ಇಸ್ರೇಲ್ ನಲ್ಲಿ ಕೊವಿಡ್-19 ಲಸಿಕೆಯ ಮಾನವ ಪ್ರಯೋಗ ಶುರು
ಜೆರುಸಲೆಂ, ಅಕ್ಟೋಬರ್.26: ಕೊರೊನಾವೈರಸ್ ಸೋಂಕಿಗೆ ಲಸಿಕೆ ಕಂಡು ಹಿಡಿಯುವುದಕ್ಕೆ ಜಾಗತಿಕ ಮಟ್ಟದಲ್ಲಿ ಭಾರಿ ಪೈಪೋಟಿ ನಡೆಯುತ್ತಿದೆ. ಇಸ್ರೇಲ್ ನ ಜೀವಶಾಸ್ತ್ರ ಸಂಶೋಧನಾ ಸಂಸ್ಥೆಯು ಮುಂದಿನ ವಾರದಲ್ಲೇ ಕೊರೊನಾವೈರಸ್ ಲಸಿಕೆಗೆ ಸಂಬಂಧಿಸಿದಂತೆ ಮಾನವ ಪ್ರಯೋಗ ಆರಂಭಿಸುವುದಾಗಿ ತಿಳಿಸಿದೆ.
ನವೆಂಬರ್.01ರಂದು ಮೊದಲ ಹಂತದಲ್ಲಿ 80 ಜನರನ್ನು ಕೊರೊನಾವೈರಸ್ ಲಸಿಕೆಯ ವೈದ್ಯಕೀಯ ಪ್ರಯೋಗದಲ್ಲಿ ಬಳಸಿಕೊಳ್ಳಲಾಗುತ್ತದೆ. ಮುಂದಿನ ಹಂತಗಳಲ್ಲಿ ಮಾನವ ಪ್ರಯೋಗದ ಪ್ರಮಾಣವನ್ನು ಹೆಚ್ಚಿಸಲಾಗುತ್ತದೆ.
ಡಿಸೆಂಬರ್ ತಿಂಗಳಿನಲ್ಲಿ ಎರಡನೇ ಹಂತದ ಮಾನವ ಪ್ರಯೋಗ ನಡೆಯಲಿದ್ದು, ಅಂದು 960 ಜನರನ್ನು ಲಸಿಕೆ ಸಂಶೋಧನಾ ಪ್ರಯೋಗದಲ್ಲಿ ಬಳಸಿಕೊಳ್ಳಲಾಗುತ್ತದೆ. ಮೊದಲ ಎರಡು ಪ್ರಯೋಗದ ಫಲಿತಾಂಶವನ್ನು ನೋಡಿಕೊಂಡು 2021ರ ಏಪ್ರಿಲ್ ಅಥವಾ ಮೇ ತಿಂಗಳಿನಲ್ಲಿ 3ನೇ ಹಾಗೂ ಅಂತಿಮ ಮಾನವ ಪ್ರಯೋಗ ನಡೆಸಲಾಗುತ್ತದೆ. ಆಗ ಸರಿಸುಮಾರು 30000 ಜನರನ್ನು ವೈದ್ಯಕೀಯ ಪ್ರಯೋಗದಲ್ಲಿ ಬಳಸಿಕೊಳ್ಳಲಾಗುತ್ತದೆ ಎಂದು ಸಂಶೋಧನಾ ಸಂಸ್ಥೆಯು ತಿಳಿಸಿದೆ.

ಸಂಶೋಧಕರ ಮೇಲೆ ಪ್ರಬಲ ವಿಶ್ವಾಸ:
ಕೊರೊನಾವೈರಸ್ ಲಸಿಕೆ ಸಂಶೋಧನೆ ನಡೆಸುತ್ತಿರುವ ನಮ್ಮ ಸಂಶೋಧಕರ ಸಾಮರ್ಥ್ಯದ ಮೇಲೆ ತಮಗೆ ಅತೀವ ವಿಶ್ವಾಸವಿದೆ. ನಮ್ಮ ವೈದ್ಯಕೀಯ ಸಂಶೋಧಕರು ಸುರಕ್ಷಿತ ಹಾಗೂ ಪರಿಣಾಮಕಾರಿ ಲಸಿಕೆಯನ್ನು ನೀಡುತ್ತಾರೆ ಎಂಬ ನಂಬಿಕೆಯಿದೆ ಎಂದು ಸಂಸ್ಥೆಯ ನಿರ್ದೇಶಕ ಡಾ. ಸ್ಯಾಮ್ಯೂವಲ್ ಶಾಪಿರಾ ತಿಳಿಸಿದ್ದಾರೆ. ಅಲ್ಲದೇ 15 ಮಿಲಿಯನ್ ಡೋಸ್ ಲಸಿಕೆ ಉತ್ಪಾದನೆಯ ಗುರಿಯನ್ನು ಹಾಕಿಕೊಳ್ಳಲಾಗಿದೆ. ಪ್ರಾರಂಭಿಕ ಹಂತದಲ್ಲಿ ದೇಶದ ಪ್ರಜೆಗಳು ಹಾಗೂ ನೆರೆಹೊರೆಯ ಮಿತ್ರರಾಷ್ಟ್ರಗಳಿಗೆ ಲಸಿಕೆ ನೀಡುವ ಬಗ್ಗೆ ಹೇಳಿದರು.
40 ಲಸಿಕೆ ಮಾದರಿಗಳ ಮೇಲೆ ಪ್ರಯೋಗ:
ಇಸ್ರೇಲ್ ರಕ್ಷಣಾ ಸಚಿವಾಲಯದ ವ್ಯಾಪ್ತಿಗೆ ಸೇರಿರುವ ಸಂಸ್ಥೆಯು ದೇಶದ ಜನತೆಯಲ್ಲಿ ಹೊಸ ಆಶಾಕಿರಣವನ್ನು ಮೂಡಿಸಿದೆ. ದೇಶದ 40 ಲಸಿಕೆಯ ಮಾದರಿಗಳನ್ನು ವಿಶ್ವದಾದ್ಯಂತ ವೈದ್ಯಕೀಯ ಪ್ರಯೋಗಗಳಲ್ಲಿ ಬಳಸಿಕೊಳ್ಳಲಾಗುತ್ತಿದೆ. 90 ಲಕ್ಷ ಜನಸಂಖ್ಯೆ ಹೊಂದಿರುವ ರಾಷ್ಟ್ರದಲ್ಲಿ ಈವರೆಗೂ 3 ಲಕ್ಷ ಕೊವಿಡ್-19 ಸೋಂಕಿತ ಪ್ರಕರಣಗಳು ಪತ್ತೆಯಾಗಿವೆ. 2400 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ ಎಂದು ತಿಳಿದು ಬಂದಿದೆ.
-
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
ರಾಮಚಂದ್ರ ರಾವ್ ಪ್ರಕರಣ: 'ಎಐ' ಅಲ್ಲ ಅಸಲಿ ವಿಡಿಯೋ; ಎಫ್ಎಸ್ಎಲ್ ವರದಿಯಲ್ಲಿ ಬಯಲಾಯ್ತು ಸತ್ಯ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Anil Kumble: ವಿರಾಟ್ ಕೊಹ್ಲಿ-ಬೆಂಗಳೂರು ನಡುವಿನ ಅವಿನಾಭಾವ ಸಂಬಂಧದ ಬಗ್ಗೆ ಕನ್ನಡಿಗ ಅನಿಲ್ ಕುಂಬ್ಳೆ ಮನದಾಳದ ಮಾತು -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
March 19 Horoscope: ಈ ರಾಶಿಯವರಿಗೆ ಶುಭಸುದ್ದಿ, ಇತರರಿಗೆ ಎಚ್ಚರಿಕೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
SCR Railway Recruitment 2026: ಲಿಖಿತ ಪರೀಕ್ಷೆ ಇಲ್ಲದೇ ನೇಮಕಾತಿ, 2801 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ












Click it and Unblock the Notifications