ಡೊನಾಲ್ಡ್ ಟ್ರಂಪ್ ಬಿಟ್ಟ ಬಾಣಕ್ಕೆ ಜಸ್ಟಿನ್ ಟ್ರುಡೋ ಜೀವ ಗಲಗಲ!
ಅಮೆರಿಕದ ನೂತನ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಜಗತ್ತಿನ ಶಕ್ತಿಶಾಲಿ ದೇಶದ ಚುನಾವಣೆಯ ಗೆದ್ದ ನಂತರ ಹೊಸ ಹೊಸ ಬಾಣಗಳನ್ನ ಬಿಡುತ್ತಿದ್ದಾರೆ. ಅದರಲ್ಲೂ ತೆರಿಗೆ ನೀತಿ ವಿಚಾರ ಇದೀಗ ಕೆನಡಾ & ಅಮೆರಿಕ ನಡುವೆ ಬೆಂಕಿ ಹೊತ್ತಿಸಿದೆ. ಡೊನಾಲ್ಡ್ ಟ್ರಂಪ್ ಈಗ ಕೆನಡಾ ಮೂಲಕ ಅಮೆರಿಕಗೆ ಬರುವ ವಸ್ತುಗಳ ಮೇಲೆ ಭಾರಿ ಪ್ರಮಾಣದ ತೆರಿಗೆ ಹಾಕಲು ನಿರ್ಧಾರ ಮಾಡಿದ್ದಾರೆ, ಇದೇ ವಿಷಯ ಈಗ ದೊಡ್ಡ ಗಲಾಟೆಗೆ ಕಾರಣವಾಗಿದೆ. ಅಲ್ಲದೆ ಈ ಪರಿಸ್ಥಿತಿ ಸರಿ ಮಾಡಲು ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೋ ಏನ್ ಮಾಡ್ತಿದ್ದಾರೆ ಗೊತ್ತಾ?
ಡೊನಾಲ್ಡ್ ಟ್ರಂಪ್ ಪಕ್ಕಾ ಬ್ಯುಸಿನೆಸ್ ಮ್ಯಾನ್, ಇದೇ ಕಾರಣಕ್ಕೆ ಇದೀಗ ಡೊನಾಲ್ಡ್ ಟ್ರಂಪ್ ತಮ್ಮ ಆಡಳಿತ ಅವಧಿಯಲ್ಲಿ ಹಲವು ರೀತಿ ಕಠಿಣ ನಿರ್ಧಾರ ಕೈಗೊಳ್ಳಲು ಮುಂದಾಗಿದ್ದಾರೆ. ಅಮೆರಿಕ ಸರ್ಕಾರ ಸಾಲದ ಸುಳಿಯಲ್ಲಿ ಸಿಲುಕಿ ಪರದಾಡುತ್ತಿರುವ ಸಮಯದಲ್ಲೇ, ಹೊರ ದೇಶಗಳಿಂದ ಬರುವ ಸರಕು & ವಸ್ತುಗಳಿಗೆ ಭಾರಿ ಪ್ರಮಾಣದಲ್ಲಿ ತೆರಿಗೆ ಏರಿಕೆ ಮಾಡೋಕೆ ಮುಂದಾಗಿದ್ದಾರೆ. ಆದರೆ ಇದೇ ವಿಚಾರ ಈಗ ಕೆನಡಾ ಪ್ರಧಾನಿಗೆ ಆಘಾತ ನೀಡಿದೆ!

ಕೆನಡಾ ಪ್ರಧಾನಿ ಓಡೋಡಿ ಬಂದಿದ್ದೇಕೆ?
ಅಮೆರಿಕದ ನೂತನ ಅಧ್ಯಕ್ಷರಾಗಿ ಆಯ್ಕೆ ಆದ ಡೊನಾಲ್ಡ್ ಟ್ರಂಪ್ 2025ರ ಜನವರಿ ತಿಂಗಳಲ್ಲಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ. ಅದಕ್ಕೂ ಮೊದಲು ಹಲವು ಕ್ರಾಂತಿಕಾರಿ ನಿರ್ಧಾರಗಳನ್ನು ಕೂಡ ಕೈಗೊಳ್ಳುತ್ತಿದ್ದಾರೆ. ಈ ಪೈಕಿ, ಕೆನಡಾ & ಮೆಕ್ಸಿಕೋ ಮೂಲಕ ಬರುವ ವಸ್ತುಗಳಿಗೆ ಶೇಕಡಾ 25 ತೆರಿಗೆ ಹಾಗೂ ಚೀನಾ ಮೂಲಕ ಬರುವ ವಸ್ತುಗಳಿಗೆ ಶೇಕಡಾ 10 ರಷ್ಟು ಟ್ಯಾಕ್ಸ್ ಹಾಕುವ ನಿರ್ಧಾರ ಪ್ರಕಟಿಸಿದ್ದರು. ಇದೇ ವಿಚಾರ ಈಗ ಬೆಂಕಿ ಹೊತ್ತಿಸಿದೆ!
ಟ್ರಂಪ್ ಜೊತೆಗೆ ಕೆನಡಾ ಪ್ರಧಾನಿ ಚರ್ಚೆ?
ಕೆನಡಾ & ಅಮೆರಿಕ ನಡುವೆ ನೂರಾರು ವರ್ಷಗಳಿಂದ ಕೂಡ ಸಂಬಂಧ ಇದ್ದು, ಎರಡೂ ದೇಶಗಳು ಹಲವು ವರ್ಷಗಳಿಂದ ಉತ್ತಮವಾಗಿ ವ್ಯಾಪಾರ ಸಂಬಂಧ ನಡೆಸಿಕೊಂಡು ಬಂದಿವೆ. ಆದರೆ ಇದೀಗ ಡೊನಾಲ್ಡ್ ಟ್ರಂಪ್ ಅವರು ಅಧಿಕಾರಕ್ಕೆ ಬರುತ್ತಿದ್ದಂತೆ ಸಂಚಲನ ಸೃಷ್ಟಿಯೇ ಆಗುತ್ತಿದೆ. 2025ರ ಜನವರಿ ತಿಂಗಳಲ್ಲಿ ಡೊನಾಲ್ಡ್ ಟ್ರಂಪ್ ಅಮೆರಿಕದ ಹೊಸ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಳ್ಳಲಿದ್ದು, ಹೀಗಿದ್ದಾಗ ಕೆನಡಾ ಮೇಲೆ ಭಾರಿ ದೊಡ್ಡ ತೆರಿಗೆ ಭಾರವನ್ನ ಹಾಕಲು ಮುಂದಾಗಿದ್ದಾರೆ ಎಂಬ ಆರೋಪ ಇತ್ತು. ಈ ಕಾರಣಕ್ಕೆ ಇದೀಗ ಡೊನಾಲ್ಡ್ ಟ್ರಂಪ್ ಜೊತೆಗೆ ಕೂತು ಮಾತುಕತೆ ನಡೆಸಲು ಕೆನಡಾ ಪ್ರಧಾನಿ ಅಮೆರಿಕಗೆ ಬಂದಿದ್ದಾರಂತೆ!
-
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ












Click it and Unblock the Notifications