ಭೂಕಂಪದ ಅಸಲಿ ಕಾರಣ ಪತ್ತೆ ಹಚ್ಚಿದ ಮೌಲಾನಾ!
ಇಸ್ಲಾಮಾಬಾದ್, ಮೇ.31: ಭಾರತದಲ್ಲಿ ಧಾರ್ಮಿಕ ಮುಖಂಡರು ವಸ್ತ್ರ ಸಂಹಿತೆ ಬಗ್ಗೆ ಅನೇಕ ಹಾಸ್ಯಾಸ್ಪದ ಹೇಳಿಕೆಗಳನ್ನು ನೀಡಿದ್ದು ನೆನಪಿರಬಹುದು, ಈಗ ಅದೆಲ್ಲವನ್ನು ಮೀರಿಸುವ ಹೇಳಿಕೆ ಪಕ್ಕದ ರಾಷ್ಟ್ರ ಪಾಕಿಸ್ತಾನದ ಜಾಮಾತೆ ಉಲೆಮಾ -ಇ- ಇಸ್ಲಾಮಿ ಫಜ್ಲ್ ಮುಖ್ಯಸ್ಥ ಮೌಲಾನಾ ಫಜ್ಲುರ್ ರೆಹ್ಮಾನ್ ಅವರಿಂದ ಬಂದಿದೆ. ಅವರ ಪ್ರಕಾರ ಮಹಿಳೆಯರು ಜೀನ್ಸ್ ಪ್ಯಾಂಟ್ ಧರಿಸುವುದರಿಂದ ಭೂಕಂಪ ಸಂಭವಿಸುತ್ತಿದೆಯಂತೆ.
ಅಯ್ಯೋ ಕಾಲ ಕೆಟ್ಟು ಹೋಯ್ತು, ಹಳ್ಳಿ ಜನ ಎಲ್ಲಾ ಪಟ್ಣ ಸೇರಿ ಕೆಟ್ಟು ಹೋದ್ರು, ಭೂಭಾರ ಹೆಚ್ಚಾಗಿದ್ದರಿಂದ ಅನಾಹುತಗಳು ಸಂಭವಿಸುತ್ತಿದೆ ಎಂದು ಭಾರತದ ಹಳ್ಳಿಗಳ ಕಡೆ ಎಷ್ಟೋ ಮಂದಿ ಹೇಳುವುದನ್ನು ಕೇಳಿರಬಹುದು. ಇದೇ ರೀತಿ ಪಾಕಿಸ್ತಾನದ ಇಸ್ಲಾಂ ಮೂಲಭೂತವಾದಿ ಮುಖಂಡರಾದ ರೆಹ್ಮಾನ್ ಅವರು ಈ ರೀತಿ ಹೇಳಿಕೆ ನೀಡಿದ್ದಾರೆ.

ಮಹಿಳೆಯರು ಜೀನ್ಸ್ ಪ್ಯಾಂಟ್ ಧರಿಸುವುದರಿಂದ ಭೂಕಂಪ, ಹಣದುಬ್ಬರ ಸೇರಿದಂತೆ ಅನೇಕ ಅನಾಹುತಗಳು ಸಂಭವಿಸುತ್ತಿದೆ. ಇಂಥ ಮಹಿಳೆಯರನ್ನು ಹುಡುಕಿ ಕೊಲ್ಲಬೇಕು, ಸೈನಿಕ ಕಾರ್ಯಾಚರಣೆಯಲ್ಲಿ ಎಲ್ಲರನ್ನು ಮುಗಿಸಬೇಕು ಎಂದು ಇಸ್ಲಾಮಾಬಾದ್ ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮೌಲಾನಾ ಕರೆ ನೀಡಿದ್ದಾರೆ.
ಬಲೂಚಿಸ್ತಾನದ ವಿದ್ಯುತ್ ಸಮಸ್ಯೆ, ಪಾಕಿಸ್ತಾನದ ಆಂತರಿಕ ಕಲಹ, ಉಗ್ರರ ದಾಳಿ ಎಲ್ಲಕ್ಕೂ ಆಧುನಿಕ ಉಡುಪು ಧರಿಸುವ ಮಹಿಳೆಯರೇ ಕಾರಣ, ಈ ಬಗ್ಗೆ ಕ್ರಮ ಜರುಗಿಸುವಂತೆ ಪಾಕಿಸ್ತಾನ ಪ್ರಧಾನಿಗೆ ಪತ್ರ ಬರೆಯುವುದಾಗಿ ಮೌಲಾನಾ ರೆಹ್ಮಾನ್ ಹೇಳಿದ್ದಾರೆ.
ಇದರ ಜೊತೆಗೆ ತೆಹರಿಕ್ ಇ ತಾಲಿಬಾನ್ ವಿರುದ್ಧ ಸೈನಿಕ ಕಾರ್ಯಾಚರಣೆ ಸರಿಯಲ್ಲ, ತಾಲಿಬಾನಿಗಳೇನು ಪಾಕಿಸ್ತಾನದ ಶತ್ರುಗಳಲ್ಲ. ಷರಿಯಾರ್ ನಿಯಮಗಳನ್ನು ಸರಿಯಾಗಿ ಪಾಲಿಸಿದ್ದರೆ ತಾಲಿಬಾನಿಗಳು ಯಾರ ಮೇಲೂ ದಾಳಿ ನಡೆಸುತ್ತಿರಲಿಲ್ಲ ಎಂದಿದ್ದಾರೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications