5,00,00,000 ರೂಪಾಯಿ, ಕನ್ನಡ ನಾಡಿನ ಭಕ್ತರಿಗೆ ಭರ್ಜರಿ ಉಡುಗೊರೆ... Karnataka Budget 2026
ಕರ್ನಾಟಕ ಹಣಕಾಸು ಯೋಜನೆಗಳ ಬಗ್ಗೆ ಜನರಲ್ಲಿ ಮೂಡಿದ್ದ ಕುತೂಹಲ ಹಾಗೂ ಜಿಬಿಎ ಚುನಾವಣೆ ಹಿನ್ನೆಲೆ, 2026-27ನೇ ಸಾಲಿನ ಕರ್ನಾಟಕ ಬಜೆಟ್ ಗಮನ ಸೆಳೆದಿತ್ತು. ಹಿಂದಿನ ಹಣಕಾಸು ವರ್ಷಗಳಲ್ಲಿ ಸಿಎಂ ಸಿದ್ದರಾಮಯ್ಯ ಅವರು ಭಾರಿ ಗಾತ್ರದ ಬಜೆಟ್ ಮಂಡನೆ ಮಾಡಿದ್ದರು, 2024-2025ನೇ ಸಾಲಿನಲ್ಲಿ 3.71 ಲಕ್ಷ ಕೋಟಿ ರೂಪಾಯಿ ಮತ್ತು 2025-2026ನೇ ಆರ್ಥಿಕ ಸಾಲಿನಲ್ಲಿ ಸುಮಾರು 4.09 ಲಕ್ಷ ಕೋಟಿ ರೂಪಾಯಿ ಮೊತ್ತದ ಬಜೆಟ್ ಮಂಡನೆ ಆಗಿತ್ತು. ಈ ಬಾರಿಯು ಕೂಡ ಬರೋಬ್ಬರಿ 4,00,000 ಕೋಟಿ ರೂಪಾಯಿಗೂ ಹೆಚ್ಚು ಮೊತ್ತದ ಬಜೆಟ್ ಮಂಡಿಸಲಾಗಿದೆ. ಇನ್ನು ಇದೇ ಬಜೆಟ್ನಲ್ಲಿ ಕನ್ನಡ ನಾಡಿನ ಭಕ್ತರಿಗೆ ಭರ್ಜರಿ ಉಡುಗೊರೆಗಳು ಸಿಕ್ಕಿವೆ.
ಭಾರತದಲ್ಲಿ ಶ್ರೀಮಂತ ರಾಜ್ಯಗಳ ಪೈಕಿ ಕರ್ನಾಟಕ ಕೂಡ ಒಂದಾಗಿದ್ದು, ಕನ್ನಡ ನಾಡು ಐಟಿ ಮತ್ತು ಕೈಗಾರಿಕಾ ಕ್ಷೇತ್ರದಲ್ಲಿ ದೊಡ್ಡ ಹೆಸರು ಮಾಡುವ ಜೊತೆಗೆ ಲಕ್ಷಾಂತರ ಕೋಟಿ ರೂಪಾಯಿ ಆದಾಯ ಸಂಗ್ರಹ ಮಾಡುತ್ತಿದೆ. ನಮ್ಮ ಭಾರತ ದೇಶದ ಅಭಿವೃದ್ಧಿ ವಿಚಾರದಲ್ಲಿ ಕೂಡ ಕನ್ನಡ ನಾಡಿನ ಕೊಡುಗೆ ದೊಡ್ಡದಾಗಿದ್ದು, ಸಾವಿರಾರು ಕಂಪನಿಗಳು ಇದೇ ನಮ್ಮ ಕರ್ನಾಟಕ ರಾಜ್ಯದಿಂದ ಜನ್ಮ ಪಡೆದು ಇಡೀ ಜಗತ್ತಿನಲ್ಲಿ ಮಿಂಚು ಹರಿಸುತ್ತಿವೆ. ಹೀಗಿದ್ದಾಗ ಬಹುನಿರೀಕ್ಷಿತ 2026-27ನೇ ಸಾಲಿನ ಕರ್ನಾಟಕ ಬಜೆಟ್ ಈಗ ಮಂಡನೆ ಆಗಿದೆ. ಅದರಲ್ಲೂ ಕರ್ನಾಟಕದ ಭಕ್ತರಿಗೆ ಅಂತಾನೇ ಈ ಬಾರಿ ರಾಜ್ಯ ಸರ್ಕಾರ ಭಾರಿ ದೊಡ್ಡ ದೊಡ್ಡ ಯೋಜನೆಗಳನ್ನ ಘೋಷಣೆ ಮಾಡಿದೆ.

ಕರ್ನಾಟಕದ ದೇಗುಲಗಳಿಗೆ ಭರ್ಜರಿ ಘೋಷಣೆ
2026-27ನೇ ಸಾಲಿನ ಕರ್ನಾಟಕ ಬಜೆಟ್ನಲ್ಲಿ ಕುಕ್ಕೆ ಸುಬ್ರಹ್ಮಣ್ಯ & ಕೊಲ್ಲೂರು ಮೂಕಾಂಬಿಕಾ ದೇವಿಯ ದೇವಾಲಯ ಅಭಿವೃದ್ಧಿಗೆ ಮಹತ್ವದ ಘೋಷಣೆ ಹೊರಡಿಸಲಾಗಿದೆ. ಈ ದೇಗುಲಗಳ ಅಭಿವೃದ್ಧಿಗಾಗಿ ಪ್ರಾಧಿಕಾರ ರಚನೆ ಮಾಡುವುದಾಗಿ ಸಿಎಂ ಸಿದ್ದರಾಮಯ್ಯ ಅವರು ಘೋಷಿಸಿದ್ದು, ತಮ್ಮ 17ನೇ ಬಜೆಟ್ ಮಂಡನೆಯಲ್ಲಿ ದೊಡ್ಡ ಘೋಷಣೆ ಹೊರಡಿಸಿದ್ದಾರೆ. ಹಾಗೇ ಶ್ರೀ ವೈಷ್ಟೋದೇವಿ ಯಾತ್ರೆಗೆ ತೆರಳುವ ಪ್ರತಿ ಯಾತ್ರಾರ್ಥಿಗಳಿಗೆ ಇದೀಗ ಭರ್ಜರಿ 5,000 ರೂಪಾಯಿ ಸಹಾಯಧನ ಘೋಷಿಸಲಾಗಿದೆ. ಕರ್ನಾಟಕ ರಾಜ್ಯದಿಂದ ಸುಮಾರು 3000 ಕಿಲೋ ಮೀಟರ್ ದೂರ ಇರುವ ಶ್ರೀ ಮಾತಾ ವೈಷ್ಟೋದೇವಿಗೆ ಲಕ್ಷಾಂತರ ಭಕ್ತರು ನಮ್ಮ ರಾಜ್ಯದ ಮೂಲಕ ಯಾತ್ರೆಗೆ ತೆರಳುತ್ತಾರೆ. ಇದಕ್ಕಾಗಿ 5,00,00,000 ರೂಪಾಯಿ ಎಂದರೆ 5 ಕೋಟಿ ರೂಪಾಯಿ ಮೀಸಲು ಇಡಲಾಗಿದೆ. ಹಾಗೇ ಮುಜರಾಯಿ ಇಲಾಖೆಯ ದೇವಾಲಯಗಳ 259 ಕಲ್ಯಾಣಿಗಳನ್ನ ಅಭಿವೃದ್ಧಿ ಮಾಡಲು, ಜಲ ನಿಧಿ ಕಲ್ಯಾಣಿಗಳ ಪುನಃಶ್ಚೇತನ ಯೋಜನೆ ಜಾರಿ ಮಾಡಲು ನಿರ್ಧರಿಸಲಾಗಿದೆ. ಈ ಯೋಜನೆಗಾಗಿ ಬಜೆಟ್ನಲ್ಲಿ ಈಗ 5 ಕೋಟಿ ರೂಪಾಯಿ ಮೀಸಲು ಇಡಲಾಗಿದೆ.
-
IPL ಟಿಕೆಟ್ ಕೇಳಿದ ಶಾಸಕರಿಗೆ ಸರ್ಕಾರ ಸಿಹಿಸುದ್ದಿ: ಆರ್ಸಿಬಿ ಮೊದಲ ಪಂದ್ಯ ವೀಕ್ಷಣೆಗೆ ಸಿಗಲಿದೆ ತಲಾ 2 ಟಿಕೆಟ್ -
IPL Free VIP Tickets: ಶಾಸಕರಿಗೆ ಐಪಿಎಲ್ ವಿಐಪಿ ಟಿಕೆಟ್ ಪಡೆಯುವ ಹಕ್ಕು ಇದೆ: ಡಿ.ಕೆ.ಶಿವಕುಮಾರ್ ಸಮರ್ಥನೆ -
ಸದನದಲ್ಲಿ ಬಜೆಟ್ ಚರ್ಚೆ: ಸಿಎಂ ಸಿದ್ದರಾಮಯ್ಯ ವಿರುದ್ಧ ಆರೋಪ -
"5 ತಿಂಗಳಾದ್ರೂ ಸಿಗದ ದಸರಾ ಲೆಕ್ಕ: ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಭ್ರಷ್ಟಾಚಾರದ ಆರೋಪ'' -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್










Click it and Unblock the Notifications