲವು ವಿಷಯಗಳನ್ನು ಮುಚ್ಚಿಟ್ಟಿದ್ದಲ್ಲದೇ, ಸುಳ್ಳನ್ನೂ ಹೇಳುತ್ತಿದೆ ಎಂದು ಅಮೆರಿಕಾ ಗುಪ್ತಚರ ಅಧಿಕಾರಿಗಳ ಹೇಳಿಕೆಯನ್ನು ಉಲ್ಲೇಖಿಸಿ ಫಾಕ್ಸ್ ನ್ಯೂಸ್ ವರದಿ ಮಾಡಿತ್ತು.

'ಕಾರಣ ತಿಳಿಯದ' ಸಾವು
ಕಳೆದ ಎರಡು ತಿಂಗಳಲ್ಲಿ ಚೀನಾದಲ್ಲಿ ಅಪಾರ ಪ್ರಮಾಣದ ಸಾವು ಸಂಭವಿಸಿದೆ. ಚೀನಾ ತನ್ನ ರೋಗಿಗಳ ಸಂಖ್ಯೆ ಮತ್ತು ಸಾವುಗಳನ್ನು ಉದ್ದೇಶಪೂರ್ವಕವಾಗಿ ಕಡಿಮೆ ಮಾಡುವ ಮೂಲಕ ಜಗತ್ತಿನ ದಾರಿ ತಪ್ಪಿಸಿದೆ ಎಂದು ಅಮೆರಿಕಾದ ಗುಪ್ತಚರ ಅಧಿಕಾರಿಗಳು ಹೇಳಿದ್ದಾರೆಂದು ವರದಿಯಾಗಿದೆ. ಈ ರೀತಿಯ ಸಾವುಗಳನ್ನು 'ಕಾರಣ ತಿಳಿಯದ' ಸಾವು ಎಂದು ಚೀನಾ ಸರಕಾರ ತೋರಿಸುತ್ತಿದೆ. ತನ್ನ ದೇಶದಲ್ಲಿ ಕೊರೊನಾ ವೈರಸ್ ಏಕಾಏಕಿ ಹರಡಿರುವುದನ್ನು ಚೀನಾ ಮುಚ್ಚಿಡುತ್ತಿದೆ ಎಂದು ಬ್ಲೂಂಬರ್ಗ್ ತನ್ನ ಲೇಖನದಲ್ಲೂ ಹೇಳಿದೆ.

ಚೀನಾ ಸರಕಾರ ಉದ್ದೇಶಪೂರ್ವಕವಾಗಿಯೇ ಮುಚ್ಚಿಟ್ಟಿದೆ
ಈ ಮಾರಣಾಂತಿಕ ವೈರಸ್ ನಿಂದಾಗಿರುವ ಸಾವನ್ನು ಚೀನಾ ಸರಕಾರ ಉದ್ದೇಶಪೂರ್ವಕವಾಗಿಯೇ ಮುಚ್ಚಿಟ್ಟಿದೆ. ಹಾಗೂ, ಚೀನಾ ನೀಡುತ್ತಿರುವ ಸಾವಿನ ಅಂಕಿಅಂಶ ತಾಳೆಯಾಗುತ್ತಿಲ್ಲ. ಸಾವಿನ ಸಂಖ್ಯೆಯಲ್ಲಿ ಕಮ್ಮಿ ತೋರಿಸಿದರೆ, ಈ ವೈರಾಣುವನ್ನು ಸುಲಭವಾಗಿ ನಿಯಂತ್ರಿಸಬಹುದು ಎಂದು, ವಿಶ್ವಕ್ಕೆ ತೋರಿಸುವುದು ಚೀನಾದ ಉದ್ದೇಶ.

ಸತ್ತವರು ನಲವತ್ತು ಸಾವಿರಕ್ಕೂ ಹೆಚ್ಚು
2019ರಲ್ಲಿ ಚೀನಾದ ಹುಬೇ ಪ್ರಾಂತ್ಯದಲ್ಲಿ ಈ ವೈರಾಣು ಪತ್ತೆಯಾಯಿತು. ಅಧಿಕೃತವಾಗಿ ಚೀನಾ 82,000 ಕೇಸುಗಳು ಮತ್ತು 3,300 ಸಾವು ಎಂದು. ಆದರೆ, ಇದರಿಂದ ಸತ್ತವರು ನಲವತ್ತು ಸಾವಿರಕ್ಕೂ ಹೆಚ್ಚು ಎನ್ನುವ ಮಾಹಿತಿಯೊಂದು ಚೀನಾದಲ್ಲಿ ಭಾರೀ ಸದ್ದನ್ನು ಮಾಡುತ್ತಿದೆ. ಇದಕ್ಕೆ ಪೂರಕ ಎನ್ನುವಂತೆ ಚೀನಾ ಅಧಿಕೃತವಾಗಿ ಹೇಳಿದ ಸಂಖ್ಯೆಗೂ, ಬಳಸಲಾಗಿರುವ ಶವಪೆಟ್ಟಿಗೆಗಳಿಗೆ ತಾಳೆಯಾಗುತ್ತಿಲ್ಲ.

ವಿಶೇಷ ಆಸ್ಪತ್ರೆಯನ್ನು ಚೀನಾ ಬಂದ್ ಮಾಡಿ, ಕೊರೊನಾ ಮುಕ್ತ ಎಂದು ಹೇಳಿತ್ತು
ಕೊರೊನಾಗಾಗಿ ನಿರ್ಮಿಸಲಾಗಿದ್ದ ವಿಶೇಷ ಆಸ್ಪತ್ರೆಯನ್ನು ಚೀನಾ ಬಂದ್ ಮಾಡಿ, ಕೊರೊನಾ ಮುಕ್ತ ಎಂದು ಹೇಳಿತ್ತು. ಆದರೆ, ವುಹಾನ್ ನಲ್ಲಿ ಲಾಕ್ ಡೌನ್ ತೆರವು ಮಾಡಿರುವುದಕ್ಕೆ ಅಡ್ಡಿ ಪಡಿಸುತ್ತಿರುವ ಅಥವಾ ವಿರೋಧ ವ್ಯಕ್ತವಾಗುತ್ತಿರುವ ವಿಡಿಯೋಗಳು ಸಾಮಾಜಿಕ ತಾಣದಲ್ಲಿ ಹರಿದಾಡುತ್ತಿದೆ. ಮೂಲಗಳ ಪ್ರಕಾರ, ವೈರಸ್ ಇನ್ನೂ ಅಲ್ಲಿ ಜೀವಂತವಾಗಿದೆ ಎಂದು ಹೇಳಲಾಗುತ್ತಿದೆ.
-
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ -
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ -
ಆರ್ಸಿಬಿ ವಿರುದ್ಧದ ಪಂದ್ಯಕ್ಕೂ ಮುನ್ನ ಕೇವಲ 42 ಎಸೆತಗಳಲ್ಲಿ 94 ರನ್ ಸಿಡಿಸಿದ ಅಭಿಷೇಕ್ ಶರ್ಮಾ: ಭಾರೀ ವೈರಲ್












Click it and Unblock the Notifications