ಭಯೋತ್ಪಾದನೆ: ಪಾಕಿಸ್ತಾನಕ್ಕೆ ಖಡಕ್ ಎಚ್ಚರಿಕೆ ಕೊಟ್ಟ ಪ್ರಧಾನಿ ಮೋದಿ, ಜೋ ಬೈಡನ್
ವಾಷಿಂಗ್ಟನ್, ಜೂನ್ 23: ದೆಹಲಿಯನ್ನು ಗುರಿಯಾಗಿಸಿಕೊಂಡಿರುವ ಭಯೋತ್ಪಾದಕರನ್ನು ಸದೆಬಡಿಯುವಂತೆ ಪ್ರಧಾನಿ ನರೇಂದ್ರ ಮೋದಿ, ಅಮೆರಿಕ ಅಧ್ಯಕ್ಷ ಜೋ ಬೈಡನ್ ಪಾಕಿಸ್ತಾನಕ್ಕೆ ಖಡಕ್ ಎಚ್ಚರಿಕೆ ಕೊಟ್ಟಿದ್ದಾರೆ.
ಪ್ರಧಾನಿ ನರೇಂದ್ರ ಅಮೆರಿಕ ಪ್ರವಾಸ ಕಾರ್ಯಕ್ರಮದಲ್ಲಿ ಗುರುವಾರ ವಾಷಿಂಗ್ಟನ್ ರಾಜ್ಯಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಜಂಟಿ ಹೇಳಿಕೆ ಬಿಡುಗಡೆ ಮಾಡಿದ್ದು, ಪಾಕಿಸ್ತಾನ ಮೂಲದ ಭಯೋತ್ಪಾದಕ ಗುಂಪುಗಳಾದ ಲಷ್ಕರ್-ಎ-ತೊಯ್ಬಾ ಮತ್ತು ಜೈಶ್-ಎ-ಮೊಹಮ್ಮದ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಪಾಕಿಸ್ತಾನಕ್ಕೆ ಮೋದಿ ಮತ್ತು ಬೈಡನ್ ಎಚ್ಚರಿಕೆ ಕೊಟ್ಟಿದ್ದಾರೆ.

"ಪಾಕಿಸ್ತಾನ ಗಡಿಯಾಚೆ ಭಯೋತ್ಪಾದನೆ, ಭಯೋತ್ಪಾದಕರ ರಕ್ಷಣೆ ಮಾಡುತ್ತಿರುವುದನ್ನು ಉಭಯ ನಾಯಕರು ಬಲವಾಗಿ ಖಂಡಿಸಿದ್ದಾರೆ. ಪಾಕಿಸ್ತಾನ ತನ್ನ ನಿಯಂತ್ರಣದಲ್ಲಿರುವ ಯಾವುದೇ ಪ್ರದೇಶದಲ್ಲಿ ಭಯೋತ್ಪಾದಕ ಚಟುವಟಿಕೆ ನಡೆಯದಂತೆ ಕ್ರಮ ತೆಗೆದುಕೊಳ್ಳಬೇಕು" ಎಂದು ಹೇಳಿಕೆ ನೀಡಲಾಗಿದೆ.
ಮುಂಬೈ ದಾಳಿ: ಅಪರಾಧಿಗಳನ್ನು ಶಿಕ್ಷಿಸಲು ಒತ್ತಾಯ
2008ರಲ್ಲಿ ಮುಂಬೈನ ತಾಜ್ ಹೋಟೆಲ್ ಮೇಲಿನ ಭಯೋತ್ಪಾದಕ ದಾಳಿಯ ಹಿಂದಿನ ಅಪರಾಧಿಗಳನ್ನು ಹಿಡಿದು, ಕಠಿಣವಾಗಿ ಶಿಕ್ಷೆ ನೀಡಬೇಕು ಎಂದು ಉಭಯ ನಾಯಕರು ಪಾಕಿಸ್ತಾನಕ್ಕೆ ಒತ್ತಾಯಿಸಿದ್ದಾರೆ.
ಪಾಕಿಸ್ತಾನದ ವಿರುದ್ಧ ಭಾರತ ಈಗಾಗಲೇ ಕಠಿಣ ನಿಲುವು ತೆಗೆದುಕೊಂಡಿದೆ. ಭಾರತದ ನೆಲದಲ್ಲಿ ಭಯೋತ್ಪಾದನೆಗೆ ಜಾಗವಿಲ್ಲ ಎನ್ನುವ ಖಡಕ್ ಸಂದೇಶವನ್ನು ನೀಡಿದೆ. ಪಾಕಿಸ್ತಾನದ ದಾಳಿಗೆ ಪ್ರತಿಯಾಗಿ 2019ರಲ್ಲಿ ಭಾರತ ವೈಮಾನಿಕ ದಾಳಿ ಮಾಡುವ ಮೂಲಕ ಪಾಕ್ ಸೊಕ್ಕಡಗಿಸಿತ್ತು.
ಯುನೈಟೆಡ್ ಸ್ಟೇಟ್ಸ್ ಐತಿಹಾಸಿಕವಾಗಿ ಪಾಕಿಸ್ತಾನದ ನಿಕಟ ಪಾಲುದಾರನಾಗಿದೆ ಆದರೆ ಅಫ್ಘಾನಿಸ್ತಾನದ ತಾಲಿಬಾನ್ ಮತ್ತು ಇಸ್ಲಾಮಾಬಾದ್ನ ಪ್ರಬಲ ಮಿಲಿಟರಿ ಮತ್ತು ಗುಪ್ತಚರ ಉಪಕರಣಗಳ ನಡುವಿನ ಸಂಬಂಧಗಳ ಮೇಲೆ ಅಮೆರಿಕ ತಾಳ್ಮೆ ಕಳೆದುಕೊಳ್ಳುತ್ತಿದೆ.
2021 ರಲ್ಲಿ ಅಫ್ಘಾನಿಸ್ತಾನದಿಂದ ಯುಎಸ್ ಸೇನೆಯನ್ನು ಹಿಂತೆಗೆದುಕೊಂಡಾಗಿನಿಂದ ಬೈಡನ್ ಆಡಳಿತವು ಭಾರತದೊಂದಿಗಿನ ಸಂಬಂಧವನ್ನು ಗಟ್ಟಿಯಾಗಿಸಲು, ಪಾಕಿಸ್ತಾನವನ್ನು ದೂರ ಇಟ್ಟಿದೆ. ಇದು ಪಾಕಿಸ್ತಾನಕ್ಕೆ ದೊಡ್ಡ ಮುಖಭಂಗವಾದಂತಾಗಿದೆ.
ಭಾರತ ಮತ್ತು ಯುನೈಟೆಡ್ ಸ್ಟೇಟ್ಸ್, "ಮ್ಯಾನ್ಮಾರ್ನಲ್ಲಿ ಹದಗೆಡುತ್ತಿರುವ ಪರಿಸ್ಥಿತಿಯ ಬಗ್ಗೆ ಕಳವಳವನ್ನು ವ್ಯಕ್ತಪಡಿಸಿವೆ, ಅಲ್ಲಿನ ಮಿಲಿಟರಿಯು 2021 ರಲ್ಲಿ ಹೊಸ ನಾಗರಿಕ ಸರ್ಕಾರವನ್ನು ಹೊರಹಾಕಿತು."
"ನಿರಂಕುಶವಾಗಿ ಬಂಧನಕ್ಕೊಳಗಾದ ಎಲ್ಲರ ಬಿಡುಗಡೆ, ರಚನಾತ್ಮಕ ಮಾತುಕತೆಯ ಸ್ಥಾಪನೆ ಮತ್ತು ಮ್ಯಾನ್ಮಾರ್ ಅನ್ನು ಒಳಗೊಳ್ಳುವ ಫೆಡರಲ್ ಪ್ರಜಾಪ್ರಭುತ್ವ ವ್ಯವಸ್ಥೆಗೆ ಪರಿವರ್ತಿಸಲು" ಎರಡು ದೇಶಗಳು ಕರೆ ನೀಡಿವೆ.
ಯುನೈಟೆಡ್ ಸ್ಟೇಟ್ಸ್ ಮ್ಯಾನ್ಮಾರ್ನ ಜುಂಟಾದ ಮೇಲೆ ನಿರ್ಬಂಧಗಳನ್ನು ಹೇರಿದೆ, ಆದರೆ ಭಾರತ ತುಲನಾತ್ಮಕವಾಗಿ ಸೌಹಾರ್ದಯುತ ಸಂಬಂಧವನ್ನು ಉಳಿಸಿಕೊಂಡಿದೆ, ಮ್ಯಾನ್ಮಾರ್ ಈಶಾನ್ಯ ಭಾರತದ ಅಸ್ಥಿರ ಭಾಗಗಳನ್ನು ಗಡಿಯಾಗಿ ಹೊಂದಿದೆ.
ಮೋದಿ ಅಮೆರಿಕ ಭೇಟಿ ಸಫಲವಾಗಿದೆ
ಪ್ರಧಾನಿ ನರೇಂದ್ರ ಮೋದಿ ಅಮೆರಿಕ ಭೇಟಿ ಯಶಸ್ವಿಯಾಗಿದೆ ಎಂದು ಅಮರಿಕ ಅಧ್ಯಕ್ಷ ಜೋ ಬೈಡನ್ ಹೇಳಿದ್ದಾರೆ. ಈ ಭೇಟಿಯ ಮೂಲಕ ಭಾರತ-ಅಮೆರಿಕ ನಡುವಿನ ಸಂಬಂಧ ಮತ್ತಷ್ಟು ಗಟ್ಟಿಯಾಗಿದೆ. ರಕ್ಷಣೆ, ಸಂಪರ್ಕ, ಹಣಕಾಸು ಕ್ಷೇತ್ರದಲ್ಲಿ ಪರಸ್ಪರ ಸಹಕಾರ ಹೆಚ್ಚಾಗಲಿದೆ. ಸೆಮಿಕಂಡಕ್ಟರ್ ಉತ್ಪಾದನಾ ಕ್ಷೇತ್ರದಲ್ಲಿ ಹೆಚ್ಚಿನ ಅವಕಾಶ ದೊರೆಯಲಿದೆ. ಬಾಹ್ಯಾಕಾಶ ಕ್ಷೇತ್ರದಲ್ಲಿ ಕೂಡ ಉಭಯ ರಾಷ್ಟ್ರಗಳ ನಡುವೆ ಒಪ್ಪಂದ ಏರ್ಪಟ್ಟಿದೆ. ಹೊಸದಾಗಿ 2 ಬಿಲಿಯನ್ ಡಾಲರ್ಗೂ ಹೆಚ್ಚು ಹೂಡಿಕೆ ಮಾಡಲಾಗಿದೆ ಎಂದು ಹೇಳಿದ್ದಾರೆ.
-
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ












Click it and Unblock the Notifications