ಇರಾನ್ ವಿರುದ್ಧ ಮತ್ತಷ್ಟು ಕಠಿಣ ನಿರ್ಧಾರಕ್ಕೆ ಮುಂದಾದ ಅಮೆರಿಕ, ಇನ್ನಷ್ಟು ಅಸ್ತ್ರ ರವಾನೆ ಸಾಧ್ಯತೆ | Israel Military
ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ತಾವು ಅಂದುಕೊಂಡ ರೀತಿಯಲ್ಲೇ ಈಗ ಮಾಡಿದ್ದು, ಅಮೆರಿಕದ ದೊಡ್ಡ ಶತ್ರು ಇರಾನ್ ವಿರುದ್ಧ ಘೋರ ಯುದ್ಧ ಆರಂಭಿಸಿದ್ದಾರೆ. ಇಸ್ರೇಲ್ ಮೊದಲಿಗೆ ಈ ವಿಚಾರದಲ್ಲಿ ಮುಂದೆ ನುಗ್ಗಿ ದಾಳಿ ಆರಂಭ ಮಾಡಿದ್ದು, ಇರಾನ್ ಮತ್ತು ಇಸ್ರೇಲ್ ನಡುವೆ ಭಾರಿ ದೊಡ್ಡ ತಿಕ್ಕಾಟ ಆರಂಭ ಆಗಿದೆ. ಅದರಲ್ಲೂ ಇರಾನ್ ರಾಜಧಾನಿ ತೆಹ್ರಾನ್ ಈಗಾಗಲೇ ನಲುಗಿದ್ದು, ತೆಹ್ರಾನ್ ನಿವಾಸಿಗಳು ಜೀವ ಉಳಿಸಿಕೊಳ್ಳಲು ಓಡಿ ಹೋಗುವ ಪರಿಸ್ಥಿತಿ ನಿರ್ಮಾಣ ಆಗಿದೆ. ಇಂತಹ ಸಮಯದಲ್ಲೇ ಮತ್ತೊಂದು ದೊಡ್ಡ ಆಘಾತ ನೀಡಲು ಅಮೆರಿಕ ಸಜ್ಜಾದಂತೆ ಕಾಣುತ್ತಿದ್ದು, ಇರಾನ್ ವಿರುದ್ಧ ಮತ್ತಷ್ಟು ಕಠಿಣ ನಿರ್ಧಾರಕ್ಕೆ ಚಿಂತನೆ ನಡೆಸಿದೆ. ಇದೇ ಕಾರಣಕ್ಕೆ ಇರಾನ್ ವಿರುದ್ಧ ಸೇನಾ ಕಾರ್ಯಾಚರಣೆ ಇನ್ನಷ್ಟು ಘೋರವಾಗಿಸಲು ಮತ್ತಷ್ಟು ಅಸ್ತ್ರ ರವಾನೆ ಮಾಡುವ ಸಾಧ್ಯತೆ ದಟ್ಟವಾಗಿದೆ.
ಪರಮಾಣು ಶಾಂತಿ ಒಪ್ಪಂದಕ್ಕೆ ಸಹಿ ಹಾಕಲು ಇರಾನ್ ಮತ್ತು ಅಮೆರಿಕ ನಡುವೆ ದೊಡ್ಡ ಜಟಾಪಟಿ ನಡೆದಿತ್ತು. ಇರಾನ್ ತನ್ನ ಪರಮಾಣು ಸ್ಥಾವರಗಳ ಮೂಲಕ ಪರಮಾಣು ಬಾಂಬ್ ತಯಾರಿಸುತ್ತಿದೆ, ಇದು ಭವಿಷ್ಯದ ದೃಷ್ಟಿಯಿಂದ ಒಳ್ಳೆಯದಲ್ಲ ಎಂದು ಅಮೆರಿಕ ಆರೋಪ ಮಾಡಿತ್ತು. ಅದರಲ್ಲೂ ಈ ವಿಚಾರವಾಗಿ ಇಸ್ರೇಲ್ ಜೊತೆಯಲ್ಲೂ ಇರಾನ್ ಕಿರಿಕ್ ಮಾಡಿಕೊಂಡಿದೆ. ಹೀಗಿದ್ದಾಗ ಕೆಲವು ದಿನಗಳ ಹಿಂದೆ ಅಮೆರಿಕ ಮತ್ತು ಇರಾನ್ ದೇಶಗಳ ನಡುವೆ ಮಹತ್ವದ ಮಾತುಕತೆ ಶುರುವಾಗಿತ್ತು, ಒಪ್ಪಂದ ಮಾಡಿಕೊಂಡು ಎರಡೂ ದೇಶಗಳು ಶಾಂತಿ ಕಾಪಾಡಬೇಕು ಎಂಬ ಉದ್ದೇಶದಿಂದ ವೇದಿಕೆ ಕೂಡ ಸೃಷ್ಟಿ ಮಾಡಲಾಗಿತ್ತು. ಆದರೆ ಪರಮಾಣು ಶಾಂತಿ ಮಾತುಕತೆ ಮುರಿದುಬಿದ್ದ ತಕ್ಷಣ ದೊಡ್ಡ ಗಲಾಟೆ ಈಗ ಶುರುವಾಗಿದ್ದು, ಮಧ್ಯಪ್ರಾಚ್ಯ ಯುದ್ಧದ ಕುಲುಮೆಗೆ ಬಿದ್ದಿದೆ.

-
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral












Click it and Unblock the Notifications