ಇಸ್ರೇಲ್ ಪ್ರತಿಕಾರಕ್ಕೆ 8 ಸಿರಿಯಾ ಸೈನಿಕರು ಬಲಿ- ಮಧ್ಯಪ್ರಾಚ್ಯದಲ್ಲಿ ಘೋರ ರಕ್ತಪಾತಕ್ಕೆ ಮುನ್ನುಡಿ ಬರೆಯುತ್ತಿರುವ ಯಹೂದಿ ರಾಷ್
ಡಮಾಸ್ಕಸ್, ಅಕ್ಟೋಬರ್ 25: ದಕ್ಷಿಣ ಸಿರಿಯಾದಲ್ಲಿ ಬುಧವಾರ ಮುಂಜಾನೆ ಇಸ್ರೇಲ್ ವೈಮಾನಿಕ ದಾಳಿ ನಡೆಸಿದೆ. ಈ ದಾಳಿಯಲ್ಲಿ ಎಂಟು ಸೈನಿಕರನ್ನು ಹತ್ಯೆಯಾಗಿದ್ದಾರೆ ಎಂದು ಸಿರಿಯನ್ ರಾಜ್ಯ ಮಾಧ್ಯಮ ವರದಿ ಮಾಡಿದೆ. ಸಿರಿಯನ್ ಸೈನಿಕರು ನಡೆಸಿದ ರಾಕೆಟ್ ದಾಳಿಗೆ ಪ್ರತಿಕಾರವಾಗಿ ಈ ದಾಳಿಯನ್ನು ನಡೆಸಿದ್ದೇವೆ ಎಂದು ಇಸ್ರೇಲ್ ಹೇಳಿಕೊಂಡಿವೆ.
ಲೆಬನಾನ್ನಲ್ಲಿರುವ ಹಿಸ್ಬುಲ್ ಸಂಘಟನೆಯು ಇಸ್ರೇಲ್ ಉತ್ತರದ ಗಡಿಯಲ್ಲಿ ಸಂಘರ್ಷಕ್ಕೆ ಇಳಿದಿದೆ. ಇದಕ್ಕೆ ಸಿರಿಯಾ ದೇಶವು ಬೆಂಬಲ ನೀಡುತ್ತಿದೆ ಎಂಬ ಆರೋಪವನ್ನು ಇಸ್ರೇಲ್ ಮಾಡಿದೆ.

ಲೆಬನಾನ್ ಮತ್ತು ಸಿರಿಯಾ ಜೊತೆಗೆ ಪ್ಯಾಲೆಸ್ತೀನ್ ಉತ್ತಮ ಬಾಂಧವ್ಯ ಹೊಂದಿರುವುದು ಇಸ್ರೇಲ್ನ ಚಿಂತೆಗೆ ಕಾರಣವಾಗಿದೆ. ಗಾಜಾ ಪಟ್ಟಿಯ ಮೇಲೆ ಇಸ್ರೇಲ್ ಯುದ್ಧ ಆರಂಭಿಸಿದಾಗಿನಿಂದ ಸಿರಿಯಾ ಹಾಗೂ ಲೆಬನಾನ್ನಿಂದ ರಾಕೆಟ್ ಮತ್ತು ಫಿರಂಗಿ ದಾಳಿಗಳು ನಡೆಯುತ್ತಲೇ ಇದೆ. ಇದು ಮಧ್ಯಪ್ರಾಚ್ಯದಲ್ಲಿ ತೀವ್ರ ಭಯವನ್ನು ಹುಟ್ಟುಹಾಕಿದೆ.
'ರಾತ್ರಿ ಸೂಮಾರು 1:45 ಗಂಟೆಗೆ ಇಸ್ರೇಲಿ ಶತ್ರುಗಳು ಗೋಲ್ಡನ್ ಹೈಟ್ಸ್ನಿಂದ ವೈಮಾನಿಕ ದಾಳಿಯನ್ನು ನಡೆಸಿದ್ದಾರೆ' ಎಂದು ಸಿರಿಯನ್ ರಾಜ್ಯ ಮಾಧ್ಯಮ ಹೇಳಿದೆ.
ದಾಳಿಯಲ್ಲಿ ಎಂಟು ಸೈನಿಕರು ಗಾಯಗೊಂಡಿದ್ದಾರೆ. ಏಳು ಸೈನಿಕರಿಗೆ ಗಾಯವಾಗಿದೆ. ಆಸ್ತಿಪಾಸ್ತಿಗೆ ಹಾನಿ ಉಂಟಾಗಿದೆ ಎಂದು ಸಿರಿಯಾ ಹೇಳಿಕೊಂಡಿದೆ.

ನಾಲ್ವರು ಅಧಿಕಾರಿಗಳು ಸೇರಿದಂತೆ 11 ಸೈನಿಕರು ಸಾವನ್ನಪ್ಪಿದ್ದಾರೆ ಎಂದು ಸಿರಿಯನ್ ಮಾನವ ಹಕ್ಕುಗಳ ವೀಕ್ಷಣಾಲಯ ತಿಳಿಸಿದೆ.
ಭಾನುವಾರದಂದು ಇಸ್ರೇಲ ದಾಳಿಗಳನ್ನು ಆರಂಭಿಸಿದೆ. ಸಿರಿಯಾದ ಎರಡು ಪ್ರಮುಖ ವಿಮಾನ ನಿಲ್ದಾಣಗಳಾದ ಡಮಾಸ್ಕಸ್ ಮತ್ತು ಅಲೆಪ್ಪೊ ಮೇಲೆ ದಾಳಿಗಳು ನಡೆದಿವೆ. ಈ ಕಾರಣದಿಂದಾಗಿ ಎರಡೂ ವಿಮಾನ ನಿಲ್ದಾಣಗಳು ಕಾರ್ಯಾಚರಣೆಯನ್ನು ಸ್ಥಗಿತಗೊಳಿಸಿವೆ ಎಂದು ಸಿರಿಯನ್ ಸರ್ಕಾರಿ ಮಾಧ್ಯಮ ಹೇಳಿದೆ.
ಅಕ್ಟೋಬರ್ 7 ರಂದು ಪ್ಯಾಲೇಸ್ಟಿನಿಯನ್ ಇಸ್ಲಾಮಿಸ್ಟ್ ಚಳುವಳಿ ಹಮಾಸ್ನ ಉಗ್ರಗಾಮಿಗಳು ಇಸ್ರೇಲ್ಗೆ ನುಗ್ಗಿದ ನಂತರ ಇಸ್ರೇಲ್ ಗಾಜಾ ಪಟ್ಟಿಯನ್ನು ಮುತ್ತಿಗೆ ಹಾಕಿದೆ. ಹಮಾಸ್ ದಾಳಿಯಲ್ಲಿ 1,400 ಇಸ್ರೇಲಿಗಳು ಬಲಿಯಾಗಿದ್ದಾರೆಂದು ಅಲ್ಲಿ ಸರ್ಕಾರ ಮಾಹಿತಿ ನೀಡಿದೆ.

ಇದು ಇಸ್ರೇಲ್ನ ಇತಿಹಾಸದಲ್ಲೇ ಅತ್ಯಂತ ಭೀಕರ ದಾಳಿ ಎಂದು ಸರ್ಕಾರ ಹೇಳಿಕೊಂಡಿದೆ. 220 ಕ್ಕೂ ಹೆಚ್ಚು ಒತ್ತೆಯಾಳುಗಳನ್ನು ಹಮಾಸ್ ಇರಿಸಿಕೊಂಡಿದೆ ಎಂದು ಇಸ್ರೇಲ್ ತಿಳಿಸಿದೆ.
ಹಮಾಸ್ ದಾಳಿಗೆ ಪ್ರತಿಕ್ರಿಯಿಸಿರುವ ಇಸ್ರೇಲ್ ಯುದ್ಧವನ್ನು ಘೋಷಿಸಿದೆ. ಭೂಮಿ, ಸಮುದ್ರ ಮತ್ತು ವಾಯು ಮೂಲಕ ದಾಳಿಯನ್ನು ನಡೆಸುತ್ತಿದೆ. ಇಸ್ರೇಲ್ ನಡೆಸಿದ ದಾಳಿಯಲ್ಲಿ ಈ ವರೆಗೆ 5,791 ಜನರು ಸಾವನ್ನಪ್ಪಿದ್ದಾರೆ ಎಂದು ಹಮಾಸ್ ಹೇಳಿದೆ.
ಸಿರಿಯಾದಲ್ಲಿ ಒಂದು ದಶಕಕ್ಕೂ ಹೆಚ್ಚು ಕಾಲ ನಡೆದ ಅಂತರ್ಯುದ್ಧದ ಸಮಯದಲ್ಲಿ ಇಸ್ರೇಲ್ ನೂರಾರು ವೈಮಾನಿಕ ದಾಳಿಗಳನ್ನು ನಡೆಸಿತ್ತು.
-
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Banana Price: ತಮಿಳುನಾಡು ಬಿಸಿಗಾಳಿ ಎಫೆಕ್ಟ್ಗೆ ಕುಸಿದ ಬಾಳೆಹಣ್ಣು ಧಾರಣೆ: ಬೆಂಗಳೂರಿನಲ್ಲಿ ಕೆ.ಜಿಗೆ 7 ರೂಪಾಯಿ -
Summer Specail Train: ಮೈಸೂರಿನಿಂದ ಇಲ್ಲಿಗೆ ವಿಶೇಷ ಎಕ್ಸ್ಪ್ರೆಸ್ ರೈಲು, 3 ರಾಜ್ಯಗಳಿಗೆ ಅನುಕೂಲ -
April 12 Horoscope: 12 ರಾಶಿಗಳಿಗೆ ಇಂದು ಹಣ-ಪ್ರೇಮದಲ್ಲಿ ಅದೃಷ್ಟ ಯಾರಿಗೆ? ಸಂಪೂರ್ಣ ವಿವರ -
IPL 2026: ಗಿಲ್ ಮತ್ತು ಬಟ್ಲರ್ ಸ್ಫೋಟಕ ಬ್ಯಾಟಿಂಗ್, ಎಲ್ಎಸ್ಜಿ ಮಣಿಸಿದ ಗುಜರಾತ್ ಟೈಟಾನ್ಸ್ -
Asha Bhosle: ಭಾರತೀಯ ಸಿನಿಮಾ ರಂಗದ ಖ್ಯಾತ ಗಾಯಕಿ ಆಶಾ ಭೋಸ್ಲೆ ಇನ್ನಿಲ್ಲ, ಸಂಗೀತ ರಾಣಿ ಎಂದೇ ಖ್ಯಾತಿ -
Karnataka Train: ಕಲಬುರಗಿ - ಕಲ್ಯಾಣ ಕರ್ನಾಟಕದಲ್ಲಿ ರೈಲು ಪ್ರಯಾಣಿಕರ ನಿತ್ಯ ಪರದಾಟ: ಸಿದ್ದು ಮಠಪತಿ ಬರಹ -
Vijay: ನಟ, ರಾಜಕಾರಣಿ ವಿಜಯ್ ಮಹತ್ವದ ಟ್ವೀಟ್ - ಅಪ್ರಬುದ್ಧ ರಾಜಕಾರಣಿ ಎಂದ ಡಿ.ಕೆ ಶಿವಕುಮಾರ್ Tamil Nadu Assembly Election












Click it and Unblock the Notifications