45,000 ಕೋಟಿ ರೂಪಾಯಿ ಸಂಗ್ರಹ ಗುರಿ, ಮದ್ಯಪ್ರಿಯರಿಗೆ ದಿಢೀರ್ ಎದುರಾಯ್ತು ಆಘಾತ... Karnataka Budget 2026
ಎಣ್ಣೆ ಅಂದ್ರೆ ಮದ್ಯ ಇಲ್ಲದೆ ಹಲವರು ರಾತ್ರಿ ನಿದ್ದೆ ಮಾಡೋಕೆ ಆಗಲ್ಲ ಅಂತಾರೆ, ಅದರಲ್ಲೂ ಮದ್ಯ ಮಾರಾಟ ಮೂಲಕವೇ ಸರ್ಕಾರಗಳು ಸಾವಿರಾರು ಕೋಟಿ ರೂಪಾಯಿ ಹಣವನ್ನು ಸಂಗ್ರಹ ಮಾಡುತ್ತವೆ. ಹೀಗೆ ಕರ್ನಾಟಕ ಮಾತ್ರವಲ್ಲ ದೇಶದ ಬಹುತೇಕ ರಾಜ್ಯಗಳ ಪ್ರಮುಖ ಆದಾಯದ ಮೂಲ ಇದೇ ಮಧ್ಯ ಆಗಿದ್ದು, ಸರ್ಕಾರ ನಡೆಯುತ್ತಿರುವುದೇ ನಮ್ಮಿಂದ ಅಂತಾನೂ ತಮಾಷೆಗೆ ಮದ್ಯಪ್ರಿಯರು ವಾದ ಕೂಡ ಮಾಡುತ್ತಾರೆ. ಹೀಗಿದ್ದಾಗ 2026-27ನೇ ಸಾಲಿನಲ್ಲಿ ಕರ್ನಾಟಕ ಸರ್ಕಾರ ಬರೋಬ್ಬರಿ 45,000 ಕೋಟಿ ರೂಪಾಯಿ ಆದಾಯ ಮದ್ಯ ಮಾರಾಟದ ಮೂಲಕ ಸಂಗ್ರಹ ಮಾಡುವ ಗುರಿ ಹಾಕಿಕೊಂಡಿದೆ. ಹೀಗೆ ಇದ್ದಾಗ ದಿಢೀರ್ ಮದ್ಯಪ್ರಿಯರಿಗೆ ಆಘಾತವೇ ಎದುರಾಗಿದೆ.
ಕರ್ನಾಟಕ ಸರ್ಕಾರ 2026-27ನೇ ಸಾಲಿನಲ್ಲಿ 4 ಲಕ್ಷ ಕೋಟಿ ರೂಪಾಯಿಗೂ ಹೆಚ್ಚು ಗಾತ್ರದ ಬಜೆಟ್ ಮಂಡನೆ ಮಾಡಿದ್ದು, ಈ ಮೂಲಕ ರಾಜ್ಯದ ಜನರಿಗೆ ಹಲವು ಯೋಜನೆ ನೀಡಲು ಮುಂದಾಗಿದೆ. ಕರ್ನಾಟಕದ ಆರ್ಥಿಕ ಸ್ಥಿತಿಗತಿಗಳ ಬಗ್ಗೆಯೂ ಸಿಎಂ ಸಿದ್ದರಾಮಯ್ಯ ಅವರು ಈಗ ಮಾಹಿತಿ ನೀಡಿದ್ದು, ಕರ್ನಾಟಕ ರಾಜ್ಯದ ಒಟ್ಟು ಸಾಲ ಸುಮಾರು 8.24 ಲಕ್ಷ ಕೋಟಿ ರೂಪಾಯಿ ಆಗಿದೆ ಎಂದು ತಿಳಿಸಿದ್ದಾರೆ. ಹಾಗೇ ಗಣಿಗಾರಿಕೆ ಮೂಲಕ ಸರ್ಕಾರಕ್ಕೆ ಸುಮಾರು 11,000 ಕೋಟಿ ರೂಪಾಯಿ ಆದಾಯ ದೊರಕುವ ನಿರೀಕ್ಷೆ ಇದೆ ಎಂದು ಸಿಎಂ ಮಾಹಿತಿ ನೀಡಿದ್ದಾರೆ. ಇಂತಹ ಸಮಯದಲ್ಲೇ, ಮದ್ಯಪ್ರಿಯರಿಗೆ ದಿಢೀರ್ ಆಘಾತ ಎದುರಾಗಿ ಮದ್ಯದ ಬೆಲೆ ಏರಿಕೆ ಕೂಡ ಫಿಕ್ಸ್ ಆಗಿದೆ.

45,000 ಕೋಟಿ ರೂಪಾಯಿ ಸಂಗ್ರಹ ಗುರಿ
ಹೌದು, 2026-27ನೇ ಸಾಲಿನಲ್ಲಿ ಕರ್ನಾಟಕ ಸರ್ಕಾರ ಭರ್ಜರಿ 45,000 ಕೋಟಿ ರೂಪಾಯಿ ಆದಾಯ ಮದ್ಯ ಮಾರಾಟದ ಮೂಲಕವೇ ಸಂಗ್ರಹ ಮಾಡುವ ಗುರಿ ಹಾಕಿಕೊಂಡಿದೆ. ಇದರ ಪರಿಣಾಮ ಈಗ ಮತ್ತೆ ಮದ್ಯ ಅಂದ್ರೆ ಎಣ್ಣೆ ಬೆಲೆ ಏರಿಕೆ ಫಿಕ್ಸ್ ಆಗಿದ್ದು, ಎಣ್ಣೆ ಹೊಡೆಯುವವರ ಜೇಬಿಗೆ ಇನ್ನಷ್ಟು ಭಾರ ಆಗಲಿದೆ ಲಿಕ್ಕರ್. ಅದರಲ್ಲೂ ಈ ಬಾರಿ ನೇರವಾಗಿ ಮದ್ಯದ ಬೆಲೆ ಏರಿಕೆಗೆ ಒತ್ತು ಕೊಡುವ ಬದಲಾಗಿ, ಇನ್ನುಮುಂದೆ ಮದ್ಯದಲ್ಲಿನ ಆಲ್ಕೋಹಾಲ್ ಅಥವಾ ಮದ್ಯಸಾರ ಅಂಶ ಆಧರಿಸಿ ತೆರಿಗೆ ವಿಧಿಸಲು ಭಾರಿ ದೊಡ್ಡ ತೀರ್ಮಾನ ಕೈಗೊಂಡಿದೆ ಕರ್ನಾಟಕ ಸರ್ಕಾರ. ಹೀಗಾಗಿ ಮದ್ಯಪ್ರಿಯರು ಹಾಗೂ ಮದ್ಯವನ್ನೇ ಹಚ್ಚಿಕೊಂಡು ಬದುಕುವ ಕುಡುಕರು, ಎಲ್ಲಾ ಓಕೆ ರೇಟ್ ಜಾಸ್ತಿ ಮಾಡುತ್ತಿರುವುದು ಯಾಕೆ? ಅಂತಾ ಪ್ರಶ್ನೆ ಕೇಳುತ್ತಿದ್ದಾರೆ.
-
ಸದನದಲ್ಲಿ ಬಜೆಟ್ ಚರ್ಚೆ: ಸಿಎಂ ಸಿದ್ದರಾಮಯ್ಯ ವಿರುದ್ಧ ಆರೋಪ -
"5 ತಿಂಗಳಾದ್ರೂ ಸಿಗದ ದಸರಾ ಲೆಕ್ಕ: ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಭ್ರಷ್ಟಾಚಾರದ ಆರೋಪ'' -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL












Click it and Unblock the Notifications