ಲೆಬನಾನ್ ಮೇಲೆ ದಾಳಿ ಆರಂಭಿಸಿದ ಇಸ್ರೇಲ್ ಸೇನೆ, ಇರಾನ್ ಜೊತೆಗೆ ಹೊಸ ತಲೆನೋವು ಶುರು... Israel And Lebanon
ಮಧ್ಯಪ್ರಾಚ್ಯದ ಹಣೆಬರಹವೇ ಸರಿ ಇಲ್ಲ ಅಂತಾ ಕಾಣುತ್ತದೆ, ಏಕೆಂದರೆ ಇಡೀ ಜಗತ್ತಿನಲ್ಲೇ ಅತಿಹೆಚ್ಚು ತೈಲ ಸಂಪತ್ತು ಹೊಂದಿದ್ದರೂ ಅಲ್ಲಿನ ಜನರಿಗೆ ನೆಮ್ಮದಿಯೇ ಇಲ್ಲ. ಪದೇ ಪದೇ ಅಲ್ಲಿ ನಡೆಯುವ ಯುದ್ಧ ಹಾಗೂ ಸಂಘರ್ಷದ ಪರಿಣಾಮ ಈಗಾಗಲೇ ಮಧ್ಯಪ್ರಾಚ್ಯ ಭಾಗದಲ್ಲಿ ದೊಡ್ಡ ತಲೆನೋವು ಶುರುವಾಗಿದೆ. ಇರಾನ್ ಮತ್ತು ಅಮೆರಿಕ ನಡುವೆ ಯಾವುದೇ ಕ್ಷಣದಲ್ಲಿ ಯುದ್ಧ ನಡೆಯುವ ಸಾಧ್ಯತೆ ಕೂಡ ದಟ್ಟವಾಗಿದೆ. ಹೀಗಿದ್ದಾಗ ದಿಢೀರ್ ಲೆಬನಾನ್ ಮೇಲೆ ದಾಳಿ ಆರಂಭಿಸಿದ ಇಸ್ರೇಲ್ ಸೇನೆ ತನ್ನ ಶತ್ರುಗಳ ಸಂಹಾರಕ್ಕೆ ಮುಂದೆ ನುಗ್ಗಿದೆ.
ಇಸ್ರೇಲಿ ಸೇನೆಯು ಲೆಬನಾನ್ ಪೂರ್ವ ಮತ್ತು ದಕ್ಷಿಣ ಭಾಗದಲ್ಲಿ ನಡೆಸಿರುವ ದಾಳಿಯಲ್ಲಿ ಕನಿಷ್ಠ 12 ಜನ ಜೀವ ಬಿಟ್ಟಿದ್ದಾರೆ ಎಂದು ಆರೋಪಿಸಲಾಗಿದೆ. ಹಿಜ್ಬುಲ್ಲಾ ಜೊತೆಯಲ್ಲಿ 2024ರ ಸಮಯದಲ್ಲಿ, ಕದನ ವಿರಾಮ ಒಪ್ಪಂದ ಮಾಡಿಕೊಳ್ಳಲಾಗಿತ್ತು. ಆದರೆ ಈಗ ದಿಢೀರ್ ಇಸ್ರೇಲ್ ಸೇನೆ ದಾಳಿ ಮಾಡಿ ತಮ್ಮ ಶತ್ರುಗಳನ್ನು ಹೊಸಕಿ ಹಾಕಲು ಮುಂದಾಗಿದೆ, ಇನ್ನು ಲೆಬನಾನ್ನ ಅಧಿಕೃತ ರಾಷ್ಟ್ರೀಯ ಸುದ್ದಿ ಸಂಸ್ಥೆ ಈ ಬಗ್ಗೆ ಮಾಹಿತಿ ನೀಡಿದೆ.

25ಕ್ಕೂ ಹೆಚ್ಚು ಜನ ಆಸ್ಪತ್ರೆಗೆ ದಾಖಲು
ಸಾವಿನ ಜೊತೆಗೆ ಗಾಯಗೊಂಡವರ ಸಂಖ್ಯೆ ಕೂಡ ಹೆಚ್ಚಾಗಿದೆ, 25ಕ್ಕೂ ಹೆಚ್ಚು ಜನ ಈ ದಾಳಿಯಲ್ಲಿ ಗಾಯಗೊಂಡಿದ್ದಾರೆ ಎಂದು ಆರೋಪಿಸಲಾಗಿದೆ. ಗಾಜಾ ಜೊತೆಗೂ ಸಂಘರ್ಷ ನಡೆಸುತ್ತಿರುವ ಇಸ್ರೇಲ್ ಸೇನೆ ಈಗ ದಿಢೀರ್ ಲೆಬನಾನ್ ವಿರುದ್ಧ ಕಾರ್ಯಾಚರಣೆ ಶುರು ಮಾಡಿದೆ. ಹೀಗಾಗಿ ಲೆಬನಾನ್ ಜನರು ಕೂಡ ಯುದ್ಧ ಭಯದಲ್ಲಿ ಇದ್ದು, ಕಳೆದ ವರ್ಷ ಭೀಕರ ತಿಕ್ಕಾಟ ನಡೆದಿತ್ತು. ಎಲ್ಲವನ್ನೂ ಮರೆತು ಹೊಸ ಜೀವನ ಶುರು ಮಾಡುವ ಸಮಯದಲ್ಲೇ ಮತ್ತೆ ಗಲಾಟೆ ಶುರುವಾಗಿದೆ. ಹಿಜ್ಬುಲ್ಲಾ ಮಾಡಿರುವ ತಪ್ಪಿಗೆ ಸಾಮಾನ್ಯ ಜನರು ನರಳುವಂತೆ ಆಗಿದೆ.
ದಾಳಿ ಮಾಡಿದ್ದು ಏಕೆ ಇಸ್ರೇಲ್?
ಇಸ್ರೇಲ್ ಸೇನೆ ಇದೀಗ ನೀಡಿರುವ ಮಾಹಿತಿ ಪ್ರಕಾರ, ಲೆಬನಾನ್ ದೇಶದ ಬಾಲ್ಬೆಕ್ ಪ್ರದೇಶದಲ್ಲಿ ಇದ್ದ ಹಿಜ್ಬುಲ್ಲಾ ಕಮಾಂಡ್ ಸೆಂಟರ್ಸ್ ಗುರಿಯಾಗಿಸಿ ಈ ದಾಳಿಯನ್ನ ನಡೆಸಲಾಗಿದೆ ಅಂತೆ. ಈ ದಾಳಿಯ ವೇಳೆ ಒಬ್ಬ ಹಿಜ್ಬುಲ್ಲಾ ಕಮಾಂಡರ್ ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ ಎಂದು ಕೂಡ ವರದಿಯಾಗಿದೆ. ಲೆಬನಾನ್ನ ಸಾರ್ವಜನಿಕ ಆರೋಗ್ಯ ಸಚಿವಾಲಯ ಕೂಡ ಈ ವಿಚಾರವಾಗಿ ಮಾಹಿತಿ ನೀಡಿದ್ದು, ದಾಳಿ ಬಗ್ಗೆ ತಿಳಿಸಿದೆ. ಇನ್ನು ಹಿಜ್ಬುಲ್ಲಾ ವಿರುದ್ಧ ರೊಚ್ಚಿಗೆದ್ದಿರುವ ಇಸ್ರೇಲ್, ಈ ರೀತಿ ಪದೇ ಪದೇ ದಾಳಿ ಮಾಡುತ್ತಾ ತಮ್ಮ ಶತ್ರುಗಳನ್ನು ನಾಶ ಮಾಡುತ್ತಿದೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications