ಈಕ್ವೆಡಾರ್ : ವಿಕಿಲೀಕ್ಸ್ ಸಂಸ್ಥಾಪಕ ಜ್ಯೂಲಿಯನ್ ಅಸ್ಸಾಂಜೆ ಬಂಧನ
ಲಂಡನ್, ಏಪ್ರಿಲ್ 11: ಈಕ್ವೆಡಾರ್ ಪೌರತ್ವ ಪಡೆದು ಆಶ್ರಯ ಪಡೆದುಕೊಂಡಿದ್ದ ವಿಕಿಲೀಕ್ಸ್ ಸಂಸ್ಥಾಪಕ ಜ್ಯೂಲಿಯನ್ ಅಸ್ಸಾಂಜೆ ಅವರನ್ನು ರಾಯಭಾರ ಕಚೇರಿಯಲ್ಲಿ ಲಂಡನ್ ಪೊಲೀಸರು ಇಂದು ಬಂಧಿಸಿದ್ದಾರೆ.
ಲೋಕಸಭಾ ಚುನಾವಣೆ 2019 : ವಿಶೇಷ ಪುಟ | ಗ್ಯಾಲರಿ
ನಿರಾಶ್ರಿತರಾಗಿದ್ದ ಅಸ್ಸಾಂಜೆ ಅವರಿಗೆ ಅಧಿಕೃತವಾಗಿ ಈಕ್ವೆಡಾರ್ ಪ್ರಜೆಯಾಗಿದ್ದರೂ ಹಳೆ ಪ್ರಕರಣವೊಂದು ಎಡಬಿಡದೆ ಕಾಡತೊಡಗಿತ್ತು. ಸ್ವೀಡನ್ ನಲ್ಲಿ ಅಸ್ಸಾಂಜೆ ವಿರುದ್ಧ ದಾಖಲಾಗಿದ್ದ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಸಂಬಂಧಿಸಿದಂತೆ ಯುಕೆ ಕೋರ್ಟಿನಿಂದ ಜಾಮೀನು ಪಡೆದುಕೊಂಡಿದ್ದರು.
ಸ್ವೀಡನ್ ಗೆ ತೆರಳಿದರೆ ಯುಎಸ್ ಪೊಲೀಸರು ಹುಡುಕಿಕೊಂಡು ಬಂದು ಬಂಧಿಸುತ್ತಾರೆ. ಯುಎಸ್ ಆಡಳಿತಕ್ಕೆ ಸಂಬಂಧಪಟ್ಟ ಅನೇಕ ರಹಸ್ಯ ಮಾಹಿತಿ ಬಹಿರಂಗವಾಗದಂತೆ ತಡೆಯಲು ಎಲ್ಲಾ ರೀತಿ ಪ್ರಯತ್ನಿಸಲಾಗುತ್ತಿದೆ ಎಂದಿದ್ದರು.

ಹೀಗಾಗಿ, ಲಂಡನ್ನಿನ ವೆಸ್ಟ್ ಮಿನಿಸ್ಟರ್ ಕೋರ್ಟಿನಿಂದ ಜಾಮೀನು ಪಡೆದು ಈಕ್ವೆಡಾರ್ ಗೆ ಬಂದು ನೆಲೆಸಿದ್ದರು. ಆದರೆ, ಜಾಮೀನು ವೇಳೆ ವಿಧಿಸಿದ್ದ ಷರತ್ತುಗಳನ್ನು ಮುರಿದಿರುವುದರಿಂದ ಅಸ್ಸಾಂಜೆ ಅವರನ್ನು ಯುಕೆಗೆ ಕರೆ ತಂದು ಮತ್ತೊಮ್ಮೆ ಕಟಕಟೆಗೆ ಮುಂದೆ ನಿಲ್ಲಿಸಲು ಪೊಲೀಸರು ಮುಂದಾಗಿದ್ದಾರೆ.
ಏನಿದು ಗೊಂದಲ?: ಆಸ್ಟ್ರೇಲಿಯಾ ಮೂಲದ ಜೂಲಿಯನ್ ಅಸಾಂಜೆ 2012ರಲ್ಲಿ ಸ್ವೀಡನ್ ಗೆ ಹಸ್ತಾಂತರವಾಗುವ ಭಯದಿಂದ ಈಕ್ವೆಡಾರ್ ರಾಯಭಾರಿ ಕಚೇರಿ ಪ್ರವೇಶಿಸಿ ಆಶ್ರಯ ಪಡೆದಿದ್ದರು. ಅವರ ಮೇಲೆ ಸ್ವೀಡನ್ನಿನಲ್ಲಿ ಅತ್ಯಾಚಾರ ಪ್ರಕರಣದ ವಿಚಾರಣೆ ನಡೆಯುತ್ತಿತ್ತು. ಆದರೆ ಅಸಾಂಜೆಗೆ ಸ್ವೀಡನ್ ಗಿಂತ ಹೆಚ್ಚಾಗಿ ಅಮೆರಿಕಾದ ಭಯವಿತ್ತು. ಸೇನೆ ಮತ್ತು ರಾಜತಾಂತ್ರಿಕ ದಾಖಲೆಗಳನ್ನು ವಿಕಿಲೀಕ್ಸ್ ನಲ್ಲಿ ಪ್ರಕಟಿಸಿದ್ದಕ್ಕಾಗಿ ಅಲ್ಲಿ ವಿಚಾರಣೆ ಎದುರಿಸಬೇಕಾಗಿ ಬರಬಹುದು ಎಂಬ ಭಯದಿಂದ ಈಕ್ವೆಡಾರ್ ಆಶ್ರಯ ಪಡೆದುಕೊಂಡಿದ್ದರು.
ಯಾರು ಕುಬೇರರು, ಯಾರು ಕುಚೇಲರು? ಆಸ್ತಿಪಾಸ್ತಿ ವಿವರ ಬೇಕೆ?
2017 ವರ್ಷವಷ್ಟೇ ಸ್ವೀಡನ್ ಅಸಾಂಜೆ ಮೇಲಿದ್ದ ಅತ್ಯಾಚಾರ ಪ್ರಕರಣವನ್ನು ಕೈಬಿಟ್ಟಿತ್ತು. ಆದರೆ ಜಾಮೀನು ಷರತ್ತುಗಳನ್ನು ಉಲ್ಲಂಘಿಸಿದ್ದಕ್ಕಾಗಿ ಅವರನ್ನು ಬಂಧಿಸುವುದಾಗಿ ಬ್ರಿಟನ್ ಹೇಳಿದ್ದರಿಂದ ಅಸಾಂಜೆ ಇನ್ನೂ ರಾಯಭಾರ ಕಚೇರಿಯಲ್ಲೇ ಆಶ್ರಯ ಪಡೆದಿದ್ದರು.
ಈಕ್ವೆಡಾರ್ ತನಗೆ ಪೌರತ್ವ ನೀಡುತ್ತಿದ್ದಂತೆ ಈಕ್ವೆಡಾರ್ ಫುಟ್ಬಾಲ್ ತಂಡದ ಜೆರ್ಸಿ ತೊಟ್ಟ ಚಿತ್ರವನ್ನು ಅಸಾಂಜೆ ಟ್ವೀಟ್ ಮಾಡಿದ್ದಾರೆ. ಈಕ್ವೆಡಾರ್ ರಾಯಭಾರ ಕಚೇರಿಯಿಂದ ಅಸಾಂಜೆಯನ್ನು ಹೊರತರಲು ಅವರಿಗೆ ರಾಜತಾಂತ್ರಿಕ ಹುದ್ದೆ ನೀಡುವಂತೆ ಬ್ರಿಟನ್ ಗೆ ಈಕ್ವೆಡಾರ್ ಮನವಿ ಮಾಡಿಕೊಂಡಿತ್ತು. ಆದರೆ ಈಕ್ವೆಡಾರ್ ಮನವಿಯನ್ನು ಬ್ರಿಟನ್ ತಿರಸ್ಕರಿಸಿದ್ದು ರಾಯಭಾರ ಕಚೇರಿಯಿಂದ ಹೊರ ಬಂದು ಅಸಾಂಜೆ ವಿಚಾರಣೆ ಎದುರಿಸಬೇಕು ಎಂದು ತಿರುಗೇಟು ನೀಡಿದೆ.
-
"ಕೆಡಿ" ಸಿನಿಮಾದ ಹಾಡು ಅಶ್ಲೀಲವಾಗಿದ್ರೆ ಕೂಡಲೇ ಎಲ್ಲ ಕಡೆ ತೆರವು ಮಾಡಿ: ಸೆನ್ಸಾರ್ ಮಂಡಳಿಗೆ ಕೇಂದ್ರ ಸರ್ಕಾರ ಸೂಚನೆ -
Byadagi Chilli: ಕರ್ನಾಟಕದ ಕೆಂಪು ಚಿನ್ನ ಬ್ಯಾಡಗಿ ಮೆಣಸಿನಕಾಯಿಗೆ ಹೊಸ ಸಂಕಷ್ಟ, ರೈತರು ಕಂಗಾಲು -
ಸರಕು ಖಾಲಿಯಾಯ್ತಾ ಪ್ರೇಮ್, ಇಡೀ ದೇಶದ ಮುಂದೆ ಕನ್ನಡಿಗರು ತಲೆತಗ್ಗಿಸುವಂತೆ ಮಾಡಿದಿರಿ: ಸೆರಗ ಸರ್ಸೆ ಹಾಡಿಗೆ ವಿರೋಧ -
Bengaluru Second Airport: ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ: ದೆಹಲಿಯಲ್ಲಿ ಕೇಂದ್ರ ಸಚಿವರ ಭೇಟಿಯಾದ ಡಿ.ಕೆ.ಶಿವಕುಮಾರ್ -
Nora Fatehi: ಸರ್ಸೆ ನಿನ್ನ ಸೆರಗ ಹಾಡು ವಿವಾದ: ಹೇಳಿದ್ದೊಂದು- ಮಾಡಿದ್ದು ಇನ್ನೊಂದು, ನನ್ನ ನಂಬಿ ಪ್ಲೀಸ್ -
SSLC ವಿದ್ಯಾರ್ಥಿಗಳ ಗಮನಕ್ಕೆ: ಮಾರ್ಚ್ 18ಕ್ಕೆ ಪ್ರಥಮ ಭಾಷೆ ಕನ್ನಡ ಪರೀಕ್ಷೆ; ಪಾಸಾಗಲು ಈ ಪ್ರಮುಖ ಅಂಶಗಳನ್ನು ಗಮನಿಸಿ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
ಟೀಂ ಇಂಡಿಯಾಗೆ ನನ್ನದೊಂದು ಸಲಾಂ, ಐಪಿಎಲ್ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಪಂಜಾಬ್ ಕಿಂಗ್ಸ್ ಕೋಚ್ ರಿಕಿ ಪಾಂಟಿಂಗ್ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Prem: ಅಂದು ಮೇಲುಕೋಟೆ ಹುಡುಗಿ, ಇಂದು ಸೆರಗ ಸರ್ಸೆ: ವಿವಾದಕ್ಕೆ ಕಾರಣವಾದ ಪ್ರೇಮ್ ಸಿನಿಮಾ ಹಾಡುಗಳು












Click it and Unblock the Notifications