Israel vs Hezbollah: ಯುದ್ಧ ಶುರುವಾಗುವ ಮುನ್ಸೂಚನೆ! ದಾಳಿ, ಪ್ರತಿದಾಳಿ ಆರಂಭ
ಇಸ್ರೇಲ್ ಮತ್ತೊಂದು ಯುದ್ಧಕ್ಕೆ ಸಜ್ಜಾಗಿದೆ. ಲೆಬನಾನ್ನಲ್ಲಿ ಹಿಜ್ಬುಲ್ಲಾ ಕೆಲಸ ಮಾಡುವ ಕಡೆಗಳಲ್ಲಿ ಪೇಜರ್, ವಾಕಿ ಟಾಕಿಗಳು ಸ್ಪೋಟಗೊಂಡು 37 ಜನ ಮೃತಪಟ್ಟಿದ್ದು, 2900ಕ್ಕೂ ಹೆಚ್ಚು ಜನ ಗಾಯಗೊಂಡ ಬಳಿಕ, ಹಿಜ್ಬುಲ್ಲಾ ಸಂಘಟನೆ ಕೆರಳಿ ನಿಂತಿದೆ. ಈ ಕೃತ್ಯವನ್ನು ಮಾಡಿರುವುದು ಇಸ್ರೇಲ್ನ ಮೊಸಾದ್ ಎಂದು ಆರೋಪ ಮಾಡಿರುವ ಅದು, ಇಸ್ರೇಲ್ ಮೇಲೆ ವಾಯುದಾಳಿ ಆರಂಭಿಸಿದೆ.
ಇಸ್ರೇಲಿ ರಕ್ಷಣಾ ಪಡೆಗಳು (ಐಡಿಎಫ್) ಗುರುವಾರ ಲೆಬನಾನ್ನಲ್ಲಿ ಹಿಜ್ಬುಲ್ಲಾವನ್ನು ಗುರಿಯಾಗಿಸಿಕೊಂಡು ದಾಳಿ ಮಾಡುತ್ತಿದೆ ಎಂದು ಅದರ ನಾಯಕ ಹಸನ್ ನಸ್ರಲ್ಲಾ ಹಿಂಬಾಲಕರು ಮತ್ತು ಲೆಬನಾನಿನ ಜನರನ್ನು ಉದ್ದೇಶಿಸಿ ಮಾತನಾಡುವಾಗ ಆರೋಪಿಸಿದ್ದಾರೆ.

ಲೆಬನಾನ್ನಾದ್ಯಂತ ಹಿಜ್ಬುಲ್ಲಾ ಬಳಸಿದ ನೂರಾರು ಪೇಜರ್ಗಳು ಮತ್ತು ವಾಕಿ-ಟಾಕಿಗಳು ಸ್ಫೋಟಗೊಂಡು ಸಾವು ನೋವು ಸಂಭವಿಸಿದ ಬಳಿಕ ನಸ್ರಲ್ಲಾ ಹಿಜ್ಬುಲ್ಲಾ ಸದಸ್ಯರನ್ನು ಉದ್ದೇಶಿಸಿ ಮಾತನಾಡಿದ್ದಾರೆ. ಲೆಬನಾನ್ನ ರಾಜ್ಯ ಮಾಧ್ಯಮ ವರದಿ ಮಾಡಿರುವ ಪ್ರಕಾರ, ನಸ್ರುಲ್ಲಾ ಭಾಷಣ ಮಾಡುವ ಸಂದರ್ಭದಲ್ಲೇ ಇಸ್ರೇಲ್ ಯುದ್ಧವಿಮಾನಗಳು ಬೈರುತ್ ಮೇಲೆ ದಾಳಿ ಮಾಡಿವೆ ಎಂದುಹೇಳಿದೆ.
ಇಸ್ರೇಲಿ ರಕ್ಷಣಾ ಪಡೆಗಳು ಲೆಬನಾನ್ನಲ್ಲಿ ಹಿಜ್ಬುಲ್ಲಾದ ಭಯೋತ್ಪಾದಕ ಸಾಮರ್ಥ್ಯಗಳು ಮತ್ತು ಮೂಲಸೌಕರ್ಯಗಳನ್ನು ತಪ್ಪಿಸಲು ದಾಳಿ ಮಾಡುತ್ತಿದೆ. ಅವರ ಶಸ್ತ್ರಾಸ್ತ್ರಗಳ ಸಂಗ್ರಹಕಾರಗಳನ್ನು ಗುರಿಯಾಗಿಸಿ ದಾಳಿ ಮಾಡುತ್ತಿದೆ. ಅವರು ನಾಗರಿಕರನ್ನು ಗುರಾಣಿಯಂತೆ ಬಳಿಸಿಕೊಂಡಿದ್ದಾರೆ ಎಂದು ಇಸ್ರೇಲಿ ರಕ್ಷಣಾ ಪಡೆ ಹೇಳಿದೆ.
ಲೆಬನಾನ್ನಲ್ಲಿರುವ ಇಸ್ರೇಲಿಗಳು ಇಸ್ರೇಲ್ನ ಪ್ರದೇಶಗಳಿಗೆ ಹಿಂತಿರುಗಲು ಸಹಾಯ ಮಾಡುವುದಾಗಿ ಇಸ್ರೇಲ್ ರಕ್ಷಣಾ ಪಡೆ ಹೇಳಿದೆ. ನಿವಾಸಿಗಳು ತಮ್ಮ ಮನೆಗಳಿಗೆ ಮರಳಲು ಮತ್ತು ಯುದ್ಧದ ಗುರಿಗಳನ್ನು ಸಾಧಿಸಲು ಉತ್ತರ ಇಸ್ರೇಲ್ನ ರಕ್ಷಣೆ ಮಾಡಲು ಕೆಲಸ ಮಾಡುತ್ತಿದೆ ಎಂದು ಹೇಳಿದೆ.
ಆದರೆ, ಸ್ಥಳಾಂತರಗೊಂಡ ಇಸ್ರೇಲಿಗಳು ಎಂದಿಗೂ ಉತ್ತರ ಇಸ್ರೇಲ್ಗೆ ಹಿಂತಿರುಗಲು ಸಾಧ್ಯವಾಗುವುದಿಲ್ಲ ಹಿಜ್ಬುಲ್ಲಾ ಮುಖ್ಯಸ್ಥ ನಸ್ರುಲ್ಲಾಹ್ ಪ್ರತಿಜ್ಞೆ ಮಾಡಿದ್ದಾರೆ. ಮಿಲಿಟರಿ ಉಲ್ಬಣಗೊಳ್ಳುವಿಕೆ, ಯಾವುದೇ ಹತ್ಯೆಗಳು, ಸಂಪೂರ್ಣ ಯುದ್ಧವಾದರೂ ಕೂಡ ನಿವಾಸಿಗಳನ್ನು ಗಡಿಗೆ ಹಿಂತಿರುಗಿಸುವುದಿಲ್ಲ ಎಂದು ಎಚ್ಚರಿಕೆ ನೀಡಿದರು.
ಲೆಬನಾನ್ ಗಡಿಯಲ್ಲಿ ಹಿಜ್ಬುಲ್ಲಾ ದಾಳಿಗಳಿಂದ ತನ್ನ ಇಬ್ಬರು ಸೈನಿಕರು ಸಾವನ್ನಪ್ಪಿದ್ದಾರೆ ಎಂದು ಇಸ್ರೇಲ್ ಹೇಳಿದೆ. ಲೆಬನಾನ್ನಲ್ಲಿ ಪೇಜರ್, ವಾಕಿಟಾಕಿ ಸ್ಫೋಟಗೊಂಡಿದ್ದರಿಂದ ಹಿಜ್ಬುಲ್ಲಾಗೆ ಭಾರಿ ಹೊಡೆತ ಬಿದ್ದಿದೆ ಎನ್ನುವುದನ್ನು ಅವರ ನಾಯಕ ನಸ್ರುಲ್ಲಾಹ್ ಒಪ್ಪಿಕೊಂಡಿದ್ದಾರೆ.
ದಾಳಿಯನ್ನು ಹತ್ಯಾಕಾಂಡ ಮತ್ತು ಯುದ್ಧದ ಕೃತ್ಯ ಎಂದು ಕರೆದಿರುವ ಅವರು, ಇಸ್ರೇಲ್ ವಿರುದ್ಧ ಕಠಿಣ ಪ್ರತೀಕಾರ ತೀರಿಸಿಕೊಳ್ಳುವ ಎಚ್ಚರಿಕೆ ಕೊಟ್ಟಿದ್ದು, ನ್ಯಾಯಯುತ ಶಿಕ್ಷೆಯನ್ನು ಅನುಭವಿಸಬೇಕಾಗುತ್ತದೆ ಎಂದು ಹೇಳಿದ್ದಾರೆ.
ಹಿಜ್ಬುಲ್ಲಾ ಪ್ಯಾಲೆಸ್ತಿನ್ನ ಉಗ್ರಗಾಮಿ ಗುಂಪಾದ ಹಮಾಸ್ನ ಮಿತ್ರರಾಷ್ಟ್ರವಾಗಿದೆ. ಹಮಾಸ್ ಉಗ್ರರ ಮೇಲೆ ಇಸ್ರೇಲ್ ದಾಳಿ ಆರಂಭಿಸಿದ ಬಳಿಕ, ಗಾಜಾದಲ್ಲಿ ಯುದ್ಧ ನಡೆಸುತ್ತಿದೆ. ಹಮಾಸ್ಗೆ ಹಿಜ್ಬುಲ್ಲಾ ಬೆಂಬಲ ನೀಡಿದ್ದು ಇಸ್ರೇಲ್ ಕೋಪಕ್ಕೆ ಕಾರಣವಾಗಿದೆ. ಗಾಜಾದಲ್ಲಿ ಕದನ ವಿರಾಮ ಘೋಷಣೆಯಾಗುವವರೆಗೆ ಇಸ್ರೇಲ್ ವಿರುದ್ಧ ಹಿಜ್ಬುಲ್ಲಾದ ಹೋರಾಟವನ್ನು ಮುಂದುವರಿಸುವುದಾಗಿ ನಸ್ರಲ್ಲಾ ಪ್ರತಿಜ್ಞೆ ಮಾಡಿದ್ದಾರೆ. ಇದು ಯುದ್ಧದ ಭೀತಿಯನ್ನು ಮತ್ತಷ್ಟು ಹೆಚ್ಚಿಸಿದೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications