ಜೈಷ್-ಎ-ಮೊಹಮ್ಮದ್ ಮುಖ್ಯಸ್ಥ ಮೌಲನಾ ಅಜರ್ ಸಾವು?
ಇಸ್ಲಾಮಾಬಾದ್, ಮಾರ್ಚ್ 03: ಜೈಷ್ ಎ ಮೊಹಮ್ಮದ್ ಸಂಘಟನೆಯ ಮುಖ್ಯಸ್ಥ ಮಸೂದ್ ಅಜರ್ ಕೂಡ ಸಾವನ್ನಪ್ಪಿದ್ದಾನೆ. ಆದರೆ, ಪಾಕಿಸ್ತಾನ ಸರ್ಕಾರ ಮತ್ತು ಸೇನೆ ಮಸೂದ್ ಅಜರ್ ಸಾವಿನ ಕುರಿತಾಗಿ ದೃಢಪಡಿಸುತ್ತಿಲ್ಲ ಎಂದು ಹೇಳಲಾಗಿದೆ.
ಮಸೂದ್ ಅಜರ್ ಪಾಕಿಸ್ತಾನದಲ್ಲಿ ನೆಲೆಸಿರುವುದನ್ನು ಪಾಕಿಸ್ತಾನ ಸರ್ಕಾರವು ಒಪ್ಪಿಕೊಂಡಿತ್ತು. ರಾವಲ್ಪಿಂಡಿ ಆಸ್ಪತ್ರೆಯಲ್ಲಿದ್ದಾನೆ, ಕಿಡ್ನಿ ವೈಫಲ್ಯಗೊಂಡಿದ್ದು ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾನೆ ಎನ್ನಲಾಗಿತ್ತು. ಆದರೆ, ವರದಿಗಳ ಪ್ರಕಾರ ಶನಿವಾರದಂದು ಪಾಕಿಸ್ತಾನದ ಸೇನಾ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾನೆ ಎಂಬ ಸುದ್ದಿಯಿದೆ.

ಇದರ ಬೆನ್ನಲ್ಲೆ #MasoodAzharDEAD ಎಂದು ಟ್ವಿಟ್ಟರ್ ನಲ್ಲಿ ಟ್ರೆಂಡ್ ಆಗುತ್ತಿದೆ. ಮಾರ್ಚ್ 01ರಂದು ಪಾಕಿಸ್ತಾನದ ವಿದೇಶಾಂಗ ಸಚಿವ ಶಾ ಮೆಹಮೂದ್ ಖುರೇಶಿ ಅವರು ಪಾಕಿಸ್ತಾನದಲ್ಲೇ ಅಜರ್ ಇದಾನೆ ಎಂದು ಸಿಎನ್ಎನ್ ಗೆ ನೀಡಿದ ಸಂದರ್ಶನದಲ್ಲಿ ಒಪ್ಪಿಕೊಂಡಿದ್ದರು.
1999ರಲ್ಲಿ ಇಂಡಿಯನ್ ಏರ್ ಲೈನ್ಸ್ ವಿಮಾನವನ್ನು ಅಪಹರಿಸಿದ್ದ ಉಗ್ರರು ಅಫ್ಘಾನಿಸ್ತಾನದ ಕಂದಹಾರ್ ಗೆ ಕೊಂಡೊಯ್ದಿದ್ದರು. ಪ್ರಯಾಣಿಕರ ಸುರಕ್ಷಿತ ಬಿಡುಗಡೆಗಾಗಿ ಮಸೂದ್ ಅಜರ್ ಮತ್ತು ಆತನ ಇನ್ನಿಬ್ಬರು ಸಹಚರರನ್ನು ಭಾರತ ಬಿಡುಗಡೆ ಮಾಡಿತ್ತು. ಬಳಿಕ ಜೈಷ್ ಎ ಮೊಹಮದ್ ಸಂಘಟನೆಯು ಅಜರ್ ಮಸೂದ್ ನೇತೃತ್ವದಲ್ಲಿ ಭಾರತದ ಸಂಸತ್ತಿನ ಮೇಲೆ ದಾಳಿ, ಪಠಾಣ್ ಕೋಟ್ ಸೇನಾ ನೆಲೆ ಮೇಲೆ ದಾಳಿ, ಪುಲ್ವಾಮಾ ದಾಳಿ ನಡೆಸಿತು.
ಅಜರ್ ಮಸೂದ್ ನನ್ನು ಜಾಗತಿಕ ಉಗ್ರ ಎಂದು ಘೋಷಿಸುವಂತೆ ವಿಶ್ವಸಂಸ್ಥೆಗೆ ಭಾರತ ಮೂರು ಬಾರಿ ಮನವಿ ಮಾಡಿದ್ದು, ಚೀನಾ ಹಾಗೂ ಪಾಕಿಸ್ತಾನದ ಪ್ರತಿರೋಧದಿಂದ ಮಸೂದ್ ಗೆ ರಕ್ಷೆ ಸಿಕ್ಕಿತ್ತು.
ಈ ಬಗ್ಗೆ ಪ್ರತಿಕ್ರಿಯಿಸಿರುವ ಭಾರತದ ಅಧಿಕಾರಿಗಳು, ಈ ಸುದ್ದಿಯನ್ನು ಖಚಿತಪಡಿಸಲು ಯಾವುದೇ ಪುರಾವೆ ಸಿಕ್ಕಿಲ್ಲ. ಭವಲ್ ಪುರ್ ನಲ್ಲಿ ಸಮಾವೇಶದಲ್ಲಿ ಮಸೂದ್ ಅಜರ್ ಪಾಲ್ಗೊಂಡಿದ್ದರ ಬಗ್ಗೆ ಮಾಹಿತಿಯಿದೆ. ಪುಲ್ವಾಮಾ ದಾಳಿಗೂ ಒಂದು ದಿನ ಮುನ್ನ ಈ ಕಾರ್ಯಕ್ರಮವಿತ್ತು.
ಪುಲ್ವಾಮಾ ದಾಳಿಯ ಬಳಿಕ ಅಜರ್ ಮಸೂದ್ ಹಾಗೂ ಲಷ್ಕರ್ ಎ ತೋಯ್ಬಾ ಮುಖ್ಯಸ್ಥ ಹಫೀಜ್ ಸಯೀದ್ ಇಬ್ಬರಿಗೂ ಕೆಲ ಕಾಲ ಭೂಗತವಾಗುವಂತೆ ಐಎಸ್ ಐ ಸೂಚಿಸಿದೆ.
ತಾಲಿಬಾನಿಗಳ ನಾಯಕನನ್ನಾಗಿ ಅಜರ್ ಮಸೂದ್ ನನ್ನು ಬಿಂಬಿಸಲು ಪಾಕಿಸ್ತಾನ ಬಯಸಿದೆ. ಹೀಗಾಗಿ, ಮಸೂದ್ ನನ್ನು ಈ ಸಮಯದಲ್ಲಿ ಕಳೆದುಕೊಳ್ಳಲು ಪಾಕಿಸ್ತಾನ ಸಿದ್ಧವಿಲ್ಲ. ಕಿಡ್ನಿ ವೈಫಲ್ಯಕ್ಕಾಗಿ ಚಿಕಿತ್ಸೆ ಪಡೆದುಕೊಂಡಿರಬಹುದು. ಆದರೆ, ಸಾವಿನ ಮಾಹಿತಿ ಬಗ್ಗೆ ಖಚಿತವಾಗಿ ಹೇಳಲಾಗದು ಎಂದಿದ್ದಾರೆ.
-
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
ಮೈಸೂರಲ್ಲಿ ವಂದೇ ಭಾರತ್ ರೈಲ್ವೆ ಹಬ್: 400 ಕೋಟಿ ರೂ ವೆಚ್ಚದಲ್ಲಿ ಹೈಟೆಕ್ ನಿರ್ವಹಣಾ ಕೇಂದ್ರ -
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
ರಿಷಬ್ ಸಮಯ ಬಂದಾಗ ಮಾತಾಡ್ತೀನಿ ಅಂದ: ಅನ್ಫಾಲೋ, ಗೆಳೆಯರಲ್ಲಿ ಬಿರುಕು ವದಂತಿ ಬಗ್ಗೆ ಪ್ರಮೋದ್ ಶೆಟ್ಟಿ ಪ್ರತಿಕ್ರಿಯೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
KSOU: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಕುಲಸಚಿವರಾಗಿ ಕೆಎಎಸ್ ಅಧಿಕಾರಿ ಎಸ್.ಕುಸುಮಾ ಕುಮಾರಿ ನೇಮಕ -
April 5 Horoscope: ನಿಮ್ಮ ಅದೃಷ್ಟ ಹೇಗಿದೆ? ಸಂಪೂರ್ಣ ಮಾಹಿತಿ ಇಲ್ಲಿ -
ಬೆಂಗಳೂರಿನ ಹೊಸೂರು ರಸ್ತೆಯ ದುಸ್ಥಿತಿ: ಕೇಂದ್ರ ಸಚಿವ ನಿತಿನ್ ಗಡ್ಕರಿಗೆ ಟ್ಯಾಗ್ ಮಾಡಿ ಕಿರಣ್ ಮಜುಂದಾರ್ ಶಾ ಆಕ್ರೋಶ -
Bengaluru Viral: ಬೆಂಗಳೂರಿನ ಲಾಲ್ಬಾಗ್ ನೋಡಿ ತಪ್ಪೊಪ್ಪಿಗೆ ಕೊಡಬೇಕು ಎಂದ ವಿದೇಶಿಗ, ವಿಡಿಯೋ ವೈರಲ್ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
RCB vs CSK: ಆರ್ಸಿಬಿ ಕಡೆಯಿಂದ ಅಭಿಮಾನಿಗಳಿಗೆ ವಿಶೇಷ ಸಂದೇಶ: ಇಂದಿನ ಪಂದ್ಯಕ್ಕೂ ಮುನ್ನ ಇದು ಗಮನದಲ್ಲಿರಲಿ -
Virat Kohli: ಎಲ್ಲೂ ಅವಕಾಶ ಸಿಗದಿದ್ರೆ ಸ್ಯಾಂಡಲ್ವುಡ್ಗೆ ಬರ್ತೀನಿ: ವಿರಾಟ್ ಕೊಹ್ಲಿ ವಿಡಿಯೋ ವೈರಲ್












Click it and Unblock the Notifications