Karachi Attack : ಕರಾಚಿ ಪೊಲೀಸ್ ಠಾಣೆ ದಾಳಿ: 5 ಪಾಕಿಸ್ತಾನ್ ಉಗ್ರರು ಸೇರಿದಂತೆ 9 ಮಂದಿ ಸಾವು!
ಕರಾಚಿ ಪೊಲೀಸ್ ಮುಖ್ಯಸ್ಥರ ಮುಖ್ಯ ಕಚೇರಿಯ ಭದ್ರತಾ ಪಡೆಗಳೊಂದಿಗಿನ ಗುಂಡಿನ ಚಕಮಕಿಯಲ್ಲಿ ಐವರು ಭಯೋತ್ಪಾದಕರು ಸೇರಿದಂತೆ ಒಂಬತ್ತು ಜನರು ಸಾವನ್ನಪ್ಪಿದ್ದಾರೆ.
ತೆಹ್ರೀಕ್-ಎ-ತಾಲಿಬಾನ್ (ಪಾಕಿಸ್ತಾನ) ನ ಶಸ್ತ್ರಸಜ್ಜಿತ ಉಗ್ರರು ಶುಕ್ರವಾರ ಕರಾಚಿ ಪೊಲೀಸ್ ಮುಖ್ಯಸ್ಥರ ಕಚೇರಿಗೆ ನುಗ್ಗಿ ಗುಂಡಿನ ದಾಳಿ ನಡೆಸಿದ್ದಾರೆ. ಕರಾಚಿ ಪೊಲೀಸ್ ಮುಖ್ಯಸ್ಥರ ಮುಖ್ಯ ಕಚೇರಿಯ ಭದ್ರತಾ ಪಡೆಗಳೊಂದಿಗಿನ ಗುಂಡಿನ ಚಕಮಕಿಯಲ್ಲಿ ಐವರು ಭಯೋತ್ಪಾದಕರು ಸೇರಿದಂತೆ ಒಂಬತ್ತು ಜನರು ಸಾವನ್ನಪ್ಪಿದ್ದಾರೆ.
ಗುಂಡಿನ ದಾಳಿಯಲ್ಲಿ ಇಬ್ಬರು ಪೊಲೀಸ್ ಪೇದೆಗಳು, ರೇಂಜರ್ ಸಿಬ್ಬಂದಿ ಮತ್ತು ನಾಗರಿಕ ಸೇರಿದಂತೆ ನಾಲ್ವರು ಸಾವನ್ನಪ್ಪಿದ್ದಾರೆ ಮತ್ತು 17 ಮಂದಿ ಗಾಯಗೊಂಡಿದ್ದಾರೆ. ಸ್ಥಳೀಯ ಮಾಧ್ಯಮ ವರದಿಗಳ ಪ್ರಕಾರ, ಕನಿಷ್ಠ ಎಂಟು ಶಸ್ತ್ರಸಜ್ಜಿತ ಉಗ್ರರು ಕರಾಚಿಯ ಶೇರಿಯಾ ಫೈಸಲ್ನಲ್ಲಿರುವ ಪೊಲೀಸ್ ಮುಖ್ಯಸ್ಥರ ಕಚೇರಿಯನ್ನು ಪ್ರವೇಶಿಸಿ ದಾಳಿ ಮಾಡಿದ್ದಾರೆ.

5 ಉಗ್ರರನ್ನು ಸದೆಬಡೆದ ಭದ್ರತಾ ಪಡೆ
ಕಾರ್ಯಾಚರಣೆ ವೇಳೆ ಐವರು ಭಯೋತ್ಪಾದಕರು ಹತರಾಗಿದ್ದಾರೆ ಎಂದು ಹಿರಿಯ ಭದ್ರತಾ ಮೂಲಗಳು ತಿಳಿಸಿವೆ. ಸುದೀರ್ಘ ಗುಂಡಿನ ಕಾಳಗದಲ್ಲಿ ಮೂವರು ಸಾವನ್ನಪ್ಪಿದರೆ ಇಬ್ಬರು ತಮ್ಮನ್ನು ತಾವು ಸ್ಫೋಟಿಸಿಕೊಂಡಿದ್ದು ಕಟ್ಟಡದ ಒಂದು ಮಹಡಿಗೆ ಸ್ವಲ್ಪ ಹಾನಿಯಾಗಿದೆ. ಐದು ಅಂತಸ್ತಿನ ಪೊಲೀಸ್ ಮುಖ್ಯಸ್ಥರ ಕಚೇರಿಯ ಒಳಗಿನಿಂದ ಪ್ರಬಲ ಸ್ಫೋಟಗಳಿಂದಾಗಿ ಸಮೀಪದ ಕಟ್ಟಡಗಳ ಕಿಟಕಿ ಗಾಜುಗಳು ಒಡೆದು ಹೋಗಿವೆ.

ಎಂಟು ಉಗ್ರಗಾಮಿಗಳಿಂದ ದಾಳಿ
ಸುಮಾರು ನಾಲ್ಕು ಗಂಟೆಗಳ ಕಾಲ ಕಟ್ಟಡವನ್ನು ಮುತ್ತಿಗೆ ಹಾಕಲಾಗಿತ್ತು. ಘಟನೆಯ ವಿಡಿಯೊಗಳು ವೈರಲ್ ಆಗಿವೆ. ವಿಡಿಯೋದಲ್ಲಿ ಹಲವಾರು ಸುತ್ತಿನ ಗುಂಡಿನ ಸದ್ದು ಕೇಳುತ್ತಿದೆ. ಕಟ್ಟಡದೊಳಗೆ ಸ್ಫೋಟ ಸಂಭವಿಸಿದ ಕ್ಷಣವನ್ನು ವೀಡಿಯೊ ತೋರಿಸುತ್ತದೆ.
ಸ್ಥಳೀಯ ಮಾಧ್ಯಮಗಳ ವರದಿಗಳ ಪ್ರಕಾರ, ಎಂಟು ಉಗ್ರಗಾಮಿಗಳು ಹ್ಯಾಂಡ್ ಗ್ರೆನೇಡ್ಗಳು ಮತ್ತು ಸ್ವಯಂಚಾಲಿತ ಬಂದೂಕುಗಳನ್ನು ಬಳಸಿದ್ದಾರೆ. ದಾಳಿಯ ನಂತರ, ಕರಾಚಿ ಪೊಲೀಸರು ಮತ್ತು ಪಾಕಿಸ್ತಾನ ರೇಂಜರ್ಗಳು ಪ್ರದೇಶವನ್ನು ಸುತ್ತುವರೆದು ಪರಿಶೀಲನೆ ನಡೆಸಿದ್ದಾರೆ. ಪೊಲೀಸ್ ಮುಖ್ಯಸ್ಥರ ಕಚೇರಿಯ ಪಕ್ಕದಲ್ಲಿರುವ ಸದ್ದಾರ್ ಪೊಲೀಸ್ ಠಾಣೆ ಮೇಲೂ ದಾಳಿ ನಡೆದಿದೆ.

ದಾಳಿ ಸ್ಥಳದಲ್ಲಿ ಎರಡು ಕಾರು ವಶ
ಕಟ್ಟಡದ ಹಿಂಭಾಗದ ಪ್ರವೇಶದ್ವಾರದಲ್ಲಿ ಮತ್ತು ಮುಂಭಾಗದಲ್ಲಿ ಬಾಗಿಲು ತೆರೆದಿರುವ ಎರಡು ಕಾರುಗಳನ್ನು ಪೊಲೀಸರು ಪತ್ತೆ ಮಾಡಿದ್ದಾರೆ. ಶುಕ್ರವಾರ ರಾತ್ರಿ 7.10ರ ಸುಮಾರಿಗೆ ಉಗ್ರರು ಇದೇ ಕಾರಿನಿಂದ ಬಂದಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿ, ದಕ್ಷಿಣ ವಿಭಾಗದ ಡಿಐಜಿ ಇರ್ಫಾನ್ ಬಲೂಚ್ ತಿಳಿಸಿದ್ದಾರೆ. ಬಾಂಬ್ ನಿಷ್ಕ್ರಿಯ ದಳವು ಎರಡೂ ಕಾರುಗಳಲ್ಲಿ ಸ್ಫೋಟಕ ಸಾಧನಗಳು ಮತ್ತು ಭಯೋತ್ಪಾದಕರ ಆತ್ಮಹತ್ಯಾ ಬಟ್ಟೆಗಳನ್ನು ವಶಪಡಿಸಿಕೊಂಡಿದೆ ಎಂದು ಬಲೂಚ್ ಹೇಳಿದರು.

ತೆಹ್ರೀಕ್-ಎ-ತಾಲಿಬಾನ್ ಪಾಕಿಸ್ತಾನ್ ದಾಳಿ
ಸಿಂಧ್ ಮುಖ್ಯಮಂತ್ರಿ ಮುರಾದ್ ಅಲಿ ಶಾ ಅವರು ಘಟನೆಯ ಬಗ್ಗೆ ಮಾತನಾಡಿ, ಪೊಲೀಸ್ ಮುಖ್ಯಸ್ಥರ ಕಚೇರಿಯ ಮೇಲಿನ ದಾಳಿಯನ್ನು ಸ್ವೀಕಾರಾರ್ಹವಲ್ಲ. ಹೆಚ್ಚುವರಿ ಐಜಿ ಕಚೇರಿಯ ಮೇಲಿನ ದಾಳಿಯ ಹಿಂದಿನ ದುಷ್ಕರ್ಮಿಗಳನ್ನು ಬಂಧಿಸಬೇಕೆಂದು ನಾನು ಬಯಸುತ್ತೇನೆ ಎಂದು ಮುರಾದ್ ಅಲಿ ಶಾ ಹೇಳಿದ್ದಾರೆಂದು ಡಾನ್ ವರದಿ ಮಾಡಿದೆ.
ತೆಹ್ರೀಕ್-ಎ-ತಾಲಿಬಾನ್ ಪಾಕಿಸ್ತಾನ್ ದಾಳಿಯ ಹೊಣೆ ಹೊತ್ತುಕೊಂಡಿದೆ. ಕಳೆದ ವರ್ಷ ನವೆಂಬರ್ನಲ್ಲಿ ಟಿಟಿಪಿ ಮತ್ತು ಸರ್ಕಾರದ ನಡುವಿನ ಕದನ ವಿರಾಮ ಒಪ್ಪಂದವು ಮುರಿದುಬಿದ್ದ ನಂತರ, ಭಯೋತ್ಪಾದಕರು ಭದ್ರತಾ ಪಡೆಗಳ ಮೇಲೆ ಮತ್ತು ದೇಶದ ವಿವಿಧ ಭಾಗಗಳಲ್ಲಿನ ಮಸೀದಿಗಳು ಮತ್ತು ಮಾರುಕಟ್ಟೆಗಳ ಮೇಲೆ ದಾಳಿಯನ್ನು ಹೆಚ್ಚಿಸಿದ್ದಾರೆ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications