ಬಿಲಿಯನ್ ಗಟ್ಟಲೆ ಪೌಂಡ್ ನ ಕನಸು ಕಾಣುತ್ತಿರಿ: ಪತ್ರಕರ್ತರಿಗೆ ಮಲ್ಯ ಗೇಲಿ
ಭಾರತ ಸರ್ಕಾರಕ್ಕೆ ಹಸ್ತಾಂತರಗೊಳ್ಳುವ ಪ್ರಕರಣಕ್ಕೆ ಸಂಬಂಧಿಸಿದಂತೆ ಲಂಡನ್ ನ ಸ್ಥಳೀಯ ನ್ಯಾಯಾಲಯಕ್ಕೆ ಹಾಜರಾಗಿದ್ದ ವಿಜಯ್ ಮಲ್ಯ. ನ್ಯಾಯಾಲಯದ ಹೊರಗೆ ಕಾದು ಕುಳಿತಿದ್ದ ಪತ್ರಕರ್ತರಿಗೆ ಮಾತಿನಲ್ಲೇ ಕಾಲೆಳೆದ ಮದ್ಯದ ದೊರೆ.
ಲಂಡನ್, ಜೂನ್ 13: ''ನೀವು ಬಿಲಿಯನ್ ಗಟ್ಟಲೆ ಪೌಂಡ್ ಮೌಲ್ಯದ ಕನಸು ಕಾಣುತ್ತಿರಿ'' - ಇದು ಭಾರತದ ಉದ್ಯಮಿ ವಿಜಯ್ ಮಲ್ಯ, ಪತ್ರಕರ್ತರನ್ನು ಗೇಲಿ ಮಾಡಿದ ರೀತಿ.
ಭಾರತೀಯ ಬ್ಯಾಂಕುಗಳಿಗೆ ಕೋಟಿಗಟ್ಟಲೆ ಸಾಲ ಬಾಕಿ ಉಳಿಸಿಕೊಂಡು ವಿದೇಶದಲ್ಲಿ ತಲೆ ಮರೆಸಿಕೊಂಡಿರುವ ಆರೋಪದ ಹಿನ್ನೆಲೆಯಲ್ಲಿ ಇಲ್ಲಿನ ನ್ಯಾಯಾಲಯಕ್ಕೆ ವಿಚಾರಣೆಗೆ ಅವರು ಹಾಜರಾಗಿದ್ದರು.
ತಮ್ಮ ಪುತ್ರ ಸಿದ್ದಾರ್ಥ್ ಮಲ್ಯ ಜತೆಗೆ ನ್ಯಾಯಾಲಯಕ್ಕೆ ಆಗಮಿಸಿದ್ದ ವಿಜಯ್ ಮಲ್ಯ, ವಿಚಾರಣೆ ಮುಗಿದ ನಂತರ ನ್ಯಾಯಾಲಯದಿಂದ ಹೊರಬಂದರು.

ಆ ಸಂದರ್ಭದಲ್ಲಿ ತಮ್ಮನ್ನು ಪ್ರಶ್ನಿಸಲು ಬಂದಿದ್ದ ಪತ್ರಕರ್ತರಿಗೆ ಪ್ರತ್ಯುತ್ತರ ನೀಡಿದ ಮಲ್ಯ, ನೀವು ಬಿಲಿಯನ್ ಪೌಂಡ್ ಮೌಲ್ಯದ ಕನಸು ಕಾಣುತ್ತಿರಿ ಎಂದು ಗೂಡಾರ್ಥದ ಮಾತುಗಳನ್ನು ಹೇಳಿ ಹೊರಟರು.
ಲಂಡನ್ ನಲ್ಲಿ ನಡೆಯುತ್ತಿರುವ ಚಾಂಪಿಯನ್ಸ್ ಟ್ರೋಫಿ ಪಂದ್ಯಾವಳಿಯ ಹಿನ್ನೆಲೆಯಲ್ಲಿ ಇತ್ತೀಚೆಗೆ ಭಾರತ ತಂಡದ ಪಂದ್ಯವನ್ನು ನೋಡಲು ಕ್ರೀಡಾಂಗಣಕ್ಕೆ ಬಂದಿದ್ದ ಮಲ್ಯ ಅವರನ್ನು ಕೆಲ ಪ್ರೇಕ್ಷಕರು ಕಳ್ಳ.. ಕಳ್ಳ ಎಂದು ಮೂದಲಿಸಿದ್ದರು.
ಈ ಬಗ್ಗೆ ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಮಲ್ಯ, ಯಾರೋ ಒಂದಿಬ್ಬರು ಕುಡುಕರು ಹಾಗೆ ಹೇಳಿದರು. ಆದರೆ, ನೀವು ಮಾಧ್ಯಮದವರು ಅದನ್ನೇ ಹೈಲೈಟ್ ಮಾಡಿದಿರಿ. ಕ್ರೀಡಾಂಗಣಕ್ಕೆ ನಾನು ಪ್ರವೇಶಿಸಿದ ಕೂಡಲೇ ಹಲವಾರು ಮಂದಿ ನನಗೆ ಶುಭಕಾಮನೆ ಸಲ್ಲಿಸಿದರು. ಇದನ್ನು ಎಲ್ಲೂ ನೀವು ಹೇಳಲಿಲ್ಲ ಎಂದು ಬೇಸರಿಸಿ ಹೊರಟು ಹೋದರು.
ಹಾಗೆ ಹೋಗುವ ಮುನ್ನ, ಭಾರತೀಯ ಬ್ಯಾಂಕುಗಳಿಗೆ ಸಾಲ ಬಾಕಿ ಉಳಿಸಿಕೊಂಡಿರುವ ಆರೋಪದಲ್ಲಿ ಹುರುಳಿಲ್ಲ. ನಾನು ನಿರಪರಾಧಿ. ಇದನ್ನು ಸಾಬೀತುಪಡಿಸಲು ನನ್ನಲ್ಲಿ ಹಲವಾರು ಸಾಕ್ಷ್ಯಾಧಾರಗಳಿವೆ ಎಂದರು.
ಅಂದಹಾಗೆ, ಕೋರ್ಟಿನಲ್ಲಿ ಮುಂದಿನ ವಿಚಾರಣೆಗೆ ಹಾಜರಾಗುವಾಗ ಮಾಧ್ಯಮಗಳಿಂದ ತಮ್ಮನ್ನು ದೂರ ಇರುವಂತೆ ವ್ಯವಸ್ಥೆ ಕಲ್ಪಿಸಬೇಕೆಂದು ಅವರು ನ್ಯಾಯಾಧೀಶರದಲ್ಲಿ ಮನವಿ ಮಾಡಿದ್ದಾರೆ. ಈ ಪ್ರಕರಣದ ಮುಂದಿನ ವಿಚಾರಣೆ ಜುಲೈ 16ಕ್ಕೆ ನಡೆಯಲಿದೆ.
-
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
Udaan Yatri Cafe: ಏರ್ಪೋರ್ಟ್ನಲ್ಲಿ ದುಬಾರಿ ಊಟಕ್ಕೆ ಬ್ರೇಕ್: 17 ಕಡೆ ಉಡಾನ್ ಕೆಫೆ ಆರಂಭ -
ಖಾಸಗಿ ಬಸ್ಗಳಿಗಾಗಿ ಹುಬ್ಬಳ್ಳಿ-ಮುಂಬೈ ಮಾರ್ಗದಲ್ಲಿ NWKRTC ಸಂಚಾರ ಸ್ಥಗಿತ? ನೆಟ್ಟಿಗರ ಆಕ್ರೋಶ












Click it and Unblock the Notifications