Israel-Lebanon War: ಇಸ್ರೇಲ್ ಸೇನೆಯಿಂದ ಮುಂದುವರಿದ ಅಟ್ಯಾಕ್, ಮತ್ತೊಬ್ಬ ಹಿಜ್ಬುಲ್ಲಾ ಲೀಡರ್ ಹತ್ಯೆ?
ಇಸ್ರೇಲ್ ಸೇನೆ ತನ್ನ ಶತ್ರುಗಳನ್ನ ಹುಡುಕಿ ಹುಡುಕಿ ಹತ್ಯೆ ಮಾಡುತ್ತಿದ್ದು, ಲೆಬನಾನ್ ಈಗ ನರಕವಾಗಿ ಬದಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಇದು ಒಂದು ಕಡೆಯಾದರೆ, ಇದೇ ಸಮಯದಲ್ಲಿ ಮತ್ತೊಂದು ಸ್ಫೋಟಕ ವಿಚಾರ ಕೂಡ ಬಯಲಾಗಿದೆ. ಹಿಜ್ಬುಲ್ಲಾ ಸಂಘಟನೆ ಮುಖಂಡರ ಜಾಗಗಳ ಬಗ್ಗೆ ಪಕ್ಕಾ ಮಾಹಿತಿ ಪಡೆದಿರುವ ಇಸ್ರೇಲ್ ಸೇನೆ ಆ ಜಾಗಗಳ ಮೇಲೆ ಅತ್ಯಂತ ಶಕ್ತಿಶಾಲಿ ಬಾಂಬ್ಗಳನ್ನ ಹಾಕುತ್ತಿದೆ. ಹಾಗಾದ್ರೆ ಇಸ್ರೇಲ್ ಈ ರೀತಿ ದಾಳಿ ನಡೆಸಿ, ಶತ್ರುಗಳನ್ನ ಕೆಣಕುತ್ತಿರುವ ಕಾರಣಕ್ಕೆ 3ನೇ ಮಹಾಯುದ್ಧ ಫಿಕ್ಸ್ ಆಯ್ತಾ? ಬನ್ನಿ ತಿಳಿಯೋಣ.
ಇಸ್ರೇಲ್ & ಹಿಜ್ಬುಲ್ಲಾ ನಡುವೆ ರಕ್ತ ಕಾಳಗ ಬಲು ಜೋರಾಗಿದ್ದು, ಯಾವ ಕ್ಷಣದಲ್ಲಿ ಏನು ಬೇಕಾದರೂ ಆಗಬಹುದು ಎಂಬ ಆತಂಕ ಕಾಡುತ್ತಿದೆ. ಅದರಲ್ಲೂ ದಕ್ಷಿಣ ಲೆಬನಾನ್ ಈಗ ಅಕ್ಷರಶಃ ಸ್ಮಶಾನದ ರೂಪ ಪಡೆಯುತ್ತಿದ್ದು, ಹೀಗಾಗಿ ಜನರು ಕೂಡ ಜೀವ ಉಳಿಸಿಕೊಳ್ಳಲು ದೇಶ ಬಿಟ್ಟು ಹೊರಗೆ ಹೋಗುವ ವಾತಾವರಣ ಸೃಷ್ಟಿಯಾಗಿದೆ. ಕೆಲವು ದಿನಗಳ ಹಿಂದಷ್ಟೇ ಹಿಜ್ಬುಲ್ಲಾ ಮುಖ್ಯಸ್ಥನ ಕಥೆ ಮುಗಿಸಿದ್ದ ಇಸ್ರೇಲ್ ಮಿಲಿಟರಿ ಆ ನಂತರ ಹಲವು ಮುಖಂಡರ ಹತ್ಯೆ ಮಾಡಿತ್ತು. ಇದೀಗ ಹಿಜ್ಬುಲ್ಲಾದ ಪ್ರಮುಖ ಕಮಾಂಡರ್ ಕೂಡ ಇಸ್ರೇಲ್ ಸೇನೆ ನಡೆಸಿದ ದಾಳಿಯಲ್ಲಿ ಜೀವ ಬಿಟ್ಟಿರುವುದು ಲೆಬನಾನ್ ದೇಶದಲ್ಲಿ ಸಂಚಲನ ಸೃಷ್ಟಿಸಿದೆ.

ಹಿಜ್ಬುಲ್ಲಾ ಪ್ರಧಾನ ಕಚೇರಿ ಮೇಲೆ...
ಅಷ್ಟಕ್ಕೂ ಹಿಜ್ಬುಲ್ಲಾ ಗುರಿಯಾಗಿಸಿ ಇಸ್ರೇಲ್ ನಡೆಸಿರುವ ದಾಳಿಯಲ್ಲಿ ಹಿಜ್ಬುಲ್ಲಾ ಕಮಾಂಡರ್ ಸುಹೇಲ್ ಹುಸೇನ್ ಹುಸೇನಿ ಕೂಡ ಜೀವ ಬಿಟ್ಟಿರುವುದು ಇದೀಗ ಗೊತ್ತಾಗಿದೆ. ಅಂದಹಾಗೆ ಈ ಘಟನೆ ನಡೆದಿರುವುದು ಲೆಬನಾನ್ ರಾಜಧಾನಿ ಬೈರೂತ್ ನಗರದಲ್ಲಿ. ಅಷ್ಟಕ್ಕೂ ಈ ಜಾಗವೇ ಹಿಜ್ಬುಲ್ಲಾ ಸಂಘಟನೆಯ ಪ್ರಧಾನ ಕಚೇರಿ ಇರುವ ಸ್ಥಳವಾಗಿದ್ದು, ಇದೀಗ ಹಿಜ್ಬುಲ್ಲಾ ಪ್ರಧಾನ ಕಚೇರಿಯಲ್ಲಿ ಪ್ರಮುಖ ಸ್ಥಾನವನ್ನು ಹೊಂದಿದ್ದ ಅಂದ್ರೆ ಕಮಾಂಡರ್ ಆಗಿದ್ದ ಹುಸೇನಿ ಹತ್ಯೆ ಮಾಡಿದ್ದೇವೆ ಎಂದಿದೆ ಇಸ್ರೇಲ್ ಸೇನೆ.
ಜಗತ್ತಿನಾದ್ಯಂತ ಹೊಸ ಟೆನ್ಷನ್ ಶುರು!
ಮತ್ತೊಂದು ಕಡೆ ಇನ್ನೊಂದು ಬದಿಯಲ್ಲಿ ಹಿಜ್ಬುಲ್ಲಾ ಮುಖಂಡರ ಪೈಕಿ ಹಲವರು ಈಗಾಗಲೇ ಲೆಬನಾನ್ ಬಿಟ್ಟು ಓಡಿ ಹೋಗಿದ್ದಾರೆ ಎನ್ನಲಾಗಿದೆ. ಹೀಗಿದ್ದರೂ ತನ್ನ ಕಾರ್ಯಾಚರಣೆಯ ತೀವ್ರತೆ ಹೆಚ್ಚು ಮಾಡಿರುವ ಇಸ್ರೇಲ್ ಮಿಲಿಟರಿ ಅಧಿಕಾರಿಗಳು, ಲೆಬನಾನ್ ಭಾಗದಲ್ಲಿರುವ ಹಿಜ್ಬುಲ್ಲಾ ಪ್ರದೇಶಗಳನ್ನ ಇದೀಗ ಟಾರ್ಗೆಟ್ ಮಾಡಿ ಅಟ್ಯಾಕ್ ಮಾಡುತ್ತಿದ್ದಾರೆ. ಈ ಮೂಲಕ ಇಬ್ಬರ ನಡುವಿನ ಈ ಜಗಳ ಇದೀಗ ಜಗತ್ತಿನಾದ್ಯಂತ ಹೊಸ ಟೆನ್ಷನ್ ಹುಟ್ಟು ಹಾಕುತ್ತಿದೆ. ಇದು ಲೆಬನಾನ್ ಕಥೆಯಾಗಿದ್ದರೆ, ಇನ್ನೊಂದು ಕಡೆ ಗಾಜಾ ಪಟ್ಟಿಯಲ್ಲಿ ಇಸ್ರೇಲ್ ಸೇನೆಯ ಸೈನಿಕರು ಹಮಾಸ್ ಗುರಿಯಾಗಿಸಿ ದಾಳಿ ಮುಂದುವರಿಸಿದ್ದಾರೆ. ಮಧ್ಯಪ್ರಾಚ್ಯದ ಈ ಕಿತ್ತಾಟದ ಕಾರಣಕ್ಕೆ ಇದೀಗ 3ನೇ ಮಹಾಯುದ್ಧದ ಭಯ ಸೃಷ್ಟಿಯಾಗಿದೆ.
-
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ












Click it and Unblock the Notifications