ಕೊರೊನಾ ಬಗ್ಗೆ ವರದಿಗೆಂದು ತೆರಳಿದ್ದ ಚೀನಾದ ವರದಿಗಾರ ನಾಪತ್ತೆ
ವುಹಾನ್, ಫೆಬ್ರವರಿ 10: ಮಾರಣಾಂತಿಕ ಕೊರೊನಾ ವೈರಸ್ ಬಗ್ಗೆ ವರದಿಗೆ ತೆರಳಿದ್ದ ಚೀನಾ ವರದಿಗಾರರೊಬ್ಬರು ನಾಪತ್ತೆಯಾಗಿದ್ದಾರೆ.
ಕಳೆದ ಸಾಕಷ್ಟು ವಾರಗಳಿಂದ ಚೆನ್ ಕಿಯೂಷಿ, ಫಾಂಗ್ ಬಿನ್ ಎಂಬ ಇಬ್ಬರು ಪತ್ರಕರ್ತರು ಕೊರೊನಾ ವೈರಸ್ ಕುರಿತ ವರದಿ ಮಾಡುತ್ತಿದ್ದರು.
ಅಷ್ಟೇ ಅಲ್ಲದೆ ಇಡೀ ವಿಶ್ವಕ್ಕೆ ಕೊರೊನಾ ವೈರಸ್ ಬಗ್ಗೆ ಸುದ್ದಿ ಕೊಟ್ಟವರೇ ಅವರು. ಅವರು ತಮ್ಮ ಮೊಬೈಲ್ ಫೋನ್ಗಳ ಮೂಲಕ ಅಲ್ಲಿನ ಪರಿಸ್ಥಿತಿಯನ್ನು ಸೆರೆಹಿಡಿದು ಟ್ವಿಟ್ಟರ್, ಶೇರ್ಚಾಟ್, ಯೂಟ್ಯೂಬ್ಗಳಲ್ಲಿ ವಿಡಿಯೋಗಳನ್ನು ಶೇರ್ ಮಾಡಿದ್ದರು.

ಆ ಇಬ್ಬರಲ್ಲಿ ಈಗ ಓರ್ವ ವರದಿಗಾರ ಕಾಣೆಯಾಗಿದ್ದಾರೆ. ಅವರು ಕಳೆದ 20 ಗಂಟೆಗಳಿಂದ ಯಾರ ಸಂಪರ್ಕಕ್ಕೂ ಸಿಗುತ್ತಿಲ್ಲ.ಅಪಾರ್ಟ್ಮೆಂಟ್ಗಳಲ್ಲಿ ರೋಗಿಗಳನ್ನು ಕೂಡಿಹಾಕಿರುವ ವಿಡಿಯೋವನ್ನು ಅವರು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದರು. ಇದೀಗ ವರದಿಗಾರನಿಗೂ ರೋಗ ತಗುಲಿದೆಯೇ ಎನ್ನುವ ಕುರಿತು ಊಹಾಪೋಹಗಳು ಎದ್ದಿವೆ.
ವೈರಸ್ ಕುರಿತು ವರದಿ ಮಾಡಿ ಇಡೀ ವಿಶ್ವಕ್ಕೆ ಅಲ್ಲಿನ ಪರಿಸ್ಥಿತಿ ರವಾನಿಸಿದ್ದಕ್ಕಾಗಿ ಅವರನ್ನು ಸರ್ಕಾರ ಬಂಧಿಸಿದೆ ಎನ್ನುವ ಮಾತುಗಳೂ ಕೇಳಿಬರುತ್ತಿದೆ.
ಅಲ್ಲಿನ ಪರಿಸ್ಥಿತಿಯನ್ನು ಬಗ್ಗೆ ಬೇರೆ ಯಾವುದೇ ದೇಶಗಳಿಗೆ ಮಾಹಿತಿ ರವಾನೆಯಾಗದಂತೆ ನೋಡಿಕೊಳ್ಳುತ್ತಿದೆ. ಕ್ಯಾಮರಾಗಳು ಬ್ಯಾನ್ ಆಗಿವೆ. ಇದರ ಮಧ್ಯೆ ಮೊಬೈಲ್ನಲ್ಲಿ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಚೇನ್ ಅಪ್ಲೋಡ್ ಮಾಡಿದ್ದರು.
ಈ ರೀತಿಯ ವಿಡಿಯೋಗಳನ್ನು ಅಪ್ಲೋಡ್ ಮಾಡುವುದರಿಂದ ಜನರು ಇನ್ನಷ್ಟು ಗಾಬರಿಗೊಳ್ಳುತ್ತಾರೆ. ಇದಕ್ಕೆ ಯಾವುದೇ ಅವಕಾಶ ಮಾಡಿಕೊಡುವುದಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದರು.
ಶೇರ್ ಚಾಟ್ , ಟ್ವಿಟ್ಟರ್ ಮೂಲಕ ತಮಗಾದ ಅನುಭವಗಳನ್ನು ಅಲ್ಲಿಯ ಜನರು ಹಂಚಿಕೊಳ್ಳುತ್ತಿದ್ದಾರೆ.
ಚೇನ್ ಗುರುವಾರ 7 ಗಂಟೆಯಿಂದ ಸಂಪರ್ಕಕ್ಕೆ ಸಿಗುತ್ತಿಲ್ಲ. ಇದುವರೆಗೂ ಅವರನ್ನು ಸಂಪರ್ಕಿಸಲು ಸಾಧ್ಯವಾಗಿಲ್ಲ ಎಂಬ ಮಾಹಿತಿ ಲಭ್ಯವಾಗಿದೆ.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications