20 ವರ್ಷಗಳಲ್ಲಿ ವೆಸ್ಟ್ ಬ್ಯಾಂಕ್ನಲ್ಲಿ ಇಸ್ರೇಲ್ನ ಅತಿದೊಡ್ಡ ದಾಳಿ: 8 ಸಾವು
ಇಸ್ರೇಲ್ ಆಕ್ರಮಿತ ವೆಸ್ಟ್ ಬ್ಯಾಂಕ್ ನಗರದ ಜೆನಿನ್ನಲ್ಲಿ ನಡೆದ ವಾಯು ದಾಳಿಯಲ್ಲಿ ಎಂಟು ಪ್ಯಾಲೆಸ್ಟೀನಿಯನ್ನರು ಸಾವನ್ನಪ್ಪಿದ್ದು 50 ಮಂದಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಸಾವಿನ ಸಂಖ್ಯೆ ಹೆಚ್ಚಾಗಬಹುದು ಎಂದು ಪ್ಯಾಲೆಸ್ಟೀನ್ ಆರೋಗ್ಯ ಸಚಿವಾಲಯ ತಿಳಿಸಿದೆ.
ಇಸ್ರೇಲಿ ಮಿಲಿಟರಿ ಕಾರ್ಯಾಚರಣೆಯ ಸಮಯದಲ್ಲಿ ಈ ಘಟನೆ ನಡೆದಿದೆ. ಜೆನಿನ್ ನಗರ ಮತ್ತು ಅದರ ನಿರಾಶ್ರಿತರ ಶಿಬಿರಗಳು ಪ್ಯಾಲೇಸ್ಟಿನಿಯನ್ ಸಶಸ್ತ್ರ ಗುಂಪುಗಳ ಭದ್ರಕೋಟೆಯಾಗಿದೆ. ಉಗ್ರರ ಬಳಿ ಶಸ್ತ್ರಾಸ್ತ್ರಗಳು ಮತ್ತು ಸ್ಫೋಟಕಗಳ ದಾಸ್ತಾನು ಮಾಡುವ ಸ್ಥಳ ಇದಾಗಿದೆ.

ಹಮಾಸ್, ಇಸ್ಲಾಮಿಕ್ ಜಿಹಾದ್ ಮತ್ತು ಫತಾಹ್ ಸೇರಿದಂತೆ ಭಯೋತ್ಪಾದಕ ಗುಂಪುಗಳ ನೂರಾರು ಹೋರಾಟಗಾರರು 70 ವರ್ಷಗಳ ಹಿಂದೆ 1948 ರ ಪ್ಯಾಲೇಸ್ಟಿನಿಯನ್ ಯುದ್ಧದ ನಂತರ ನಿರಾಶ್ರಿತರಿಗಾಗಿ ಸ್ಥಾಪಿಸಲಾದ ಶಿಬಿರದಲ್ಲಿ ವಾಸಿಸುತ್ತಿದ್ದಾರೆ. ಹೀಗಾಗಿ ಇಸ್ರೇಲಿ ಸೇನೆ ಈ ಪ್ರದೇಶದಲ್ಲಿ ದಾಳಿ ಮಾಡಿದೆ.
ದಾಳಿಯ ಬಳಿಕ ಪ್ಯಾಲೇಸ್ಟಿನಿಯನ್ನರು ಇಸ್ರೇಲಿ ಸೈನಿಕರ ಮೇಲೆ ಕಲ್ಲುಗಳನ್ನು ಎಸೆದರು. ಹೀಗಾಗಿ ಇಲ್ಲಿ ವೈಮಾನಿಕ ದಾಳಿಯ ಜೊತೆಗೆ ದೈಹಿಕ ದಾಳಿಯೂ ನಡೆಯುತ್ತಿದೆ. ಜೆನಿನ್ ವಿರುದ್ಧ ಇಸ್ರೇಲಿ ಸೇನೆ ಬಹಿರಂಗ ಸಮರ ಆರಂಭಿಸಿದೆ ಎಂದು ಪ್ಯಾಲೇಸ್ಟಿನಿಯನ್ ವಿದೇಶಾಂಗ ಸಚಿವಾಲಯ ವರದಿ ಮಾಡಿದೆ.
ವರದಿಯ ಪ್ರಕಾರ, ಕಳೆದ 20 ವರ್ಷಗಳಲ್ಲಿ ಪಶ್ಚಿಮ ದಂಡೆಯಲ್ಲಿ ಇಸ್ರೇಲ್ ನಡೆಸಿದ ಅತಿ ದೊಡ್ಡ ದಾಳಿ ಇದಾಗಿದೆ. ಇದಕ್ಕೂ ಮೊದಲು 2002 ರಲ್ಲಿ, ವಾರಗಳ ಕಾಲ ನಡೆದ ಯುದ್ಧದಲ್ಲಿ 50 ಕ್ಕೂ ಹೆಚ್ಚು ಪ್ಯಾಲೇಸ್ಟಿನಿಯನ್ ಮತ್ತು 23 ಇಸ್ರೇಲಿ ಸೈನಿಕರು ಸಾವನ್ನಪ್ಪಿದರು. ಸುಮಾರು ಎರಡು ದಶಕಗಳ ನಂತರ, ಇದು ಮತ್ತೊಂದು ದೊಡ್ಡ ದಾಳಿಯಾಗಿದೆ.
-
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ -
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ -
ಆರ್ಸಿಬಿ ವಿರುದ್ಧದ ಪಂದ್ಯಕ್ಕೂ ಮುನ್ನ ಕೇವಲ 42 ಎಸೆತಗಳಲ್ಲಿ 94 ರನ್ ಸಿಡಿಸಿದ ಅಭಿಷೇಕ್ ಶರ್ಮಾ: ಭಾರೀ ವೈರಲ್












Click it and Unblock the Notifications