Israel-Palestine War: ಹಮಾಸ್ ನೆಲೆಸಿರುವ ಪ್ರತಿಯೊಂದು ಸ್ಥಳವು ಅವಶೇಷಗಳಾಗಿ ಬದಲಾಗಲಿವೆ- ಇಸ್ರೇಲ್ ಪ್ರಧಾನಿ ಪ್ರತಿಜ್ಞೆ
ಹಮಾಸ್ ಉಗ್ರರ ದಾಳಿಗೆ ಸಿಲುಕಿ ಇಸ್ರೇಲ್ ಅಕ್ಷರಶಃ ನಲುಗುತ್ತಿದೆ. ಭಯಾನಕ ದಾಳಿ ಬಳಿಕ ಹಮಾಸ್ ಉಗ್ರರ ಮೇಲೆ ಇಸ್ರೇಲ್ ಸರ್ಕಾರ ಯುದ್ಧ ಘೋಷಿಸಿದೆ. ಮೃಗೀಯ ಜನರಿಗೆ ತಕ್ಕ ಪಾಠ ಕಲಿಸುವುದಾಗಿ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಹೇಳಿದ್ದಾರೆ.
ಇಂದು ನೇರಪ್ರಸಾರದಲ್ಲಿ ಮಾತನಾಡಿದ ಅವರು, 'ಹಮಾಸ್ ಯುದ್ಧವನ್ನು ಬಯಸಿದೆ. ಅದು ಯುದ್ಧವನ್ನು ಎದುರಿಸಲಿದೆ' ಎಂದು ತಿಳಿಸಿದ್ದಾರೆ.

ಹಮಾಸ್ ಐಸಿಸ್ನಂತೆ ವರ್ತಿಸುತ್ತಿದೆ. ಪ್ರಬುದ್ಧ ಜಗತ್ತು ಐಸಿಸ್ ಅನ್ನು ನಿರ್ಮೂಲನೆ ಮಾಡಿದ ರೀತಿಯಲ್ಲಿಯೇ ನಾವು ಹಮಾಸ್ ಅನ್ನು ತೊಡೆದುಹಾಕುತ್ತೇವೆ ಎಂದು ಪ್ರತಿಜ್ಞೆ ಮಾಡಿದ್ದಾರೆ.
ಹಲವಾರು ಉಗ್ರಗಾಮಿಗಳು ಇನ್ನೂ ನಮ್ಮ ದೇಶದಲ್ಲಿದ್ದಾರೆ. ನಮ್ಮ ರಸ್ತೆಗಳಲ್ಲಿ ಓಡಾಡುತ್ತಿದ್ದಾರೆ. ಅವರನ್ನು ನಿರ್ಮೂಲನೆ ಮಾಡಲು ನಾವು ಕಾರ್ಯಸನ್ನದ್ಧರಾಗಿದ್ದೇವೆ ಎಂದು ತಿಳಿಸಿದ್ದಾರೆ.
ಲೆಬನಾನ್ ಮತ್ತು ಪಶ್ಚಿಮ ದೇಶಗಳೊಂದಿಗೆ ನಮ್ಮ ಗಡಿಗಳನ್ನು ಬಲಪಡಿಸಲು ನಾವು ಕೆಲಸ ಮಾಡುತ್ತೇವೆ ಎಂದು ಹೇಳಿದ್ದಾರೆ.

ನಾವು ಅಂತರರಾಷ್ಟ್ರೀಯ ಬೆಂಬಲವನ್ನು ಪಡೆಯಲು ಬಯಸುತ್ತೇವೆ. ಮಾನವೀಯತೆ ಪರ ಇರುವವರು ಬೆಂಬಲಿಸಲಿ. ನಾವು ನಮ್ಮ ಸ್ವಾತಂತ್ರ್ಯವನ್ನು ಉಳಿಸಿಕೊಳ್ಳಲು ಹೋರಾಡುತ್ತೇವೆ. ನಮಗೆ ಅಂತರರಾಷ್ಟ್ರೀಯ ಸಮುದಾಯ ಬೆಂಬಲ ನೀಡಲಿ ಎಂದು ತಿಳಿಸಿದ್ದಾರೆ.
'ಹಮಾಸ್ ವಿರುದ್ಧದ ಹೋರಾಟವು ಕೇವಲ ಇಸ್ರೇಲ್ ಜನರನ್ನು ಉಳಿಸಿಕೊಳ್ಳುವುದಕ್ಕಲ್ಲ. ಇದು ಅನಾಗರಿಕತೆಯ ವಿರುದ್ಧ ನಿಂತಿರುವ ಪ್ರತಿಯೊಂದು ದೇಶಕ್ಕಾಗಿ ನಡೆಯುತ್ತಿರುವ ಹೋರಾಟವಾಗಿದೆ. ಇಸ್ರೇಲ್ ಈ ಯುದ್ಧವನ್ನು ಗೆಲ್ಲುತ್ತದೆ. ಇಸ್ರೇಲ್ ಗೆದ್ದಾಗ, ಇಡೀ ನಾಗರಿಕ ಜಗತ್ತು ಗೆಲ್ಲುತ್ತದೆ' ಎಂದು ನೆತನ್ಯಾಹು ಹೇಳಿದ್ದಾರೆ.

ನಾನು ಅಮೆರಿಕ ಅಧ್ಯಕ್ಷ ಬಿಡೆನ್ ಅವರೊಂದಿಗೆ ನಿರಂತರ ಸಂಪರ್ಕದಲ್ಲಿದ್ದೇನೆ. ಇಸ್ರೇಲ್ ಬೆನ್ನಿಗೆ ಅವರು ನಿಂತಿದ್ದಾರೆ. ಭದ್ರತೆಯ ಭರವಸೆಗಳನ್ನು ನೀಡಿದ್ದಾರೆ. ನಮ್ಮ ಕಾರ್ಯಚರಣೆಯಲ್ಲಿ ಪಾಲ್ಗೊಳ್ಳುವುದಾಗಿ ಅವರು ತಿಳಿಸಿದ್ದಾರೆ. ನನ್ನ ದೇಶದ ನಾಗರಿಕರ ಪರವಾಗಿ ನಾನು ಬೈಡನ್ ಅವರಿಗೆ ಧನ್ಯವಾದ ಹೇಳಲು ಬಯಸುತ್ತೇನೆ ಎಂದು ತಿಳಿಸಿದ್ದಾರೆ.
ನಮ್ಮ ದೇಶದಲ್ಲಿ ತುರ್ತು ಏಕತೆ ಬೇಕಿದೆ. ನಮಗೀಗ ಇಸ್ರೇಲ್ ಮುಖ್ಯವಾಗಿದೆ. ವಾದ-ಪ್ರತಿವಾದಗಳು ಏನೇ ಇರಲಿ. ನಾವು ಒಂದಾಗಿ ಕೆಲಸ ಮಾಡಬೇಕಿದೆ. ವಿರೋಧ ಪಕ್ಷದ ನಾಯಕರು ಈಗ ನಮ್ಮೊಂದಿಗೆ ಇರಬೇಕಿದೆ. ಇಸ್ರೇಲ್ನಲ್ಲಿನ ಆಂತರಿಕ ವಿಭಜನೆಯು ಕೇವಲ ರಾಜಕೀಯಕ್ಕೆ ಸೀಮಿತವಾಗಿರಲಿ ಎಂದು ಅವರು ಕರೆ ನೀಡಿದ್ದಾರೆ.
ಹಮಾಸ್ ಕಾರ್ಯನಿರ್ವಹಿಸುವ ಪ್ರತಿಯೊಂದು ಸ್ಥಳವು ಅವಶೇಷಗಳಾಗಿ ಬದಲಾಗುತ್ತವೆ. ಗಾಜಾ ಪಟ್ಟಿಯ ಸುತ್ತಲಿನ ಪಟ್ಟಣಗಳನ್ನು ಉಗ್ರಗಾಮಿಗಳ ಹಿಡಿತದಿಂದ ತೆರವುಗೊಳಿಸುವುದು ನಮ್ಮ ಮೊದಲ ಹೆಜ್ಜೆಯಾಗಿದೆ. ಅದನ್ನು ನಾವು ಯಶಸ್ವಿಯಾಗಿ ಮುಗಿಸುತ್ತೇವೆ ಎಂದು ಪ್ರಧಾನಿ ಬೆಂಜಮಿನ್ ನೆತನ್ಯಾಹು ಹೇಳಿದ್ದಾರೆ.
ಇಸ್ರೇಲ್ಗೆ ಅಭೂತಪೂರ್ವ ಅಂತರರಾಷ್ಟ್ರೀಯ ಬೆಂಬಲ ದೊರೆಯುತ್ತಿದೆ. ನಾವು ಇದಕ್ಕೆ ಧನ್ಯವಾದ ಅರ್ಪಿಸುತ್ತೇವೆ ಎಂದು ಅವರು ತಿಳಿಸಿದ್ದಾರೆ.
ಇಸ್ರೇಲ್ನಲ್ಲಿ ಇನ್ನೂ ಹಲವಾರು ಪ್ಯಾಲೆಸ್ತೀನ್ ಉಗ್ರಗಾಮಿಗಳು ಇದ್ದಾರೆ. ನಮ್ಮ ಶತ್ರುಗಳಿಗೆ ನಾವು ಏನು ಮಾಡುತ್ತೇವೆ ಎಂಬುದು ತಲೆಮಾರುಗಳವರೆಗೆ ನೆನಪಿನಲ್ಲಿರಬೇಕು ಎಂದು ಹೇಳಿದ್ದಾರೆ.
ಅಪಹರಿಸಿದ ಮತ್ತು ಕಾಣೆಯಾದವರಿಗೆ ನಾವು ಎಲ್ಲ ಸಹಾಯವನ್ನೂ ಮಾಡುತ್ತೇವೆ. ನಮ್ಮ ಮುಂದೆ ಕಠಿಣ ದಿನಗಳಿವೆ. ಕಠಿಣ ಸವಾಲುಗಳಿವೆ. ಕಠಿಣ ಸಂಕಷ್ಟಗಳಿವೆ. ಆದರೆ, ನಾವು ಇದರಲ್ಲಿ ಗೆಲುವು ಸಾಧಿಸಲು ನಿರ್ಧರಿಸುತ್ತೇವೆ. ಗೆಲುವು ಸಾಧಿಸಲಿದ್ದೇವೆ ಎಂದು ತಿಳಿಸಿದ್ದಾರೆ.
-
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ












Click it and Unblock the Notifications