Japan earthquake: ಜಪಾನ್ನಲ್ಲಿ 6.6 ತೀವ್ರತೆಯ ಭೂಕಂಪ: ಕರಾವಳಿ ಪ್ರದೇಶದಲ್ಲಿ ಸುನಾಮಿ ಎಚ್ಚರಿಕೆ!
ಭಾರತದಲ್ಲಿ ಮಾತ್ರವಲ್ಲದೆ ಜಪಾನ್ನಲ್ಲೂ 6.6 ತೀವ್ರತೆಯ ಭೂಕಂಪ ಸಂಭವಿಸಿದೆ. ಬಳಿಕ ಪೂರ್ವ ಜಪಾನ್ ಕರಾವಳಿ ಪ್ರದೇಶದಲ್ಲಿ ಸುನಾಮಿ ಎಚ್ಚರಿಕೆ ನೀಡಲಾಗಿದೆ.
ಜಪಾನ್ನ ಪೂರ್ವ ಕರಾವಳಿಯಲ್ಲಿ 6.6 ತೀವ್ರತೆಯ ಭೂಕಂಪ 10 ಕಿಲೋಮೀಟರ್ ಆಳದಲ್ಲಿ ಸಂಭವಿಸಿದೆ. ಸುನಾಮಿ ಎಚ್ಚರಿಕೆಯು ಮುಂದಿನ ಒಂದು ಗಂಟೆಯಲ್ಲಿ ಕೋಮಾ ತೀರಕ್ಕೆ ಬರುವ ನಿರೀಕ್ಷೆಯಿದೆ ಎಂದು ಹೇಳಲಾಗಿದೆ. 1 ಮೀಟರ್ ವರೆಗೆ ಎತ್ತರದ ಅಲೆಗಳು ಅಪ್ಪಳಿಸುವ ಸಾಧ್ಯತೆ ಇದೆ.

ತೊರಿಶಿಮಾ ದ್ವೀಪದ ಬಳಿ ಬೆಳಗ್ಗೆ 11 ಗಂಟೆಗೆ ಭೂಕಂಪ ಸಂಭವಿಸಿದ ಹಿನ್ನೆಲೆಯಲ್ಲಿ ಸುನಾಮಿ ಎಚ್ಚರಿಕೆ ನೀಡಲಾಗಿದೆ. ಭೂಕಂಪದ ಕೇಂದ್ರಬಿಂದುವು ಜಪಾನ್ನ ಟೋಕಿಯೊದಿಂದ ದಕ್ಷಿಣಕ್ಕೆ 550 ಕಿ.ಮೀ ದೂರದಲ್ಲಿ ಪೆಸಿಫಿಕ್ ಸಾಗರದಲ್ಲಿದೆ. ಇದರಿಂದಾಗಿ ದೇಶದ ಪೂರ್ವ ಕರಾವಳಿಯ ಇಝು ಪೆನಿನ್ಸುಲಾದಲ್ಲಿರುವ ದ್ವೀಪಗಳಿಗೆ 1 ಮೀಟರ್ ಎತ್ತರದ ಸುನಾಮಿ ಎಚ್ಚರಿಕೆಯನ್ನು ನೀಡಲಾಗಿದೆ.
ಪೆಸಿಫಿಕ್ ಕರಾವಳಿಯ ಪ್ರದೇಶಗಳು 20 ಸೆಂಟಿಮೀಟರ್ಗಳವರೆಗೆ ಸಮುದ್ರ ಮಟ್ಟದಲ್ಲಿ ಸ್ವಲ್ಪ ಬದಲಾವಣೆಗಳನ್ನು ಕಾಣಬಹುದು ಎನ್ನಲಾಗಿದೆ.
ಭಾರತದಲ್ಲಿ ಹಲವೆಡೆ ಭೂಕಂಪ:-
ಗುರುವಾರ ಮುಂಜಾನೆ ಉತ್ತರಾಖಂಡದ ಉತ್ತರಕಾಶಿಯಲ್ಲಿ 3.2 ತೀವ್ರತೆಯ ಭೂಕಂಪ ಸಂಭವಿಸಿದ್ದು ಜನ ಆತಂಕಗೊಂಡಿದ್ದಾರೆ. ಇಂದು ಬೆಳಗಿನ ಜಾವ 3:49ಕ್ಕೆ 5 ಕಿಮೀ ಆಳದಲ್ಲಿ ಭೂಮಿ ಕಂಪಿಸಿದೆ ಎಂದು ಎಕ್ಸ್ (ಹಿಂದಿನ ಟ್ವಿಟರ್) ಪೋಸ್ಟ್ನಲ್ಲಿ ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ (ಎನ್ಸಿಎಸ್) ಮಾಹಿತಿ ಹಂಚಿಕೊಂಡಿದೆ.
ರಾಜ್ಯದಲ್ಲಿ 48 ಗಂಟೆಗಳಿಗಿಂತ ಕಡಿಮೆ ಅವಧಿಯಲ್ಲಿ ದಾಖಲಾದ ಎರಡನೇ ಭೂಕಂಪ ಇದಾಗಿದೆ. ಮಂಗಳವಾರ ಪಿಥೋರಗಢದಲ್ಲಿ 4.3 ತೀವ್ರತೆಯ ಭೂಕಂಪ ಸಂಭವಿಸಿತ್ತು. ಅದೇ ದಿನ ನೇಪಾಳದಲ್ಲಿ ಸರಣಿ ನಾಲ್ಕು ಭೂಕಂಪಗಳು ಸಂಭವಿಸಿದೆ. ಅತ್ಯಂತ ಶಕ್ತಿಶಾಲಿ ಭೂಕಂಪದ ಕೇಂದ್ರಬಿಂದು ಉತ್ತರಾಖಂಡದ ಜೋಶಿಮಠದ ಆಗ್ನೇಯಕ್ಕೆ 206 ಕಿಮೀ ಮತ್ತು ಉತ್ತರ ಪ್ರದೇಶದ ರಾಜಧಾನಿ ಲಕ್ನೋದಿಂದ 284 ಕಿಮೀ ಉತ್ತರದಲ್ಲಿದೆ.
ದೆಹಲಿ, ಪಂಜಾಬ್, ಹರಿಯಾಣ ಮತ್ತು ಉತ್ತರ ಪ್ರದೇಶ ಸೇರಿದಂತೆ ಉತ್ತರ ಭಾರತದ ಹಲವು ಭಾಗಗಳಲ್ಲಿ ಈ ಭೂಕಂಪದ ಕಂಪನದ ಅನುಭವವಾಗಿದೆ.
ಎನ್ಸಿಎಸ್ನ ಅಧಿಕಾರಿಯ ಪ್ರಕಾರ, ಮಂಗಳವಾರ ನೇಪಾಳದ ಭೂಕಂಪಗಳ ಅನುಕ್ರಮ ಹೀಗಿದೆ- ಪಶ್ಚಿಮ ನೇಪಾಳದಲ್ಲಿ ಮಧ್ಯಾಹ್ನ 2:25ರ ಸುಮಾರಿಗೆ 10 ಕಿಲೋಮೀಟರ್ ಆಳದಲ್ಲಿ 4.6 ತೀವ್ರತೆಯ ಭೂಕಂಪ ಆಯಿತು. ಇದರ ನಂತರ ಮಧ್ಯಾಹ್ನ 2:51 ಕ್ಕೆ 6.2 ತೀವ್ರತೆಯ ಮತ್ತೊಂದು ಕಂಪನ ಸಂಭವಿಸಿದೆ. ತರುವಾಯ, ಅದೇ ಪ್ರದೇಶದಲ್ಲಿ 3.6 ಮತ್ತು 3.1 ತೀವ್ರತೆಯ ಎರಡು ಕಂಪನಗಳು ಕ್ರಮವಾಗಿ 15 ಕಿಮೀ ಮತ್ತು 10 ಕಿಮೀ ಆಳದಲ್ಲಿ ಮಧ್ಯಾಹ್ನ 3:06 ಮತ್ತು 3:19 ಕ್ಕೆ ಸಂಭವಿಸಿದವು.
-
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ












Click it and Unblock the Notifications