Breaking: ಧರ್ಮಗುರು ರಹೀಮುಲ್ಲಾ ಹಕ್ಕಾನಿ ಹತ್ಯೆ ಹೊಣೆ ಹೊತ್ತ ಐಸಿಸ್
ಕಾಬೂಲ್, ಆಗಸ್ಟ್ 12: ಐಸಿಸ್ ವಿರುದ್ಧ ಉಗ್ರ ಭಾಷಣಗಳಿಗೆ ಹೆಸರಾಗಿದ್ದ ಹಿರಿಯ ತಾಲಿಬಾನ್ ಧರ್ಮಗುರು ರಹೀಮುಲ್ಲಾ ಹಕ್ಕಾನಿ ಹತ್ಯೆ ಹೊಣೆಯನ್ನು ಐಸಿಸ್ ಹೊತ್ತುಕೊಂಡಿದೆ.
ಗುರುವಾರ ಅಫ್ಘಾನಿಸ್ತಾನದ ರಾಜಧಾನಿ ಕಾಬೂಲ್ನ ಮದರಸಾದಲ್ಲಿ ನಡೆದ ಆತ್ಮಾಹುತಿ ದಾಳಿಯಲ್ಲಿ ಹಿರಿಯ ತಾಲಿಬಾನ್ ಧರ್ಮಗುರು ರಹೀಮುಲ್ಲಾ ಹಕ್ಕಾನಿ ಹತ್ಯೆಯಾಗಿದ್ದರು. ಸ್ಫೋಟದಲ್ಲಿ ಇತರ ನಾಲ್ವರು ಗಾಯಗೊಂಡಿದ್ದಾರೆ.
ಹೆಣ್ಣು ಮಕ್ಕಳು ಶಾಲೆಗೆ ಹೋಗಲು ಅವಕಾಶ ನೀಡುವುದರ ಪರವಾಗಿ ಇತ್ತೀಚೆಗೆ ಸಾರ್ವಜನಿಕವಾಗಿ ಮಾತನಾಡಿದ್ದ ರಹೀಮುಲ್ಲಾ ಹಕ್ಕಾನಿ ಅವರ ಮೇಲೆ ಅಕ್ಟೋಬರ್ 2020 ರಲ್ಲಿ ಪಾಕಿಸ್ತಾನದಲ್ಲಿ ಹತ್ಯೆ ಪ್ರಯತ್ನ ನಡೆದಿತ್ತು. ಇದರ ಹಿಂದೆಯೂ ಒಮ್ಮೆ ಕೊಲೆ ಯತ್ನ ನಡೆಸಲಾಗಿತ್ತು. ಆದರೆ ಎರಡು ಪ್ರಯತ್ನಗಳಿಂದ ಬದುಕುಳಿದಿದ್ದರು.

ತಾಲಿಬಾನ್ ಸರ್ಕಾರದ ಉಪ ವಕ್ತಾರ ಬಿಲಾಲ್ ಕರಿಮಿ ಟ್ವೀಟ್ ಮಾಡಿದ್ದು, ಶೇಖ್ ರಹೀಮುಲ್ಲಾ ಹಕ್ಕಾನಿ ಹತ್ಯೆ ಆಗಿರುವುದನ್ನು ಖಚಿತಪಡಿಸಿದ್ದರು. "ದೇಶದ ಶ್ರೇಷ್ಠ ಶೈಕ್ಷಣಿಕ ವ್ಯಕ್ತಿ ಶೇಖ್ ರಹೀಮುಲ್ಲಾ ಹಕ್ಕಾನಿ ಶತ್ರುಗಳ ಕ್ರೂರ ದಾಳಿಯಲ್ಲಿ ಹುತಾತ್ಮರಾಗಿದ್ದಾರೆ," ಎಂದಿದ್ದರು.
'ಹದೀಸ್ ಸಾಹಿತ್ಯ'ದ ವಿದ್ವಾಂಸ ಎಂದು ಹೇಳಲಾದ ಹಕ್ಕಾನಿ, ಪಾಕಿಸ್ತಾನದ ಸ್ವಾಬಿ ಮತ್ತು ಅಕೋರಾ ಖಟ್ಟಕ್ನಲ್ಲಿರುವ ದೇವಬಂದಿ ಮದರಸಾಗಳಲ್ಲಿ ಧಾರ್ಮಿಕ ಶಿಕ್ಷಣವನ್ನು ಪಡೆದಿದ್ದರು.
ಹತ್ಯೆ ಬಳಿಕ, ISIS ತನ್ನ ಟೆಲಿಗ್ರಾಂ ಚಾನೆಲ್ಗಳಲ್ಲಿ ದಾಳಿಯ ಹೊಣೆಯನ್ನು ಹೊತ್ತುಕೊಂಡು, ತಮ್ಮ ಬಾಂಬರ್ ತನ್ನ ಸ್ಫೋಟಕ ಉಡುಪನ್ನು ಧರ್ಮಗುರುಗಳ ಕಚೇರಿಯೊಳಗೆ ಸ್ಫೋಟಿಸಿದ್ದಾನೆ ಎಂದು ಹೇಳಿದೆ.
ತಾಲಿಬಾನ್ ಧರ್ಮಗುರು ರಹೀಮುಲ್ಲಾ ಹಕ್ಕಾನಿ ಅವರು ಗುಂಪಿನಲ್ಲಿ ಯಾವುದೇ ಅಧಿಕೃತ ಸ್ಥಾನವನ್ನು ಹೊಂದಿಲ್ಲದಿದ್ದರೂ ಪ್ರಭಾವಿ ವ್ಯಕ್ತಿಯಾದ್ದರು. ಹಲವು ವರ್ಷಗಳಿಂದ ಗುಂಪಿನ ಸದಸ್ಯರಿಗೆ ಕಲಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. "ಮಹಿಳೆಯರಿಗೆ ಶಿಕ್ಷಣವನ್ನು ಅನುಮತಿಸಲಾಗುವುದಿಲ್ಲ ಎಂದು ಹೇಳಲು ಷರಿಯಾದಲ್ಲಿ ಯಾವುದೇ ಸಮರ್ಥನೆ ಇಲ್ಲ. ಅವರಿಗೂ ಶಿಕ್ಷಣ ನೀಡಬೇಕು" ಎಂದು ಸಂದರ್ಶನದಲ್ಲಿ ಹೇಳಿದ್ದರು.
ಒಂದು ವರ್ಷದ ಹಿಂದೆ ಅಧಿಕಾರವನ್ನು ವಶಪಡಿಸಿಕೊಂಡ ನಂತರ, ತಾಲಿಬಾನ್ ಬಾಲಕಿಯರು ಮತ್ತು ಮಹಿಳೆಯರಿಗೆ ಇಸ್ಲಾಂ ಧರ್ಮದ ಅವರ ಕಠಿಣ ಸೂಚನೆಗಳನ್ನು ಅನುಸರಿಸಲು ನಿರ್ಬಂಧಗಳನ್ನು ವಿಧಿಸಿದೆ. ದೇಶದ ಹಲವು ಭಾಗಗಳಲ್ಲಿ ಬಾಲಕಿಯರ ಮಾಧ್ಯಮಿಕ ಶಾಲೆಗಳನ್ನು ಪುನಃ ತೆರೆಯಲು ಅನುಮತಿ ನೀಡಿಲ್ಲ.
-
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
March 19 Horoscope: ಈ ರಾಶಿಯವರಿಗೆ ಶುಭಸುದ್ದಿ, ಇತರರಿಗೆ ಎಚ್ಚರಿಕೆ -
13,00,000 ಕೋಟಿ ರೂಪಾಯಿ ಹೂಡಿಕೆದಾರರ ಹಣ ಉಡೀಸ್, ಭಾರತೀಯ ಷೇರುಪೇಟೆಯಲ್ಲಿ ಬಿರುಗಾಳಿ... Stock Market -
Traffic Advisory: ಮಾ.21 ರಂಜಾನ್ ಪ್ರಯುಕ್ತ ಬೆಂಗಳೂರಿನ ಈ ರಸ್ತೆಗಳಲ್ಲಿ ಸಂಚಾರ ನಿಷೇಧ, ಪರ್ಯಾಯ ಮಾರ್ಗ -
ಬೆಂಗಳೂರಿನಿಂದ ಬೀದರ್-ಕಲಬುರಗಿಗೆ ವಿಮಾನಸೇವೆ: 23ರೊಳಗೆ ಪ್ರಸ್ತಾವನೆ ಸಲ್ಲಿಸಲು ಸೂಚನೆ -
ಕರ್ನಾಟಕ ಉಪಚುನಾವಣೆ: ದಾವಣಗೆರೆ ದಕ್ಷಿಣ, ಬಾಗಲಕೋಟೆ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ -
ರೈಲ್ವೆ ಇಲಾಖೆಗೆ ಕರ್ನಾಟಕ ರಕ್ಷಣಾ ವೇದಿಕೆಯಿಂದ ಏ.15ರ ಗಡುವು: ಟಿ.ಎ.ನಾರಾಯಣಗೌಡ ಹೇಳಿದ್ದೇನು -
ವೆಜ್ ಬಿರಿಯಾನಿ 50, ಮಟನ್ ಬಿರಿಯಾನಿಗೆ 180 ರೂಪಾಯಿ ರೇಟ್ ಫಿಕ್ಸ್... Tamil Nadu Election -
Gold Price: ಯುಗಾದಿಗೆ ಚಿನ್ನಪ್ರಿಯರಿಗೆ ಶುಭ ಸುದ್ದಿ: ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ, ಬೆಳ್ಳಿ ದರ 15,000 ರೂ.ಕುಸಿತ -
ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಸಹೋದರಿ ಜವರಮ್ಮ ನಿಧನ -
ಆಕ್ಸಿಜನ್ ಸಿಲಿಂಡರ್ ನೆರವಿನಿಂದ ಎಸ್ಎಸ್ಎಲ್ಸಿ ಪರೀಕ್ಷೆ ಬರೆದ ವಿದ್ಯಾರ್ಥಿ: ಸಲಾಂ ಎಂದ ದೇಶದ ಜನತೆ












Click it and Unblock the Notifications