Israel-Hamas war: ಇಸ್ರೇಲ್- ಪ್ಯಾಲೆಸ್ತೀನ್ ನಡುವೆ ಮಧ್ಯಸ್ಥಿಕೆ ವಹಿಸಲು ಸಿದ್ಧ ಎಂದ ರಷ್ಯಾ- ಪುಟಿನ್ರಿಂದ ಮಾನವತೆಯ ಪಾಠ
ಇಸ್ರೇಲ್- ಪ್ಯಾಲೆಸ್ತೀನ್ ನಡುವೆ ಮಧ್ಯಸ್ಥಿಕೆ ವಹಿಸಲು ಸಿದ್ಧ ಎಂದು ರಷ್ಯಾ ದೇಶವು ಹೇಳಿದೆ. ನಾಗರಿಕರ ವಿರುದ್ಧದ ಹಿಂಸಾಚಾರ ಹಾಗೂ ಎಲ್ಲಾ ಭಯೋತ್ಪಾದನಾ ಕೃತ್ಯಗಳನ್ನು ಖಂಡಿಸುವ ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ಕರಡು ನಿರ್ಣಯವನ್ನು ರಷ್ಯಾ ಬೆಂಬಲಿಸಿದೆ.
ಇಸ್ರೇಲ್ ಹಾಗೂ ಗಾಜಾ ವಿಚಾರದಲ್ಲಿ ವಿಶ್ವಸಂಸ್ಥೆಯ ಭದ್ರತಾ ಮಂಡಳಿಯು ಸಂಪೂರ್ಣ ನಿಷ್ಕ್ರಿಯತೆ ಹೊಂದಿದೆ. ಯಾವುದೇ ಪ್ರತಿಕ್ರಿಯೆಯನ್ನು ನೀಡುತ್ತಿಲ್ಲ. ಇದನ್ನು ಒಪ್ಪಿಕೊಳ್ಳಲು ರಷ್ಯಾಗೆ ಸಾಧ್ಯವಿಲ್ಲ ಎಂದು ರಷ್ಯಾದ ಯುಎನ್ ರಾಯಭಾರಿ ವಾಸಿಲಿ ನೆಬೆಂಜಿಯಾ ಹೇಳಿದ್ದಾರೆ.

ಇಸ್ರೇಲ್ ಮತ್ತು ಪ್ಯಾಲೆಸ್ತೀನ್ ನಡುವೆ ಮಧ್ಯಸ್ಥಿಕೆ ವಹಿಸಲು ಸಿದ್ಧವಾಗಿದೆ ಎಂದು ಅವರು ಹೇಳಿದ್ದಾರೆ.
ವಿಶ್ವಸಂಸ್ಥೆಗೆ ಪ್ಯಾಲೆಸ್ತೀನ್ ಮನವಿ
ಗಾಜಾದಲ್ಲಿ ಮಾನವೀಯತೆಯ ವಿರುದ್ಧದ ಅಪರಾಧಗಳನ್ನು ವಿಶ್ವಸಂಸ್ಥೆ ತಡೆಯಬೇಕು ಎಂದು ಪ್ಯಾಲೆಸ್ತೀನ್ ಆಗ್ರಹಿಸಿದೆ. ಯುಎನ್ ಸೆಕ್ರೆಟರಿ-ಜನರಲ್ ಆಂಟೋನಿಯೊ ಗುಟೆರೆಸ್ಗೆ ಪ್ಯಾಲೆಸ್ತೀನ್ ವಿಶ್ವಸಂಸ್ಥೆಯ ರಾಯಭಾರಿ ಮನವಿ ಮಾಡಿದ್ದಾರೆ.
ಮಾನವೀಯತೆಯ ವಿರುದ್ಧದ ಅಪರಾಧವನ್ನು ತಡೆಯಲು ವಿಶ್ವಸಂಸ್ಥೆಯು ಕ್ರಮ ಕೈಗೊಳ್ಳಬೇಕು. ಇಸ್ರೇಲ್ ದಾಳಿಯನ್ನು ಮಾಡುತ್ತಿದೆ. ಗಾಜಾ ಪಟ್ಟಿಯ ಅರ್ಧದಷ್ಟು ಜನಸಂಖ್ಯೆಯನ್ನು ಸ್ಥಳಾಂತರಿವುದಾಗಿ ಎಚ್ಚರಿಕೆ ನೀಡಿದೆ ಎಂದು ಪ್ಯಾಲೆಸ್ತೀನ್ ಆಪಾದಿಸಿದೆ.

'ವಿಶ್ವಸಂಸ್ಥೆಯ ಹೆಚ್ಚು ಸಹಾಯ ಮಾಡಬೇಕಾಗಿದೆ. ಏನು ಮಾಡಿದರೂ ಸಾಕಾಗುವುದಿಲ್ಲ. ಮಾನವೀಯತೆಯ ವಿರುದ್ಧದ ಈ ಅಪರಾಧವನ್ನು ನಿಲ್ಲಿಸಲು ನಾವೆಲ್ಲರೂ ಹೆಚ್ಚಿನದನ್ನು ಮಾಡಬೇಕಾಗಿದೆ' ಎಂದು ಪ್ಯಾಲೆಸ್ತೀನ್ ಯುಎನ್ ರಾಯಭಾರಿ ರಿಯಾದ್ ಮನ್ಸೂರ್ ವಿಶ್ವಸಂಸ್ಥೆಯಲ್ಲಿ ಸುದ್ದಿಗಾರರಿಗೆ ತಿಳಿಸಿದ್ದಾರೆ.
ಕಳೆದ ವಾರ ಗಾಜಾ ಪಟ್ಟಿಯ ಮೇಲೆ ಇಸ್ರೇಲ್ ಯುದ್ಧವನ್ನು ಘೋಷಿಸಿದೆ. ಈಗಾಗಲೇ ಸಾವಿರಾರು ಜನರು ಅಸುನೀಗಿದ್ದಾರೆ. ಲಕ್ಷಾಂತರ ಜನರು ಗಾಜಾ ನಗರವನ್ನು ತೊರೆದಿದ್ದಾರೆ. ಯುದ್ಧವನ್ನು ಮುಂದುವರಿಸುವುದಾಗಿ ಇಸ್ರೇಲ್ ಹೇಳಿದೆ.
ಉತ್ತರ ಗಾಜಾ ಪಟ್ಟಿಯಲ್ಲಿ ನೆಲೆಸಿರುವ 11 ಲಕ್ಷಕ್ಕೂ ಅಧಿಕ ಜನರಿಗೆ ಎಚ್ಚರಿಕೆ ನೀಡಿದೆ. ಗಾಜಾ ತೊರೆಯುವಂತೆ ಇಸ್ರೇಲ್ ತಿಳಿಸಿದೆ. 24 ಗಂಟೆಗಳ ಒಳಗೆ ಸ್ಥಳಾಂತರಗೊಳ್ಳಬೇಕು. ಇಲ್ಲದಿದ್ದರೆ, ಪ್ರಾಣ ಕಳೆದುಕೊಳ್ಳಬೇಕು ಎಂದು ಇಸ್ರೇಲ್ ಪ್ರಧಾನಿ ಹೇಳಿದ್ದಾರೆ.
ಅಕ್ಟೋಬರ್ 7 ರಂದು ಹಮಾಸ್ನ ಮಾರಣಾಂತಿಕ ದಾಳಿಗೆ ಪ್ರತೀಕಾರವಾಗಿ ಇಸ್ರೇಲ್ ಯುದ್ಧವನ್ನು ಘೋಷಿಸಿದೆ. ನೆಲದ ಆಕ್ರಮಣಕ್ಕೆ ಮುಂಚಿತವಾಗಿ ಸ್ಥಳಾಂತರಗೊಳ್ಳುವಂತೆ ಜನರಿಗೆ ಇಸ್ರೇಲ್ ಎಚ್ಚರಿಕೆ ನೀಡಿದೆ. ನಾವು ಹಮಾಸ್ ವಿರುದ್ಧ ಹೋರಾಟ ನಡೆಸುತ್ತೇವೆ. ಪ್ಯಾಲೆಸ್ತೀನ್ ನಾಗರಿಕರು ನಮ್ಮ ಶತ್ರುಗಳಲ್ಲ ಎಂದು ಇಸ್ರೇಲಿ ರಕ್ಷಣಾ ಪಡೆಗಳು ಶನಿವಾರ ಹೇಳಿವೆ.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications