ಜಾನಕಿ ಹುಟ್ಟೂರಿಗೆ ಹೋಗದ ಮೋದಿ, ಬಂದ್ ಬಿಸಿ
ಕಠ್ಮಂಡು, ನ.21: ಜನಕರಾಜನ ಕುವರಿ, ಅಯೋಧ್ಯ ಶ್ರೀರಾಮಚಂದ್ರನ ಮಡದಿ ಜಾನಕಿಯ ಹುಟ್ಟೂರಿಗೆ ಭಾರತದ ಪ್ರಧಾನಿ ನರೇಂದ್ರ ಮೋದಿ ಭೇಟಿ ರದ್ದಾಗಿದ್ದನ್ನು ವಿರೋಧಿಸಿ ನೇಪಾಳದಲ್ಲಿ ಬಂದ್ ಆಚರಿಸಲಾಯಿತು. ಸುಮಾರು 22 ಪಕ್ಷಗಳು ಕರೆ ನೀಡಿದ್ದ ಬಂದ್ ನಿಂದಾಗಿ ಜನಜೀವನ ಅಸ್ತವ್ಯಸ್ತಗೊಂಡಿತ್ತು.
ಭಾರತದ ಪ್ರಧಾನಿ ನರೇಂದ್ರ ಮೋದಿ ಅವರ ನೇಪಾಳ ಪ್ರವಾಸ ಕಳೆದ ಆಗಸ್ಟ್ ತಿಂಗಳಿನಲ್ಲೇ ನಿಗದಿಯಾಗಿತ್ತು. ಹಿಂದೂಗಳು, ಬೌದ್ಧರು ಮೋದಿ ಆಗಮನವನ್ನು ಎದುರು ನೋಡುತ್ತಿದ್ದರು.ನೇಪಾಳದ ಜನಕ್ ಪುರ, ಮುಕ್ತಿನಾಥ್ ಹಾಗೂ ಲುಂಬಿನಿಗೆ ಮೋದಿ ಅವರು ಭೇಟಿ ನೀಡಬೇಕಿತ್ತು.

'ಭಾರತದ ಪ್ರಧಾನಿ ಮೋದಿ ಅವರ ನೇಪಾಳ ಪ್ರವಾಸ ರದ್ದಾಗಿದೆ' ಎಂದು ನೇಪಾಳ ಸರ್ಕಾರ ಗುರುವಾರ ಘೋಷಿಸಿತು. ಮೋದಿ ಅವರು ನವೆಂಬರ್ 26-27ರಂದು ಕಠ್ಮಂಡುವಿನಲ್ಲಿ ನಡೆಯಲಿರುವ ಸಾರ್ಕ್ ಸಮ್ಮೇಳನದಲ್ಲಿ ಮಾತ್ರ ಮೋದಿ ಅವರು ಭಾಗವಹಿಸುತ್ತಾರೆ ಎಂದು ನೇಪಾಳ ಸರ್ಕಾರ ಹೇಳಿತ್ತು.
ಅದರೆ, ನ.25ರಂದು ಮೋದಿ ಅವರು ಮೋದಿ ಅವರು ನಾಗರಿಕ ಸಭೆಯನ್ನು ಉದ್ದೇಶಿಸಿ ಮಾತನಾಡಬೇಕಿತ್ತು. ಕೊನೆ ಕ್ಷಣದಲ್ಲಿ ಈ ಕಾರ್ಯಕ್ರಮ ರದ್ದಾಗಿದ್ದರ ಬಗ್ಗೆ ಐತಿಹಾಸಿಕ ನಗರಿಯ ಜನತೆ ಬೇಸರ ವ್ಯಕ್ತಪಡಿಸಿದ್ದಾರೆ. ಕೆಲವರು ಆಕ್ರೋಶ ವ್ಯಕ್ತಪಡಿಸಿ ಪ್ರಧಾನಿ ಸುಶೀಲ್ ಕುಮಾರ್ ಕೊಯಿರಾಲ ಹಾಗೂ ಗೃಹಸಚಿವ ಬಾಂದ್ವೆ ಗೌತಮ್ ಅವರ ಪ್ರತಿಕೃತಿಯನ್ನು ಸುಟ್ಟರು ಎಂದು ಸ್ಥಳೀಯ ಪತ್ರಿಕೆ ಕಾಂತಿಪುರ್ ವರದಿ ಮಾಡಿದೆ.
ನೇಪಾಳದ ವಿದೇಶಾಂಗ ಸಚಿವ ಬಹದೂರ್ ಪಾಂಡೆ ಅವರು ಪ್ರತಿಕ್ರಿಯಿಸಿ, ಮೋದಿ ಅವರು ಕೆಲಸದ ಒತ್ತಡವಿರುವುದರಿಂದ ಸಾರ್ಕ್ ಸಮ್ಮೇಳನದಲ್ಲಿ ಮಾತ್ರ ಭಾಗವಹಿಸಲಿದ್ದಾರೆ ಎಂದಿದ್ದಾರೆ. ಅದರೆ, ಈ ಬಗ್ಗೆ ಅಧಿಕೃತ ಮಾಹಿತಿ ಸಿಕ್ಕಿಲ್ಲ ಎಂದು ನೇಪಾಳಕ್ಕೆ ಭಾರತದ ರಾಯಭಾರಿಯಾಗಿರುವ ರಂಜೀರ್ ರೇ ಸ್ಪಷ್ಟಪಡಿಸಿದ್ದಾರೆ.
ಆದರೆ, ಈ ಎಲ್ಲಾ ಗೊಂದಲಗಳ ನಡುವೆ ನೇಪಾಳ-ಭಾರತ ಗಡಿಭಾಗದಲ್ಲಿ ಮೋದಿ ಆಗಮನಕ್ಕೆ ಸ್ವಾಗತ ಕೋರುವ ಕಟೌಟ್ ಗಳು ರಾರಾಜಿಸುತ್ತಿದ್ದವು. ಗೃಹ ಕಾರ್ಯದರ್ಶಿ ಸೂರ್ಯ ಪ್ರಸಾದ್ ಸಿಲ್ವಾಲ್ ಅವರು ಜನಕ್ ಪುರಕ್ಕೆ ಆಗಮಿಸಿ ಭದ್ರತಾ ಪರಿಶೀಲನೆ ನಡೆಸಿರುವುದರಿಂದ ಮೋದಿ ಅವರ ಆಗಮನದ ನಿರೀಕ್ಷೆ ಇನ್ನೂ ಜನರ ಮನಸ್ಸಿನಲ್ಲಿದೆ. (ಐಎಎನ್ಎಸ್)
-
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD












Click it and Unblock the Notifications