ಇಬ್ಬರು ಸಿಖ್ಖರನ್ನು ಗುಂಡಿಕ್ಕಿ ಕೊಂದ ಐಎಸ್ಕೆಪಿ ಭಯೋತ್ಪಾದಕರು
ಇಸ್ಲಾಮಾಬಾದ್, ಮೇ 16: ವಾಯುವ್ಯ ಖೈಬರ್ ಪಖ್ತುನ್ಖ್ವಾ ಪ್ರಾಂತ್ಯದಲ್ಲಿ ಸಿಖ್ ಪುರುಷರನ್ನು ಅಪರಿಚಿತ ಬಂದೂಕುಧಾರಿಗಳು ಗುಂಡಿಕ್ಕಿ ಕೊಂದಿದ್ದಾರೆ. ಇಸ್ಲಾಮಿಕ್ ಸ್ಟೇಟ್ ವಿಲಾಯಾ ಖೊರಾಸನ್ (ISKP) ಹಾಗೂ ಇಸ್ಲಾಮಿಕ್ ಸ್ಟೇಟ್ಸ್ನ ಆಫ್ಘನ್ ಉಪಶಾಖೆ (ಮೇ 15) ಭಾನುವಾರದಂದು ಪಾಕಿಸ್ತಾನದಲ್ಲಿ ಇಬ್ಬರು ಸಿಖ್ ಉದ್ಯಮಿಗಳ ಉದ್ದೇಶಿತ ಹತ್ಯೆಯ ಹೊಣೆಯನ್ನು ಹೊತ್ತುಕೊಂಡಿದೆ.
ಮೃತರನ್ನು ಸಲ್ಜೀತ್ ಸಿಂಗ್ (42) ಮತ್ತು ರಂಜೀತ್ ಸಿಂಗ್ (38) ಎಂದು ಗುರುತಿಸಲಾಗಿದೆ. ಇವರ ಮೇಲೆ ಬೈಕ್ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ದಾಳಿ ನಡೆಸಿದ್ದು, ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿದ್ದಾರೆ. ಇದು ಖೈಬರ್ ಪಖ್ತುಂಖ್ವಾ ಪ್ರಾಂತ್ಯದಲ್ಲಿ ಅಲ್ಪಸಂಖ್ಯಾತ ಸಮುದಾಯದ ಸದಸ್ಯರ ಮೇಲೆ ನಡೆದ ಇತ್ತೀಚಿನ ದಾಳಿಯಾಗಿದೆ.
ಇಬ್ಬರು ಸಿಖ್ ಪುರುಷರ ಹತ್ಯೆಯ ಬಗ್ಗೆ ಭಾರತ ತೀವ್ರ ಕಳವಳ ವ್ಯಕ್ತಪಡಿಸಿದೆ. ಘಟನೆಯ ಬಗ್ಗೆ ಮಾತನಾಡಿರುವ ವಿದೇಶಾಂಗ ಸಚಿವಾಲಯದ ವಕ್ತಾರರು, "ಪಾಕಿಸ್ತಾನದಲ್ಲಿ ಅಲ್ಪಸಂಖ್ಯಾತ ಸಮುದಾಯದ ಸದಸ್ಯರನ್ನು ಗುರಿಯಾಗಿಸಿಕೊಂಡು ದಾಳಿ ಮುಂದುವರಿದಿರುವ ಬಗ್ಗೆ ವಿರೋಧ ವ್ಯಕ್ತಪಡಿಸುತ್ತೇವೆ. ಈ ಬಗ್ಗೆ ಪಾಕಿಸ್ತಾನ ಸರ್ಕಾರಕ್ಕೆ ತನಿಖೆಗೆ ಒತ್ತಾಯಿಸುತ್ತೇವೆ. ಈ ವಿಷಯವನ್ನು ಪ್ರಾಮಾಣಿಕವಾಗಿ ತನಿಖೆ ಮಾಡಲು ಮತ್ತು ಈ ಶೋಚನೀಯ ಘಟನೆಗೆ ಕಾರಣರಾದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಸಂಬಂಧಪಟ್ಟ ಅಧಿಕಾರಿಗಳಿಗೆ ನಾವು ಕರೆ ನೀಡುತ್ತೇವೆ" ಎಂದು ಟ್ವೀಟ್ ಮಾಡಿದ್ದಾರೆ.
Strongly condemn the killing of our Sikh citizens in Peshawar, KP. Pakistan belongs to all its people. Have ordered a high level inquiry to ascertain facts. The killers will be arrested & meted out exemplary punishment. My most sincere sympathies to the bereaved families.
— Shehbaz Sharif (@CMShehbaz) May 15, 2022
"ಪಾಕಿಸ್ತಾನ ಸರ್ಕಾರ ತನ್ನ ಜವಾಬ್ದಾರಿಗಳನ್ನು ನಿರ್ವಹಿಸುತ್ತಿದ್ದು ಅದರ ಅಲ್ಪಸಂಖ್ಯಾತ ಸಮುದಾಯಗಳ ಸುರಕ್ಷತೆ, ಭದ್ರತೆ ಮತ್ತು ಯೋಗಕ್ಷೇಮವನ್ನು ನೋಡಿಕೊಳ್ಳುತ್ತದೆ ಎಂದು ನಾವು ನಿರೀಕ್ಷಿಸುತ್ತೇವೆ" ಎಂದು ಸಚಿವಾಲಯ ಹೇಳಿಕೆಯಲ್ಲಿ ತಿಳಿಸಿದೆ.
ಇದರ ಬೆನ್ನಲ್ಲೇ, ಪೇಶಾವರ ಹತ್ಯೆಯ ಹಿಂದಿನ ಸತ್ಯಾಂಶಗಳನ್ನು ತಿಳಿಯಲು ಉನ್ನತ ಮಟ್ಟದ ತನಿಖೆಗೆ ಆದೇಶಿಸಿರುವುದಾಗಿ ಪಾಕಿಸ್ತಾನದ ಪ್ರಧಾನಿ ಶೆಹಬಾಜ್ ಹೇಳಿದ್ದಾರೆ. ಜೊತೆಗೆ ಹಂತಕರನ್ನು ಬಂಧಿಸಿ ಸೂಕ್ತ ಶಿಕ್ಷೆ ವಿಧಿಸಲಾಗುವುದು ಎಂದಿದ್ದಾರೆ.
Another killing of Sikhs in Pakistan. 2 shopkeepers, Ranjeet Singh & Saljeet Singh shot dead in Peshawar. This is highly condemnable.
— Capt.Amarinder Singh (@capt_amarinder) May 15, 2022
I've always said, @GovtofPakistan only does lip services for Sikhs without ensuring their security. Request @PMOIndia to take serious note.
ಪಂಜಾಬ್ ಮಾಜಿ ಸಿಎಂ ಅಮರಿಂದರ್ ಸಿಂಗ್ ಕೂಡ ಘಟನೆಯನ್ನು ಖಂಡಿಸಿದ್ದಾರೆ. "ಪಾಕಿಸ್ತಾನದಲ್ಲಿ ಮತ್ತೊಂದು ಸಿಖ್ಖರ ಹತ್ಯೆಯಾಗಿದೆ. ಪೇಶಾವರದಲ್ಲಿ ರಂಜೀತ್ ಸಿಂಗ್ ಮತ್ತು ಸಲ್ಜೀತ್ ಸಿಂಗ್ ಅವರನ್ನು ಗುಂಡಿಕ್ಕಿ ಕೊಂದಿದ್ದಾರೆ. ಇದು ಅತ್ಯಂತ ಖಂಡನೀಯ. ನಾನು ಯಾವಾಗಲೂ ಹೇಳುತ್ತಿದ್ದೆ, @GovtofPakistan ಸಿಖ್ಖರ ಭದ್ರತೆಯನ್ನು ಖಾತ್ರಿಪಡಿಸದೆ ಅವರ ಮೇಲೆ ಇಂತಹ ಕೃತ್ಯಗಳನ್ನು ಎಸಗುತ್ತದೆ" ಎಂದಿದ್ದಾರೆ.
ಖೈಬರ್ ಪಖ್ತುಂಖ್ವಾ ಮುಖ್ಯಮಂತ್ರಿ ಮಹಮೂದ್ ಖಾನ್ ಅವರು ಅಪರಾಧಿಗಳನ್ನು ಬಂಧಿಸಲು ತಕ್ಷಣದ ಕ್ರಮಗಳನ್ನು ತೆಗೆದುಕೊಳ್ಳುವಂತೆ ಪೊಲೀಸರಿಗೆ ಸೂಚಿಸಿದ್ದಾರೆ. ಈ ಘಟನೆಯು ಸರ್ವಧರ್ಮ ಸೌಹಾರ್ದತೆಗೆ ಭಂಗ ತರುವ ಷಡ್ಯಂತ್ರ ಎಂದು ಬಣ್ಣಿಸಿರುವ ಅವರು, ಮೃತರ ಕುಟುಂಬಗಳಿಗೆ ನ್ಯಾಯ ಒದಗಿಸಲಾಗುವುದು ಎಂದಿದ್ದಾರೆ.