ಆರ್ಟಿಕಲ್ 370 ಬೆಂಬಲಿಸಿದರೆ ಕೇಸು ಕೈಬಿಡುವುದಾಗಿ ಆಮಿಷ: ಝಕೀರ್ ನಾಯ್ಕ್
ಕೌಲಾಲಂಪುರ, ಜನವರಿ 11: ಭಾರತಕ್ಕೆ ಬೇಕಾಗಿರುವ ಇಸ್ಲಾಂ ಧರ್ಮದ ವಿವಾದಾತ್ಮಕ ಪ್ರಚಾರಕ ಝಕೀರ್ ನಾಯ್ಕ್ ವಿಡಿಯೋ ಬಿಡುಗಡೆ ಮಾಡಿದ್ದು, ವಿಡಿಯೋದಲ್ಲಿ ಭಾರತದ ಕಡೆಯಿಂದ ನನಗೆ ಆಮಿಷ ಒಡ್ಡಲಾಗಿತ್ತು ಎಂದಿದ್ದಾರೆ.
ಕಳೆದ ಸೆಪ್ಟೆಂಬರ್ ತಿಂಗಳಲ್ಲಿ ಭಾರತದ ಒಬ್ಬ ವಿದೇಶಾಂಗ ಅಧಿಕಾರಿ ನನ್ನನ್ನು ಸಂಪರ್ಕಿಸಿ, 'ಆರ್ಟಿಕಲ್ 370 ಕುರಿತಾಗಿ ಕೇಂದ್ರ ಸರ್ಕಾರದ ನಿರ್ಧಾರವನ್ನು ಬೆಂಬಲಿಸಿದರೆ ಪ್ರಕರಣಗಳಿಂದ ಖುಲಾಸೆಗೊಳಿಸಿ, ಭಾರತಕ್ಕೆ ಬರಲು ಇರುವ ಅಡೆ-ತಡೆಗಳನ್ನು ತೆಗೆಯುವುದಾಗಿ ಆಮಿಷ ಒಡ್ಡಿದ್ದರು' ಎಂದಿದ್ದಾರೆ.
ಯಾಸಿರ್ ಖಾದಿ ಎಂಬ ಇಸ್ಲಾಂ ಧರ್ಮ ಪ್ರಚಾರಕರ ಫೇಸ್ಬುಕ್ ಪೋಸ್ಟ್ಗೆ ಪ್ರತಿಕ್ರಿಯೆಯಾಗಿ ವಿಡಿಯೋ ಪ್ರಕಟಿಸಿರುವ ಝಕೀರ್ ನಾಯ್ಕ್ ವಿಡಿಯೋದಲ್ಲಿ ಮೇಲ್ಕಂಡ ವಿಷಯವನ್ನು ಬಹಿರಂಗ ಪಡಿಸಿದ್ದಾರೆ.

'ಮೋದಿ, ಅಮಿತ್ ಶಾ ಕಡೆಯಿಂದ ನನಗೆ ಆಫರ್ ಬಂದಿತ್ತು. ನಾನು ಆರ್ಟಿಕಲ್ 370 ತೆಗೆದಿದ್ದನ್ನು ಬೆಂಬಲಿಸಿದರೆ ನನಗೆ ಭಾರತಕ್ಕೆ ಪುನಃ ಬರಲು ಮತ್ತು ನನ್ನ ಮೇಲಿರುವ ಕೇಸುಗಳನ್ನು ಹಿಂಪಡೆಯುವ ಆಮೀಷ ನೀಡಲಾಗಿತ್ತು ' ಎಂದಿದ್ದಾರೆ.
ಝಕೀರ್ ನಾಯ್ಕ್ ಹೇಳಿರುವ ಪ್ರಕಾರ, ಅವರನ್ನು ಭೇಟಿ ಮಾಡಿದ ಭಾರತದ ಅಧಿಕಾರಿಗೆ ನೇರವಾಗಿ ಮೋದಿ, ಅಮಿತ್ ಶಾ ಇಂದಲೇ ನಿರ್ದೇಶನ ದೊರೆತಿತ್ತಂತೆ. ಆ ಅಧಿಕಾರಿಯು ಖಾಸಗಿಯಾಗಿ ಭೇಟಿಯಾಗಿ ಆರ್ಟಿಕಲ್ 370 ಗೆ ಬೆಂಬಲ ನೀಡುವ ಬಗ್ಗೆ ಮಾತನಾಡಿದ್ದನೆಂದು ಝಕೀರ್ ಹೇಳಿದ್ದಾರೆ.
ಝಕೀರ್ ನಾಯ್ಕ್ ವಿರುದ್ಧ ದ್ವೇಷ ಭಾಷಣ, ಅಕ್ರಮ ಹಣ ವರ್ಗಾವಣೆ ಪ್ರಕರಣಗಳು ದಾಖಲಾಗಿದ್ದು, ಪೊಲೀಸರಿಗೆ ಬೇಕಾದ ವ್ಯಕ್ತಿ ಆಗಿದ್ದಾರೆ. ಝಕೀರ್ ನಾಯ್ಕ್ ಮಲೇಷ್ಯಾದಲ್ಲಿ ಆಶ್ರಯ ಪಡೆದಿದ್ದಾರೆ.
-
"ಕೆಡಿ" ಸಿನಿಮಾದ ಹಾಡು ಅಶ್ಲೀಲವಾಗಿದ್ರೆ ಕೂಡಲೇ ಎಲ್ಲ ಕಡೆ ತೆರವು ಮಾಡಿ: ಸೆನ್ಸಾರ್ ಮಂಡಳಿಗೆ ಕೇಂದ್ರ ಸರ್ಕಾರ ಸೂಚನೆ -
Byadagi Chilli: ಕರ್ನಾಟಕದ ಕೆಂಪು ಚಿನ್ನ ಬ್ಯಾಡಗಿ ಮೆಣಸಿನಕಾಯಿಗೆ ಹೊಸ ಸಂಕಷ್ಟ, ರೈತರು ಕಂಗಾಲು -
ಸರಕು ಖಾಲಿಯಾಯ್ತಾ ಪ್ರೇಮ್, ಇಡೀ ದೇಶದ ಮುಂದೆ ಕನ್ನಡಿಗರು ತಲೆತಗ್ಗಿಸುವಂತೆ ಮಾಡಿದಿರಿ: ಸೆರಗ ಸರ್ಸೆ ಹಾಡಿಗೆ ವಿರೋಧ -
Bengaluru Second Airport: ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ: ದೆಹಲಿಯಲ್ಲಿ ಕೇಂದ್ರ ಸಚಿವರ ಭೇಟಿಯಾದ ಡಿ.ಕೆ.ಶಿವಕುಮಾರ್ -
Nora Fatehi: ಸರ್ಸೆ ನಿನ್ನ ಸೆರಗ ಹಾಡು ವಿವಾದ: ಹೇಳಿದ್ದೊಂದು- ಮಾಡಿದ್ದು ಇನ್ನೊಂದು, ನನ್ನ ನಂಬಿ ಪ್ಲೀಸ್ -
SSLC ವಿದ್ಯಾರ್ಥಿಗಳ ಗಮನಕ್ಕೆ: ಮಾರ್ಚ್ 18ಕ್ಕೆ ಪ್ರಥಮ ಭಾಷೆ ಕನ್ನಡ ಪರೀಕ್ಷೆ; ಪಾಸಾಗಲು ಈ ಪ್ರಮುಖ ಅಂಶಗಳನ್ನು ಗಮನಿಸಿ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
ಟೀಂ ಇಂಡಿಯಾಗೆ ನನ್ನದೊಂದು ಸಲಾಂ, ಐಪಿಎಲ್ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಪಂಜಾಬ್ ಕಿಂಗ್ಸ್ ಕೋಚ್ ರಿಕಿ ಪಾಂಟಿಂಗ್ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Prem: ಅಂದು ಮೇಲುಕೋಟೆ ಹುಡುಗಿ, ಇಂದು ಸೆರಗ ಸರ್ಸೆ: ವಿವಾದಕ್ಕೆ ಕಾರಣವಾದ ಪ್ರೇಮ್ ಸಿನಿಮಾ ಹಾಡುಗಳು












Click it and Unblock the Notifications