Israel VS Lebanon: ಲೆಬನಾನ್ ನೆಲದಿಂದ ಇಸ್ರೇಲ್ ಸೇನೆ ವಾಪಸ್, ಶಾಂತಿ ಮಾತುಕತೆ ಯಶಸ್ವಿ
ಇಸ್ರೇಲ್ ಮತ್ತು ಮಧ್ಯಪ್ರಾಚ್ಯದ ಹಲವು ದೇಶಗಳ ನಡುವೆ ಯುದ್ಧ ಆರಂಭವಾಗಿ, ಸಖತ್ ಟೆನ್ಷನ್ ಶುರುವಾಗಿತ್ತು. ಈ ಬಡಿದಾಟ ನೋಡಿ 3ನೇ ಮಹಾಯುದ್ಧ ಇಲ್ಲಿಂದ ಶುರುವಾಗುತ್ತಾ? ಎಂಬ ಅನುಮಾನ ಕೂಡ ಮೂಡಿತ್ತು. ಮೊದಲಿಗೆ ಇಸ್ರೇಲ್ & ಗಾಜಾ ಪಟ್ಟಿ ನಡುವೆ ಭಾರಿ ದೊಡ್ಡ ಕದನ ಆರಂಭವಾಗಿ, ಮುಂದಿನ ದಿನಗಳಲ್ಲಿ ಪರಿಸ್ಥಿತಿ ಕೈಮೀರುವ ಮುನ್ಸೂಚನೆಯೂ ಸಿಕ್ಕಿತ್ತು. ಇದಾದ ನಂತರ ಲೆಬನಾನ್ ಜೊತೆಗೂ ಕಿರಿಕ್ ಶುರುವಾಗಿತ್ತು, ಆದರೆ ಈಗ ಇಸ್ರೇಲ್ ಒಂದೊಂದೇ ಕಿರಿಕ್ ಸರಿ ಮಾಡಿಕೊಂಡು ಬರುತ್ತಿದೆ.
ಗಾಜಾ ಪಟ್ಟಿ ಮೇಲೆ ಯುದ್ಧ ಸಾರಿದ ನಂತರ ಹಲವು ರೀತಿಯಲ್ಲಿ ಸಮಸ್ಯೆ ಎದುರಿಸಿರುವ ಇಸ್ರೇಲ್ ಮಿಲಿಟರಿ, ಕೆಲವು ದಿನಗಳ ಹಿಂದಷ್ಟೇ ಗಾಜಾ ಜೊತೆಗೆ ಒಪ್ಪಂದ ಮಾಡಿಕೊಂಡಿದೆ. ಹೀಗಾಗಿ ಗಾಜಾ ಪಟ್ಟಿ ಶಾಂತವಾಗಿತ್ತು. ಅದೇ ರೀತಿ ಇದೀಗ ಲೆಬನಾನ್ ನೆಲದಿಂದ ಕೂಡ, ಇಸ್ರೇಲ್ ತನ್ನ ಸೇನೆಯನ್ನ ವಾಪಸ್ ಕರೆದುಕೊಂಡು ಬರುತ್ತಿದೆ. ಹೀಗಾಗಿ ದಕ್ಷಿಣ ಲೆಬನಾನ್ ಭಾಗದಲ್ಲಿ ಎಲ್ಲವನ್ನೂ ಬಿಟ್ಟು ಓಡಿ ಹೋಗಿದ್ದ ಪ್ರಜೆಗಳು ಮತ್ತೆ ಮರಳಿ ತಮ್ಮ ತಮ್ಮ ಮನೆಗೆ ಬರುತ್ತಿದ್ದಾರೆ.

ಲೆಬನಾನ್ ಈಗ ಕೂಲ್.. ಕೂಲ್..
ಇಸ್ರೇಲ್ ಹೊಸ ಹುರುಪು ತುಂಬಿಕೊಂಡು ಇದೀಗ ಮುಂದೆ ನುಗ್ಗುತ್ತಿದೆ. ಅಮೆರಿಕಗೆ ನೂತನ ಅಧ್ಯಕ್ಷರಾಗಿ ಡೊನಾಲ್ಡ್ ಟ್ರಂಪ್ ಎಂಟ್ರಿ ಕೊಟ್ಟ ತಕ್ಷಣವೇ ಹೊಸ ಹುಮ್ಮಸ್ಸು ಮೂಡಿದೆ. ಈ ಎಲ್ಲಾ ಬೆಳವಣಿಗೆ ಗಮನಿಸಿದರೆ, ಮಧ್ಯಪ್ರಾಚ್ಯ ಇನ್ನಷ್ಟು ಸೈಲೆಂಟ್ ಆಗುವ ಲಕ್ಷಣ ಕೂಡ ಕಾಣುತ್ತಿದೆ. ಲೆಬನಾನ್ ನೆಲದಲ್ಲಿ ಇಸ್ರೇಲ್ ಸೇನೆ ಹಾಗೂ ಸ್ಥಳೀಯ ಸಂಘಟನೆಗಳ ನಡುವೆ ಘೋರ ಕಾಳಗ ನಡೆದಿತ್ತು. ಇದೀಗ ಹಿಂಸಾಚಾರಕ್ಕೆ ಬ್ರೇಕ್ ಬಿದ್ದಿದ್ದು, ಎಲ್ಲಾ ತಣ್ಣಗಾಗಿದೆ.
ಉಕ್ರೇನ್ ಯುದ್ಧಕ್ಕೂ ಬೀಳುತ್ತಾ ಬ್ರೇಕ್?
ಮಧ್ಯಪ್ರಾಚ್ಯ ಮಾತ್ರವಲ್ಲ ರಷ್ಯಾ & ಉಕ್ರೇನ್ ಯುದ್ಧಕ್ಕೂ ಬ್ರೇಕ್ ಹಾಕಲು ಟ್ರಂಪ್ ಪಡೆಯು ಪ್ಲಾನ್ ಮಾಡಿದೆ. ಹೀಗಾಗಿ ಯುರೋಪ್ ದೇಶಗಳಿಗೂ ಒಂದಷ್ಟು ನೆಮ್ಮದಿ ಸಿಗುವಂತಾಗಿದೆ. ಉಕ್ರೇನ್ ವಿರುದ್ಧ ರಷ್ಯಾ ಯುದ್ಧ ಸಾರಿ ಇನ್ನು 5 ದಿನಗಳಿಗೆ 3 ವರ್ಷ ತುಂಬಲಿದೆ. ಹೀಗಾಗಿ ಯುದ್ಧ ನಿಲ್ಲಿಸಬೇಕು ಎನ್ನುವ ಪ್ರಯತ್ನಗಳೂ ಆರಂಭವಾಗಿವೆ. ಜಾಗತಿಕ ಮಟ್ಟದಲ್ಲಿ ಇದೇ ಯುದ್ಧ ದೊಡ್ಡ ತಲೆನೋವು ತಂದಿದೆ.
ಇಂತಹ ಸಮಯದಲ್ಲಿ ಟ್ರಂಪ್ ಯುದ್ಧ ನಿಲ್ಲಿಸಿ ಅದರ ಕ್ರೆಡಿಟ್ ಪಡೆಯಲು ಕಾಯುತ್ತಿದ್ದಾರೆ. ತಾವು ಅಧಿಕಾರಕ್ಕೆ ಬಂದ 24 ಗಂಟೆ ಒಳಗಾಗಿ ಯುದ್ಧ ನಿಲ್ಲಿಸುತ್ತೇವೆ ಎಂದು ಹೇಳಿದ್ದರು. ಆದರೆ ಅದು ಸಾಧ್ಯವಾಗಿಲ್ಲ, ಹೀಗಾಗಿ ಟ್ರಂಪ್ ತಮ್ಮ ಎಲ್ಲಾ ಶಕ್ತಿ ಮೀರಿ ಪ್ರಯತ್ನ ಮಾಡುತ್ತಿದ್ದಾರೆ. ಟ್ರಂಪ್ ಅವರು ಪಕ್ಕಾ ಪ್ಲಾನ್ ಮಾಡಿ ರಷ್ಯಾ & ಉಕ್ರೇನ್ ಯುದ್ಧ ನಿಲ್ಲಿಸಲು ಮುಂದಾಗಿದ್ದಾರೆ.
-
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ












Click it and Unblock the Notifications