Japan earthquake: ಜಪಾನ್ನಲ್ಲಿ 6.6 ತೀವ್ರತೆಯ ಭೂಕಂಪ: ಕರಾವಳಿ ಪ್ರದೇಶದಲ್ಲಿ ಸುನಾಮಿ ಎಚ್ಚರಿಕೆ!
ಭಾರತದಲ್ಲಿ ಮಾತ್ರವಲ್ಲದೆ ಜಪಾನ್ನಲ್ಲೂ 6.6 ತೀವ್ರತೆಯ ಭೂಕಂಪ ಸಂಭವಿಸಿದೆ. ಬಳಿಕ ಪೂರ್ವ ಜಪಾನ್ ಕರಾವಳಿ ಪ್ರದೇಶದಲ್ಲಿ ಸುನಾಮಿ ಎಚ್ಚರಿಕೆ ನೀಡಲಾಗಿದೆ.
ಜಪಾನ್ನ ಪೂರ್ವ ಕರಾವಳಿಯಲ್ಲಿ 6.6 ತೀವ್ರತೆಯ ಭೂಕಂಪ 10 ಕಿಲೋಮೀಟರ್ ಆಳದಲ್ಲಿ ಸಂಭವಿಸಿದೆ. ಸುನಾಮಿ ಎಚ್ಚರಿಕೆಯು ಮುಂದಿನ ಒಂದು ಗಂಟೆಯಲ್ಲಿ ಕೋಮಾ ತೀರಕ್ಕೆ ಬರುವ ನಿರೀಕ್ಷೆಯಿದೆ ಎಂದು ಹೇಳಲಾಗಿದೆ. 1 ಮೀಟರ್ ವರೆಗೆ ಎತ್ತರದ ಅಲೆಗಳು ಅಪ್ಪಳಿಸುವ ಸಾಧ್ಯತೆ ಇದೆ.

ತೊರಿಶಿಮಾ ದ್ವೀಪದ ಬಳಿ ಬೆಳಗ್ಗೆ 11 ಗಂಟೆಗೆ ಭೂಕಂಪ ಸಂಭವಿಸಿದ ಹಿನ್ನೆಲೆಯಲ್ಲಿ ಸುನಾಮಿ ಎಚ್ಚರಿಕೆ ನೀಡಲಾಗಿದೆ. ಭೂಕಂಪದ ಕೇಂದ್ರಬಿಂದುವು ಜಪಾನ್ನ ಟೋಕಿಯೊದಿಂದ ದಕ್ಷಿಣಕ್ಕೆ 550 ಕಿ.ಮೀ ದೂರದಲ್ಲಿ ಪೆಸಿಫಿಕ್ ಸಾಗರದಲ್ಲಿದೆ. ಇದರಿಂದಾಗಿ ದೇಶದ ಪೂರ್ವ ಕರಾವಳಿಯ ಇಝು ಪೆನಿನ್ಸುಲಾದಲ್ಲಿರುವ ದ್ವೀಪಗಳಿಗೆ 1 ಮೀಟರ್ ಎತ್ತರದ ಸುನಾಮಿ ಎಚ್ಚರಿಕೆಯನ್ನು ನೀಡಲಾಗಿದೆ.
ಪೆಸಿಫಿಕ್ ಕರಾವಳಿಯ ಪ್ರದೇಶಗಳು 20 ಸೆಂಟಿಮೀಟರ್ಗಳವರೆಗೆ ಸಮುದ್ರ ಮಟ್ಟದಲ್ಲಿ ಸ್ವಲ್ಪ ಬದಲಾವಣೆಗಳನ್ನು ಕಾಣಬಹುದು ಎನ್ನಲಾಗಿದೆ.
ಭಾರತದಲ್ಲಿ ಹಲವೆಡೆ ಭೂಕಂಪ:-
ಗುರುವಾರ ಮುಂಜಾನೆ ಉತ್ತರಾಖಂಡದ ಉತ್ತರಕಾಶಿಯಲ್ಲಿ 3.2 ತೀವ್ರತೆಯ ಭೂಕಂಪ ಸಂಭವಿಸಿದ್ದು ಜನ ಆತಂಕಗೊಂಡಿದ್ದಾರೆ. ಇಂದು ಬೆಳಗಿನ ಜಾವ 3:49ಕ್ಕೆ 5 ಕಿಮೀ ಆಳದಲ್ಲಿ ಭೂಮಿ ಕಂಪಿಸಿದೆ ಎಂದು ಎಕ್ಸ್ (ಹಿಂದಿನ ಟ್ವಿಟರ್) ಪೋಸ್ಟ್ನಲ್ಲಿ ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ (ಎನ್ಸಿಎಸ್) ಮಾಹಿತಿ ಹಂಚಿಕೊಂಡಿದೆ.
ರಾಜ್ಯದಲ್ಲಿ 48 ಗಂಟೆಗಳಿಗಿಂತ ಕಡಿಮೆ ಅವಧಿಯಲ್ಲಿ ದಾಖಲಾದ ಎರಡನೇ ಭೂಕಂಪ ಇದಾಗಿದೆ. ಮಂಗಳವಾರ ಪಿಥೋರಗಢದಲ್ಲಿ 4.3 ತೀವ್ರತೆಯ ಭೂಕಂಪ ಸಂಭವಿಸಿತ್ತು. ಅದೇ ದಿನ ನೇಪಾಳದಲ್ಲಿ ಸರಣಿ ನಾಲ್ಕು ಭೂಕಂಪಗಳು ಸಂಭವಿಸಿದೆ. ಅತ್ಯಂತ ಶಕ್ತಿಶಾಲಿ ಭೂಕಂಪದ ಕೇಂದ್ರಬಿಂದು ಉತ್ತರಾಖಂಡದ ಜೋಶಿಮಠದ ಆಗ್ನೇಯಕ್ಕೆ 206 ಕಿಮೀ ಮತ್ತು ಉತ್ತರ ಪ್ರದೇಶದ ರಾಜಧಾನಿ ಲಕ್ನೋದಿಂದ 284 ಕಿಮೀ ಉತ್ತರದಲ್ಲಿದೆ.
ದೆಹಲಿ, ಪಂಜಾಬ್, ಹರಿಯಾಣ ಮತ್ತು ಉತ್ತರ ಪ್ರದೇಶ ಸೇರಿದಂತೆ ಉತ್ತರ ಭಾರತದ ಹಲವು ಭಾಗಗಳಲ್ಲಿ ಈ ಭೂಕಂಪದ ಕಂಪನದ ಅನುಭವವಾಗಿದೆ.
ಎನ್ಸಿಎಸ್ನ ಅಧಿಕಾರಿಯ ಪ್ರಕಾರ, ಮಂಗಳವಾರ ನೇಪಾಳದ ಭೂಕಂಪಗಳ ಅನುಕ್ರಮ ಹೀಗಿದೆ- ಪಶ್ಚಿಮ ನೇಪಾಳದಲ್ಲಿ ಮಧ್ಯಾಹ್ನ 2:25ರ ಸುಮಾರಿಗೆ 10 ಕಿಲೋಮೀಟರ್ ಆಳದಲ್ಲಿ 4.6 ತೀವ್ರತೆಯ ಭೂಕಂಪ ಆಯಿತು. ಇದರ ನಂತರ ಮಧ್ಯಾಹ್ನ 2:51 ಕ್ಕೆ 6.2 ತೀವ್ರತೆಯ ಮತ್ತೊಂದು ಕಂಪನ ಸಂಭವಿಸಿದೆ. ತರುವಾಯ, ಅದೇ ಪ್ರದೇಶದಲ್ಲಿ 3.6 ಮತ್ತು 3.1 ತೀವ್ರತೆಯ ಎರಡು ಕಂಪನಗಳು ಕ್ರಮವಾಗಿ 15 ಕಿಮೀ ಮತ್ತು 10 ಕಿಮೀ ಆಳದಲ್ಲಿ ಮಧ್ಯಾಹ್ನ 3:06 ಮತ್ತು 3:19 ಕ್ಕೆ ಸಂಭವಿಸಿದವು.
-
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು












Click it and Unblock the Notifications