ವಿಶ್ವಸಂಸ್ಥೆಯಲ್ಲಿ 'ಕಾಶ್ಮೀರ ಭಾರತದ್ದು' ಎಂದ ಪಾಕ್ ವಿದೇಶಾಂಗ ಸಚಿವ!
ಜಿನೆವಾ, ಸೆಪ್ಟೆಂಬರ್ 10: ಜಿನೆವಾದಲ್ಲಿ ನಡೆಯುತ್ತಿರುವ ವಿಶ್ವಸಂಸ್ಥೆಯ ಮಾನವ ಹಕ್ಕು ಸಮಿತಿ(ಯುಎನ್ ಎಚ್ಆರ್ ಸಿ) ಸಮಾವೇಶದಲ್ಲಿ ಮಾತನಾಡುತ್ತಿದ್ದ ಪಾಕ್ ವಿದೇಶಾಂಗ ಸಚಿವ, "ಜಮ್ಮು ಕಾಶ್ಮೀರ ಭಾರತೀಯ ರಾಜ್ಯ" ಎಂದು ಒಪ್ಪಿಕೊಂಡಿದ್ದಾರೆ.
Recommended Video
ಸಭೆಯಲ್ಲಿ ಪತ್ರಕರ್ತರೊಂದಿಗೆ ಮಾತನಾಡುತ್ತಿದ್ದ ಖುರೇಶಿ, "ಕಾಶ್ಮೀರ ಸಹಜ ಸ್ಥಿತಿಗೆ ಮರಳಿದೆ ಎಂಬುದನ್ನು ಬಿಂಬಿಸಲು ಭಾರತ ಪ್ರಯತ್ನಿಸುತ್ತಿದೆ. ಆದರೆ 'ಭಾರತದ ರಾಜ್ಯ'ವಾದ ಜಮ್ಮು ಮತ್ತು ಕಾಶ್ಮೀರಕ್ಕೆ ಯಾರಿಗೂ ತೆರಳಲು ಬಿಡುತ್ತಿಲ್ಲ, ಯಾಕೆ? " ಎಂದು ಶಾ ಪ್ರಶ್ನಿಸಿದ್ದರು.
ವಿಶ್ವಸಂಸ್ಥೆಯ ಮಾನವ ಹಕ್ಕು ಸಮಿತಿಯಲ್ಲಿ ಭಾರತದ ವಿರುದ್ಧ ಮಾತನಾಡಲು ತೆರಳಿದ್ದ ಖುರೇಶಿ ಕಾಶ್ಮೀರ ಭಾರತದ್ದೇ ಎನ್ನುವ ಮೂಲಕ ತಮ್ಮನ್ನು ತಾವೇ ಪೇಚಿಗೆ ಸಿಲುಕಿಸಿಕೊಂಡರು.

ಖುರೇಶಿ ಹೇಳಿದ್ದೇನು?
"ಜಗತ್ತಿನ ಎದುರು ಕಾಶ್ಮೀರ ಸಹಜ ಸ್ಥಿತಿಗೆ ಮರಳಿದೆ ಎಂಬ ಭಾವನೆ ಸೃಷ್ಟಿಯಾಗುವಂತೆ ಭಾರತ ಮಾಡುತ್ತಿದೆ. ಅಕಸ್ಮಾತ್ ಕಾಶ್ಮೀರ ಸಹಜ ಸ್ಥಿತಿಗೆ ಮರಳಿದ್ದರೆ, ಅಂತಾರಾಷ್ಟ್ರೀಯ ಸಂಘಟನೆಗಳು, ಎನ್ ಜಿಒಗಳು ಪತ್ರಕರ್ತರನ್ನು ಅಲ್ಲಿಗೆ ತೆರಳಲು ಬಿಡಲಿ. 'ಭಾರತೀಯ ರಾಜ್ಯ'ವಾದ ಜಮ್ಮು ಮತ್ತು ಕಾಶ್ಮೀರದ ಸ್ಥಿತಿ ಹೇಗಿದೆ ಎಂಬುದನ್ನು ಅವರೇ ಖುದ್ದು ತೆರಳಿ ತಿಳಿಯಲಿ" ಎಂದು ಖುರೇಶಿ ಹೇಳಿದ್ದರು.

ಭಾರತದ ಆಡಳಿತದಲ್ಲಿರುವ ಕಾಶ್ಮೀರ
ಇಷ್ಟು ದಿನ ಕಾಶ್ಮೀರವನ್ನು ಪಾಕಿಸ್ತಾನ "ಭಾರತದ ಆಡಳಿತದಲ್ಲಿರುವ ಕಾಶ್ಮೀರ(IAK) ಎಂದು ಕರೆಯುತ್ತಿತ್ತು. ಆದರೆ ವಿಶ್ವಸಂಸ್ಥೆಯ ಸಮಾವೇಶದ ಸಂದರ್ಭದಲ್ಲಿ ಖುರೇಶಿ ಅದನ್ನು 'ಭಾರತದ ರಾಜ್ಯವಾದ ಜಮ್ಮು ಮತ್ತು ಕಾಶ್ಮೀರ' ಎಂದು ಉಲ್ಲೇಖಿಸಿರುವುದು ಅವರೇ ಕಾಶ್ಮೀರ ಭಾರತಕ್ಕೆ ಸೇರಿದ್ದು ಎಂದು ಒಪ್ಪಿಕೊಂಡಂತಾಗಿದೆ.

ಬಾಲಕೋಟ್ ಏರ್ ಸ್ಟ್ರೈಕ್ ಸತ್ಯ ಎಂದಿದ್ದ ಇಮ್ರಾನ್ ಖಾನ್!
ಹೀಗೆ ತನ್ನದೇ ಹೇಳಿಕೆಗಳನ್ನು ಪಾಕಿಸ್ತಾನ ತಿರುಚುವುದು ಹೊಸತೇನಲ್ಲ. ಭಾರತ ಪಾಕಿಸ್ತಾನದ ಉಗ್ರನೆಲೆ ಬಾಲಕೋಟ್ ಮೇಲೆ ಏರ್ ಸ್ಟ್ರೈಕ್ ನಡೆಸಿಯೇ ಇಲ್ಲ ಎನ್ನುತ್ತಿದ್ದ ಪಾಕ್ ಅಧ್ಯಕ್ಷ ಇಮ್ರಾನ್ ಖಾನ್, ಭಾರತ ಏರ್ ಸ್ಟ್ರೈಕ್ ನಡೆಸಿದ್ದು ಸತ್ಯ ಎಂದು ಒಪ್ಪಿಕೊಂಡಿದ್ದರು. ಕಳೆದ ತಿಂಗಳು ಪಾಕ್ ಆಕ್ರಮಿತ ಕಾಶ್ಮೀರದ ಮುಜಾಫರಾಬಾದ್ ನಲ್ಲಿ ನಡೆದ ಶಾಸಕಾಂಗ ಸಭೆಯ ವಿಶೇಷ ಅಧಿವೇಶನದಲ್ಲಿ ಮಾತನಾಡಿದ ಇಮ್ರಾನ್ ಖಾನ್, "ಭಾರತವು ಫೆಬ್ರವರಿಯಲ್ಲಿ ಬಾಲಕೋಟ್ ನಲ್ಲಿ ನಡೆಸಿದ್ದ ಏರ್ ಸ್ಟ್ರೈಕ್ ಗಿಂತಲೂ ಭಯಾನಕವಾದ ದಾಳಿಯನ್ನು ಪಾಕಿಸ್ತಾನದೊಳಗೆ ನಡೆಸಲು 'ಸಂಚು' ರೂಪಿಸಿದೆ. ಕಾಶ್ಮೀರ ವಿಷಯದಲ್ಲಿ ಉಭಯ ದೇಶಗಳ ನಡುವೆ ಎದ್ದಿರುವ ಭಿನ್ನಾಭಿಪ್ರಾಯವೇ ಇದಕ್ಕೆ ಕಾರಣ" ಎಂಬ ಹೇಳಿಕೆ ನೀಡಿದ್ದರು.

ಯುದ್ಧದ ವಾತಾವರಣ
ಸಂವಿಧಾನದ 370 ನೇ ವಿಧಿಯ ಅಡಿಯಲ್ಲಿ ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಿದ್ದ ವಿಶೇಷ ಸ್ಥಾನವನ್ನು ಭಾರತ ರದ್ದುಗೊಳಿಸಿದ ನಂತರ ಪಾಕಿಸ್ತಾನ ರೊಚ್ಚಿಗೆದ್ದಿದ್ದು ಗಡಿಯಲ್ಲಿ ಶಾಂತಿ ಕದಡಲು ಯತ್ನಿಸುತ್ತಿದೆ. ಉಜಭಯ ದೇಶಗಳ ನಡುವೆ ಅಕ್ಟೋಬರ್ ನಲ್ಲಿ ಯುದ್ಧವಾದರೂ ಅಚ್ಚರಿಯಿಲ್ಲ ಎಂಬ ಮಾತುಗಳು ಕೇಳಿಬರುತ್ತಿವೆ.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications