ಐಎಸ್ ಐಎಸ್ ನಿಂದ ಇಂಗ್ಲೆಂಡ್ ದಾಳಿಯ ಮೃತ್ಯು ಕೇಕೆ ಸಂದೇಶ
ಇಂಗ್ಲೆಂಡ್ ನ ಮ್ಯಾಂಚೆಸ್ಟರ್ ನಲ್ಲಿ ಸೋಮವಾರ ನಡೆದ ಬಾಂಬ್ ಸ್ಫೋಟದ ಹೊಣೆಯನ್ನು ಯಾವುದೇ ಸಂಘಟನೆ ಹೊತ್ತಿಲ್ಲ. ಆದರೆ ಈ ದಾಳಿ ನಂತರ ಆ ಸಂಘಟನೆ ಬೆಂಬಲಿಗರು ಸಾಮಾಜಿಕ ಜಾಲತಾಣಗಳಲ್ಲಿ ಸಂಭ್ರಮ ಆಚರಿಸುತ್ತಿದ್ದಾರೆ
ಎಲ್ಲರನ್ನೂ ಕೊಲ್ಲಿ ಎಂಬ ಸಂದೇಶಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿವೆ. ಇದು ಐಎಸ್ ಐಎಸ್ ಉಗ್ರ ಸಂಘಟನೆ ಬಗ್ಗೆ ಒಲವು ಹೊಂದಿರುವವರು ರವಾನಿಸುತ್ತಿರುವ ಸಂದೇಶ. ಮ್ಯಾಂಚೆಸ್ಟರ್ ಅರೇನಾದಲ್ಲಿ ಬಾಂಬ್ ಸ್ಫೋಟವಾಗಿ ಹತ್ತೊಂಬತ್ತು ಮಂದಿ ಮೃತಪಟ್ಟ ನಂತರ ಇಂಥದ್ದೊಂದು ಸಂದೇಶ ಹರಿದಾಡುತ್ತಿದೆ.
ಪಾಪ್ ಸಂಗೀತ ಕಾರ್ಯಕ್ರಮ ನಡೆದಿದ್ದ ಮ್ಯಾಂಚೆಸ್ಟರ್ ಅರೇನಾದಲ್ಲಿ ಹಲವು ಬಾಂಬ್ ಸ್ಫೋಟವಾಗಿತ್ತು. ಇದು ಆತ್ಮಹತ್ಯಾ ಬಾಂಬರ್ ದಾಳಿ ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದರು. ದಾಳಿಯ ಹೊಣೆಯನ್ನು ಅಧಿಕೃತವಾಗಿ ಯಾವುದೇ ಸಂಘಟನೆ ಹೊತ್ತುಕೊಂಡಿಲ್ಲವಾದರೂ ಐಎಸ್ ಐಎಸ್ ನವರು ದಾಳಿಯ ಸಂಭ್ರಮಾಚರಣೆಯಲ್ಲಿ ತೊಡಗಿದ್ದಾರೆ.[ಮ್ಯಾಂಚೆಸ್ಟರ್ ಅರೇನಾದಲ್ಲಿ ಬಾಂಬ್ ಸ್ಫೋಟ, ಕನಿಷ್ಠ 19 ಮಂದಿ ಸಾವು]

ಎಲ್ಲೆಡೆಯೂ ಕೊಲ್ಲಿ- ಬ್ರಿಟನ್, ಇಂಗ್ಲೆಂಡ್, ಮ್ಯಾಂಚೆಸ್ಟರ್, ಯುಕೆ, ಲಂಡನ್ ಎಂಬ ಸಂದೇಶವು ಸಾಮಾಜಿಕ ಜಾಲತಾಣಗಳಲ್ಲಿ ಕಾಣಿಸಿಕೊಂಡಿದೆ. ಮತ್ತೊಂದು ಸಂದೇಶದಲ್ಲಿ- ಅವರನ್ನು ಕಂಡಲ್ಲೆಲ್ಲ ಕೊಲ್ಲಿ. ಅವರಲ್ಲಿ ಭಯ ಹುಟ್ಟಿಸಿ. ಓ ಮುವಾಹಿದ್, ಕಾಫಿರ್ ರನ್ನು ಎದುರಿಸಿ, ಅಲ್ಲಾ ನಿಮ್ಮಿಂದ ಏನನ್ನು ಅಪೇಕ್ಷಿಸುತ್ತಾನೋ ಅದನ್ನು ಮಾಡಿ ಎಂಬ ಮತ್ತೊಂದು ಸಂದೇಶ ಕೂಡ ಕಾಣಿಸಿದೆ.
-
SSLC ಪರೀಕ್ಷೆ 2026: ವೇಳಾಪಟ್ಟಿ, ಸಮಯ, ಡ್ರೆಸ್ಕೋಡ್ ಹಾಗೂ ಪ್ರಮುಖ ಮಾರ್ಗಸೂಚಿಗಳ ಮಾಹಿತಿ ಇಲ್ಲಿದೆ -
Karnataka Weather: ಕರ್ನಾಟಕದ ಈ 9 ಜಿಲ್ಲೆಗಳಲ್ಲಿ ಮಾರ್ಚ್ 21ರವರೆಗೆ ಮಳೆ ಸಾಧ್ಯತೆ: ಹವಾಮಾನ ಇಲಾಖೆ -
Bengaluru Rent: ಬೆಂಗಳೂರು ಬಾಡಿಗೆ ಮನೆ ಸಮಸ್ಯೆ: 10 ತಿಂಗಳ ಮುಂಗಡ ಹಣ,ಮಾಲೀಕರ ಕಿರಿಕಿರಿ; 2026ರ ಹೊಸ ಬಾಡಿಗೆ ನಿಯಮವೇನು -
ಸರಕು ಖಾಲಿಯಾಯ್ತಾ ಪ್ರೇಮ್, ಇಡೀ ದೇಶದ ಮುಂದೆ ಕನ್ನಡಿಗರು ತಲೆತಗ್ಗಿಸುವಂತೆ ಮಾಡಿದಿರಿ: ಸೆರಗ ಸರ್ಸೆ ಹಾಡಿಗೆ ವಿರೋಧ -
Horoscope March 16; ಈ ರಾಶಿಯವರಿಗೆ ಶುಭ ಸುದ್ದಿ ಬರಬಹುದು -
Anil Kumble: ನಟ ಶಾರುಖ್ ಖಾನ್ ಮಾಲೀಕತ್ವದ ಕೆಕೆಆರ್ ತಂಡ ದಾರಿತಪ್ಪಿದ ಬಗ್ಗೆ ಅನಿಲ್ ಕುಂಬ್ಳೆ ಮಹತ್ವದ ಮಾಹಿತಿ -
ಪಿಯು ಮೌಲ್ಯಮಾಪನ ಬಹಿಷ್ಕಾರಕ್ಕೆ ಮುಂದಾದ ಉಪನ್ಯಾಸಕರು: ಫಲಿತಾಂಶ ವಿಳಂಬದ ಆತಂಕದಲ್ಲಿ ದ್ವಿತೀಯ ಪಿಯು ವಿದ್ಯಾರ್ಥಿಗಳು -
Amala Paul: ಡೇಟಿಂಗ್ನಲ್ಲೇ ಗರ್ಭಿಣಿಯಾದೆ, ಆತುರದಲ್ಲಿ ಎರಡನೇ ಮದುವೆ ಆಯ್ತು: ಹೆಬ್ಬುಲಿ ನಟಿ ಅಮಲಾ ಪೌಲ್ -
ಹೆಣ್ಣುಬಾಕ ಕಾಮಪೀಠಿ ವೈರಮುತ್ತು ರಾಮಸ್ವಾಮಿ ಜ್ಞಾನಪೀಠಕ್ಕೆ ಕಳಂಕ: ಲೇಖಕ ಅರುಣ್ ಜೋಳದಕೂಡ್ಲಿಗಿ -
ಟೀಂ ಇಂಡಿಯಾಗೆ ನನ್ನದೊಂದು ಸಲಾಂ, ಐಪಿಎಲ್ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಪಂಜಾಬ್ ಕಿಂಗ್ಸ್ ಕೋಚ್ ರಿಕಿ ಪಾಂಟಿಂಗ್ -
Horoscope March 17; ಈ ರಾಶಿಯವರ ಅದೃಷ್ಟ ಇಂದು ಬದಲಾಗಬಹುದು -
Byadagi Chilli: ಕರ್ನಾಟಕದ ಕೆಂಪು ಚಿನ್ನ ಬ್ಯಾಡಗಿ ಮೆಣಸಿನಕಾಯಿಗೆ ಹೊಸ ಸಂಕಷ್ಟ, ರೈತರು ಕಂಗಾಲು












Click it and Unblock the Notifications