Israel: ಇಸ್ರೇಲ್ ಪ್ರಧಾನಿ ಗುಡುಗು.. ಅರೆಸ್ಟ್ ವಾರಂಟ್ ಬಗ್ಗೆ ಹೇಳಿದ್ದೇನು?
ಇಸ್ರೇಲ್ ಇದೀಗ ದೊಡ್ಡ ಸಂಕಷ್ಟಕ್ಕೆ ಸಿಲುಕಿ ನರಳುವಂತೆ ಆಗಿದೆ. ಗಾಜಾ, ಸಿರಿಯಾ ಮತ್ತು ಲೆಬನಾನ್ ವಿರುದ್ಧ ಯುದ್ಧ ಮಾಡುತ್ತಾ, ಇರಾನ್ ದೇಶವನ್ನೂ ಎದುರು ಹಾಕಿಕೊಂಡಿರುವ ಇಸ್ರೇಲ್ಗೆ ಅಂತಾರಾಷ್ಟ್ರೀಯ ಅಪರಾಧ ನ್ಯಾಯಾಲಯ ಅಂದ್ರೆ ಐಸಿಸಿ ದೊಡ್ಡ ಆಘಾತವನ್ನೇ ನೀಡಿದೆ. ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಮತ್ತು ಮಾಜಿ ರಕ್ಷಣಾ ಸಚಿವ ಯೋವ್ ಗ್ಯಾಲಂಟ್ ಬಂಧನದ ಭೀತಿಯಲ್ಲಿದ್ದಾರೆ. ಇಂತಹ ಪರಿಸ್ಥಿತಿಯಲ್ಲೇ ಇಸ್ರೇಲ್ ಪ್ರಧಾನಿ ಇದೀಗ ಗುಡುಗಿದ್ದಾರೆ!
ಇಸ್ರೇಲ್ ಸರಿಯಾಗಿ 1 ವರ್ಷದ ಹಿಂದೆ ಗಾಜಾ ಪಟ್ಟಿ ಮೇಲೆ ಯುದ್ಧ ಸಾರಿತ್ತು. ಆ ನಂತರ ಲೆಬನಾನ್ ನೆಲದಿಂದ ಹಿಜ್ಬುಲ್ಲಾ & ಸಿರಿಯಾದ ನೆಲದಿಂದ ಕೂಡ ಪ್ರತಿರೋಧ ಎದುರಾಗಿತ್ತು. ಹೀಗೆ ಇಸ್ರೇಲ್ & ಮಧ್ಯಪ್ರಾಚ್ಯ ಭಾಗದ ದೇಶಗಳ ನಡುವೆ ದೊಡ್ಡ ಗಲಾಟೆ ಆರಂಭವಾಗಿತ್ತು. ಘೋರ ಯುದ್ಧವೂ ಆರಂಭ ಆಗಿತ್ತು. ಈಗಾಗಲೇ ಲಕ್ಷಾಂತರ ಜನರು ಈ ಗಲಾಟೆ ಹಿನ್ನೆಲೆ ಜೀವ ಕಳೆದುಕೊಂಡಿದ್ದಾರೆ ಎಂಬ ಆರೋಪ ಇದೆ. ಈ ಆರೋಪಗಳ ನಡುವೆ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಗುಡುಗಿದ್ದಾರೆ!

ಇಸ್ರೇಲ್ ರಕ್ಷಣೆಗಾಗಿ ನಾವು ಕೈಗೊಂಡ...
ಅಂತಾರಾಷ್ಟ್ರೀಯ ಅಪರಾಧ ನ್ಯಾಯಾಲಯ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಮತ್ತೆ ಮಾಜಿ ರಕ್ಷಣಾ ಸಚಿವ ಯೋವ್ ಗ್ಯಾಲಂಟ್ ವಿರುದ್ಧ ಬಂಧನದ ವಾರೆಂಟ್ ಜಾರಿ ಮಾಡಿದ್ದ ಕಾರಣಕ್ಕೆ ಇಸ್ರೇಲ್ ಗರಂ ಆಗಿದೆ. ಖುದ್ದು ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ತಕ್ಕ ತಿರುಗೇಟು ನೀಡಿದ್ದಾರೆ.
ಇಸ್ರೇಲ್ ರಕ್ಷಣೆಗೆ ನಾವು ಕೈಗೊಂಡ ಕ್ರಮ ಸರಿ ಇದೆ ಎಂದಿದ್ದಾರೆ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು. ಅಲ್ಲದೆ ಈ ರೀತಿಯಾಗಿ ಗಾಜಾ ಪಟ್ಟಿಯ ಮೇಲೆ ನಡೆಸುತ್ತಿರುವ ಕಾರ್ಯಾಚರಣೆ ನಿಲ್ಲುವುದಿಲ್ಲ ಎಂಬ ಮುನ್ಸೂಚನೆ ಮಾತುಗಳನ್ನೂ ಆಡಿದ್ದಾರೆ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು.
ಯುದ್ಧ ಅಪರಾಧಕ್ಕೆ ಆಗುತ್ತಾ ಶಿಕ್ಷೆ?
ಅಂತಾರಾಷ್ಟ್ರೀಯ ಅಪರಾಧ ನ್ಯಾಯಾಲಯ ಅಂದ್ರೆ ಐಸಿಸಿ, ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಮತ್ತು ಮಾಜಿ ರಕ್ಷಣಾ ಸಚಿವ ಯೋವ್ ಗ್ಯಾಲಂಟ್ ವಿರುದ್ಧ ಗಂಭೀರ ಆರೋಪ ಹೊರಿಸಿತ್ತು. ಅಂದಹಾಗೆ ಯುದ್ಧದಲ್ಲಿ ನಡೆಸಿರುವ ಗಂಭೀರ ಅಪರಾಧ & ಇತರ ತಪ್ಪುಗಳಿಗೆ ಈ ರೀತಿ ಅರೆಸ್ಟ್ ವಾರಂಟ್ ಜಾರಿಗೊಳಿಸಿತ್ತು. ಇದೀಗ ಅರೆಸ್ಟ್ ವಾರಂಟ್ಗೆ ಉತ್ತರ ನೀಡಿದ ಇಸ್ರೇಲ್ ಪ್ರಧಾನಿ, ತಾವು ಇದಕ್ಕೆಲ್ಲಾ ಕೇರ್ ಮಾಡಲ್ಲ ಅಂತಿದ್ದಾರೆ.
ಒಟ್ನಲ್ಲಿ ಮಧ್ಯಪ್ರಾಚ್ಯ ಈಗ ಕೊತ ಕೊತ ಕುದಿಯುತ್ತಿದೆ. ಅಲ್ಲದೆ ಮುಂದಿನ ದಿನಗಳಲ್ಲಿ ಈ ಪರಿಸ್ಥಿತಿ ಇನ್ನಷ್ಟು ಗಂಭೀರ ಸ್ವರೂಪ ಪಡೆಯುವ ಸಾಧ್ಯತೆ ದಟ್ಟವಾಗಿದೆ. ಹೀಗಿದ್ದಾಗಲೇ, ಇಸ್ರೇಲ್ ಪ್ರಧಾನಿ ಕೂಡ ತಿರುಗೇಟು ನೀಡಿದ್ದಾರೆ. ಇಸ್ರೇಲ್ ಪ್ರಧಾನಿ ನೆತನ್ಯಾಹು ಮಾತಿಗೆ, ಅಂತಾರಾಷ್ಟ್ರೀಯ ಅಪರಾಧ ನ್ಯಾಯಾಲಯ ಏನು ಹೇಳುತ್ತೆ? ಅಂತಾ ಕಾದು ನೋಡಬೇಕು.
-
Gold Rate: ಆಭರಣ ಪ್ರಿಯರ ಗಮನಕ್ಕೆ; ಮಾರುಕಟ್ಟೆಯಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ ಗೊತ್ತಾ? ಇಲ್ಲಿದೆ ಮಾಹಿತಿ -
ಮಕ್ಕಳನ್ನ ಫ್ಯಾಕ್ಟರಿಯಂತೆ ಹೆರುತ್ತಾರೆ, ಪೋಷಿಸುವ ತಾಕತ್ತಿದ್ರೆ ಮಾತ್ರ ಮಕ್ಕಳು ಮಾಡ್ಕೊಳ್ಳಿ: ನಟಿ ವರಲಕ್ಷ್ಮಿ ಶರತ್ಕುಮಾರ್ -
Viral Video: ಶಾಲಾ ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿಯರ ಟವಲ್ ಡ್ಯಾನ್ಸ್: ಚರ್ಚೆ ಹುಟ್ಟುಹಾಕಿದ ವೈರಲ್ ವಿಡಿಯೋ -
Viral Video: ಪೋಷಕರಿಗೆ ಹೊಸ ಕಾರು ಗಿಫ್ಟ್ ಮಾಡಿದ ಹೆಣ್ಣುಮಕ್ಕಳು, ನೆಟ್ಟಿಗರ ಹೃದಯ ಗೆದ್ದ ಈ ವಿಡಿಯೋ -
Anushka Shetty Marriage: ಬೆಂಗಳೂರಿನ ಖ್ಯಾತ ಉದ್ಯಮಿ ಜೊತೆ ನಟಿ ಅನುಷ್ಕಾ ಶೆಟ್ಟಿ ಮದುವೆ, ಈ ವರ್ಷದಲ್ಲೇ ಮುಹೂರ್ತ: ವರದಿ -
1 ರೂಪಾಯಿಗೆ 1 ಲೀಟರ್ ಹಾಲು: ಫ್ಲಿಪ್ಕಾರ್ಟ್ ವಿರುದ್ಧ ಸಿಡಿದೆದ್ದ ಡಿ.ಕೆ. ಸುರೇಶ್; ಪ್ರಧಾನಿ ಮೋದಿಗೆ ದೂರು -
ಬಿಜೆಪಿಯಿಂದ ನಟ ವಿಜಯ್ಗೆ ಡಿಸಿಎಂ ಹುದ್ದೆ, 80 ಸೀಟುಗಳ ಆಫರ್; ತಮಿಳುನಾಡು ಚುನಾವಣೆಗೆ ಹೊಸ ಮೈತ್ರಿ ಲೆಕ್ಕಾಚಾರ -
Karnataka Weather: ಸಿಲಿಕಾನ್ ಸಿಟಿಯಲ್ಲಿ ಹೆಚ್ಚಿದ ತಾಪಮಾನ; ಕರಾವಳಿ, ಮಲೆನಾಡಿನಲ್ಲಿ ಇಂದು ಮಳೆಯಾಗುವ ಸಾಧ್ಯತೆ -
LPG New Rule: ಎಲ್ಪಿಜಿ ಹೊಸ ನಿಯಮ: ಪಿಎನ್ಜಿ ಸಂಪರ್ಕ ಇದ್ದರೆ ಇನ್ನು ಮುಂದೆ ಸಿಲಿಂಡರ್ ಸಿಗಲ್ಲ -
Government Employees: ಪಶ್ಚಿಮ ಬಂಗಾಳ ಸರ್ಕಾರಿ ನೌಕರರಿಗೆ ಸಿಎಂ ಮಮತಾ ಬ್ಯಾನರ್ಜಿ ಬಂಪರ್ ಕೊಡುಗೆ -
ರಾಜ್ಯದಲ್ಲಿ ಕಮರ್ಷಿಯಲ್ ಉದ್ದೇಶಕ್ಕೆ ಗೃಹಬಳಕೆ LPG ಸಿಲಿಂಡರ್ ಬಳಸಿದವರ ಮೇಲೆ ಅಧಿಕಾರಿಗಳ ಖಡಕ್ ದಾಳಿ -
ಬೆಂಗಳೂರು 2ನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ vs ಹೊಸೂರು ಏರ್ಪೋರ್ಟ್: ಯೋಜನೆ ಯಾವ ಹಂತದಲ್ಲಿದೆ












Click it and Unblock the Notifications