Israel: ಲೆಬನಾನ್ ಮೇಲೆ ದಾಳಿ ಬೆನ್ನಲ್ಲೇ ಇಸ್ರೇಲ್ ಮೇಲೆ 300 ರಾಕೆಟ್ ಉಡಾಯಿಸಿದ ಹಿಜ್ಬುಲ್ಲಾ
ಇಸ್ರೇಲ್ ಮತ್ತು ಪ್ಯಾಲೆಸ್ತಿನ್ ನಡುವಿನ ಸಂಘರ್ಷ ತಾರಕಕ್ಕೇರಿದೆ. ಇದೀಗ ಅಕ್ಕ ಪಕ್ಕದ ರಾಷ್ಟ್ರಗಳಿಗೂ ಸಂಘರ್ಷ ವ್ಯಾಪಿಸಿದೆ. ಇದೀಗ ಇಸ್ರೇಲ್ ಮತ್ತು ಲೆಬನಾನ್ ಮೂಲದ ಉಗ್ರಗಾಮಿ ಸಂಘಟನೆ ಹಿಜ್ಬುಲ್ಲಾ ನಡುವೆ ಸಂಘರ್ಷ ಶುರುವಾಗಿದ್ದು, ಭಾರಿ ಪ್ರಮಾಣದ ಹೋರಾಟ ನಡೆಯುತ್ತಿದೆ. ಲೆಬನಾನ್ ಮೇಲೆ ಇಸ್ರೇಲ್ ದಾಳಿ ಬೆನ್ನಲ್ಲೇ, ಹಿಜ್ಬುಲ್ಲಾ 300ಕ್ಕೂ ಹೆಚ್ಚು ರಾಕೆಟ್ಗಳನ್ನು ಇಸ್ರೇಲ್ ಮೇಲೆ ಉಡಾಯಿಸಿದೆ.
ಇಸ್ರೇಲ್ ಮಿಲಿಟರಿ ತಾಣಗಳನ್ನು ಗುರಿಯಾಗಿಸಿಕೊಂಡಿದ್ದು 320ಕ್ಕೂ ಹೆಚ್ಚು ರಾಕೆಟ್ಗಳನ್ನು ಉಡಾಯಿಸಿದೆ ಎಂದು ಹಿಜ್ಬುಲ್ಲಾ ಹೇಳಿದೆ. ಹಿಜ್ಬುಲ್ಲಾ ದಾಳಿ ಮಾಡುವುದಾಗಿ ಬೆದರಿಕೆ ಹಾಕಿದ ಬಳಿಕ ಇಸ್ರೇಲ್ ಸೈನ್ಯವು ಲೆಬನಾನ್ ಮೇಲೆ ದಾಳಿ ಶುರು ಮಾಡಿತ್ತು, ಇಸ್ರೇಲ್ ರಕ್ಷಣಾ ಪಡೆಗಳು ಭಾನುವಾರ ದಾಳಿಯ ಪ್ರಮಾಣವನ್ನು ಹೆಚ್ಚಿಸಿತು, ಹಿಜ್ಬುಲ್ಲಾ ಇಸ್ರೇಲ್ ಮೇಲೆ ದೊಡ್ಡ ಪ್ರಮಾಣದಲ್ಲಿ ಆಕ್ರಮಣ ಮಾಡಲು ಸಿದ್ಧತೆ ಆರಂಭಿಸಿದೆ ಎಂದು ಇಸ್ರೇಲ್ ಹೇಳಿದೆ.

ಹಿಜ್ಬುಲ್ಲಾದ ದಾಳಿಯನ್ನು ತಡೆಯಲು ಇಸ್ರೇಲ್ ವಾಯುಪಡೆಯ ಫೈಟರ್ ಜೆಟ್ಗಳನ್ನು ನಿಯೋಜನೆ ಮಾಡಲಾಗಿದೆ. ಇಸ್ರೇಲ್ ನಾಗರಿಕರನ್ನು ಸುರಕ್ಷಿತ ಸ್ಥಳಕ್ಕೆ ತೆರಳುವಂತೆ ಸೂಚನೆ ನೀಡಲಾಗಿದೆ. ದಿನದಿಂದ ದಿನಕ್ಕೆ ಸಂಘರ್ಷ ಅಕ್ಕಪಕ್ಕದ ಪ್ರದೇಶಗಳಿಗೆ ವ್ಯಾಪಿಸುತ್ತಿದ್ದು, ಯುದ್ಧ ಶುರುವಾಗುವ ಆತಂಕ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ.
ಯುದ್ಧಕ್ಕೆ ಪ್ರಚೋದನೆ ಎಂದ ಹಿಜ್ಬುಲ್ಲಾ
ಕಳೆದ ತಿಂಗಳು ತನ್ನ ಮಿಲಿಟರಿ ಕಮಾಂಡರ್ ಫುವಾಡ್ ಶುಕ್ರ್ ಹತ್ಯೆಗೆ ಪ್ರತೀಕಾರ ತೀರಿಸಿಕೊಳ್ಳಲು ಹಿಜ್ಬುಲ್ಲಾ ಮತ್ತು ಇರಾನ್ ಪ್ರತಿಜ್ಞೆ ಮಾಡಿದೆ. ತನ್ನ ಕಮಾಂಡರ್ ಮೇಲೆ ದಾಳಿ ಮಾಡಿದ್ದನ್ನು ನೇರ ಪ್ರಚೋದನೆ ಮತ್ತು ಯುದ್ಧದ ಕ್ರಿಯೆ ಎಂದು ಕರೆದಿದೆ.
ಶುಕ್ರ್ ಹತ್ಯೆಗೆ ಪ್ರತಿಕ್ರಿಯೆಯಾಗಿ ಇಸ್ರೇಲ್ ಅನ್ನು ಗುರಿಯಾಗಿಸಿಕೊಂಡು ಹೆಚ್ಚಿನ ಸಂಖ್ಯೆ ಡ್ರೋನ್ಗಳೊಂದಿಗೆ ವೈಮಾನಿಕ ದಾಳಿ ಪ್ರಾರಂಭಿಸಲಾಗಿದೆ ಎಂದು ಹಿಜ್ಬುಲ್ಲಾ ಹೇಳಿದೆ. ಇಸ್ರೇಲ್ನ ಹಲವು ಸ್ಥಾನಗಳು, ಬ್ಯಾರಕ್ಗಳು ಮತ್ತು ಐರನ್ ಡೋಮ್ಗಳನ್ನು ಗುರಿಯಾಗಿಸಿಕೊಂಡು ಹೆಚ್ಚಿನ ಸಂಖ್ಯೆಯ ರಾಕೆಟ್ಗಳೊಂದಿಗೆ ದಾಳಿ ಆರಂಭಿಸಿರುವುದಾಗಿ ತಿಳಿಸಿದೆ.
ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಇಂದು ಭದ್ರತಾ ಕ್ಯಾಬಿನೆಟ್ ಸಭೆ ಕರೆದಿದ್ದಾರೆ. ಇಸ್ರೇಲಿ ರಕ್ಷಣಾ ಸಚಿವ ಯೋವ್ ಗ್ಯಾಲಂಟ್ ಅವರು ಮುಂದಿನ 48 ಗಂಟೆಗಳ ಕಾಲ ದೇಶದಾದ್ಯಂತ ತುರ್ತು ಪರಿಸ್ಥಿತಿಯನ್ನು ಘೋಷಿಸಿದ್ದಾರೆ.
ಇಸ್ರೇಲಿ ರಕ್ಷಣಾ ಪಡೆಗಳು (IDF) ಇಸ್ರೇಲಿ ಪ್ರದೇಶದ ಕಡೆಗೆ ಕ್ಷಿಪಣಿಗಳು ಮತ್ತು ರಾಕೆಟ್ಗಳನ್ನು ಹಾರಿಸಲು ತಯಾರಿ ನಡೆಸುತ್ತಿರುವ ಹಿಜ್ಬುಲ್ಲಾ ಭಯೋತ್ಪಾದಕ ಸಂಘಟನೆಯನ್ನು ಗುರುತಿಸಿದೆ. ದಾಳಿಗೆ ಪ್ರತಿಕ್ರಿಯೆಯಾಗಿ, ಇಸ್ರೇಲ್ ಲೆಬನಾನ್ನಲ್ಲಿನ ಭಯೋತ್ಪಾದಕರ ಅಡಗು ತಾಣಗಳ ಮೇಲೆ ದಾಳಿ ಮಾಡುತ್ತಿದೆ ಎಂದು ಹೇಳಿದೆ. ಇಸ್ರೇಲಿ ವಾಯುಪಡೆ (IAF) ಫೈಟರ್ ಜೆಟ್ಗಳು ಪ್ರಸ್ತುತ ಹಿಜ್ಬುಲ್ಲಾ ಭಯೋತ್ಪಾದಕ ಸಂಘಟನೆಗೆ ಸೇರಿದ ಗುರಿಗಳ ಮೇಲೆ ದಾಳಿ ಮಾಡುತ್ತಿವೆ, ಇಸ್ರೇಲ್ ನಾಗರಿಕರ ಮೇಲೆ ಅವರು ದಾಳಿ ಮಾಡುವ ಸಾಧ್ಯತೆ ಇದೆ ಎಂದು ಹೇಳಿದೆ.
-
ಸಿನಿಮಾ ಕಥೆಗೆ ವಿರುದ್ಧವಾಗಿ ಕುಂಭಮೇಳ ಮೊನಾಲಿಸಾ ಮದುವೆ, 10 ಕೋಟಿ ರೂ. ಸಾಲ ಮಾಡಿದ್ದೇನೆ: ನಿರ್ದೇಶಕ ಸನೋಜ್ ಮಿಶ್ರಾ ಆತಂಕ -
"ಕೆಡಿ" ಸಿನಿಮಾದ ಹಾಡು ಅಶ್ಲೀಲವಾಗಿದ್ರೆ ಕೂಡಲೇ ಎಲ್ಲ ಕಡೆ ತೆರವು ಮಾಡಿ: ಸೆನ್ಸಾರ್ ಮಂಡಳಿಗೆ ಕೇಂದ್ರ ಸರ್ಕಾರ ಸೂಚನೆ -
Byadagi Chilli: ಕರ್ನಾಟಕದ ಕೆಂಪು ಚಿನ್ನ ಬ್ಯಾಡಗಿ ಮೆಣಸಿನಕಾಯಿಗೆ ಹೊಸ ಸಂಕಷ್ಟ, ರೈತರು ಕಂಗಾಲು -
ಸರಕು ಖಾಲಿಯಾಯ್ತಾ ಪ್ರೇಮ್, ಇಡೀ ದೇಶದ ಮುಂದೆ ಕನ್ನಡಿಗರು ತಲೆತಗ್ಗಿಸುವಂತೆ ಮಾಡಿದಿರಿ: ಸೆರಗ ಸರ್ಸೆ ಹಾಡಿಗೆ ವಿರೋಧ -
Bengaluru Second Airport: ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ: ದೆಹಲಿಯಲ್ಲಿ ಕೇಂದ್ರ ಸಚಿವರ ಭೇಟಿಯಾದ ಡಿ.ಕೆ.ಶಿವಕುಮಾರ್ -
Nora Fatehi: ಸರ್ಸೆ ನಿನ್ನ ಸೆರಗ ಹಾಡು ವಿವಾದ: ಹೇಳಿದ್ದೊಂದು- ಮಾಡಿದ್ದು ಇನ್ನೊಂದು, ನನ್ನ ನಂಬಿ ಪ್ಲೀಸ್ -
SSLC ವಿದ್ಯಾರ್ಥಿಗಳ ಗಮನಕ್ಕೆ: ಮಾರ್ಚ್ 18ಕ್ಕೆ ಪ್ರಥಮ ಭಾಷೆ ಕನ್ನಡ ಪರೀಕ್ಷೆ; ಪಾಸಾಗಲು ಈ ಪ್ರಮುಖ ಅಂಶಗಳನ್ನು ಗಮನಿಸಿ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
ಟೀಂ ಇಂಡಿಯಾಗೆ ನನ್ನದೊಂದು ಸಲಾಂ, ಐಪಿಎಲ್ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಪಂಜಾಬ್ ಕಿಂಗ್ಸ್ ಕೋಚ್ ರಿಕಿ ಪಾಂಟಿಂಗ್ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral












Click it and Unblock the Notifications