ಜಪಾನ್ ಪ್ರಧಾನಿ ರಾಜೀನಾಮೆ: ಅನಾರೋಗ್ಯವೇ ಕಾರಣ?
ಜಪಾನ್, ಆಗಸ್ಟ್ 23: ಜಪಾನ್ ಪ್ರಧಾನಿ ಆರೋಗ್ಯದಲ್ಲಿ ಭಾರಿ ಏರುಪೇರಾಗಿದ್ದು, ಶಿಂಜೋ ಅಬೆ ತಮ್ಮ ಪ್ರಧಾನಿ ಹುದ್ದೆಗೆ ರಾಜೀನಾಮೆ ನೀಡಲಿದ್ದಾರೆ ಎಂದು ಜಪಾನ್ನ ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.
Recommended Video
ಇತ್ತೀಚೆಗಷ್ಟೇ ಅತ್ಯಂತ ದೀರ್ಘ ಅವಧಿಯವರೆಗೂ ಜಪಾನ್ ಪ್ರಧಾನಿ ಹುದ್ದೆ ನಿಭಾಯಿಸಿದ ಕೀರ್ತಿಗಳಿಸಿದ್ದ ಶಿಂಜೋ ಅಬೆ ಕುರಿತು ದಿಢೀರ್ ಆಘಾತಕಾರಿ ಸುದ್ದಿ ಹೊರ ಬಿದ್ದಿದೆ. 2012-20ರ ಮಧ್ಯೆ ನಿರಂತರವಾಗಿ ಪ್ರಧಾನಿ ಹುದ್ದೆಯಲ್ಲಿರುವ ಶಿಂಜೋ ಅಬೆ ಜಪಾನ್ ಅಭಿವೃದ್ಧಿ ಹಾಗೂ ಅಂತಾರಾಷ್ಟ್ರೀಯ ಸಂಬಂಧ ವೃದ್ಧಿಗೆ ಶ್ರಮಿಸಿದ್ದಾರೆ. ಶಿಂಜೋ ಅಬೆ 2 ವರ್ಷಗಳಿಂದ 'ಅಲ್ಸರೇಟಿವ್ ಕೊಲೈಟಿಸ್' ಎಂಬ ಕಾಯಿಲೆಯಿಂದ ಬಳಲುತ್ತಿದ್ದಾರೆ. ಈ ಸೋಂಕು ಬಂದರೆ ಜೀರ್ಣಾಂಗವ್ಯೂಹದಲ್ಲಿ ಉರಿಯೂತ ಕಾಣಿಸಿಕೊಳ್ಳುತ್ತದೆ. ಇದೇ ಕಾರಣಕ್ಕೆ ಪದೇ ಪದೆ ಚಿಕಿತ್ಸೆಗೆ ತೆರಳುತ್ತಿದ್ದಾರೆ.
ಇದರಿಂದ ಸರ್ಕಾರದ ಕೆಲಸಗಳಿಗೂ ಅಡ್ಡಿಯಾಗುತ್ತಿದ್ದು, ಶಿಂಜೋ ಅಬೆ ರಾಜೀನಾಮೆ ನೀಡುತ್ತಿದ್ದಾರೆ ಎಂಬ ಮಾಹಿತಿ ಹರಿದಾಡುತ್ತಿದೆ. ಆದರೆ ಶಿಂಜೋ ಅಬೆ ಅಧಿಕಾರದ ಅವಧಿ 2021 ಸೆಪ್ಟೆಂಬರ್ಗೆ ಕೊನೆಗೊಳ್ಳಲಿದ್ದು, ಇನ್ನೂ 1 ವರ್ಷ ಬಾಕಿ ಇರುವಾಗಲೇ ಅಬೆ ರಾಜೀನಾಮೆ ನೀಡ್ತಾರಾ ಎಂಬುದು ಕುತೂಹಲ ಕೆರಳಿಸಿದೆ.

ಸುದ್ದಿಗೋಷ್ಠಿ ಕರೆದಿರುವ ಶಿಂಜೋ ಅಬೆ
ಭಾರತೀಯ ಕಾಲಮಾನದ ಪ್ರಕಾರ ಇಂದು ಸಂಜೆ 5 ಗಂಟೆಗೆ ಶಿಂಜೋ ಅಬೆ ಸುದ್ದಿಗೋಷ್ಠಿ ನಡೆಸಲಿದ್ದಾರೆ. ಈ ಸುದ್ದಿಗೋಷ್ಠಿಯಲ್ಲಿ ಶಿಂಜೋ ಅಬೆ ಪ್ರಧಾನಿ ಹುದ್ದೆಗೆ ರಾಜೀನಾಮೆ ನೀಡುವ ಬಗ್ಗೆ ಘೋಷಣೆ ಹೊರಡಿಸುವ ಸಾಧ್ಯತೆ ಇದೆ ಎನ್ನಲಾಗಿದೆ. ಪ್ರಧಾನಿಯಾಗಿ ಅಬೆ ಉತ್ತಮ ಆಡಳಿತ ನೀಡಿದ್ದರು, ಆರ್ಥಿಕ ಸಂಕಷ್ಟದಿಂದ ಬಳಲುತ್ತಿರುವ ಜಪಾನ್ನಲ್ಲಿ ಹಲವು ಸುಧಾರಣೆಗಳನ್ನು ತಂದಿದ್ದರು. ಇನ್ನು ಕೊರೊನಾ ವೈರಸ್ ನಿಯಂತ್ರಣದಲ್ಲಿ ಶಿಂಜೋ ಅಬೆ ತೋರಿದ ಚಾಕಚಕ್ಯತೆ ಇಡೀ ಜಗತ್ತಿನ ಗಮನ ಸೆಳೆದಿತ್ತು.
ಭಾರತದ ಪಾಲಿಗೆ ಬುಲೆಟ್ ಹೀರೋ!
ಶಿಂಜೋ ಅಬೆ ಕಾಲದಲ್ಲಿ ಭಾರತ ಹಾಗೂ ಜಪಾನ್ನ ಸಂಬಂಧ ಸಾಕಷ್ಟು ವೃದ್ಧಿಸಿದೆ. ಹಲವು ವಿಚಾರದಲ್ಲಿ ಜಪಾನ್ ಭಾರತಕ್ಕೆ ಸಹಕಾರ ನೀಡುತ್ತಿದೆ. ಭಾರತದ ಭವಿಷ್ಯ ಬದಲಿಸಬಲ್ಲ ಅಹಮದಾಬಾದ್ ಹಾಗೂ ಮುಂಬೈ ಬುಲೆಟ್ ರೈಲು ಯೋಜನೆಗೆ ಒಪ್ಪಂದ ನಡೆದಿದ್ದು ಕೂಡ ಅಬೆ ಕಾಲದಲ್ಲೇ. ಬುಲೆಟ್ ರೈಲು ಯೋಜನೆಗೆ ಜಪಾನ್ ತಂತ್ರಜ್ಞಾನದ ಜೊತೆಗೆ ಹಣದ ಸಹಾಯವನ್ನೂ ಮಾಡುತ್ತಿದೆ. ಇಬ್ಬರಿಗೂ ಸಮಾನ ಶತ್ರುವಾಗಿರುವ ಚೀನಾ ವಿರುದ್ಧದ ಹೋರಾಟದಲ್ಲೂ ಜಪಾನ್ ಭಾರತಕ್ಕೆ ಬೆಂಬಲವಾಗಿ ನಿಂತಿದೆ. ಇದೆಲ್ಲವನ್ನೂ ಅಬೆ ಯಶಸ್ವಿಯಾಗಿ ನಿಭಾಯಿಸಿದ್ದಾರೆ.
-
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ












Click it and Unblock the Notifications