Israel–Hamas war: ಐವರು ಶಸ್ತ್ರಸಜ್ಜಿತ ಉಗ್ರರನ್ನು ಕೊಂದು ಸಾಹಸ ಮೆರೆದ ಇಸ್ರೇಲಿ ಯುವತಿ- ಇಲ್ಲಿದೆ ವೀರಗಾಥೆಯ ವಿವರ
Israel-Hamas war: ಅಕ್ಟೋಬರ್ 7 ರಂದು ಇಸ್ರೇಲ್ ಮೇಲೆ ಹಮಾಸ್ ಉಗ್ರರು ಭೀಕರ ದಾಳಿಯನ್ನು ಆರಂಭಿಸಿದ್ದಾರೆ. ಸಾವಿರಾರು ರಾಕೆಟ್ಗಳನ್ನು ಇಸ್ರೇಲ್ಗೆ ನುಗ್ಗಿಸುವ ಮೂಲಕ ಯಹೂದಿ ರಾಷ್ಟ್ರದಲ್ಲಿ ರಕ್ತಪಾತಕ್ಕೆ ನಾಂದಿ ಹಾಡಿದ್ದಾರೆ. ವಾಯು, ಭೂ ಹಾಗೂ ಸಮುದ್ರ ಮಾರ್ಗವಾಗಿ ಸಾವಿರಾರು ಹಮಾಸ್ ಉಗ್ರರು ಇಸ್ರೇಲ್ ಒಳಗೆ ನುಗ್ಗಿದ್ದಾರೆ. ಹಮಾಸ್ ವಿರುದ್ಧ ಹೋರಾಟ ನಡೆಸುತ್ತಿರುವ ಇಸ್ರೇಲ್ ಜನರ ಸಾಹಸಗಾಥೆಗಳು ಒಂದೊಂದಾಗಿ ಹೊರಬರುತ್ತಿವೆ.
25 ವರ್ಷದ ಯುವತಿಯೊಬ್ಬಳು ಕೆಚ್ಚೆದೆಯಿಂದ ಹೋರಾಡಿ ಹಮಾಸ್ ಉಗ್ರರನ್ನು ಎದುರಿಸಿದ್ದಾಳೆ. ಹಮಾಸ್ ಉಗ್ರರ ಉಪಟಳವನ್ನು ತಡೆದು ಕಿಬ್ಬುಟ್ಜ್ ಸಮುದಾಯದ ( ಕೃಷಿಯಲ್ಲಿ ತೊಡಗಿಕೊಂಡಿರುವ ರೈತ ಸಮೂಹ ) ಜನರನ್ನು ರಕ್ಷಿಸುವಲ್ಲಿ ಯಶಸ್ವಿಯಾಗಿದ್ದಾಳೆ.

ಕೊನೆಯ ಹಂತದ ರಕ್ಷಣೆಯಲ್ಲಿ ಕಿಬ್ಬುಟ್ಜ್ ನಿವಾಸಿಗಳನ್ನು ಮುನ್ನಡೆಸಿದ ಆಕೆಯ ಸಾಹಸವು ಎಲ್ಲರಿಗೂ ಮಾದರಿ ಎಂದು ಹೇಳಲಾಗುತ್ತಿದೆ. 25 ವರ್ಷ ವಯಸ್ಸಿನ ಇನ್ಬಾರ್ ಲೈಬರ್ಮನ್ ಎಂಬ ಯುವತಿ ಆಮ್ನ ಭದ್ರತಾ ಮುಖ್ಯಸ್ಥೆಯಾಗಿದ್ದಾಳೆ. ಹಮಾಸ್ ದಾಳಿಯನ್ನು ಹಿಮ್ಮೆಟ್ಟಿಸಿ ದಾಳಿಕೋರರನ್ನು ಕೊಲ್ಲುವಲ್ಲಿ ಯಶಸ್ವಿಯಾಗಿದ್ದಾಳೆ.
ಕಿಬ್ಬುಟ್ಜ್ ಜನರು ವಾಸಿಸುವ ಪ್ರದೇಶವನ್ನು ರಕ್ಷಿಸಲು 12 ಯುವಕರನ್ನು ತಕ್ಷಣವೇ ನೇಮಿಸಿಕೊಂಡ ಲೈಬರ್ಮನ್ ಅವರಿಗೆ ಶಸ್ತ್ರಾಸ್ತ್ರಗಳನ್ನು ಒದಗಿಸಿದ್ದಾಳೆ. ಯುವಕರ ಗುಂಪನ್ನು ಮುನ್ನೆಡಿಸಿದ ಆಕೆ ಐವರು ಉಗ್ರರನ್ನು ಹತ್ಯೆಗೈಯುವಲ್ಲಿ ಯಶಸ್ವಿಯಾಗಿದ್ದಾಳೆ ಎಂದು ವರದಿಯಾಗಿದೆ.
ಕಿಬ್ಬುಟ್ಜ್ ಜನರು ವಾಸಿಸುವ ನಿರ್ ಆಮ್ ಪ್ರದೇಶವು ಗಾಜಾದಿಂದ ಕೇವಲ ಒಂದು ಮೈಲಿ ದೂರದಲ್ಲಿದೆ. ಅಕ್ಟೋಬರ್ 7 ರಂದು ಶಸ್ತ್ರಸಜ್ಜಿತ ಭಯೋತ್ಪಾದಕರಿಂದ ಭಾರೀ ದಾಳಿಗೆ ಒಳಗಾಗಿದೆ. ಆದರೆ, ಲೈಬರ್ಮನ್ ಅವರ ಸಾಹಸದಿಂದ ಅಲ್ಲಿನ ಜನರು ಬದುಕಿ ಉಳಿದಿದ್ದಾರೆ ಎಂದು ಹೇಳಲಾಗುತ್ತಿದೆ.
ಇನ್ಬಾರ್ ಲೈಬರ್ಮನ್ ಅವರ ಸಾಹಸಗಾಥೆಯು ಹೊರಬೀಳುತ್ತಿದ್ದಂತೆ ಆಕೆಯನ್ನು ಹೊಗಳಿ ಸಾಮಾಜಿಕ ಮಾಧ್ಯಮಗಳಲ್ಲಿ ಪೊಸ್ಟ್ ಮಾಡಲಾಗುತ್ತಿದೆ. ಇಸ್ರೇಲ್ ಸರ್ಕಾರ ಆಕೆಯನ್ನು ಗೌರವಿಸಬೇಕೆಂದು ಒತ್ತಾಯಿಸಲಾಗಿದೆ.
'ಆಕೆಯ ವೀರಗಾಥೆಯು ಇಸ್ರೇಲಿ ಪುರಾಣಗಳಲ್ಲಿ ಉಳಿಯಲಿದೆ. ಇದು ತಲೆಮಾರುಗಳವರೆಗೆ ಸ್ಮರಿಸುವಂತಹ ಕಥೆಯಾಗಿದೆ' ಎಂದು ಸಾಮಾಜಿಕ ಮಾಧ್ಯಮದ ಬಳಕೆದಾರರೊಬ್ಬರು ಹೇಳಿದ್ದಾರೆ.
ಹಮಾಸ್ ಭಯೋತ್ಪಾದಕರು ಇಸ್ರೇಲ್ ಮೇಲೆ ಶನಿವಾರ ದಾಳಿ ನಡೆಸಿದ್ದಾರೆ. ಗಾಜಾ ಗಡಿ ಬೇಲಿಯನ್ನು ಭೇದಿಸಿ ಒಳನುಗ್ಗಿದ್ದಾರೆ. ಚೆಕ್ಪೋಸ್ಟ್ಗಳ ಮೇಲೆ ಗುಂಡಿನ ಸುರಿಮಳೆಗೈದಿದ್ದಾರೆ.
ಭಾರೀ ಶಸ್ತ್ರಸಜ್ಜಿತ ಹಮಾಸ್ ಉಗ್ರರು ಇಸ್ರೇಲಿ ಸೈನ್ಯದ ಮೇಲೆ ದಾಳಿ ಮಾಡಿ ಹಲವಾರು ಸೈನಿಕರನ್ನು ಕೊಂದು ಹಾಕಿದ್ದಾರೆ. ಇತರರನ್ನು ವಶಪಡಿಸಿಕೊಂಡು ಬಂಧನದಲ್ಲಿ ಇರಿಸಿದ್ದಾರೆ.
ಯಾವುದೇ ಮುನ್ಸೂಚನೆಯನ್ನೂ ನೀಡದೇ ಕಂಡಕಂಡವರ ಮೇಲೆ ಗುಂಡು ಹಾರಿಸಿದ್ದಾರೆ. ಮನೆಗಳಿಗೆ ನುಗ್ಗಿ ಕೌರ್ಯ ಮೆರೆದಿದ್ದಾರೆ.
ಇದಕ್ಕೆ ಪ್ರತಿಕಾರವಾಗಿ ಇಸ್ರೇಲ್ ಸೇನೆಯು ಗಾಜಾ ಪಟ್ಟಿಯ ಮೇಲೆ ವ್ಯಾಪಕವಾಗಿ ದಾಳಿ ನಡೆಸುತ್ತಿದೆ. 20 ಲಕ್ಷಕ್ಕೂ ಅಧಿಕ ಜನರು ವಾಸವಾಗಿರುವ ಗಾಜಾ ಪ್ರದೇಶ ಅಕ್ಷರಶಃ ಯುದ್ಧಭೂಮಿಯಾಗಿ ಮಾರ್ಪಟ್ಟಿದೆ. ಎರಡೂ ಕಡೆಗಳಲ್ಲಿ ಸಾವಿರಾರು ಜನರು ಅಸುನೀಗಿದ್ದಾರೆ.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications