ಜೂನ್ 14ರಂದು ಇಸ್ರೇಲ್ ಹೊಸ ಸರ್ಕಾರದ ಭವಿಷ್ಯ ನಿರ್ಧಾರ
ಟೆಲ್ ಅವೀವ್, ಜೂನ್ 8: ಇಸ್ರೇಲ್ ಹಾಗೂ ಗಾಜಾ ನಡುವಿನ ಯುದ್ಧದ ವಾತಾವರಣ ತಿಳಿಯಾಗುತ್ತಿದ್ದಂತೆ ರಾಜಕೀಯ ಸಂಘರ್ಷ ಭುಗಿಲೆದ್ದಿದೆ. ಹಾಲಿ ಪ್ರಧಾನಿ ಬೆಂಜಮಿನ್ ನೆತನ್ಯಾಹು ಕೆಳಗಿಳಿಸಲು ವಿಪಕ್ಷಗಳು ಒಗ್ಗೂಡಿವೆ. ಹೊಸ ಮೈತ್ರಿ ಸರ್ಕಾರ ಸ್ಥಾಪನೆಯಾಗಿದ್ದು, ಜೂನ್ 14ರಂದು ವಿಶ್ವಾಸ ಮತ ಯಾಚಿಸಲಿದೆ.
''ಹೊಸ ಸರ್ಕಾರ ತನ್ನ ವಿಶ್ವಾಸಮತ ಸಾಬೀತು ಪಡಿಸಲು ದಿನಾಂಕ ನಿಗದಿಯಾಗಿದೆ. ಸಂಸತ್ ಅಧಿವೇಶನ ಕರೆಯಲಾಗಿದ್ದು, ಏಳು ದಿನಗಳಲ್ಲಿ ಹೊಸ ಸರ್ಕಾರ ಸ್ಥಾಪನೆ ಬಗ್ಗೆ ಸ್ಪಷ್ಟ ಚಿತ್ರಣ ಸಿಗಲಿದೆ'' ಎಂದು ಸಂಸತ್ ಸ್ಪೀಕರ್ ಯಾರಿನ್ ಲೆವಿನ್ ಹೇಳಿದ್ದಾರೆ.
ವಿಪಕ್ಷ ನಾಯಕ ಯಾಯಿರ್ ಲಾಪಿಡ್ ಅವರು ಹೊಸ ಮೈತ್ರಿಕೂಟ ಸಾಧಿಸಿದ್ದು, ಎಂಟು ಪಕ್ಷಗಳು ಒಕ್ಕೂಟದಲ್ಲಿವೆ. ಜೂನ್ 14ರಂದು ವಿಶ್ವಾಸ ಮತ ಗೆದ್ದರೆ ಹೊಸ ಇತಿಹಾಸ ನಿರ್ಮಾಣವಾಗಲಿದೆ. ಎರಡು ಎಡರಂಗ ಹಾಗೂ ಎರಡು ಕೇಂದ್ರಿಯ ಹಾಗೂ ಮೂರು ಬಲಪಂಥೀಯ ಚಿಂತನೆಯ ಪಕ್ಷಗಳ ಜೊತೆಗೆ ಅರಬ್ ಇಸ್ಲಾಮಿಕ್ ಮೂಲವಾದಿ ಪಕ್ಷ ಕೂಡಾ ಸರ್ಕಾರ ರಚನೆಯ ಕಸರತ್ತಿನಲ್ಲಿವೆ.
ವಿಪಕ್ಷಗಳ ಮುಖಂಡರಾಗಿರುವ ಲಾಪಿಡ್ ಹಾಗೂ ಬೆನ್ನೆಟ್ ಅವರು ಪಿಎಂ ಆಗಿ ದೇಶವನ್ನು ಹಂತ ಹಂತವಾಗಿ ಮುನ್ನಡೆಸುವ ಸಾಧ್ಯತೆಯಿದೆ.

ನೆತನ್ಯಾಹು ಭವಿಷ್ಯವೇನು?
ಇಸ್ರೇಲ್ ರಾಜಕೀಯ ಇತಿಹಾಸದಲ್ಲೇ ಮೊದಲ ಬಾರಿಗೆ ಹಾಲಿ ಪ್ರಧಾನಿಯೊಬ್ಬರ ವಿರುದ್ಧ $219,000 ಭ್ರಷ್ಟಾಚಾರದ ಪ್ರಕರಣ ಎದುರಿಸಿದ ಘಟನೆಗೆ ಇಸ್ರೇಲ್ ಸಾಕ್ಷಿಯಾಗಿತ್ತು.
12 ವರ್ಷಗಳ ಕಾಲ ಆಡಳಿತ ನಡೆಸಿರುವ ಬೆಂಜಮಿನ್ ನೇತನ್ಯಾಹು(71ವರ್ಷ) ವಿರುದ್ಧ ಭ್ರಷ್ಟಾಚಾರ, ಮೋಸ, ನಂಬಿಕೆ ದ್ರೋಹ ಪ್ರಕರಣಗಳು ದಾಖಲಾಗಿದೆ.
ಬೆನ್ನಿ ಗಾಂಟ್ಜ್ ಜೊತೆ 18 ತಿಂಗಳ ಅಧಿಕಾರ ಹಂಚಿಕೆ ಒಪ್ಪಂದ ಮಾಡಿಕೊಂಡಿರುವ ನೇತನ್ಯಾಹು ಸರ್ಕಾರ ಉಳಿಸಿಕೊಂಡಿದ್ದಲ್ಲದೆ, ರಾಜೀನಾಮೆ ನೀಡದೆ ವಿಚಾರಣೆ ಎದುರಿಸಿದ್ದರು.
-
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್












Click it and Unblock the Notifications