ಪುಟ್ಟ ರಾಷ್ಟ್ರದ ನ್ಯಾಯಾಲಯ ಕೊಟ್ಟ ತೀರ್ಪಿಗೆ ಸುಸ್ತು ಹೊಡೆದ ಚೀನಾ
ನೈರೋಬಿ, ಜೂನ್ 25: ಪೂರ್ವ ಆಫ್ರಿಕಾದ ಪುಟ್ಟ ರಾಷ್ಟ್ರ ಕೀನ್ಯಾದ ಉಚ್ಚ ನ್ಯಾಯಾಲಯ ನೀಡಿದ ತೀರ್ಪಿಗೆ ಚೀನಾ ಸುಸ್ತು ಹೊಡೆದಿದೆ. ಆ ದೇಶದಲ್ಲಿ ಚೀನಾದ ಸಹಯೋಗದೊಂದಿಗೆ ನಡೆಯುತ್ತಿರುವ ಅತಿದೊಡ್ದ ಪ್ರಾಜೆಕ್ಟ್ ಒಂದನ್ನು ಕಾನೂನು ಬಾಹಿರ ಎಂದು ತೀರ್ಪು ನೀಡಿದೆ.
Recommended Video
ಕೀನ್ಯಾ ಸರಕಾರ ಮತ್ತು ಚೀನಾ ರೋಡ್ ಬ್ರಿಡ್ಜ್ ಕಾರ್ಪೊರೇಷನ್ (ಸಿಆರ್ಬಿಸಿ) ನಡುವಿನ ಒಪ್ಪಂದವು, ಕಾನೂನನ್ನು ಪಾಲಿಸುವಲ್ಲಿ ವಿಫಲವಾಗಿದೆ ಎಂದು ಕೀನ್ಯಾದ ನ್ಯಾಯಾಲಯ ತೀರ್ಪು ನೀಡಿದೆ.
ಚೀನಾದ ಮಹತ್ವಾಕಾಂಕ್ಷೆಯಯ ಬಿಆರ್ಐ ಪ್ರಾಜೆಕ್ಟ್ (ಬೆಲ್ಟ್ ಮತ್ತು ರೋಡ್ ಇನಿಶಿಯೇಟಿವ್) ಭಾಗವಾಗಿರುವ ಸ್ಟ್ಯಾಂಡರ್ಡ್ ಗೇಜ್ ರೈಲ್ವೆ (ಎಸ್ಜಿಆರ್) ಖರೀದಿಯಲ್ಲಿ ಸರಕಾರೀ ಸ್ವಾಮ್ಯದ ಕೀನ್ಯಾ ರೈಲ್ವೆ, ದೇಶದ ಕಾನೂನನ್ನು ಪಾಲಿಸುವಲ್ಲಿ ಸಂಪೂರ್ಣ ವಿಫಲವಾಗಿದೆ ಎಂದು ನ್ಯಾಯಾಲಯ ತೀರ್ಪು ನೀಡಿದೆ.

3.2 ಬಿಲಿಯನ್ ಅಮೆರಿಕನ್ ಡಾಲರ್ ಮೊತ್ತದ ಈ ಪ್ರಾಜೆಕ್ಟ್ ಕಾನೂನು ಬಾಹಿರ ಎಂದು ಕೀನ್ಯಾ ನ್ಯಾಯಾಲಯ ತೀರ್ಪು ನೀಡಿದೆ. ಕೀನ್ಯಾದ ಕಾರ್ಯಕರ್ತರೊಬ್ಬರು ಈ ಪ್ರಾಜೆಕ್ಟ್ ಅನ್ನು ನಿಲ್ಲಿಸುವಂತೆ 2014ರಲ್ಲಿ ಮೊಕದ್ದಮೆ ಹೂಡಿದ್ದರು.
ಟೆಂಡರ್ ಕರೆಯದೇ ಅಂತಿಮಗೊಳಿಸಲಾಗಿರುವ ಪ್ರಾಜೆಕ್ಟ್ ಇದಾಗಿದ್ದು, ಈ ಸಾಲದ ಮರುಪಾವತಿಯ ಜವಾಬ್ದಾರಿ ಕೀನ್ಯಾದ ಪ್ರತೀ ತೆರಿಗೆ ಪಾವತಿದಾರರ ಮೇಲೆ ಬೀಳಲಿದೆ. ಹಾಗಾಗಿ, ಈ ಪ್ರಾಜೆಕ್ಟ್ ಅನ್ನು ರದ್ದುಗೊಳಿಸುವಂತೆ, ಕಾರ್ಯಕರ್ತ ಕಾನೂನು ಮೊರೆ ಹೋಗಿದ್ದರು.
Kenyan court declares USD 3.2 billion railway contract with China illegal
— ANI Digital (@ani_digital) June 25, 2020
Read @ANI Story | https://t.co/5DptIbO0bq pic.twitter.com/2qfn2yos8y
ಕೀನ್ಯಾ ಸರಕಾರೀ ಒಡೆತನದ ಸಿಆರ್ಬಿಸಿ ಸಂಸ್ಥೆ ತಮ್ಮ ನಿಲುವನ್ನು ಸಮರ್ಥಿಸಿಕೊಂಡಿತ್ತು. ಕೀನ್ಯಾದ ಹೈಕೋರ್ಟ್ ಈ ಆದೇಶ ನೀಡಿದ್ದು, ದೇಶದ ಸರ್ವೋಚ್ಚ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಸುವ ಅವಕಾಶವಿದೆ.
-
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ












Click it and Unblock the Notifications