ಜಪಾನ್ ಪ್ರಧಾನಿ ಫ್ಯೂಮಿಯೊ ಕಿಶಿದಾ ಭಾಷಣದ ವೇಳೆ ಸ್ಫೋಟ, ಆರೋಪಿ ಬಂಧನ
ಟೋಕಿಯೊ, ಏಪ್ರಿಲ್. 15: ಜಪಾನ್ ಪ್ರಧಾನಿ ಫ್ಯೂಮಿಯೊ ಕಿಶಿದಾ ಭಾಷಣ ಮಾಡುತ್ತಿದ್ದ ವೇಳೆ ಜಪಾನ್ನ ವಕಯಾಮಾ ನಗರದಲ್ಲಿ ಸ್ಫೋಟ ಸಂಭವಿಸಿರುವ ಘಟನೆ ವರದಿಯಾಗಿದೆ. ನಗರದ ಹೊರಾಂಗಣದಲ್ಲಿ ಭಾಷಣ ಮಾಡುತ್ತಿದ್ದ ವೇಳೆ, ಸ್ಮೋಕ್ ಬಾಂಬ್ ತರಹದ ವಸ್ತುವನ್ನು ಎಸೆಯಲಾಗಿದೆ ಎಂದು ಜಪಾನಿನ ಮಾಧ್ಯಮಗಳು ವರದಿ ಮಾಡಿವೆ.
ಸ್ಫೋಟದ ಶಬ್ದ ಕೇಳಿದ ನಂತರ ಜಪಾನ್ ಪ್ರಧಾನಿ ಫ್ಯೂಮಿಯೊ ಕಿಶಿದಾ ಅವರನ್ನು ವಕಯಾಮಾ ಬಂದರಿನಿಂದ ಸ್ಥಳಾಂತರಿಸಲಾಗಿದೆ. ಘಟನೆಯಲ್ಲಿ ಅವರಿಗೆ ಯಾವುದೇ ಅಪಾಯ ಸಂಭವಿಸಿಲ್ಲ. ಕ್ಯೋಡೋ ಸುದ್ದಿ ಸಂಸ್ಥೆ ಸೇರಿದಂತೆ ಹಲವಾರು ಮಾಧ್ಯಮಗಳ ವರದಿಗಳು ಸ್ಪಷ್ಟವಾಗಿ "ಸ್ಮೋಕ್ ಬಾಂಬ್" ಅನ್ನು ಎಸೆಯಲಾಗಿದೆ ಎಂದು ಹೇಳಿವೆ .ಆದರೆ ಘಟನಾ ಸ್ಥಳದಲ್ಲಿ ಗಾಯಾಳುಗಳು ಅಥವಾ ಹಾನಿಯ ಯಾವುದೇ ಲಕ್ಷಣಗಳು ಕಂಡುಬಂದಿಲ್ಲ.

ಪಶ್ಚಿಮ ಜಪಾನ್ನ ವಕಯಾಮಾದಲ್ಲಿ ಪ್ರಧಾನಿ ಫ್ಯೂಮಿಯೊ ಕಿಶಿದಾ ಭಾಷಣ ಮಾಡಲು ಬಂದಿದ್ದ ಸ್ಥಳದಲ್ಲಿ ಒಬ್ಬ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ರಾಷ್ಟ್ರೀಯ ಪ್ರಸಾರಕ ಎನ್ಎಚ್ಕೆ ಮತ್ತು ಇತರ ಮಾಧ್ಯಮಗಳು ವರದಿ ಮಾಡಿವೆ. ಘಟನಾ ಸ್ಥಳದಿಂದ ಪೊಲಿಸರು ಒಬ್ಬ ವ್ಯಕ್ತಿಯನ್ನು ಬಂಧಿಸಿದ ದೃಶ್ಯಗಳನ್ನು ಮಾಧ್ಯಮಗಳು ಪ್ರಸಾರ ಮಾಡಿವೆ. ಆದರೆ, ಸ್ಥಳೀಯ ಪೊಲೀಸರು ಬಂಧನದ ಬಗ್ಗೆ ಪ್ರತಿಕ್ರಿಯಿಸಲು ನಿರಾಕರಿಸಿದ್ದಾರೆ.
ಉತ್ತರ ಸಪ್ಪೊರೊ ಮತ್ತು ನಾಗಾನೊದ ಕರುಯಿಜಾವಾ ನಗರದಲ್ಲಿ ಮತ್ತು ಹಿರೋಷಿಮಾದಲ್ಲಿ ಜಿ7 ದೇಶಗಳ ಸಚಿವರ ಸಮಾವೇಶವನ್ನು ಜಪಾನ್ ಮೇ ತಿಂಗಳಲ್ಲಿ ಆಯೋಜಿಸಿದೆ. ಸಮಾವೇಶಕ್ಕೆ ಒಂದು ತಿಂಗಳಷ್ಟೇ ಬಾಕಿ ಇರುವ ಸಂದರ್ಭದಲ್ಲಿ ಘಟನೆ ಸಂಭವಿಸಿದೆ.
ಇನ್ನು, ಜುಲೈ 2022 ರಲ್ಲಿ ಪ್ರಚಾರ ಕಾರ್ಯಕ್ರಮವೊಂದರಲ್ಲಿ ಮಾತನಾಡುವಾಗ ಗುಂಡಿಕ್ಕಿ ಕೊಲ್ಲಲ್ಪಟ್ಟ ಮಾಜಿ ಪ್ರಧಾನಿ ಶಿಂಜೊ ಅಬೆ ಅವರ ಹತ್ಯೆಯ ನಂತರ ಜಪಾನ್ ರಾಜಕಾರಣಿಗಳಿಗೆ ಭದ್ರತೆಯನ್ನು ಹೆಚ್ಚಿಸಿದೆ.
"ಪ್ರಜಾಪ್ರಭುತ್ವದ ಅಡಿಪಾಯವನ್ನು ರೂಪಿಸುವ ಚುನಾವಣಾ ಪ್ರಚಾರದ ಮಧ್ಯೆ ಈ ರೀತಿಯ ಘಟನೆ ನಡೆದಿರುವುದು ವಿಷಾದನೀಯ. ಇದು ಅಕ್ಷಮ್ಯ ಅಪರಾಧ" ಎಂದು ಆಡಳಿತಾರೂಢ ಲಿಬರಲ್ ಡೆಮಾಕ್ರಟಿಕ್ ಪಕ್ಷದ (ಎಲ್ಡಿಪಿ) ಚುನಾವಣಾ ತಂತ್ರದ ಅಧ್ಯಕ್ಷ ಹಿರೋಶಿ ಮೊರಿಯಾಮಾ ತಿಳಿಸಿದ್ದಾರೆ.
-
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು












Click it and Unblock the Notifications