ಶ್ರೀಲಂಕಾದ ಸರಣಿ ಸ್ಫೋಟಕ್ಕೆ ಇಸ್ಲಾಮಿಕ್ ಸ್ಟೇಟ್ ಉಗ್ರರೇ ಹೊಣೆ
ಕೊಲಂಬೊ, ಏಪ್ರಿಲ್ 23: ಈಸ್ಟರ್ ದಿನದಂದು ಶ್ರೀಲಂಕಾದ ವಿವಿಧೆಡೆ ಸರಣಿ ಬಾಂಬ್ ಸ್ಫೋಟಕ್ಕೆ ಕಾರಣವಾಗಿದ್ದು, ಇಸ್ಲಾಮಿಕ್ ಸ್ಟೇಟ್ ಉಗ್ರರು ಎಂಬುದು ದೃಢಪಟ್ಟಿದೆ. ಉಗ್ರ ಸಂಘಟನೆಯ ಎಎಂಎಕ್ಯೂ ಸುದ್ದಿ ವಾಹಿನಿಯಲ್ಲಿ ಮಂಗಳವಾರದಂದು ಈ ಬಗ್ಗೆ ಸ್ಪಷ್ಟನೆ ನೀಡಲಾಗಿದೆ.
ಶ್ರೀಲಂಕಾದಲ್ಲಿ ಭಾನುವಾರದಂದು ನಡೆದ 8 ಸ್ಫೋಟಗಳಲ್ಲಿ 321ಕ್ಕೂ ಅಧಿಕ ಮಂದಿ ಸಾವನ್ನಪ್ಪಿದ್ದು, 500ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ.
ನ್ಯೂಜಿಲೆಂಡ್ ನಲ್ಲಿ ಮಸೀದಿಗಳ ಮೇಲೆ ಇತ್ತೀಚೆಗೆ ನಡೆದ ದಾಳಿಯ ಪ್ರತೀಕಾರ ರೂಪವಾಗಿ ಕೊಲಂಬೋ, ನೆಗೊಂಬೋದಲ್ಲಿನ ಚರ್ಚ್, ಹೋಟೆಲ್ ಗಳಲ್ಲಿ ಬಾಂಬ್ ಸ್ಫೋಟ ನಡೆಸಲಾಗಿದೆ ಎರಡು ಸ್ಥಳೀಯ ಇಸ್ಲಾಮಿಕ್ ಉಗ್ರ ಸಂಘಟನೆಗಳು ಕೃತ್ಯ ಎಸಗಿವೆ ಎಂದು ಶ್ರೀಲಂಕಾದ ರಕ್ಷಣಾ ಸಚಿವ ರುವಾನ್ ವಿಜೆವರ್ದನೆ ಹೇಳಿದ್ದಾರೆ.
50 ಮಂದಿ ಸಾವಿಗೆ ಕಾರಣವಾಗಿದ್ದ ಈ ದುರ್ಘಟನೆಯ ಸೇಡನ್ನು ತೀರಿಸಿಕೊಳ್ಳುವುದಾಗಿ ಹೇಳಿದ್ದನ್ನು ಇಲ್ಲಿ ಸ್ಮರಿಸಬಹುದು.

ಮಾರ್ಚ್ ತಿಂಗಳಿನಲ್ಲಿ ಈ ಬಗ್ಗೆ ಸುಳಿವು
ಮಾರ್ಚ್ ತಿಂಗಳಿನಲ್ಲಿ ಇಸ್ಲಾಮಿಕ್ ಸ್ಟೇಟ್ ವಕ್ತಾರ ಅಬು ಹಸನ್ ಅಲ್ ಮುಜಹಿರ್ ಅವರು ಆಡಿಯೋ ಸಂದೇಶ ಕಳಿಸಿ, ನ್ಯೂಜಿಲೆಂಡ್ ಮಸೀದಿ ಮೇಲಿನ ದಾಳಿಗೆ ಪ್ರತೀಕಾರ ತೆಗೆದುಕೊಳ್ಳುವುದಾಗಿ ಹೇಳಿದ್ದ. 50 ಮಂದಿ ಸಾವಿಗೆ ಕಾರಣವಾಗಿದ್ದ ಈ ದುರ್ಘಟನೆಯ ಸೇಡನ್ನು ತೀರಿಸಿಕೊಳ್ಳುವುದಾಗಿ ಹೇಳಿದ್ದನ್ನು ಇಲ್ಲಿ ಸ್ಮರಿಸಬಹುದು.
ಚಿತ್ರದಲ್ಲಿ : ಟೆಲಿಗ್ರಾಮ್ ಅಪ್ಲಿಕೇಷನ್ ನಲ್ಲಿ ಅನೇಕ ಗ್ರೂಪ್ ಗಳಲ್ಲಿ ಹರಿದಾಡಿದ ಉಗ್ರ ಸಂಘಟನೆಯ ಮೂವರು ಕಾರ್ಯಕರ್ತರ ಪೈಕಿ ಒಬ್ಬನ ಫೋಟೋ.
ಇಸ್ಲಾಮಿಕ್ ಸ್ಟೇಟ್ ವಕ್ತಾರ ಅಬು ಹಸನ್ ಅಲ್ ಮುಜಹಿರ್
ಇಸ್ಲಾಮಿಕ್ ಸ್ಟೇಟ್ ವಕ್ತಾರ ಅಬು ಹಸನ್ ಅಲ್ ಮುಜಹಿರ್ ಹಂಚಿದ್ದ 44 ನಿಮಿಷದ ಈ ಆಡಿಯೋ ಸಂದೇಶದಲ್ಲಿ ಇಸ್ಲಾಮಿಕ್ ಸ್ಟೇಟ್ ವಿರುದ್ಧ ನಡೆದಿರುವ ಅಭಿಯಾನ ಅಥವಾ ಪ್ರತಿಭಟನೆಗಳನ್ನು ಹತ್ತಿಕ್ಕಲಾಗುವುದು, ಸಿರಿಯಾದಲ್ಲಿ ಐಎಸ್ಐಎಸ್ ವಿರುದ್ಧ ನಡೆದ ಪ್ರತಿಭಟನೆಯನ್ನು ಉಲ್ಲೇಖಿಸಿ, ಸದ್ಯದಲ್ಲೇ ನ್ಯೂಜಿಲೆಂಡ್ ನ ಎರಡು ಮಸೀದಿ ಮೇಲಿನ ದಾಳಿಯ ಪ್ರತೀಕಾರ ತೆಗೆದುಕೊಳ್ಳಲಾಗುವುದು ಎಂದಿದ್ದ.

ಅಧಿಕೃತವಾಗಿ ಯಾರೂ ಹೊಣೆ ಹೊತ್ತುಕೊಂಡಿಲ್ಲ
ಸೋಮವಾರದಂದು ಟೆಲಿಗ್ರಾಂ ಅಪ್ಲಿಕೇಷನ್ ನಲ್ಲಿ ಕೊಲಂಬೋ ದಾಳಿಗೆ ಸಂಬಂಧಿಸಿದ ಮೂವರು ಆತ್ಮಾಹುತಿ ದಾಳಿಕೋರರನ್ನು ಪರಿಚಯಿಸಿದ ವಿಡಿಯೋ ಹಂಚಿಕೆಯಾಗಿತ್ತು. ಅಬು ಉಬೈದಾ, ಅಬು ಮುಖ್ತಾರ್ ಹಾಗೂ ಅಬು ಬರಾ ಅವರು ಚರ್ಚ್ ಪ್ರವೇಶಿಸಿ, ಸ್ಫೋಟಿಸುವ ಚಿತ್ರ, ವಿಡಿಯೋ ಇದರಲ್ಲಿತ್ತು.
ಆದರೆ, ಇಲ್ಲಿ ತನಕ ಬಹಿರಂಗವಾಗಿ ಯಾವುದೇ ಉಗ್ರ ಸಂಘಟನೆಗಳು ಈಸ್ಟರ್ ದಿನದ ದಾಳಿಯ ಹೊಣೆ ಹೊತ್ತುಕೊಂಡಿಲ್ಲ. ಸ್ಥಳೀಯ ಇಸ್ಲಾಮಿಕ್ ಸಂಘಟನೆಗಳಿಗೆ ವಿದೇಶಿ ಉಗ್ರ ಸಂಘಟನೆಯಿಂದ ಸೂಚನೆ ನೀಡಲಾಗಿತ್ತು ಎಂಬ ವರದಿ ಬಂದಿದೆ.
ತೌಹಿದ್ ಸಂಘಟನೆ ಬಗ್ಗೆ ಅನುಮಾನ, ಗೊಂದಲ
ಟಿಎನ್ಟಿಜೆ ಪ್ರಧಾನ ಕಾರ್ಯದರ್ಶಿ ಈ ಬಗ್ಗೆ ಸ್ಪಷ್ಟನೆ ನೀಡಿ, ತೌಹಿದ್ ಎಂಬ ಪದ ಎಲ್ಲಾ ಸಂಘಟನೆಗಳಲ್ಲೂ ಸಮಾನವಾಗಿ ಬಳಕೆಯಲ್ಲಿರುವುದರಿಂದ ಗೊಂದಲ, ಅನುಮಾನ ಮೂಡುವುದು ಸಹಜ ಹಾಗೂ ದುರದೃಷ್ಟಕರ. ಟಿಎನ್ಟಿಜೆ ಯಾವುದೇ ಕಾರಣಕ್ಕೂ ಎಂದಿಗೂ ಉಗ್ರವಾದವನ್ನು ಒಪ್ಪುವುದಿಲ್ಲ ಹಾಗೂ ಬೆಂಬಲಿಸುವುದಿಲ್ಲ. ಅಮಾಯಕರ ಸಾವಿಗೆ ಕಾರಣವಾದ ಸಂಘಟನೆಗೆ ಧಿಕ್ಕಾರವಿರಲಿ ಎಂದು ಹೇಳಿದ್ದಾರೆ.
-
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Banana Price: ತಮಿಳುನಾಡು ಬಿಸಿಗಾಳಿ ಎಫೆಕ್ಟ್ಗೆ ಕುಸಿದ ಬಾಳೆಹಣ್ಣು ಧಾರಣೆ: ಬೆಂಗಳೂರಿನಲ್ಲಿ ಕೆ.ಜಿಗೆ 7 ರೂಪಾಯಿ -
Summer Specail Train: ಮೈಸೂರಿನಿಂದ ಇಲ್ಲಿಗೆ ವಿಶೇಷ ಎಕ್ಸ್ಪ್ರೆಸ್ ರೈಲು, 3 ರಾಜ್ಯಗಳಿಗೆ ಅನುಕೂಲ -
April 12 Horoscope: 12 ರಾಶಿಗಳಿಗೆ ಇಂದು ಹಣ-ಪ್ರೇಮದಲ್ಲಿ ಅದೃಷ್ಟ ಯಾರಿಗೆ? ಸಂಪೂರ್ಣ ವಿವರ -
IPL 2026: ಗಿಲ್ ಮತ್ತು ಬಟ್ಲರ್ ಸ್ಫೋಟಕ ಬ್ಯಾಟಿಂಗ್, ಎಲ್ಎಸ್ಜಿ ಮಣಿಸಿದ ಗುಜರಾತ್ ಟೈಟಾನ್ಸ್ -
Asha Bhosle: ಭಾರತೀಯ ಸಿನಿಮಾ ರಂಗದ ಖ್ಯಾತ ಗಾಯಕಿ ಆಶಾ ಭೋಸ್ಲೆ ಇನ್ನಿಲ್ಲ, ಸಂಗೀತ ರಾಣಿ ಎಂದೇ ಖ್ಯಾತಿ -
Karnataka Train: ಕಲಬುರಗಿ - ಕಲ್ಯಾಣ ಕರ್ನಾಟಕದಲ್ಲಿ ರೈಲು ಪ್ರಯಾಣಿಕರ ನಿತ್ಯ ಪರದಾಟ: ಸಿದ್ದು ಮಠಪತಿ ಬರಹ -
Vijay: ನಟ, ರಾಜಕಾರಣಿ ವಿಜಯ್ ಮಹತ್ವದ ಟ್ವೀಟ್ - ಅಪ್ರಬುದ್ಧ ರಾಜಕಾರಣಿ ಎಂದ ಡಿ.ಕೆ ಶಿವಕುಮಾರ್ Tamil Nadu Assembly Election -
Bhagyalakshmi Serial: ಕೊನೆಗೂ ಭಾಗ್ಯಲಕ್ಷ್ಮೀ - ಆದಿ ಮದುವೆ, ಮೂರು ಕುಟುಂಬಗಳನ್ನು ಒಂದು ಮಾಡುವ ಟಾಸ್ಕ್ -
Transfer: ಕರ್ನಾಟಕ ಶಿಕ್ಷಕರಿಗೆ ಸಿಹಿ ಸುದ್ದಿ: ವರ್ಗಾವಣೆ ನಿಯಮಗಳಲ್ಲಿ ಮಹತ್ವ ಬದಲಾವಣೆ, ಯಾರು ಅರ್ಹರು?












Click it and Unblock the Notifications