ಇಸ್ರೇಲ್ ಕದನ ವಿರಾಮ ಘೋಷಣೆ- ನೆತನ್ಯಾಹು ಸೋಲು, ಪ್ಯಾಲೆಸ್ತೇನ್ನ ಗೆಲುವು ಎಂದ ಹಮಾಸ್
ಗಾಜಾ, ಮೇ 21: ಮಹತ್ವದ ಬೆಳವಣಿಗೆಯೊಂದರಲ್ಲಿ ಇಸ್ರೇಲ್ ಮತ್ತು ಹಮಾಸ್ ಎರಡೂ ಮುಂಜಾನೆ 2 ಗಂಟೆಗೆ ಕದನ ವಿರಾಮವನ್ನು ಘೋಷಿಸಿದೆ. ಈ ಮೂಲಕ ಗಾಜಾ ಪ್ರದೇಶದಲ್ಲಿ ಭಾರಿ ಪ್ರಾಣ ಹಾನಿ, ನಷ್ಟಕ್ಕೆ ಕಾರಣವಾದ 11 ದಿನಗಳ ಯುದ್ಧಕ್ಕೆ ತೆರೆಬಿದ್ದಿದೆ.
ಇನ್ನು ಈ ಬೆಳವಣಿಗೆಯನ್ನು ವಿಶ್ವಸಂಸ್ಥೆ ಮತ್ತು ಅಮೆರಿಕ ಅಧ್ಯಕ್ಷ ಜೋ ಬಿಡೆನ್ ಸ್ವಾಗತಿಸಿದ್ದಾರೆ. ಆದರೆ ಈ ನಡುವೆ, ಪ್ಯಾಲೆಸ್ತೇನ್ನ ಉಗ್ರಗಾಮಿ ಸಂಘಟನೆ ಹಮಸ್ನ ಅಧಿಕಾರಿಯೊಬ್ಬರು ಇಸ್ರೇಲ್ ಕದನ ವಿರಾಮ ಘೋಷಣೆಯು, ಪ್ಯಾಲೆಸ್ತೇನ್ಗೆ ಲಭಿಸಿದ ಜಯ ಹಾಗೂ ಪ್ರಧಾನಿ ಬೆಂಜಮಿನ್ ನೆತನ್ಯಾಹುರ ಸೋಲು ಎಂದು ಹೇಳಿದ್ದಾರೆ.
ಈ ಬಗ್ಗೆ ಮಾಧ್ಯಮದೊಂದಿಗೆ ಮಾತನಾಡಿದ ಹಮಸ್ ಸದಸ್ಯ ಅಲಿ ಬರಾಕೆಹ್, ಹಮಾಸ್ ಮತ್ತು ಇಸ್ರೇಲ್ ನಡುವೆ ಕಾರ್ಯನಿರ್ವಹಿಸುತ್ತಿರುವ ಮಧ್ಯವರ್ತಿಗಳಿಂದ ಖಚಿತ ಮಾಹಿತಿ ಲಭಿಸುವವರೆಗೂ ನಾವು ಜಾಗರೂಕರಾಗಿರುತ್ತೇವೆ ಎಂದು ಹೇಳಿದ್ದಾರೆ.

ಗಾಜಾ ಪ್ರದೇಶದಲ್ಲಿ ನಡೆಯುತ್ತಿರುವ ಕದನ ವಿರಾಮಕ್ಕೆ ಗುರುವಾರ ರಾತ್ರಿ ಇಸ್ರೇಲ್ ಭದ್ರತಾ ಸಂಪುಟ ಅನುಮೋದನೆ ನೀಡಿದೆ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಕಚೇರಿ ಪ್ರಕಟಿಸಿದೆ ಎಂದು ವರಿದಿಯಾಗಿದೆ. ಸುಮಾರು ಎರಡೂವರೆ ಗಂಟೆಗಳ ಚರ್ಚೆಯ ನಂತರ ಈ ನಿರ್ಧಾರವನ್ನು ಕೈಗೊಳ್ಳಲಾಗಿದೆ ಎಂದು ಕೂಡಾ ಹೇಳಲಾಗಿದೆ. ಹಾಗೆಯೇ ಮಂತ್ರಿಗಳ ಸರ್ವಾನುಮತದಿಂದ ಈ ನಿರ್ಧಾರವು ಅಂಗೀಕೃತಗೊಂಡಿದೆ ಎಂದು ಕೂಡಾ ವರದಿಯಾಗಿದೆ.
ಮುಸ್ಲಿಂ ಹಾಗೂ ಯಹೂದಿಗಳ ಪವಿತ್ರವಾದ ಸ್ಥಳವಾದ ಜೆರುಸಲೇಂನ ಅಲ್-ಅಕ್ಸಾ ಮಸೀದಿಯು ವಿವಾದದ ಕೇಂದ್ರ ಬಿಂದುವಾಗಿದ್ದು ಇಲ್ಲಿ ಉಂಟಾದ ಸಂಘರ್ಷವನ್ನು ತಡೆಯಲು ಪೊಲೀಸಲು ಅಶ್ರುವಾಯು ಹಾಗೂ ಗ್ರೆನೇಡ್ ಪ್ರಯೋಗಿಸಿದ್ದರು. ಬಳಿಕ ಗಾಜಾ ಪಟ್ಟಿಯಲ್ಲಿ ಭಾರಿ ಸಂಘರ್ಷ ನಡೆದಿತ್ತು.
2014 ರಿಂದ ಇಸ್ರೇಲ್ ಮತ್ತು ಗಾಜಾ ಉಗ್ರರ ನಡುವೆ ಕದನ ನಡೆದಿದ್ದು, ಈವರೆಗೆ 65 ಮಕ್ಕಳು, 39 ಮಹಿಳೆಯರು ಮತ್ತು 12 ಇಸ್ರೇಲಿಗಳು ಸೇರಿದಂತೆ 232 ಪ್ಯಾಲೇಸ್ತೀನಿಗರು ಸಾವನ್ನಪ್ಪಿದ್ದಾರೆ.
(ಒನ್ಇಂಡಿಯಾ ಸುದ್ದಿ)
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications