ದುಬೈನಲ್ಲಿ ಭೀಕರ ಪ್ರವಾಹಕ್ಕೆ ಸಿಲುಕಿದ ಸಂತ್ರಸ್ತರಿಗೆ ಕನ್ನಡಿಗರ ನೆರವು
ದುಬೈ, ಏಪ್ರಿಲ್, 29: ಸುನಾಮಿತಂಹ ಮಳೆ ಸುರಿದ ಪರಿಣಾಮ ಅಬು ಧಾಬಿಯ ಬಹುತೇಕ ಭಾಗಗಳಲ್ಲಿ ಪ್ರವಾಹ ಆಗಿದ್ದು, ಜನರ ಪರಿಸ್ಥಿತಿ ಹೇಳತೀರದಾಗಿದೆ. ಇನ್ನು ಭಾರೀ ಮಳೆ ಹಾಗೂ ಪ್ರವಾಹ ಹಿನ್ನೆಲೆ ಶಾರ್ಜಾ ಅಜ್ಮಾನ್ ಭಾಗದಲ್ಲಿ ಕಳೆದ ಒಂದು ವಾರದಿಂದಲೂ ಮನೆಯಿಂದ ಹೊರ ಬರಲಾಗದೆ ಜನರು ಪರದಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಇನ್ನು ಇಲ್ಲಿರುವ ಕನ್ನಡಿಗರು ಜನರ ನೆರವಿಗೆ ನಿಂತಿದ್ದು, ಅಲ್ಲದೆ ರಕ್ಷಣೆಕಾರ್ಯ ಮಾಡಿ ಆಹಾರ ವಿತರಣೆ ಮಾಡುವ ಕೆಲಸವನ್ನು ಮಾಡುತ್ತಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಪ್ರವಾಹದಲ್ಲಿ ಸಿಲುಕಿದ್ದ ಭಾರತೀಯರು ಸೇರಿದಂತೆ ಇತರ ವಿದೇಶಿಯರಿಗೆ ಆಹಾರ ಪದಾರ್ಥ, ನೀರು ಮತ್ತು ಇನ್ನಿತರ ಅವಶ್ಯಕ ವಸ್ತುಗಳನ್ನು ಕೊಡುವ ಕೆಲಸವನ್ನು ಹೆಮ್ಮೆಯ ದುಬೈ ಕನ್ನಡ ಸಂಘ ಮಾಡಿ ಮಾನವೀಯತೆ ಮೆರೆದಿದೆ ಎಂದು ತಿಳಿದುಬಂದಿದೆ.

ಪ್ರವಾಹದಲ್ಲಿ ಸಿಲುಕಿ ಸಂಕಷ್ಟದಲ್ಲಿರುವ ಜನರಿಗೆ, ಕೊಡಗಿನ ರಫೀಕಲಿ, ಮಂಡ್ಯದ ಹಾದಿಯ, ಮಡಿಕೇರಿ ಪ್ರತಾಪ್, ಶಿವಮೊಗ್ಗದ ಸಂತೋಷ್, ಬೆಂಗಳೂರಿನ ಅರ್ಪಿತಾ, ಶಿವಮೊಗ್ಗ ಅಯ್ಯುಬ್, ನಝೀರ ಮಂಡ್ಯ ಮತ್ತು ಅಬ್ರಾರ್ ಅವರು ಸೇರಿ ವಾಹನಗಳು ಸಂಚಾರ ಮಾಡದಂತಹ ಸ್ಥಳಗಳಿಗೆ ದೋಣಿ ಬಳಸಿಕೊಂಡು ಆಹಾರ ಪದಾರ್ಥಗಳು ಸೇರಿದಂತೆ ಅವಶ್ಯಕ ವಸ್ತುಗಳನ್ನು ತಲುಪಿಸುವ ಕೆಲಸವನ್ನು ಮಾಡುತ್ತಿದ್ದಾರೆ ಎಂದು ವಿಜಯ ಕರ್ನಾಟಕ ವರದಿ ಮಾಡಿದೆ.
ಅಷ್ಟೇ ಅಲ್ಲದೆ, ದುಬೈನಲ್ಲಿರುವ ಎಂಬಿಎಮ್ ಕ್ಲಿನಿಕ್ ಜೊತೆ ಸೇರಿ ಉಚಿತ ಅರೋಗ್ಯ ತಪಾಸಣೆ, ಚಿಕಿತ್ಸೆ ಮತ್ತು ಔಷಧಿಯನ್ನು ತಲುಪಿಸುವಲ್ಲಿ ನಮ್ಮ ಹೆಮ್ಮೆಯ ಕರ್ನಾಟಕದ ಕನ್ನಡ ತಂಡ ಮಾಡುತ್ತಿದೆ ಎನ್ನಿವ ಮಾಹಿತಿ ಲಭ್ಯವಾಗಿದೆ.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications