Bengaluru with Maldives: ಮಾಲ್ಡೀವ್ಸ್ ಐಟಿ ಉದ್ಯಮಕ್ಕೆ ಸಿಗಲಿದೆ ಸಿಲಿಕಾನ್ ಸಿಟಿಯ ಸಾಥ್!
ಭಾರತದ ಎದುರು ತೊಡೆ ತಟ್ಟಿದ್ದ ಮಾಲ್ಡೀವ್ಸ್ ಈಗ ಭಾರತದ್ದೇ ಸಪೋರ್ಟ್ ಪಡೆದುಕೊಳ್ಳಲು ಮುಂದಾಗಿದೆ. ಸದ್ಯ ಮೂರು ದಿನಗಳಲ್ಲಿ ಪ್ರವಾಸದಲ್ಲಿರುವ ಮಾಲ್ಡೀವ್ಸ್ ಅಧ್ಯಕ್ಷ ಮೊಹಮ್ಮದ್ ಮುಯಿಝು (Mohamed Muizzu) ತಮ್ಮ ಪತ್ನಿ ಜೊತೆ ಇಂದು ಉದ್ಯಾನನಗರಿ ಬೆಂಗಳೂರಿಗೆ ಬಂದಿಳಿದಿದ್ದಾರೆ. ರಾಜ್ಯ ಸರ್ಕಾರದೊಂದಿಗೆ ಮಹತ್ವದ ಚರ್ಚೆಗಳನ್ನು ಸಹ ಮಾಡಿದ್ದಾರೆ.
ದೆಹಲಿಯಿಂದ ನೇರವಾಗಿ ಬೆಂಗಳೂರು ವಿಮಾನ ನಿಲ್ದಾಣಕ್ಕೆ ಬಂದ ಮುಯಿಝು ದಂಪತಿಯನ್ನು ರಾಜ್ಯ ಸರ್ಕಾರ ಬರಮಾಡಿಕೊಂಡು ಆತಿಥ್ಯ ನೀಡಿದೆ. ರಾಜ್ಯಪಾಲ ಥಾವರ್ಚಂದ್ ಗೆಹಲೋಟ್ ಹಾಗೂ ಸಿಎಂ ಸಿದ್ದರಾಮಯ್ಯ ಅವರನ್ನು ಮೊಹಮ್ಮದ್ ಮುಯಿಝು ಭೇಟಿಯಾಗಿ, ಹಲವು ಒಪ್ಪಂದಗಳನ್ನು ಸಹ ಮಾಡಿಕೊಂಡಿದ್ದಾರೆ ಎಂದು ಹೇಳಲಾಗಿದೆ.

ಈ ಬಗ್ಗೆ ಮಾಹಿತಿ ಹಂಚಿಕೊಂಡಿರುವ ಸಿಎಂ ಸಿದ್ದರಾಮಯ್ಯ, ಮಾಲ್ಡೀವ್ಸ್ ಅಧ್ಯಕ್ಷರಾದ ಮೊಹಮ್ಮದ್ ಮುಯಿಝು ಹಾಗೂ ಮತ್ತು ಮಾಲ್ಡೀವ್ಸ್ನ ಪ್ರಥಮ ಮಹಿಳೆಯಾದ ಮುಯಿಝು ಪತ್ನಿ ಸಾಜಿದಾ ಮೊಹಮ್ಮದ್ ಅವರನ್ನು ಬೆಂಗಳೂರಿಗೆ ಸ್ವಾಗತಿಸಲು ನನಗೆ ಗೌರವವಿದೆ. ಸಾಜಿದಾ ಅವರು ನಮ್ಮ ಬೆಂಗಳೂರಿನಲ್ಲಿ ವಿದ್ಯಾರ್ಥಿ ಜೀವನ ಕಳೆದಿದ್ದರು ಎಂಬ ವಿಚಾರ ಅತೀವ ಸಂತಸವನ್ನುಂಟು ಮಾಡಿದೆ ಎಂದಿದ್ದಾರೆ.
Honoured to welcome President Mohamed Muizzu, First Lady Sajidha Mohamed, and their delegation from the Maldives to Bengaluru.
— CM of Karnataka (@CMofKarnataka) October 9, 2024
We are excited about partnering with the Maldives in IT, while also enhancing trade ties to promote Karnataka's renowned handicrafts. With its rich… pic.twitter.com/8dPld6EDev
ಜಾಗತಿಕವಾಗಿ ಐಟಿ ಸಿಟಿ, ಸಿಲಿಕಾನ್ ಸಿಟಿ ಎಂದು ಗುರುತಿಸಿಕೊಂಡಿರುವ ಬೆಂಗಳೂರಿನ ಪ್ರಮುಖ ಐಟಿ ವಲಯದೊಂದಿಗೆ ಪಾಲುದಾರಿಕೆಗೆ ಮಾಲ್ಡೀವ್ಸ್ ಸರ್ಕಾರ ಆಸಕ್ತಿ ತೋರಿದೆ. ಭಾರತದ ಸಿಲಿಕಾನ್ ವ್ಯಾಲಿಯಾಗಿ, ಮಾಲ್ಡೀವ್ಸ್ನಲ್ಲಿ ಐಟಿ ಬೆಳವಣಿಗೆಯನ್ನು ಬೆಂಬಲಿಸಲು ನಾವು ಉತ್ಸುಕರಾಗಿದ್ದೇವೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
ಮಾಲ್ಡೀವ್ಸ್ಗೆ ಭೇಟಿ ನೀಡುವ ಅನೇಕ ಪ್ರವಾಸಿಗರಿಗೆ ಕರ್ನಾಟಕದ ಹೆಸರಾಂತ ಕರಕುಶಲ ಮತ್ತು ಕೈಮಗ್ಗಗಳನ್ನು ಉತ್ತೇಜಿಸುವ ಮೂಲಕ ವ್ಯಾಪಾರ ಸಂಬಂಧಗಳನ್ನು ಹೆಚ್ಚಿಸಲು ನಾವು ಎದುರು ನೋಡುತ್ತಿದ್ದೇವೆ ಎಂದಿದ್ದಾರೆ.

ನಮ್ಮ ಶ್ರೀಮಂತ ಸಾಂಸ್ಕೃತಿಕ ಪರಂಪರೆ, ವೈವಿಧ್ಯಮಯ ಪ್ರಾಕೃತಿಕ ಸೌಂದರ್ಯ ಮತ್ತು ಸುಮಾರು 300 ಕಿಲೋಮೀಟರ್ ಉದ್ದದ ಕರಾವಳಿ ಹೊಂದಿರುವ ಕರ್ನಾಟಕವನ್ನು ಸಾಮರಸ್ಯದ ನಾಡು, ಸರ್ವ ಜನಾಂಗದ ಶಾಂತಿಯ ತೋಟ, ಎಲ್ಲಾ ಸಮುದಾಯಗಳ ಶಾಂತಿಯ ತೋಟ ಎಂದು ಕವಿ ಕುವೆಂಪು ಮೊದಲೇ ಸಾರಿದ್ದರು ಎಂದು ನೆನೆದಿದ್ದಾರೆ.
ಕರ್ನಾಟಕ ಮತ್ತು ಮಾಲ್ಡೀವ್ಸ್ ನಡುವೆ ಶೈಕ್ಷಣಿಕ, ಸಾಂಸ್ಕೃತಿಕ ವಿನಿಮಯವನ್ನು ಬಲಪಡಿಸಲು ನಾವು ಪ್ರಯತ್ನಿಸುತ್ತೇವೆ. ಇದು ಎರಡೂ ರಾಷ್ಟ್ರಗಳ ನಡುವೆ ಸಹಯೋಗ ಮತ್ತು ಬೆಳವಣಿಗೆಯನ್ನು ಉತ್ತೇಜಿಸುತ್ತೇವೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
ಭಾರತವೆಂದರೆ ಕೆಂಡಕಾರುತ್ತಿದ್ದ ಮಾಲ್ಡೀವ್ಸ್ ಅಧ್ಯಕ್ಷ ಮುಯಿಝು ಮೂರು ದಿನಗಳ ಪ್ರವಾಸದಲ್ಲಿದ್ದಾರೆ. ಮೊದಲಿಗೆ ದೆಹಲಿಗೆ ತಮ್ಮ ನಿಯೋಗದೊಂದಿಗೆ ತೆರಳಿದ್ದ ಅವರು ಇಂದು ಬೆಂಗಳೂರಿಗೆ ಬಂದಿದ್ದಾರೆ.

ಮುಯಿಝು ಪತ್ನಿ ಬೆಂಗಳೂರಿನ ವಿದ್ಯಾರ್ಥಿ: ಮುಯಿಝು ಅವರು ಇಂದು ತಮ್ಮ ಪತ್ನಿ ಸಾಜಿದಾ ಮೊಹಮ್ಮದ್ ಅವರೊಟ್ಟಿಗೆ ಬೆಂಗಳೂರಿಗೆ ಬಂದಿದ್ದಾರೆ. ಇದೇ ವೇಳೆ ಸಾಜಿದಾ ಅವರು ಬೆಂಗಳೂರಿನಲ್ಲೇ ಶಿಕ್ಷಣ ಪಡೆದಿದ್ದರು ಎನ್ನುವ ವಿಚಾರ ಎಲ್ಲೆಡೆ ಸದ್ದು ಮಾಡುತ್ತಿದೆ. ಹಾಗಾಗಿ ಸಾಜಿದಾ ಅವರಿಗೆ ಬೆಂಗಳೂರು ಹೊಸದೇನಲ್ಲ ಎನ್ನುವುದು ಅಚ್ಚರಿಯ ಸಂಗತಿ.
ಮಾಲೆಯಲ್ಲಿ ಜನಿಸಿದ ಸಾಜಿದಾ ಅವರು 2003ರಲ್ಲಿ ತಮ್ಮ ಬ್ಯಾಚುಲರ್ ಪದವಿಯನ್ನು ಭಾರತದಲ್ಲೇ ಪೂರ್ಣಗೊಳಿಸಿದ್ದರು. ಬೆಂಗಳೂರಿನ ಪ್ರತಿಷ್ಠಿತ ಸೇಂಟ್ ಜೋಸೆಫ್ ಕಾಲೇಜಿನಲ್ಲಿ ಸಾಜಿದಾ ಅವರು ತಮ್ಮ ಪದವಿ ವ್ಯಾಸಂಗ ಮಾಡಿದ್ದರು ಎಂದು ಹೇಳಲಾಗಿದೆ. ಹಾಗಾಗಿ ಸಾಜಿದಾ ಅವರ ಕರ್ನಾಟಕದ ಹೆಣ್ಣುಮಗಳಿದ್ದಂತೆ, ಮುಯಿಝು ಬೆಂಗಳೂರಿನ ಅಳಿಯ ಎಂದೆಲ್ಲ ಹೇಳುತ್ತಿದ್ದಾರೆ.
ಸಾಜಿದಾ ಅವರು ಬೆಂಗಳೂರಿಗೆ ಈಗಾಗಲೇ ಪರಿಚಿತರಾಗಿರುವುದರಿಂದ ಖುದ್ದು ಅವರೇ ತಮ್ಮ ಪತಿ ಮೊಹಮ್ಮದ್ ಮುಯಿಝು ಅವರಿಗೆ ಸಿಲಿಕಾನ್ ಸಿಟಿಯನ್ನು ತೋರಿಸಲಿದ್ದಾರೆ ಎಂದು ಹೇಳಲಾಗಿದೆ. ತಾವು ಓದಿದ ಸೇಂಟ್ ಜೋಸೆಫ್ ಕಾಲೇಜಿಗೂ ಭೇಟಿ ನೀಡುವ ನಿರೀಕ್ಷೆ ಇದೆ.

ಸಾಜಿದಾ ಅವರು ಪದವಿ ಬಳಿಕ ಯುನೈಟೆಡ್ ಕಿಂಗ್ಡಂನ (ಯುಕೆ) ಲೀಡ್ಸ್ ವಿಶ್ವವಿದ್ಯಾಲಯದಲ್ಲಿ ತನ್ನ ಪತಿಯೊಂದಿಗೆ ಸ್ನಾತಕೋತ್ತರ ಪದವಿಯನ್ನು ಪೂರ್ಣಗೊಳಿಸಿದ್ದರು. ನಂತರ ಮಾಲ್ಡೀವ್ಸ್ನ ಸಿವಿಲ್ ಸರ್ವಿಸ್ ಕಮಿಷನ್ನಲ್ಲಿ ನಾಗರಿಕ ಸೇವಕರಾಗಿ ಕೆಲಸ ಮಾಡಿದರು ಎಂದು ಹೇಳಲಾಗಿದೆ.
-
Gold Rate: ಬಂಗಾರ ಮತ್ತಷ್ಟು ದುಬಾರಿ: 16,000 ರೂ. ದಾಟಿದ ಚಿನ್ನ, ಬೆಳ್ಳಿ ಬೆಲೆ ಕೂಡ ಏರಿಕೆ, ಇಲ್ಲಿದೆ ಇಂದಿನ ದರ ವಿವರ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ












Click it and Unblock the Notifications