ಪಾಕಿಸ್ತಾನದ ಅಮೆರಿಕ ರಾಯಭಾರ ಕಚೇರಿ ಮೇಲೆ ದಿಢೀರ್ ದಾಳಿ, ಹಿಂಸಾಚಾರದಲ್ಲಿ 8 ಸಾವು | Israel Military
ಅಮೆರಿಕ ಹಾಗೂ ಇಸ್ರೇಲ್ ಸೇರಿಕೊಂಡು ಒಂದು ಕಡೆ ಇರಾನ್ ಮೇಲೆ ಭೀಕರ ದಾಳಿ ಆರಂಭಿಸಿದ್ದು, ದೊಡ್ಡ ಮಟ್ಟದಲ್ಲಿ ಸೇನಾ ಕಾರ್ಯಾಚರಣೆ ಶುರುವಾಗಿದೆ. ಹೀಗಾಗಿ ಮಧ್ಯಪ್ರಾಚ್ಯ ಭಾಗದಲ್ಲಿ ಸೂಕ್ಷ್ಮ ವಾತಾವರಣ ನಿರ್ಮಾಣವಾಗಿ 3ನೇ ಮಹಾಯುದ್ಧದ ಭೀತಿ ಕೂಡ ಆವರಿಸಿದೆ. ಇಂತಹ ಪರಿಸ್ಥಿತಿಯು ಎದುರಾಗಿರುವ ಸಮಯದಲ್ಲೇ ಪಾಕಿಸ್ತಾನದಲ್ಲಿ ಘೋರ ದುರಂತ ನಡೆದು ಹೋಗಿದೆ, ಪಾಕಿಸ್ತಾನವನ್ನು ಮೆಚ್ಚಿಸಲು ಸದಾ ಪ್ರಯತ್ನಿಸುವ ಅಮೆರಿಕಗೆ ಇಂದು ಆಘಾತ ಎದುರಾಗಿದೆ. ಅಂದಹಾಗೆ ಪಾಕಿಸ್ತಾನ ನೆಲದಲ್ಲಿ ಇರುವ ಅಮೆರಿಕ ರಾಯಭಾರ ಕಚೇರಿ ಮೇಲೆ ಇಂದು ದಿಢೀರ್ ದಾಳಿ ಮಾಡಲಾಗಿದೆ. ಈ ದಾಳಿ ಸಮಯದಲ್ಲಿ ಭೀಕರ ಹಿಂಸಾಚಾರ ಸಂಭವಿಸಿದ್ದು 8 ಸಾವು ವರದಿಯಾಗಿದ್ದು, ಹತ್ತಾರು ಗಾಯಾಳುಗಳು ಆಸ್ಪತ್ರೆಗೆ ದಾಖಲಾಗಿದ್ದಾರೆ.
ಉಗ್ರರ ಕೂಪವಾಗಿರುವ ಪಾಕಿಸ್ತಾನಕ್ಕೆ ಪದೇ ಪದೇ ಅಮೆರಿಕ ಬೆಂಬಲ ನೀಡುತ್ತಾ ಬರುತ್ತಿದ್ದು, ಹೀಗೆ ಇದ್ದರೂ ಪಾಕಿಸ್ತಾನದ ಜನ ಮಾತ್ರ ಅಮೆರಿಕ ಹಾಗೂ ಅಮೆರಿಕದ ನಾಯಕರನ್ನು ವಿಲನ್ ರೀತಿಯೇ ನೋಡುತ್ತಿದ್ದಾರೆ. ಅದರಲ್ಲೂ ಇರಾನ್ ಮೇಲೆ ಇಸ್ರೇಲ್ ಹಾಗೂ ಅಮೆರಿಕ ದಾಳಿ ಮಾಡಿದ ನಂತರ, ದಿಢೀರ್ ಪಾಕಿಸ್ತಾನದಲ್ಲಿ ಇರುವ ಅಮೆರಿಕ ರಾಯಭಾರ ಕಚೇರಿಗೆ ಒಂದು ಗುಂಪು ನುಗ್ಗಿದೆ. ಅಲ್ಲದೆ ಈ ಸಮಯದಲ್ಲಿ ಹಿಂಸಾಚಾರ ನಡೆಸಲು ಕೂಡ ಪ್ರಯತ್ನ ಮಾಡಿದ್ದಾರೆ. ಆದರೆ ಅಂತಿಮವಾಗಿ ಈ ಗಲಾಟೆ ನಿಯಂತ್ರಿಸಲು ಪಾಕಿಸ್ತಾನ ಭದ್ರತಾ ಪಡೆಗಳು ಅಸ್ತ್ರ ಪ್ರಯೋಗ ಮಾಡಿವೆ. ಈ ಸಮಯದಲ್ಲಿ ಹಿಂಸಾಚಾರ ಭುಗಿಲೆದ್ದು ಈವರೆಗೂ 8 ಸಾವು ವರದಿಯಾಗಿದೆ.

ಪಾಕಿಸ್ತಾನದಲ್ಲಿ ಗಲಾಟೆ ಶುರುವಾಗಿದ್ದು ಏಕೆ?
ಇರಾನ್ ಪರಮಾಣು ಅಸ್ತ್ರಗಳ ವಿಚಾರದಲ್ಲಿ ಶಾಂತಿ ಒಪ್ಪಂದ ಮಾಡಿಕೊಳ್ಳುತ್ತಿಲ್ಲ ಎಂಬ ಕಾರಣದಿಂದ ಅಮೆರಿಕ ಮತ್ತು ಇಸ್ರೇಲ್ ಇದೀಗ ಇರಾನ್ ವಿರುದ್ಧ ಡೆಡ್ಲಿ ಅಟ್ಯಾಕ್ ಶುರು ಮಾಡಿಬಿಟ್ಟಿವೆ ದಿಢೀರ್. ಇಸ್ರೇಲ್ ನಡೆಸಿದ ದಾಳಿಯಲ್ಲಿ ಇರಾನ್ ಸರ್ವಾಧಿಕಾರಿ ಖಮೇನಿ ಮೃತಪಟ್ಟಿರುವುದು ಕನ್ಫರ್ಮ್ ಆಗಿದೆ. ಖಮೇನಿ ಮಾತ್ರವಲ್ಲ ಈಗಾಗಲೇ ಇರಾನ್ ದೇಶದ ಇಬ್ಬರು ಪ್ರಮುಖ ಸೇನಾಧಿಕಾರಿಗಳು ಕೂಡ ಇಸ್ರೇಲ್ ದಾಳಿಗೆ ಬಲಿಯಾಗಿದ್ದಾರೆ.
ಜೊತೆಯಲ್ಲಿ ಇರಾನ್ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ ಮುಖ್ಯ ಕಮಾಂಡರ್ ಮೊಹಮ್ಮದ್ ಪಾಕ್ಪೂರ್ ಸೇರಿದಂತೆ, ಇರಾನ್ ರಕ್ಷಣಾ ಮಂಡಳಿಯ ಕಾರ್ಯದರ್ಶಿ ಅಲಿ ಶಾಮ್ಖಾನಿ ಈ ದಾಳಿಯಲ್ಲಿ ಮೃತಪಟ್ಟಿರುವುದು ಕನ್ಫರ್ಮ್ ಆಗಿತ್ತು. ಹೀಗಿದ್ದಾಗ ಪಾಕಿಸ್ತಾನದಲ್ಲಿ ಇರಾನ್ ಪರವಾಗಿ ಪ್ರತಿಭಟನೆ & ಹಿಂಸಾಚಾರ ಭುಗಿಲೆದ್ದಿದೆ. ಇದೇ ಸಮಯದಲ್ಲಿ ಅಮೆರಿಕ ರಾಯಭಾರ ಕಚೇರಿಗೆ ಕೂಡ ಕೆಲವರು ಹಾನಿ ಮಾಡಲು ಯತ್ನಿಸಿದ್ದು, ಬಲ ಪ್ರಯೋಗ ಮಾಡಲಾಗಿದೆ. ಪಾಕಿಸ್ತಾನದಲ್ಲಿ ಮತ್ತಷ್ಟು ಪ್ರತಿಭಟನೆಗಳು ಭುಗಿಲೇಳುವ ಸಾಧ್ಯತೆ ಇದ್ದು, ಭದ್ರತೆ ಹೆಚ್ಚಿಸಲು ಮುಂದಾಗಿದೆ ಪಾಕಿಸ್ತಾನ ಸರ್ಕಾರ.
-
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral












Click it and Unblock the Notifications