ಶ್ರೀಲಂಕಾದ ಸರಣಿ ಸ್ಫೋಟಕ್ಕೆ ಇಸ್ಲಾಮಿಕ್ ಸ್ಟೇಟ್ ಉಗ್ರರೇ ಹೊಣೆ
ಕೊಲಂಬೊ, ಏಪ್ರಿಲ್ 23: ಈಸ್ಟರ್ ದಿನದಂದು ಶ್ರೀಲಂಕಾದ ವಿವಿಧೆಡೆ ಸರಣಿ ಬಾಂಬ್ ಸ್ಫೋಟಕ್ಕೆ ಕಾರಣವಾಗಿದ್ದು, ಇಸ್ಲಾಮಿಕ್ ಸ್ಟೇಟ್ ಉಗ್ರರು ಎಂಬುದು ದೃಢಪಟ್ಟಿದೆ. ಉಗ್ರ ಸಂಘಟನೆಯ ಎಎಂಎಕ್ಯೂ ಸುದ್ದಿ ವಾಹಿನಿಯಲ್ಲಿ ಮಂಗಳವಾರದಂದು ಈ ಬಗ್ಗೆ ಸ್ಪಷ್ಟನೆ ನೀಡಲಾಗಿದೆ.
ಶ್ರೀಲಂಕಾದಲ್ಲಿ ಭಾನುವಾರದಂದು ನಡೆದ 8 ಸ್ಫೋಟಗಳಲ್ಲಿ 321ಕ್ಕೂ ಅಧಿಕ ಮಂದಿ ಸಾವನ್ನಪ್ಪಿದ್ದು, 500ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ.
ನ್ಯೂಜಿಲೆಂಡ್ ನಲ್ಲಿ ಮಸೀದಿಗಳ ಮೇಲೆ ಇತ್ತೀಚೆಗೆ ನಡೆದ ದಾಳಿಯ ಪ್ರತೀಕಾರ ರೂಪವಾಗಿ ಕೊಲಂಬೋ, ನೆಗೊಂಬೋದಲ್ಲಿನ ಚರ್ಚ್, ಹೋಟೆಲ್ ಗಳಲ್ಲಿ ಬಾಂಬ್ ಸ್ಫೋಟ ನಡೆಸಲಾಗಿದೆ ಎರಡು ಸ್ಥಳೀಯ ಇಸ್ಲಾಮಿಕ್ ಉಗ್ರ ಸಂಘಟನೆಗಳು ಕೃತ್ಯ ಎಸಗಿವೆ ಎಂದು ಶ್ರೀಲಂಕಾದ ರಕ್ಷಣಾ ಸಚಿವ ರುವಾನ್ ವಿಜೆವರ್ದನೆ ಹೇಳಿದ್ದಾರೆ.
50 ಮಂದಿ ಸಾವಿಗೆ ಕಾರಣವಾಗಿದ್ದ ಈ ದುರ್ಘಟನೆಯ ಸೇಡನ್ನು ತೀರಿಸಿಕೊಳ್ಳುವುದಾಗಿ ಹೇಳಿದ್ದನ್ನು ಇಲ್ಲಿ ಸ್ಮರಿಸಬಹುದು.

ಮಾರ್ಚ್ ತಿಂಗಳಿನಲ್ಲಿ ಈ ಬಗ್ಗೆ ಸುಳಿವು
ಮಾರ್ಚ್ ತಿಂಗಳಿನಲ್ಲಿ ಇಸ್ಲಾಮಿಕ್ ಸ್ಟೇಟ್ ವಕ್ತಾರ ಅಬು ಹಸನ್ ಅಲ್ ಮುಜಹಿರ್ ಅವರು ಆಡಿಯೋ ಸಂದೇಶ ಕಳಿಸಿ, ನ್ಯೂಜಿಲೆಂಡ್ ಮಸೀದಿ ಮೇಲಿನ ದಾಳಿಗೆ ಪ್ರತೀಕಾರ ತೆಗೆದುಕೊಳ್ಳುವುದಾಗಿ ಹೇಳಿದ್ದ. 50 ಮಂದಿ ಸಾವಿಗೆ ಕಾರಣವಾಗಿದ್ದ ಈ ದುರ್ಘಟನೆಯ ಸೇಡನ್ನು ತೀರಿಸಿಕೊಳ್ಳುವುದಾಗಿ ಹೇಳಿದ್ದನ್ನು ಇಲ್ಲಿ ಸ್ಮರಿಸಬಹುದು.
ಚಿತ್ರದಲ್ಲಿ : ಟೆಲಿಗ್ರಾಮ್ ಅಪ್ಲಿಕೇಷನ್ ನಲ್ಲಿ ಅನೇಕ ಗ್ರೂಪ್ ಗಳಲ್ಲಿ ಹರಿದಾಡಿದ ಉಗ್ರ ಸಂಘಟನೆಯ ಮೂವರು ಕಾರ್ಯಕರ್ತರ ಪೈಕಿ ಒಬ್ಬನ ಫೋಟೋ.
ಇಸ್ಲಾಮಿಕ್ ಸ್ಟೇಟ್ ವಕ್ತಾರ ಅಬು ಹಸನ್ ಅಲ್ ಮುಜಹಿರ್
ಇಸ್ಲಾಮಿಕ್ ಸ್ಟೇಟ್ ವಕ್ತಾರ ಅಬು ಹಸನ್ ಅಲ್ ಮುಜಹಿರ್ ಹಂಚಿದ್ದ 44 ನಿಮಿಷದ ಈ ಆಡಿಯೋ ಸಂದೇಶದಲ್ಲಿ ಇಸ್ಲಾಮಿಕ್ ಸ್ಟೇಟ್ ವಿರುದ್ಧ ನಡೆದಿರುವ ಅಭಿಯಾನ ಅಥವಾ ಪ್ರತಿಭಟನೆಗಳನ್ನು ಹತ್ತಿಕ್ಕಲಾಗುವುದು, ಸಿರಿಯಾದಲ್ಲಿ ಐಎಸ್ಐಎಸ್ ವಿರುದ್ಧ ನಡೆದ ಪ್ರತಿಭಟನೆಯನ್ನು ಉಲ್ಲೇಖಿಸಿ, ಸದ್ಯದಲ್ಲೇ ನ್ಯೂಜಿಲೆಂಡ್ ನ ಎರಡು ಮಸೀದಿ ಮೇಲಿನ ದಾಳಿಯ ಪ್ರತೀಕಾರ ತೆಗೆದುಕೊಳ್ಳಲಾಗುವುದು ಎಂದಿದ್ದ.

ಅಧಿಕೃತವಾಗಿ ಯಾರೂ ಹೊಣೆ ಹೊತ್ತುಕೊಂಡಿಲ್ಲ
ಸೋಮವಾರದಂದು ಟೆಲಿಗ್ರಾಂ ಅಪ್ಲಿಕೇಷನ್ ನಲ್ಲಿ ಕೊಲಂಬೋ ದಾಳಿಗೆ ಸಂಬಂಧಿಸಿದ ಮೂವರು ಆತ್ಮಾಹುತಿ ದಾಳಿಕೋರರನ್ನು ಪರಿಚಯಿಸಿದ ವಿಡಿಯೋ ಹಂಚಿಕೆಯಾಗಿತ್ತು. ಅಬು ಉಬೈದಾ, ಅಬು ಮುಖ್ತಾರ್ ಹಾಗೂ ಅಬು ಬರಾ ಅವರು ಚರ್ಚ್ ಪ್ರವೇಶಿಸಿ, ಸ್ಫೋಟಿಸುವ ಚಿತ್ರ, ವಿಡಿಯೋ ಇದರಲ್ಲಿತ್ತು.
ಆದರೆ, ಇಲ್ಲಿ ತನಕ ಬಹಿರಂಗವಾಗಿ ಯಾವುದೇ ಉಗ್ರ ಸಂಘಟನೆಗಳು ಈಸ್ಟರ್ ದಿನದ ದಾಳಿಯ ಹೊಣೆ ಹೊತ್ತುಕೊಂಡಿಲ್ಲ. ಸ್ಥಳೀಯ ಇಸ್ಲಾಮಿಕ್ ಸಂಘಟನೆಗಳಿಗೆ ವಿದೇಶಿ ಉಗ್ರ ಸಂಘಟನೆಯಿಂದ ಸೂಚನೆ ನೀಡಲಾಗಿತ್ತು ಎಂಬ ವರದಿ ಬಂದಿದೆ.
ತೌಹಿದ್ ಸಂಘಟನೆ ಬಗ್ಗೆ ಅನುಮಾನ, ಗೊಂದಲ
ಟಿಎನ್ಟಿಜೆ ಪ್ರಧಾನ ಕಾರ್ಯದರ್ಶಿ ಈ ಬಗ್ಗೆ ಸ್ಪಷ್ಟನೆ ನೀಡಿ, ತೌಹಿದ್ ಎಂಬ ಪದ ಎಲ್ಲಾ ಸಂಘಟನೆಗಳಲ್ಲೂ ಸಮಾನವಾಗಿ ಬಳಕೆಯಲ್ಲಿರುವುದರಿಂದ ಗೊಂದಲ, ಅನುಮಾನ ಮೂಡುವುದು ಸಹಜ ಹಾಗೂ ದುರದೃಷ್ಟಕರ. ಟಿಎನ್ಟಿಜೆ ಯಾವುದೇ ಕಾರಣಕ್ಕೂ ಎಂದಿಗೂ ಉಗ್ರವಾದವನ್ನು ಒಪ್ಪುವುದಿಲ್ಲ ಹಾಗೂ ಬೆಂಬಲಿಸುವುದಿಲ್ಲ. ಅಮಾಯಕರ ಸಾವಿಗೆ ಕಾರಣವಾದ ಸಂಘಟನೆಗೆ ಧಿಕ್ಕಾರವಿರಲಿ ಎಂದು ಹೇಳಿದ್ದಾರೆ.
-
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
KSRTC: ಸಾರಿಗೆ ಲೋಕಕ್ಕೆ 'ಪಲ್ಲಕ್ಕಿ' ಮೆರುಗು: ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ 115 ಹೊಸ ಬಸ್ಗಳ ಲೋಕಾರ್ಪಣೆ -
ಬೆಂಗಳೂರಲ್ಲಿ ಗ್ಯಾಸ್ ಏಜೆನ್ಸಿಗಳ ಭರ್ಜರಿ ದಂಧೆ: ಸಿಲಿಂಡರ್ ಸಿಗದೇ ಗ್ರಾಹಕರು ಕಂಗಾಲು; ಕಾಳಸಂತೆಯಲ್ಲಿ ₹3,000ಕ್ಕೆ ಮಾರಾಟ -
LPG Gas: ಎಲ್ಪಿಜಿ ನಿಯಮಗಳಲ್ಲಿ ಭಾರೀ ಬದಲಾವಣೆ; ಗ್ರಾಹಕರು ದೂರು ನೀಡಲು ಸಹಾಯವಾಣಿ ಸಂಖ್ಯೆಗಳ ಬಿಡುಗಡೆ -
Gold Rate March 13: ಸತತ 3ನೇ ದಿನವೂ ಚಿನ್ನ - ಬೆಳ್ಳಿ ಬೆಲೆ ಭರ್ಜರಿ ಕುಸಿತ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
Resort: ಕರ್ನಾಟಕದಲ್ಲಿ ಶುರುವಾಯ್ತು ರೆಸಾರ್ಟ್ ರಾಜಕೀಯ: ‘ಅವರು ನಮ್ಮ ಅತಿಥಿಗಳು’ ಎಂದ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ -
Horoscope March 13: ಈ ರಾಶಿಯವರ ಬದುಕಲ್ಲಿ ಸಕಾರಾತ್ಮಕ ಬೆಳವಣಿಗೆ, ಅಧಿಕ ಲಾಭ; ದಿನ ಭವಿಷ್ಯ












Click it and Unblock the Notifications