ಜೈಷ್-ಎ-ಮೊಹಮ್ಮದ್ ಮುಖ್ಯಸ್ಥ ಮೌಲನಾ ಅಜರ್ ಸಾವು?
ಇಸ್ಲಾಮಾಬಾದ್, ಮಾರ್ಚ್ 03: ಜೈಷ್ ಎ ಮೊಹಮ್ಮದ್ ಸಂಘಟನೆಯ ಮುಖ್ಯಸ್ಥ ಮಸೂದ್ ಅಜರ್ ಕೂಡ ಸಾವನ್ನಪ್ಪಿದ್ದಾನೆ. ಆದರೆ, ಪಾಕಿಸ್ತಾನ ಸರ್ಕಾರ ಮತ್ತು ಸೇನೆ ಮಸೂದ್ ಅಜರ್ ಸಾವಿನ ಕುರಿತಾಗಿ ದೃಢಪಡಿಸುತ್ತಿಲ್ಲ ಎಂದು ಹೇಳಲಾಗಿದೆ.
ಮಸೂದ್ ಅಜರ್ ಪಾಕಿಸ್ತಾನದಲ್ಲಿ ನೆಲೆಸಿರುವುದನ್ನು ಪಾಕಿಸ್ತಾನ ಸರ್ಕಾರವು ಒಪ್ಪಿಕೊಂಡಿತ್ತು. ರಾವಲ್ಪಿಂಡಿ ಆಸ್ಪತ್ರೆಯಲ್ಲಿದ್ದಾನೆ, ಕಿಡ್ನಿ ವೈಫಲ್ಯಗೊಂಡಿದ್ದು ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾನೆ ಎನ್ನಲಾಗಿತ್ತು. ಆದರೆ, ವರದಿಗಳ ಪ್ರಕಾರ ಶನಿವಾರದಂದು ಪಾಕಿಸ್ತಾನದ ಸೇನಾ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾನೆ ಎಂಬ ಸುದ್ದಿಯಿದೆ.

ಇದರ ಬೆನ್ನಲ್ಲೆ #MasoodAzharDEAD ಎಂದು ಟ್ವಿಟ್ಟರ್ ನಲ್ಲಿ ಟ್ರೆಂಡ್ ಆಗುತ್ತಿದೆ. ಮಾರ್ಚ್ 01ರಂದು ಪಾಕಿಸ್ತಾನದ ವಿದೇಶಾಂಗ ಸಚಿವ ಶಾ ಮೆಹಮೂದ್ ಖುರೇಶಿ ಅವರು ಪಾಕಿಸ್ತಾನದಲ್ಲೇ ಅಜರ್ ಇದಾನೆ ಎಂದು ಸಿಎನ್ಎನ್ ಗೆ ನೀಡಿದ ಸಂದರ್ಶನದಲ್ಲಿ ಒಪ್ಪಿಕೊಂಡಿದ್ದರು.
1999ರಲ್ಲಿ ಇಂಡಿಯನ್ ಏರ್ ಲೈನ್ಸ್ ವಿಮಾನವನ್ನು ಅಪಹರಿಸಿದ್ದ ಉಗ್ರರು ಅಫ್ಘಾನಿಸ್ತಾನದ ಕಂದಹಾರ್ ಗೆ ಕೊಂಡೊಯ್ದಿದ್ದರು. ಪ್ರಯಾಣಿಕರ ಸುರಕ್ಷಿತ ಬಿಡುಗಡೆಗಾಗಿ ಮಸೂದ್ ಅಜರ್ ಮತ್ತು ಆತನ ಇನ್ನಿಬ್ಬರು ಸಹಚರರನ್ನು ಭಾರತ ಬಿಡುಗಡೆ ಮಾಡಿತ್ತು. ಬಳಿಕ ಜೈಷ್ ಎ ಮೊಹಮದ್ ಸಂಘಟನೆಯು ಅಜರ್ ಮಸೂದ್ ನೇತೃತ್ವದಲ್ಲಿ ಭಾರತದ ಸಂಸತ್ತಿನ ಮೇಲೆ ದಾಳಿ, ಪಠಾಣ್ ಕೋಟ್ ಸೇನಾ ನೆಲೆ ಮೇಲೆ ದಾಳಿ, ಪುಲ್ವಾಮಾ ದಾಳಿ ನಡೆಸಿತು.
ಅಜರ್ ಮಸೂದ್ ನನ್ನು ಜಾಗತಿಕ ಉಗ್ರ ಎಂದು ಘೋಷಿಸುವಂತೆ ವಿಶ್ವಸಂಸ್ಥೆಗೆ ಭಾರತ ಮೂರು ಬಾರಿ ಮನವಿ ಮಾಡಿದ್ದು, ಚೀನಾ ಹಾಗೂ ಪಾಕಿಸ್ತಾನದ ಪ್ರತಿರೋಧದಿಂದ ಮಸೂದ್ ಗೆ ರಕ್ಷೆ ಸಿಕ್ಕಿತ್ತು.
ಈ ಬಗ್ಗೆ ಪ್ರತಿಕ್ರಿಯಿಸಿರುವ ಭಾರತದ ಅಧಿಕಾರಿಗಳು, ಈ ಸುದ್ದಿಯನ್ನು ಖಚಿತಪಡಿಸಲು ಯಾವುದೇ ಪುರಾವೆ ಸಿಕ್ಕಿಲ್ಲ. ಭವಲ್ ಪುರ್ ನಲ್ಲಿ ಸಮಾವೇಶದಲ್ಲಿ ಮಸೂದ್ ಅಜರ್ ಪಾಲ್ಗೊಂಡಿದ್ದರ ಬಗ್ಗೆ ಮಾಹಿತಿಯಿದೆ. ಪುಲ್ವಾಮಾ ದಾಳಿಗೂ ಒಂದು ದಿನ ಮುನ್ನ ಈ ಕಾರ್ಯಕ್ರಮವಿತ್ತು.
ಪುಲ್ವಾಮಾ ದಾಳಿಯ ಬಳಿಕ ಅಜರ್ ಮಸೂದ್ ಹಾಗೂ ಲಷ್ಕರ್ ಎ ತೋಯ್ಬಾ ಮುಖ್ಯಸ್ಥ ಹಫೀಜ್ ಸಯೀದ್ ಇಬ್ಬರಿಗೂ ಕೆಲ ಕಾಲ ಭೂಗತವಾಗುವಂತೆ ಐಎಸ್ ಐ ಸೂಚಿಸಿದೆ.
ತಾಲಿಬಾನಿಗಳ ನಾಯಕನನ್ನಾಗಿ ಅಜರ್ ಮಸೂದ್ ನನ್ನು ಬಿಂಬಿಸಲು ಪಾಕಿಸ್ತಾನ ಬಯಸಿದೆ. ಹೀಗಾಗಿ, ಮಸೂದ್ ನನ್ನು ಈ ಸಮಯದಲ್ಲಿ ಕಳೆದುಕೊಳ್ಳಲು ಪಾಕಿಸ್ತಾನ ಸಿದ್ಧವಿಲ್ಲ. ಕಿಡ್ನಿ ವೈಫಲ್ಯಕ್ಕಾಗಿ ಚಿಕಿತ್ಸೆ ಪಡೆದುಕೊಂಡಿರಬಹುದು. ಆದರೆ, ಸಾವಿನ ಮಾಹಿತಿ ಬಗ್ಗೆ ಖಚಿತವಾಗಿ ಹೇಳಲಾಗದು ಎಂದಿದ್ದಾರೆ.
-
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
KSRTC: ಸಾರಿಗೆ ಲೋಕಕ್ಕೆ 'ಪಲ್ಲಕ್ಕಿ' ಮೆರುಗು: ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ 115 ಹೊಸ ಬಸ್ಗಳ ಲೋಕಾರ್ಪಣೆ -
ಬೆಂಗಳೂರಲ್ಲಿ ಗ್ಯಾಸ್ ಏಜೆನ್ಸಿಗಳ ಭರ್ಜರಿ ದಂಧೆ: ಸಿಲಿಂಡರ್ ಸಿಗದೇ ಗ್ರಾಹಕರು ಕಂಗಾಲು; ಕಾಳಸಂತೆಯಲ್ಲಿ ₹3,000ಕ್ಕೆ ಮಾರಾಟ -
LPG Gas: ಎಲ್ಪಿಜಿ ನಿಯಮಗಳಲ್ಲಿ ಭಾರೀ ಬದಲಾವಣೆ; ಗ್ರಾಹಕರು ದೂರು ನೀಡಲು ಸಹಾಯವಾಣಿ ಸಂಖ್ಯೆಗಳ ಬಿಡುಗಡೆ -
Gold Rate March 13: ಸತತ 3ನೇ ದಿನವೂ ಚಿನ್ನ - ಬೆಳ್ಳಿ ಬೆಲೆ ಭರ್ಜರಿ ಕುಸಿತ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
Resort: ಕರ್ನಾಟಕದಲ್ಲಿ ಶುರುವಾಯ್ತು ರೆಸಾರ್ಟ್ ರಾಜಕೀಯ: ‘ಅವರು ನಮ್ಮ ಅತಿಥಿಗಳು’ ಎಂದ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್












Click it and Unblock the Notifications