ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ತಪ್ಪು ಒಪ್ಪಿಕೊಂಡರಾ?
ಇಸ್ರೇಲ್ ಮಾಡಿರುವ ಅದೊಂದು ಎಡವಟ್ಟು ಈಗ ಕುತ್ತಿಗೆಗೆ ತಂದಿದೆ. ಹಾಗೇ ಇಸ್ರೇಲ್ ಬಗ್ಗೆ ಈಗ ಇಡೀ ಜಗತ್ತು ಆಕ್ರೋಶ ಹೊರಹಾಕುತ್ತಿದೆ. ಇಂತಹ ಸಮಯದಲ್ಲೇ ಇಸ್ರೇಲ್ ಪ್ರಧಾನಿ ಇದೇ ಮೊದಲ ಬಾರಿಗೆ ರಫಾ ಪ್ರದೇಶದ ನಿರಾಶ್ರಿತರ ಟೆಂಟ್ಗಳ ಮೇಲೆ ನಡೆದ ದಾಳಿ ಬಗ್ಗೆ ಮಾತನಾಡಿದ್ದಾರೆ. ಈ ಮೂಲಕ ಅಮೆರಿಕ ಸೇರಿ ಇಸ್ರೇಲ್ ದೇಶದ ಮಿತ್ರ ರಾಷ್ಟ್ರಗಳ ಸಿಟ್ಟು ತಣಿಸಲು ಮುಂದಾಗಿದ್ದಾರೆ.
ರಫಾ ಪ್ರದೇಶದಲ್ಲಿ ಯುದ್ಧ ನಿಲ್ಲಿಸಿ ಎಂದು ಇಸ್ರೇಲ್ ಸೇನೆಗೆ ಅಂತಾರಾಷ್ಟ್ರೀಯ ನ್ಯಾಯಾಲಯ ಆದೇಶ ನೀಡಿದ 2 ದಿನದಲ್ಲಿ ಇಸ್ರೇಲ್ ಭೀಕರ ದಾಳಿ ನಡೆಸಿದೆ. ಇಸ್ರೇಲ್ ಸೇನೆ ನಿರಾಶ್ರಿತ ಶಿಬಿರದ ಮೇಲೆ ದಾಳಿ ನಡೆಸಿದ ನಂತರ ಸುಮಾರು 45 ಜನರು ಜೀವ ಬಿಟ್ಟಿದ್ದಾರೆ. ಈ ಘಟನೆ ಈಗ ಇಡೀ ಜಗತ್ತನ್ನೇ ಕೆರಳಿಸಿದೆ. ಅಲ್ಲದೆ ಸ್ವತಃ ಇಸ್ರೇಲ್ ಮಿತ್ರ ದೇಶಗಳೇ ಈ ಕುರಿತು ಆಕ್ರೋಶ ಕೂಡ ಹೊರಹಾಕುತ್ತಿವೆ. ಪರಿಸ್ಥಿತಿ ಕೈಮೀರಿ ಹೋಗುತ್ತಿರುವ ಬಗ್ಗೆ ಅರಿತ ಇಸ್ರೇಲ್ ಪ್ರಧಾನಿ ಈಗ, ರಫಾ ದಾಳಿಯ ಬಗ್ಗೆ ಬೇಸರ ಹೊರಹಾಕಿದ್ದಾರೆ. ಅಲ್ಲದೆ ಇನ್ನೂ ಒಂದು ಗಂಭೀರ ವಿಚಾರ ಹಂಚಿಕೊಂಡಿದ್ದಾರೆ.

ಇಸ್ರೇಲ್ ವಿರುದ್ಧ ಭಾರಿ ಆಕ್ರೋಶ
ಹೌದು, ಮೊನ್ನೆಯಷ್ಟೇ ಗಾಜಾದ ದಕ್ಷಿಣ ಭಾಗದ ನಗರವಾದ ರಫಾ ಗುರಿಯಾಗಿಸಿ ಇಸ್ರೇಲ್ ಸೇನೆ ನಡೆಸಿದ ವಾಯು ದಾಳಿಯ ಬಗ್ಗೆ ಬೇಸರ ಹೊರಹಾಕಿದ್ದಾರೆ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು. ಈ ದಾಳಿಯಿಂದಾಗಿ ಇಸ್ರೇಲ್ ವಿರುದ್ಧ ಅಂತರರಾಷ್ಟ್ರೀಯ ಮಟ್ಟದಲ್ಲಿ ಟೀಕೆಗಳು ವ್ಯಕ್ತವಾಗಿವೆ. ಹಾಗೇ ನಿರಾಶ್ರಿತರ ಶಿಬಿರದಲ್ಲಿ ಸಾಮಾನ್ಯ ಜನರು ಮೃತಪಟ್ಟಿರುವುದು ಕೂಡ ಈಗ ಇಸ್ರೇಲ್ ಆಪ್ತ ದೇಶಗಳಿಂದಲೇ ಟೀಕೆ ಎದುರಿಸುವಂತೆ ಮಾಡಿದೆ ಎಂದು ಕೂಡ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಒಪ್ಪಿಕೊಂಡಿದ್ದಾರೆ.
ಯುದ್ಧ ನಿಲ್ಲಿಸಲು ಹೇಳಿತ್ತು ಕೋರ್ಟ್
ಗಾಜಾ ಪಟ್ಟಿ ಪ್ರದೇಶದ ರಫಾ ಭಾಗದಲ್ಲಿ 3 ವಾರದಿಂದ ತಿಕ್ಕಾಟ ತೀವ್ರವಾಗಿದೆ. ಹೀಗಾಗಿ ಇಸ್ರೇಲ್ ವಿರುದ್ಧ ಅಂತಾರಾಷ್ಟ್ರೀಯ ಮಟ್ಟದಲ್ಲಿ ಆಕ್ರೋಶವು ವ್ಯಕ್ತವಾಗಿದೆ. ಹಾಗೆಯೇ, ಯುದ್ಧ ತಕ್ಷಣ ನಿಲ್ಲಿಸಿ ಎಂಬ ಒತ್ತಾಯ ಕೇಳಿಬಂದಿತ್ತು. ಪ್ಯಾಲೆಸ್ತೀನ್ ಪ್ರಜೆಗಳನ್ನ ಇಸ್ರೇಲ್ ಸೇನೆ ಬಲವಂತಾಗಿ ಸ್ಥಳಾಂತರ ಮಾಡುತ್ತಿದೆ ಹೀಗಾಗಿ ಲಕ್ಷಾಂತರ ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು.
ಇಂಟರ್ನ್ಯಾಷನಲ್ ಕೋರ್ಟ್ ಇಸ್ರೇಲ್ಗೆ ಆಘಾತ ನೀಡಿ, ರಫಾ ಕಾರ್ಯಾಚರಣೆ ತಕ್ಷಣ ನಿಲ್ಲಿಸಿ ಎಂದಿತ್ತು ಅಂತಾರಾಷ್ಟ್ರೀಯ ನ್ಯಾಯಾಲಯ. ಇಷ್ಟೆಲ್ಲಾ ಗೊಂದಲದ ನಡುವೆಯೂ ಇಸ್ರೇಲ್ ಮಾತ್ರ ತನ್ನ ದಾಳಿ ಮುಂದುವರಿಸಿ ಟೀಕೆಗೆ ಗುರಿಯಾಗಿದೆ. ಈಗಲಾದರೂ ಇಸ್ರೇಲ್ ಸೈಲೆಂಟ್ ಆಗುತ್ತಾ? ಅನ್ನೋ ಕುತೂಹಲ ಮೂಡಿದೆ.
-
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Byadgi Red Chilli: ಬ್ಯಾಡಗಿ ಮಾರುಕಟ್ಟೆಗೆ 2.43 ಲಕ್ಷ ಮೆಣಸಿನಕಾಯಿ ಚೀಲ ಆವಕ, ಕ್ವಿಂಟಾಲ್ ದರವೆಷ್ಟಿದೆ? -
CBSE 10ನೇ ತರಗತಿ ಬೋರ್ಡ್ ಪರೀಕ್ಷೆ 2026: ಫಲಿತಾಂಶ ಯಾವಾಗ ಪ್ರಕಟ?, ಕಳೆದ ವರ್ಷಗಳ ಟ್ರೆಂಡ್ ಹೀಗಿದೆ -
Nora Fatehi: ಕನ್ನಡ ಹಾಡಿನಿಂದ ವಿವಾದಕ್ಕೆ ಸಿಲುಕಿರುವ ಬಾಲಿವುಡ್ನ ಡ್ಯಾನ್ಸ್ ಕ್ವೀನ್ ನೋರಾ ಫತೇಹಿ ಅಸಲಿ ಕಥೆ ಇದು -
March 18 Horoscope: ಧನ, ಆರೋಗ್ಯ, ಉದ್ಯೋಗದ ಭವಿಷ್ಯ -
Ugadi Wishes 2026: ಯುಗಾದಿ ಹಬ್ಬದ ಶುಭಾಶಯಗಳು, 35+ ಮೆಸೇಜ್, ಶುಭಾಶಯ ಮತ್ತು ಸ್ಟೇಟಸ್ ಸಾಲುಗಳು ಇಲ್ಲಿವೆ -
Bengaluru Rent: ಬೆಂಗಳೂರಲ್ಲಿ ನಾನ್ವೆಜ್ ಪ್ರಿಯರಿಗೆ ಶಾಕ್: ಮಾಂಸಾಹಾರಿಗಳಿಗೆ ಸಿಗ್ತಿಲ್ಲ ನಗರದಲ್ಲಿ ಬಾಡಿಗೆ ಮನೆ -
Anganwadi Workers: ಅಂಗನವಾಡಿ ಕಾರ್ಯಕರ್ತೆಯರ ವೇತನ ಪರಿಷ್ಕರಣೆ: ಲಕ್ಷ್ಮಿ ಹೆಬ್ಬಾಳ್ಕರ್ ಅಪ್ಡೇಟ್ಸ್ -
Karnataka Rain Alert: ರಾಜ್ಯದ ಹಲವೆಡೆ ಆಲಿಕಲ್ಲು ಮಳೆ, ಮಿನಿ ಕಾಶ್ಮೀರದಂತಾದ ರಸ್ತೆಗಳು; ಇನ್ನೆಷ್ಟು ದಿನ ವರುಣನ ಆರ್ಭಣ?












Click it and Unblock the Notifications