ಇಸ್ರೇಲ್ ಕದನ ವಿರಾಮ ಘೋಷಣೆ- ನೆತನ್ಯಾಹು ಸೋಲು, ಪ್ಯಾಲೆಸ್ತೇನ್ನ ಗೆಲುವು ಎಂದ ಹಮಾಸ್
ಗಾಜಾ, ಮೇ 21: ಮಹತ್ವದ ಬೆಳವಣಿಗೆಯೊಂದರಲ್ಲಿ ಇಸ್ರೇಲ್ ಮತ್ತು ಹಮಾಸ್ ಎರಡೂ ಮುಂಜಾನೆ 2 ಗಂಟೆಗೆ ಕದನ ವಿರಾಮವನ್ನು ಘೋಷಿಸಿದೆ. ಈ ಮೂಲಕ ಗಾಜಾ ಪ್ರದೇಶದಲ್ಲಿ ಭಾರಿ ಪ್ರಾಣ ಹಾನಿ, ನಷ್ಟಕ್ಕೆ ಕಾರಣವಾದ 11 ದಿನಗಳ ಯುದ್ಧಕ್ಕೆ ತೆರೆಬಿದ್ದಿದೆ.
ಇನ್ನು ಈ ಬೆಳವಣಿಗೆಯನ್ನು ವಿಶ್ವಸಂಸ್ಥೆ ಮತ್ತು ಅಮೆರಿಕ ಅಧ್ಯಕ್ಷ ಜೋ ಬಿಡೆನ್ ಸ್ವಾಗತಿಸಿದ್ದಾರೆ. ಆದರೆ ಈ ನಡುವೆ, ಪ್ಯಾಲೆಸ್ತೇನ್ನ ಉಗ್ರಗಾಮಿ ಸಂಘಟನೆ ಹಮಸ್ನ ಅಧಿಕಾರಿಯೊಬ್ಬರು ಇಸ್ರೇಲ್ ಕದನ ವಿರಾಮ ಘೋಷಣೆಯು, ಪ್ಯಾಲೆಸ್ತೇನ್ಗೆ ಲಭಿಸಿದ ಜಯ ಹಾಗೂ ಪ್ರಧಾನಿ ಬೆಂಜಮಿನ್ ನೆತನ್ಯಾಹುರ ಸೋಲು ಎಂದು ಹೇಳಿದ್ದಾರೆ.
ಈ ಬಗ್ಗೆ ಮಾಧ್ಯಮದೊಂದಿಗೆ ಮಾತನಾಡಿದ ಹಮಸ್ ಸದಸ್ಯ ಅಲಿ ಬರಾಕೆಹ್, ಹಮಾಸ್ ಮತ್ತು ಇಸ್ರೇಲ್ ನಡುವೆ ಕಾರ್ಯನಿರ್ವಹಿಸುತ್ತಿರುವ ಮಧ್ಯವರ್ತಿಗಳಿಂದ ಖಚಿತ ಮಾಹಿತಿ ಲಭಿಸುವವರೆಗೂ ನಾವು ಜಾಗರೂಕರಾಗಿರುತ್ತೇವೆ ಎಂದು ಹೇಳಿದ್ದಾರೆ.

ಗಾಜಾ ಪ್ರದೇಶದಲ್ಲಿ ನಡೆಯುತ್ತಿರುವ ಕದನ ವಿರಾಮಕ್ಕೆ ಗುರುವಾರ ರಾತ್ರಿ ಇಸ್ರೇಲ್ ಭದ್ರತಾ ಸಂಪುಟ ಅನುಮೋದನೆ ನೀಡಿದೆ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಕಚೇರಿ ಪ್ರಕಟಿಸಿದೆ ಎಂದು ವರಿದಿಯಾಗಿದೆ. ಸುಮಾರು ಎರಡೂವರೆ ಗಂಟೆಗಳ ಚರ್ಚೆಯ ನಂತರ ಈ ನಿರ್ಧಾರವನ್ನು ಕೈಗೊಳ್ಳಲಾಗಿದೆ ಎಂದು ಕೂಡಾ ಹೇಳಲಾಗಿದೆ. ಹಾಗೆಯೇ ಮಂತ್ರಿಗಳ ಸರ್ವಾನುಮತದಿಂದ ಈ ನಿರ್ಧಾರವು ಅಂಗೀಕೃತಗೊಂಡಿದೆ ಎಂದು ಕೂಡಾ ವರದಿಯಾಗಿದೆ.
ಮುಸ್ಲಿಂ ಹಾಗೂ ಯಹೂದಿಗಳ ಪವಿತ್ರವಾದ ಸ್ಥಳವಾದ ಜೆರುಸಲೇಂನ ಅಲ್-ಅಕ್ಸಾ ಮಸೀದಿಯು ವಿವಾದದ ಕೇಂದ್ರ ಬಿಂದುವಾಗಿದ್ದು ಇಲ್ಲಿ ಉಂಟಾದ ಸಂಘರ್ಷವನ್ನು ತಡೆಯಲು ಪೊಲೀಸಲು ಅಶ್ರುವಾಯು ಹಾಗೂ ಗ್ರೆನೇಡ್ ಪ್ರಯೋಗಿಸಿದ್ದರು. ಬಳಿಕ ಗಾಜಾ ಪಟ್ಟಿಯಲ್ಲಿ ಭಾರಿ ಸಂಘರ್ಷ ನಡೆದಿತ್ತು.
2014 ರಿಂದ ಇಸ್ರೇಲ್ ಮತ್ತು ಗಾಜಾ ಉಗ್ರರ ನಡುವೆ ಕದನ ನಡೆದಿದ್ದು, ಈವರೆಗೆ 65 ಮಕ್ಕಳು, 39 ಮಹಿಳೆಯರು ಮತ್ತು 12 ಇಸ್ರೇಲಿಗಳು ಸೇರಿದಂತೆ 232 ಪ್ಯಾಲೇಸ್ತೀನಿಗರು ಸಾವನ್ನಪ್ಪಿದ್ದಾರೆ.
(ಒನ್ಇಂಡಿಯಾ ಸುದ್ದಿ)
-
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
E-Khata: ಜನ ಸೇವಕ ಯೋಜನೆ: ಮನೆಯಲ್ಲೇ ಕುಳಿತು ಇ - ಖಾತಾ ಪಡೆಯಿರಿ, ಈ 5 ದಾಖಲೆಗಳಿದ್ದರೆ ಸಾಕು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
ಮಂಡ್ಯದಲ್ಲಿ 500 ಎಕರೆ ಆಟೋ ಕೈಗಾರಿಕಾ ಹಬ್: ಎಂಬಿ ಪಾಟೀಲ, ಎಚ್ಡಿ ಕುಮಾರಸ್ವಾಮಿ ಮಹತ್ವದ ಚರ್ಚೆ -
April 13 Horoscope: 12 ರಾಶಿಗಳಿಗೆ ಇಂದು ಪ್ರೇಮ, ಹಣಕಾಸು, ಉದ್ಯೋಗದಲ್ಲಿ ಏನು ಹೇಳುತ್ತದೆ ನಿಮ್ಮ ರಾಶಿ? -
Bengaluru power cut: ಬೆಂಗಳೂರಿನ ಹಲವೆಡೆ ಹೆಚ್ಚಾಯ್ತು ದಿಢೀರ್ ಪವರ್ ಕಟ್, ಹೈರಾಣಾದ ಜನ: ಬೆಸ್ಕಾಂ ಕೊಟ್ಟ ಉತ್ತರ ಇಲ್ಲಿದೆ -
School Holiday: ರಾಜ್ಯದಲ್ಲಿ 2026-27ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ: ದಸರಾ, ಬೇಸಿಗೆ ರಜೆ, ಕೆಲಸದ ದಿನಗಳ ವಿವರ -
PUC ವಿದ್ಯಾರ್ಥಿಗಳಿಗೆ ಗುಡ್ನ್ಯೂಸ್: ಇದೇ ವರ್ಷದಿಂದಲೇ ಸಿಗಲಿವೆ ಉಚಿತ ಪಠ್ಯ ಪುಸ್ತಕ -
Hardik vs Krunal: ತಮ್ಮ ಹಾರ್ದಿಕ್ ವಿಕೆಟ್ ಕಿತ್ತ ಬೌಲರ್ಗಿಂತ ಹೆಚ್ಚಾಗಿ ಸಂಭ್ರಮಿಸಿದ ಕೃನಾಲ್ ಪಾಂಡ್ಯ, ಭಾರಿ ವೈರಲ್ -
Namma Metro: ಪ್ರಯಾಣಿಕರಿಗೆ ಸಿಹಿ ಸುದ್ದಿ, ಹಳದಿ ಮಾರ್ಗಕ್ಕಾಗಿ ಬಂತು ಹೊಸ ಡ್ರೈವರ್ ಲೆಸ್ ರೈಲು












Click it and Unblock the Notifications