ಇಸ್ರೇಲ್ ಪ್ರತಿಕಾರಕ್ಕೆ 8 ಸಿರಿಯಾ ಸೈನಿಕರು ಬಲಿ- ಮಧ್ಯಪ್ರಾಚ್ಯದಲ್ಲಿ ಘೋರ ರಕ್ತಪಾತಕ್ಕೆ ಮುನ್ನುಡಿ ಬರೆಯುತ್ತಿರುವ ಯಹೂದಿ ರಾಷ್
ಡಮಾಸ್ಕಸ್, ಅಕ್ಟೋಬರ್ 25: ದಕ್ಷಿಣ ಸಿರಿಯಾದಲ್ಲಿ ಬುಧವಾರ ಮುಂಜಾನೆ ಇಸ್ರೇಲ್ ವೈಮಾನಿಕ ದಾಳಿ ನಡೆಸಿದೆ. ಈ ದಾಳಿಯಲ್ಲಿ ಎಂಟು ಸೈನಿಕರನ್ನು ಹತ್ಯೆಯಾಗಿದ್ದಾರೆ ಎಂದು ಸಿರಿಯನ್ ರಾಜ್ಯ ಮಾಧ್ಯಮ ವರದಿ ಮಾಡಿದೆ. ಸಿರಿಯನ್ ಸೈನಿಕರು ನಡೆಸಿದ ರಾಕೆಟ್ ದಾಳಿಗೆ ಪ್ರತಿಕಾರವಾಗಿ ಈ ದಾಳಿಯನ್ನು ನಡೆಸಿದ್ದೇವೆ ಎಂದು ಇಸ್ರೇಲ್ ಹೇಳಿಕೊಂಡಿವೆ.
ಲೆಬನಾನ್ನಲ್ಲಿರುವ ಹಿಸ್ಬುಲ್ ಸಂಘಟನೆಯು ಇಸ್ರೇಲ್ ಉತ್ತರದ ಗಡಿಯಲ್ಲಿ ಸಂಘರ್ಷಕ್ಕೆ ಇಳಿದಿದೆ. ಇದಕ್ಕೆ ಸಿರಿಯಾ ದೇಶವು ಬೆಂಬಲ ನೀಡುತ್ತಿದೆ ಎಂಬ ಆರೋಪವನ್ನು ಇಸ್ರೇಲ್ ಮಾಡಿದೆ.

ಲೆಬನಾನ್ ಮತ್ತು ಸಿರಿಯಾ ಜೊತೆಗೆ ಪ್ಯಾಲೆಸ್ತೀನ್ ಉತ್ತಮ ಬಾಂಧವ್ಯ ಹೊಂದಿರುವುದು ಇಸ್ರೇಲ್ನ ಚಿಂತೆಗೆ ಕಾರಣವಾಗಿದೆ. ಗಾಜಾ ಪಟ್ಟಿಯ ಮೇಲೆ ಇಸ್ರೇಲ್ ಯುದ್ಧ ಆರಂಭಿಸಿದಾಗಿನಿಂದ ಸಿರಿಯಾ ಹಾಗೂ ಲೆಬನಾನ್ನಿಂದ ರಾಕೆಟ್ ಮತ್ತು ಫಿರಂಗಿ ದಾಳಿಗಳು ನಡೆಯುತ್ತಲೇ ಇದೆ. ಇದು ಮಧ್ಯಪ್ರಾಚ್ಯದಲ್ಲಿ ತೀವ್ರ ಭಯವನ್ನು ಹುಟ್ಟುಹಾಕಿದೆ.
'ರಾತ್ರಿ ಸೂಮಾರು 1:45 ಗಂಟೆಗೆ ಇಸ್ರೇಲಿ ಶತ್ರುಗಳು ಗೋಲ್ಡನ್ ಹೈಟ್ಸ್ನಿಂದ ವೈಮಾನಿಕ ದಾಳಿಯನ್ನು ನಡೆಸಿದ್ದಾರೆ' ಎಂದು ಸಿರಿಯನ್ ರಾಜ್ಯ ಮಾಧ್ಯಮ ಹೇಳಿದೆ.
ದಾಳಿಯಲ್ಲಿ ಎಂಟು ಸೈನಿಕರು ಗಾಯಗೊಂಡಿದ್ದಾರೆ. ಏಳು ಸೈನಿಕರಿಗೆ ಗಾಯವಾಗಿದೆ. ಆಸ್ತಿಪಾಸ್ತಿಗೆ ಹಾನಿ ಉಂಟಾಗಿದೆ ಎಂದು ಸಿರಿಯಾ ಹೇಳಿಕೊಂಡಿದೆ.

ನಾಲ್ವರು ಅಧಿಕಾರಿಗಳು ಸೇರಿದಂತೆ 11 ಸೈನಿಕರು ಸಾವನ್ನಪ್ಪಿದ್ದಾರೆ ಎಂದು ಸಿರಿಯನ್ ಮಾನವ ಹಕ್ಕುಗಳ ವೀಕ್ಷಣಾಲಯ ತಿಳಿಸಿದೆ.
ಭಾನುವಾರದಂದು ಇಸ್ರೇಲ ದಾಳಿಗಳನ್ನು ಆರಂಭಿಸಿದೆ. ಸಿರಿಯಾದ ಎರಡು ಪ್ರಮುಖ ವಿಮಾನ ನಿಲ್ದಾಣಗಳಾದ ಡಮಾಸ್ಕಸ್ ಮತ್ತು ಅಲೆಪ್ಪೊ ಮೇಲೆ ದಾಳಿಗಳು ನಡೆದಿವೆ. ಈ ಕಾರಣದಿಂದಾಗಿ ಎರಡೂ ವಿಮಾನ ನಿಲ್ದಾಣಗಳು ಕಾರ್ಯಾಚರಣೆಯನ್ನು ಸ್ಥಗಿತಗೊಳಿಸಿವೆ ಎಂದು ಸಿರಿಯನ್ ಸರ್ಕಾರಿ ಮಾಧ್ಯಮ ಹೇಳಿದೆ.
ಅಕ್ಟೋಬರ್ 7 ರಂದು ಪ್ಯಾಲೇಸ್ಟಿನಿಯನ್ ಇಸ್ಲಾಮಿಸ್ಟ್ ಚಳುವಳಿ ಹಮಾಸ್ನ ಉಗ್ರಗಾಮಿಗಳು ಇಸ್ರೇಲ್ಗೆ ನುಗ್ಗಿದ ನಂತರ ಇಸ್ರೇಲ್ ಗಾಜಾ ಪಟ್ಟಿಯನ್ನು ಮುತ್ತಿಗೆ ಹಾಕಿದೆ. ಹಮಾಸ್ ದಾಳಿಯಲ್ಲಿ 1,400 ಇಸ್ರೇಲಿಗಳು ಬಲಿಯಾಗಿದ್ದಾರೆಂದು ಅಲ್ಲಿ ಸರ್ಕಾರ ಮಾಹಿತಿ ನೀಡಿದೆ.

ಇದು ಇಸ್ರೇಲ್ನ ಇತಿಹಾಸದಲ್ಲೇ ಅತ್ಯಂತ ಭೀಕರ ದಾಳಿ ಎಂದು ಸರ್ಕಾರ ಹೇಳಿಕೊಂಡಿದೆ. 220 ಕ್ಕೂ ಹೆಚ್ಚು ಒತ್ತೆಯಾಳುಗಳನ್ನು ಹಮಾಸ್ ಇರಿಸಿಕೊಂಡಿದೆ ಎಂದು ಇಸ್ರೇಲ್ ತಿಳಿಸಿದೆ.
ಹಮಾಸ್ ದಾಳಿಗೆ ಪ್ರತಿಕ್ರಿಯಿಸಿರುವ ಇಸ್ರೇಲ್ ಯುದ್ಧವನ್ನು ಘೋಷಿಸಿದೆ. ಭೂಮಿ, ಸಮುದ್ರ ಮತ್ತು ವಾಯು ಮೂಲಕ ದಾಳಿಯನ್ನು ನಡೆಸುತ್ತಿದೆ. ಇಸ್ರೇಲ್ ನಡೆಸಿದ ದಾಳಿಯಲ್ಲಿ ಈ ವರೆಗೆ 5,791 ಜನರು ಸಾವನ್ನಪ್ಪಿದ್ದಾರೆ ಎಂದು ಹಮಾಸ್ ಹೇಳಿದೆ.
ಸಿರಿಯಾದಲ್ಲಿ ಒಂದು ದಶಕಕ್ಕೂ ಹೆಚ್ಚು ಕಾಲ ನಡೆದ ಅಂತರ್ಯುದ್ಧದ ಸಮಯದಲ್ಲಿ ಇಸ್ರೇಲ್ ನೂರಾರು ವೈಮಾನಿಕ ದಾಳಿಗಳನ್ನು ನಡೆಸಿತ್ತು.
-
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
ಕರ್ನಾಟಕ PGCET 2026 ಅಧಿಸೂಚನೆ ಪ್ರಕಟ: ಎಂಬಿಎ ಸೇರಿ ವಿವಿಧ ಸ್ನಾತಕೋತ್ತರ ಪದವಿ ಪ್ರವೇಶಾತಿಗೆ ಮಾರ್ಚ್ 23 ರಿಂದ ಅರ್ಜಿ ಆಹ್ವಾನ -
ವಿಶ್ವಮಾತೆ ಎನ್ನುತ್ತಾ ಶ್ರೀಚಾಮುಂಡೇಶ್ವರಿಯ ಕನ್ನಡ ಹಾಡು ಹಂಚಿಕೊಂಡ ಪ್ರಧಾನಿ ಮೋದಿ












Click it and Unblock the Notifications