ಸೂಕ್ಷ್ಮಜೀವಿಗೆ ಕಲಾಂಗೆ ಹೆಸರು, ಮಾಜಿ ರಾಷ್ಟ್ರಪತಿಗೆ 'ನಾಸಾ' ಸಲಾಂ
ಇದೊಂದು ಅಪರೂಪದ ಸೂಕ್ಷ್ಮ ಜೀವಿಯಾಗಿದ್ದು, ಸದ್ಯಕ್ಕೆ ಅಂತರಾಷ್ಟ್ರೀಯ ಬಾಹ್ಯಾಕಾಶ ಕೇಂದ್ರದಲ್ಲಿ ಮಾತ್ರ ಕಾಣಿಸಿಕೊಂಡಿದೆ. ಈ ಜೀವಿಗೆ 'ಸೊಲಿಬಾಸಿಲಸ್ ಕಲಾಮಿ' ಎಂದು ಹೆಸರಿಡಲಾಗಿದೆ.
ವಾಷಿಂಗ್ಟನ್, ಮೇ 18: ಭಾರತದ ಮಾಜಿ ರಾಷ್ಟ್ರಪತಿ, ಅಪರೂಪದ ಬಾಹ್ಯಾಕಾಶ ವಿಜ್ಞಾನಿ ಎಪಿಜೆ ಅಬ್ದುಲ್ ಕಲಾಂರಿಗೆ ಅಮೆರಿಕಾದ ಬಾಹ್ಯಾಕಾಶ ಸಂಸ್ಥೆ ನಾಸಾ ವಿಶೇಷ ಗೌರವ ಸಲ್ಲಿಸಿದೆ. ಅಂತರಾಷ್ಟ್ರೀಯ ಬಾಹ್ಯಾಕಾಶ ಕೇಂದ್ರದಲ್ಲಿ ಪತ್ತೆಯಾದ ವಿಶಿಷ್ಟ ಸೂಕ್ಷಜೀವಿಯೊಂದಕ್ಕೆ ನಾಸಾ ಕಲಾಂರ ಹೆಸರನ್ನಿಟ್ಟಿದೆ.
ಇದೊಂದು ಅಪರೂಪದ ಸೂಕ್ಷ್ಮ ಜೀವಿಯಾಗಿದ್ದು, ಸದ್ಯಕ್ಕೆ ಅಂತರಾಷ್ಟ್ರೀಯ ಬಾಹ್ಯಾಕಾಶ ಕೇಂದ್ರದಲ್ಲಿ ಮಾತ್ರ ಕಾಣಿಸಿಕೊಂಡಿದೆ. ಈ ಜೀವಿಗೆ 'ಸೊಲಿಬಾಸಿಲಸ್ ಕಲಾಮಿ' ಎಂದು ಹೆಸರಿಡಲಾಗಿದೆ.

ಈ ಕುರಿತು ಮಾತನಾಡಿರುವ ನಾಸಾದ ವಿಜ್ಞಾನಿ ಡಾ. ಕಸ್ತೂರಿ ವೆಂಕಟೇಶ್ವರನ್, "ಬ್ಯಾಕ್ಟೀರಿಯಕ್ಕೆ ಸೊಲಿಬಾಸಿಲಸ್ ಕಲಾಮಿ ಎಂದು ಹೆಸರಿಡಲಾಗಿದೆ. ಸೊಲಿಬಾಲಿಸಿಸ್ ಎನ್ನುವುದು ಈ ಬ್ಯಾಕ್ಟೀರಿಯಾದ ಜಾತಿಯಾಗಿದೆ. ಇದರ ಮುಂದೆ ಡಾ. ಅಬ್ದುಲ್ ಕಲಾಮ್ ಅವರ ಹೆಸರಿಡಲಾಗಿದೆ," ಎಂದು ಹೇಳಿದ್ದಾರೆ.
ಅಂತರಾಷ್ಟ್ರೀಯ ಬಾಹ್ಯಾಕಾಶ ಕೇಂದ್ರದಲ್ಲಿ ಹಲವು ಸೂಕ್ಷ್ಮ ಜೀವಿಗಳು ಕಾಣಿಸಿಕೊಳ್ಳುತ್ತಿವೆ. ಭೂಮಿಯಿಂದ 400 ಕಿಲೋಮೀಟರ್ ದೂರದಲ್ಲಿರುವ ಅಂತರಾಷ್ಟ್ರೀಯ ಬಾಹ್ಯಾಕಾಶ ಕೇಂದ್ರದಲ್ಲಿ ಈ ಜೀವಿಗಳು ಕಂಡು ಬರುತ್ತಿವೆ.
Proud to learn that NASA has named new microbe found on @Space_Station , 'Solibacillus Kalamii' to honour our 11th President Dr. Abdul Kalam
— CM of Karnataka (@CMofKarnataka) May 18, 2017
ಈ ಸೂಕ್ಷ್ಮ ಜೀವಿ ಭೂಮಿಯಿಂದಲೇ ಬಾಹ್ಯಾಕಾಶ ಕೇಂದ್ರಕ್ಕೆ ಬಂದಿರಬಹುದು ಎಂದು ವೆಂಕಟೇಶ್ವರನ್ ನಂಬಿದ್ದಾರೆ.
ಸೂಕ್ಷ್ಮ ಜೀವಿಗೆ ನಾಸಾ ಅಬ್ದುಲ್ ಕಲಾಂರ ಹೆಸರಿಟ್ಟಿದ್ದಕ್ಕೆ ಹೆಮ್ಮೆಯಾಗಿದೆ ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.
-
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD












Click it and Unblock the Notifications